Connect with us

LATEST NEWS

‘ಶತಮಾನದ ಹೊಸ್ತಿಲಲ್ಲಿರುವ ಕರ್ಣಾಟಕ ಬ್ಯಾಂಕ್ ಸಾಮಾಜಿಕ ಆರ್ಥಿಕ ಕ್ರಾಂತಿಯ ಚಳವಳಿ’

Published

on

ಮಂಗಳೂರು: ಕರ್ಣಾಟಕ ಬ್ಯಾಂಕ್‌ ಇಂದು ಕೇವಲ ಬ್ಯಾಂಕ್‌ ಆಗಿ ಉಳಿದಿಲ್ಲ, ಬದಲಾಗಿ ಇದೊಂದು ಸಾಮಾಜಿಕ-ಆರ್ಥಿಕ ಕ್ರಾಂತಿಯ ಚಳುವಳಿ. ಇದೀಗ ಶತಮಾನ ಸಂಭ್ರಮದ ಹೊಸ್ತಿಲಲ್ಲಿರುವ ಕರ್ಣಾಟಕ ಬ್ಯಾಂಕ್‌ ಸಮಾಜದ ಜೊತೆ ಬೆಸೆಯುವ ಧ್ಯೇಯ ಹೊಂದಿಕೊಂಡಿದೆ ಎಂದು ಕರ್ಣಾಟಕ ಬ್ಯಾಂಕ್‌ನ ಎಂಡಿ ಮತ್ತು ಸಿಇಒ ಮಹಾಬಲೇಶ್ವರ ಎಂ.ಎಸ್ ಅವರು ಹೇಳಿದ್ದಾರೆ.


ನಗರದ ಕೆನರಾ ಕಾಲೇಜಿನ ಸುಧೀಂದ್ರ ಸಭಾಂಗಣದಲ್ಲಿ ಭಾನುವಾರ ನಡೆದ ನಮ್ಮ ಕುಡ್ಲ ವಾಹಿನಿ ಪ್ರಸ್ತುತಿಯ ಕರ್ಣಾಟಕ ಬ್ಯಾಂಕ್‌ ‘ಬಿಸಿನೆಸ್ ಟಾನಿಕ್‌’ ಕಾರ್ಯಕ್ರಮದ 150ನೇ ಸಂಚಿಕೆಯ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಈಗಿನ ಟಿವಿ ಮಾಧ್ಯಮದಲ್ಲಿ ಸದಭಿರುಚಿಯ ಕಾರ್ಯಕ್ರಮಗಳು ಕಡಿಮೆ ಪ್ರಸಾರವಾಗುತ್ತಿದೆ.

ಆದರೆ ನಮ್ಮ ಕುಡ್ಲ ವಾಹಿನಿ ಸದಭಿರುಚಿಯ ಸಮಾಜಮುಖಿ ಕಾರ್ಯಕ್ರಮಗಳನ್ನು ನೀಡುತ್ತಿದೆ ಎಂದು ಹರ್ಷ ವ್ಯಕ್ತಪಡಿಸಿದ ಅವರು ಇಂತಹ ಕಾರ್ಯಕ್ರಮ ನಿರಂತರವಾಗಿ ಮುಂದುವರಿಯುತ್ತಿರಲಿ ಎಂದರು. ಶತಮಾನದ ಹೊಸ್ತಿಲ ಸಂಭ್ರಮದಲ್ಲಿರುವ ಕರ್ಣಾಟಕ ಬ್ಯಾಂಕ್‌ ಇಂತಹ ಸದಭಿರುಚಿಯ ಇನ್ನಷ್ಟು ಕಾರ್ಯಕ್ರಮಗಳಿಗೆ ಬೆಂಬಲ ನೀಡಲಿದೆ.

ಎಲ್ಲಿಯವರೆಗೆ ಇಂತಹ ಸಹಸ್ರಾರು ವೀಕ್ಷಕರು ಅಪೇಕ್ಷೆ ಪಡುತ್ತಾರೆಯೇ ಅಲ್ಲಿಯವರೆಗೆ ನಮ್ಮ ಬೆಂಬಲ ಇದ್ದೇ ಇದೆ ಎಂದರು.

ಕರ್ಣಾಟಕ ಬ್ಯಾಂಕಿನ ಅಧ್ಯಕ್ಷ ಪ್ರದೀಪ್‌ ಕುಮಾರ್ ಅವರು ಮುಖ್ಯ ಅತಿಥಿಯಾಗಿ ವರ್ಚುವಲ್‌ ಆಗಿ ಭಾಗವಹಿಸಿ ಮಾತನಾಡಿ, ಸಣ್ಣ ಮತ್ತು ಮಧ್ಯಮ ವರ್ಗದ ಕೈಗಾರಿಕೆಗಳು ಇನ್ನಷ್ಟು ಕಾರ್ಯಚಟುವಟಿಕೆಗಳನ್ನು ಹೆಚ್ಚಿಸುವ ಮೂಲಕ ಬ್ಯಾಂಕ್‌ ವಲಯ ಸೇರಿದಂತೆ ಇಡೀ ಆರ್ಥಿಕ ರಂಗಕ್ಕೆ ಚೈತನ್ಯ ತುಂಬ ಬಲ್ಲ ಶಕ್ತಿಯಾಗಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.

ವೇದಿಕೆಯಲ್ಲಿ ಇಸ್ಕಾನ್‌ ಸಂಸ್ಥೆ ಮಂಗಳೂರು ಇದರ ಕಾರ್ಯದರ್ಶಿ ಸನಂದನ ದಾಸ, ಫೀಝಾ ಗ್ರೂಪ್‌ ಆಫ್‌ ಕಂಪೆನಿಸ್‌ ಬೆಂಗಳೂರು ಇದರ ಅಧ್ಯಕ್ಷ, ಉದ್ಯಮಿ ಬಿ.ಎಂ ಫಾರೂಕ್‌, ದ.ಕ ಹಾಲು ಉತ್ಪಾಕರ ಒಕ್ಕೂಟದ ಅಧ್ಯಕ್ಷ ರವಿರಾಜ ಹೆಗ್ಡೆ, ಹ್ಯಾಂಗ್ಯೋ ಐಸ್ ಕ್ರೀಂ ಲಿಮಿಟೆಡ್‌ನ ಎಂಡಿ ಪ್ರದೀಪ್‌ ಜಿ. ಪೈ, ಸಂಪನ್ಮೂಲ ವ್ಯಕ್ತಿಗಳಾದ ಸಿಎ ರುದ್ರಮೂರ್ತಿ, ಸಿ ಎ ಅನಿಲ್‌ ಭಾರದ್ವಾಜ್‌, ಕಾರ್ಯಕ್ರಮ ಮುಖ್ಯ ನಿರೂಪಕ ಹಾಗೂ ಸಮನ್ವಯಕಾರ ಸಿಎ.ಎಸ್‌.ಎಸ್‌ ನಾಯಕ್‌ ಮೊದಲಾದವರು ವೇದಿಯಲ್ಲಿದ್ದರು.

ಸಮಾರಂಭದಲ್ಲಿ ಕರ್ಣಾಟಕ ಬ್ಯಾಂಕಿನ ಎಂಡಿ ಮಹಾಬಲೇಶ್ವರ ಎಂ ಎಸ್ ಮತ್ತು ಬಿಸಿನೆಸ್‌ ಟಾನಿಕ್ ಕಾರ್ಯಕ್ರಮ ನಿರ್ದೇಶಕ ಸಿಎ.ಎಸ್.ಎಸ್ ನಾಯಕ್‌ ಅವರನ್ನು ಸನ್ಮಾನಿಸಲಾಯಿತು.
ಇದೇ ವೇಳೆ ಡಾ.ಸುರೇಶ ನೆಗಳಗುಳಿ ಅವರ ‘ಧೀರತಮ್ಮನ ಕಬ್ಬ’ ಇದರ 3 ನೇ ಸಂಪುಟ ಲೋಕಾರ್ಪಣೆಗೊಂಡಿತು.

ನಮ್ಮ ಕುಡ್ಲ ವಾಹಿನಿ ನಿರ್ದೇಶಕರಾದ ಹರೀಶ್ ಬಿ ಕರ್ಕೇರಾ, ಲೀಲಾಕ್ಷ ಬಿ ಕರ್ಕೇರಾ, ಮೋಹನ್ ಬಿ ಕರ್ಕೇರಾ ಸಹೋದರರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಮುರಳೀಧರ್‌ ಶೆಣೈ ಪ್ರಾರ್ಥನೆಗೈದರು. ಸಿಎ ಯಶಸ್ವಿನಿ ಹಾಗೂ ನಿತಿನ್‌ ಸಾಲಿಯಾನ್‌ ಕಾರ್ಯಕ್ರಮ ನಿರೂಪಿಸಿದರು.

LATEST NEWS

ಮದುವೆಯಲ್ಲಿ ಅವಧಿ ಮುಗಿದ ಐಸ್ ಕ್ರೀಂ​ ಸೇವನೆ.. 80ಕ್ಕೂ ಹೆಚ್ಚು ಜನರು ಅಸ್ವಸ್ಥ!

Published

on

ರಾಮನಗರ: ಮದುವೆಯಲ್ಲಿ ಐಸ್ ಕ್ರೀಂ ತಿಂದು ಜನರು ಅಸ್ವಸ್ಥಗೊಂಡ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಬೆಳಕಿಗೆ ಬಂದಿದೆ. ಅಲ್ಲಿನ ಸಾತನೂರು ಸರ್ಕಲ್ ಬಳಿಯ ಟಿಪ್ಪುನಗರದ ಮಿಲನ್ ಶಾದಿ ಮಹಲ್ ನಲ್ಲಿ ನಡೆದ ಮದುವೆ ಸಮಾರಂಭವೊಂದರಲ್ಲಿ ಈ ಘಟನೆ ನಡೆದಿದ್ದು, ಪರಿಣಾಮ 80 ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಚನ್ನಪಟ್ಟಣದ ವಧು ಮತ್ತು ಮಾಗಡಿಯ ವರನ ವಿವಾಹ ಸಮಾರಂಭ ಮಿಲನ್ ಶಾದಿ ಮಹಲ್ ನಲ್ಲಿ ನಡೆದಿತ್ತು. ಮುಸ್ಲಿಂ ಸಮುದಾಯದ ಮದುವೆ ಸಮಾರಂಭದಲ್ಲಿ ಐಸ್​ ಕ್ರೀಂ ತಿಂದ ಜನರು ಇದ್ದಕ್ಕಿದ್ದಂತೆಯೇ ಅಸ್ವಸ್ಥಗೊಂಡಿದ್ದಾರೆ. ಊಟದ ನಂತರ ಐಸ್ ಕ್ರೀಂ ತಿಂದ ಅರ್ಧಗಂಟೆಯಲ್ಲಿ ವಾಂತಿ, ಭೇದಿ ಶುರುವಾಗಿದೆ. 50ಕ್ಕೂ ಹೆಚ್ಚು ಜನರಲ್ಲಿ ಈ ಸಮಸ್ಯೆ ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವ ಹೆಚ್ಚಿನವರು ಚನ್ನಪಟ್ಟಣದ ಯಾರಬ್ ನಗರ ಹಾಗೂ ಕೋಟೆ ನಿವಾಸಿಗಳು ಎಂದು ಗುರುತಿಸಲಾಗಿದೆ.

ಐಸ್​ ಕ್ರೀಂ ತಿಂದು ಆಸ್ವಸ್ಥಗೊಂಡವರಲ್ಲಿ 40 ಜನರು ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಉಳಿದವರು ಮಂಡ್ಯ ಹಾಗೂ ರಾಮನಗರ ಜಿಲ್ಲಾಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಅವಧಿ ಮುಗಿದಿದ್ದ ಐಸ್ ಕ್ರೀಂ ತಿಂದಿದ್ದೇ ಈ ಅವಾಂತರಕ್ಕೆ ಕಾರಣ ಎನ್ನಲಾಗುತ್ತಿದೆ.

ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆ ಬಳಿ ಅಸ್ವಸ್ಥಗೊಂಡವರ ಕುಟುಂಬಸ್ಥರು ಆಗಮಿಸಿದ್ದಾರೆ. ಎಲ್ಲರಿಗೂ ಡ್ರಿಪ್ಸ್ ಹಾಕಿ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ.

Continue Reading

LATEST NEWS

ಡ್ರಗ್‌ ನೀಡಿ ಸಂಸದೆ ಮೇಲೆ ಲೈಂಗಿಕ ದೌರ್ಜನ್ಯ..! ಜಾಲತಾಣದಲ್ಲಿ ಹರಿಬಿಟ್ಟ ಆ ವೀಡಿಯೋ..!

Published

on

ಆಸ್ಟ್ರೇಲಿಯಾ/ಮಂಗಳೂರು: ದಿನೇ ದಿನೇ ದೇಶ ವಿದೇಶಗಳಲ್ಲಿ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಹೆಚ್ಚಾಗುತ್ತಿರುವುದು ವಿಪರ್ಯಾಸವೇ ಹೌದು. ಈಗಾಗಲೇ ದೇಶದೆಲ್ಲೆಡೆ ಪ್ರಜ್ವಲ್ ರೇವಣ್ಣ ಪೆಂಡ್ರೈವ್ ಪ್ರಕರಣ ದೊಡ್ಡ ಮಟ್ಟದಲ್ಲಿ ಸಂಚಲನ ಮೂಡಿಸಿದೆ. ಈ ಕ್ರೂರ ಕೃತ್ಯಕ್ಕೆ ಜನ ಛೀಮಾರಿ ಹಾಕುತ್ತಿದ್ದಾರೆ. ಇದರ ಬೆನ್ನಲ್ಲೇ ಆಸ್ಟ್ರೇಲಿಯಾದ ಸಂಸದೆಗೆ ಲೈಂಗಿಕ ದೌರ್ಜನ್ಯ ಎಸಗಿರುವ ದುರಂತ ಘಟನೆ ನಡೆದಿದೆ.

mp

ಸಂಸದೆ ಮೇಲೆ ಲೈಂಗಿಕ ದೌರ್ಜನ್ಯ:

ಆಸ್ಟ್ರೇಲಿಯಾ ಸಂಸದೆ ಬ್ರಿಟ್ಟಾನಿ ಲೌಗಾ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ಖುದ್ದು ಸಂಸದೆ ಪೊಲೀಸ್ ಮೆಟ್ಟಿಲೇರಿದ್ದಾರೆ. ಸಂಸದೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದರ ವೀಡಿಯೋ ಕೂಡಾ ಹರಿದಾಡ್ತಾ ಇದೆ.  ಕ್ವೀನ್ಸ್‌ಲ್ಯಾಂಡ್ ನಗರದ ಲೇಬರ್ ಪಾರ್ಟಿ ಸಂಸದೆ ಬ್ರಿಟ್ಟಾನಿ ಲೌಗಾ ಸೇರಿದಂತೆ ಹಲವು ಮಹಿಳೆಯರು ನೈಟ್‌ಔಟ್‌ ಪಾರ್ಟಿಗೆ ತೆರಳಿದ್ದರು. ಅಲ್ಲಿ ಅವರ ಅರಿವಿಗೆ ಬಾರದೇ ಮಾದಕ ವಸ್ತುಗಳನ್ನು ನೀಡಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಅಲ್ಲದೆ ಸಂಸದೆ ಬ್ರಿಟ್ಟಾನಿ ಮೇಲಿನ ಲೈಂಗಿಕ ದೌರ್ಜನ್ಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡತೊಡಗಿದೆ. ಇನ್ನು ಈ ಪಾರ್ಟಿಯಲ್ಲಿದ್ದ ಇತರ ಮಹಿಳೆಯರ ಮೇಲೂ ಇದೇ ರೀತಿ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ವರದಿಯಾಗಿದೆ.

ಮುಂದೆ ಓದಿ..; ಬರ್ಬರ ಹತ್ಯೆಯಾದ ಬ್ಯೂಟಿ ಕ್ವೀನ್.!! ಮುಳುವಾಯಿತಾ ಇನ್ಸ್ಟಾಗ್ರಾಮ್ ಪೋಸ್ಟ್‌..! ಸಿಸಿಟಿವಿಯಲ್ಲಿ ಸೆರೆಯಾದ ಭಯಾನಕ ದೃಶ್ಯ

ವೈದ್ಯಕೀಯ ತಪಾಸಣೆಗೆ ಒಳಗಾದ ಸಂಸದೆ ಬ್ರಿಟ್ಟಾನಿ:

ತತ್‌ಕ್ಷಣ ಸಂಸದೆ ಯೆಪ್ಪೂನ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಭೇಟಿ ನೀಡಿ ತಪಾಸಣೆಗೆ ಒಳಗಾಗಿದ್ದಾರೆ.ಈ ವೇಳೆ ಅವರ ದೇಹದಲ್ಲಿ ಡ್ರಗ್ಸ್‌ ಇರುವುದು ಕಂಡುಬಂದಿದೆ. ಡ್ರಗ್ಸ್ ಸೇವನೆ ಮಾಡದಿದ್ದರೂ ದೇಹದಲ್ಲಿ ಡ್ರಗ್‌ ಅಂಶ ಕಂಡುಬಂದಿರುವುದು ಹೇಗೆ? ನೈಟ್ ಔಟ್ ನಲ್ಲಿ ಸೇರಿದ್ದ ಎಲ್ಲರಿಗೂ ಮಾದಕ ವಸ್ತುಗನ್ನು ನೀಡಿ ಅವರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಮಹಿಳೆಯರನ್ನು ಮನಬಂದಂತೆ ಬಳಸಿಕೊಳ್ಳುತ್ತಿದ್ದಾರೆ ಎಂದು ಸಂಸದೆ ಆರೋಪಿಸಿದ್ದಾರೆ. ಇದೇ ರೀತಿ ನೈಟ್‌ಔಟ್‌ನಲ್ಲಿ ಸೇರಿದ್ದ ಮಹಿಳೆಯರೂ ಕೂಡಾ ಆರೋಪ ಮಾಡಿದ್ದು ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ.

ಮಹಿಳೆಯರಿಗೆ ಅರಿವಿಲ್ಲದೆ ಡ್ರಗ್ಸ್ ನೀಡಿ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಬೆಳಕಿಗೆ ಬಂದ ಕೂಡಲೇ ಕ್ವೀನ್ಸ್‌ಲ್ಯಾಂಡ್ ಪಟ್ಟಣದಲ್ಲಿ ಕೋಲಾಹಲ ಸೃಷ್ಟಿಯಾಗಿದೆ.  ಪೊಲೀಸರು ಪ್ರಕರಣ ದಾಖಲಿಸಿಕೊಂಡು ತೀವ್ರ ತನಿಖೆ ನಡೆಸುತ್ತಿದ್ದಾರೆ. ಇನ್ನೂ ಈ ಕುರಿತಾಗಿ ಆಸ್ಟ್ರೇಲಿಯಾ ಕೆಲ ನಾಯಕರು ಸಂಸದೆ ಬ್ರಿಟ್ಟಾನಿಗೆ ಬೆಂಬಲ ನೀಡಿದ್ದಾರೆ.

 

 

Continue Reading

LATEST NEWS

ಅಮೇಥಿಯಲ್ಲಿ ಕಾಂಗ್ರೆಸ್ ಕಚೇರಿ ಮೇಲೆ ದಾಳಿ.! ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Published

on

ಅಮೇಥಿ: ಉತ್ತರ ಪ್ರದೇಶದ ಅಮೇಥಿಯಲ್ಲಿರುವ ಕಾಂಗ್ರೆಸ್ ಪಕ್ಷದ ಕಚೇರಿ ಮೇಲೆ ಭಾನುವಾರ ತಡರಾತ್ರಿ ಅಪರಿಚಿತ ದುಷ್ಕರ್ಮಿಗಳ ತಂಡವೊಂದು ದಾಳಿ ನಡೆಸಿದ್ದು ಕಾಂಗ್ರೆಸ್ ಕಚೇರಿ ಹೊರಗಡೆ ನಿಲ್ಲಿಸಿದ್ದ ಹಲವಾರು ವಾಹನಗಳನ್ನು ಧ್ವಂಸಗೊಳಿಸಿ ಗದ್ದಲ ಸೃಷ್ಟಿಸಿದೆ.

ಮುಂದೆ ಓದಿ..; ರಜನಿಕಾಂತ್-ಐಶ್ವರ್ಯ ರೈ ಸಂಬಂಧಪಟ್ಟ ವೀಡಿಯೋ ಈಗ ವೈರಲ್ ..!! ಅಮಿತಾಬಚನ್, ಅಭಿಷೇಕ್‌ಗೆ ಏನಾಗಿದೆ? ಎಂದು ಹೇಳಿದ್ಯಾಕೆ? 

ಸುದ್ದಿ ವಿಚಾರ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪ್ರದೀಪ್ ಸಿಂಗಲ್ ಪಕ್ಷದ ಕಚೇರಿಗೆ ದೌಡಾಯಿಸಿ ಬಳಿಕ ಪಕ್ಷದ ಕಾರ್ಯಕರ್ತರ ಜತೆಗೂಡಿ ಘಟನೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದಾರೆ.  ವಿಡಿಯೋ ಅನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಪ್ರತಿಭಟನೆ ಕಾವು ಹೆಚ್ಚುತ್ತಿದ್ದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭಾರೀ ಪೊಲೀಸ್ ಪಡೆಯೊಂದಿಗೆ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾನಿರತರನ್ನು ಸಮಾಧಾನ ಪಡಿಸಲು ಪ್ರಯತ್ನಿಸಿದರು.

ಈ ವೇಳೆ ಪ್ರತಿಭಟನಾಕಾರರು ಪೊಲೀಸರ ವಿರುದ್ಧ ಘೋಷಣೆಗಳನ್ನು ಕೂಗತೊಡಗಿದ್ದಾರೆ. ಪ್ರತಿಭಟನಾಕಾರರನ್ನು ಸಮಾಧಾನ ಪಡಿಸಿ ಆದಷ್ಟು ಬೇಗ ದುಷ್ಕರ್ಮಿಗಳನ್ನು ಬಂಧಿಸುವ ಭರವಸೆಯನ್ನು ಹಿರಿಯ ಪೊಲೀಸ್ ಅಧಿಕಾರಿ ನೀಡಿದ್ದಾರೆ. ದುಷ್ಕರ್ಮಿಗಳು ದಾಳಿ ನಡೆಸಿದ ವಿಡಿಯೋ ಅನ್ನು ಸಾಮಾಜಿಕ ಜಾಲತಾಣ x ನಲ್ಲಿ ಹಂಚಿಕೊಂಡ ಕಾಂಗ್ರೆಸ್ ಅಮೇಠಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ವಿರುದ್ಧ ಸೋಲಿನ ಭೀತಿಯಿಂದ ಬಿಜೆಪಿ ಹಿಂಸಾಚಾರ ನಡೆಸುತ್ತಿದೆ ಎಂದು ಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿ ಅವರನ್ನು ಉಲ್ಲೇಖಿಸಿ ಆರೋಪ ಮಾಡಿದೆ.

Continue Reading

LATEST NEWS

Trending