ಕರ್ಣಾಟಕ ಬ್ಯಾಂಕ್ ಅಧ್ಯಕ್ಷರಾಗಿ ಪಿ.ಜಯರಾಮ್ ಭಟ್, ಸಿಇಒ ಆಗಿ ಮಹಾಬಲೇಶ್ವರ್ ಎಂ.ಎಸ್ ಪುನರ್ ಆಯ್ಕೆ
ಕರ್ಣಾಟಕ ಬ್ಯಾಂಕ್ ಅಧ್ಯಕ್ಷರಾಗಿ ಪಿ.ಜಯರಾಮ್ ಭಟ್, ಸಿಇಒ ಆಗಿ ಮಹಾಬಲೇಶ್ವರ್ ಎಂ.ಎಸ್ ಪುನರ್ ಆಯ್ಕೆ
ಮಂಗಳೂರು: ಕರ್ಣಾಟಕ ಬ್ಯಾಂಕಿನ ಪಿ. ಜಯರಾಮ ಭಟ್ ಚೇರ್ಮನ್ ಆಗಿಯೂ ಮಹಾಬಲೇಶ್ವರ ಎಂ.ಎಸ್ ಮ್ಯಾನೇಜಿಂಗ್ ಡೈರೆಕ್ಟರ್ ಮತ್ತು ಚೀಫ್ ಎಕ್ಸಿಕ್ಯೂಟಿವ್ ಆಫೀಸರ್ ಆಗಿ ಭಾರತೀಯ ರಿಸರ್ವ್ ಬ್ಯಾಂಕಿನ ಅನುಮೋದನೆಯಂತೆ ಎರಡನೇ ಅವಧಿಗೆ ಪುನರಾಯ್ಕೆಗೊಂಡಿದ್ದಾರೆ.
ಈ ಆದೇಶದ ಅನ್ವಯ ಪಿ. ಜಯರಾಮ ಭಟ್ ಇವರು 2021ರ ನ.10 ಅವಧಿಯವರೆಗೆ ಚೇರ್ಮೆನ್ ಆಗಿ ಮುಂದುವರೆದರೆ,
ಮಹಾಬಲೇಶ್ವರ ಎಂ.ಎಸ್ ಅವರು 2020ರ ಎ.15ರಿಂದ ಮುಂದಿನ ಮೂರು ವರ್ಷಗಳ ಪರ್ಯಂತ ಬ್ಯಾಂಕಿನ ಮ್ಯಾನೇಜಿಂಗ್ ಡೈರೆಕ್ಟರ್ ಹಾಗೂ ಚೀಫ್ ಎಕ್ಸಿಕ್ಯೂಟಿವ್ ಆಫೀಸರ್ ಆಗಿ ಬ್ಯಾಂಕನ್ನು ಮುನ್ನಡೆಸಲಿದ್ದಾರೆ.
ತಮ್ಮ ಮರು ಆಯ್ಕೆಯ ಸಂದರ್ಭದಲ್ಲಿ ಹರ್ಷವನ್ನು ವ್ಯಕ್ತಪಡಿಸಿ ಮಾತನಾಡಿದ ಮಹಾಬಲೇಶ್ವರ ಎಂ.ಎಸ್, ಮೂರು ವರ್ಷಗಳ ಕಾಲ ಬ್ಯಾಂಕಿನ ಚುಕ್ಕಾಣಿಯನ್ನು ಹಿಡಿದು ಮುನ್ನಡೆಸುವ ಅವಕಾಶ ದೊರಕಿದುದು ನನ್ನ ಸೌಭಾಗ್ಯ ಮತ್ತು ಹೆಮ್ಮೆಯ ವಿಷಯ ಎಂದು ಭಾವಿಸುವೆ.
ಯೋಗಾಯೋಗವೋ ಎಂಬಂತೆ ನನ್ನ ಮಾರ್ಗದರ್ಶಕರಾಗಿರುವ ಪಿ.ಜಯರಾಮ ಭಟ್ ಅವರೂ ಕೂಡ ಎರಡನೇ ಅವಧಿಗೆ ಪುನರ್ ಆಯ್ಕೆಗೊಂಡು ಇನ್ನೂ ಒಂದೂವರೆ ವರ್ಷಗಳ ಕಾಲ ನಮಗೆ ಮಾರ್ಗದರ್ಶನ ನೀಡಲಿದ್ದಾರೆ.
ನಾನು ಮ್ಯಾನೇಜಿಂಗ್ ಡೈರೆಕ್ಟರ್ ಹಾಗೂ ಚೀಫ್ ಎಕ್ಸಿಕ್ಯೂಟಿವ್ ಆಫೀಸರ್ ಆಗಿ ಆಯ್ಕೆಯಾದಾಗಿನಿಂದಲೂ ಪಿ.ಜಯರಾಮ ಭಟ್ ಹಾಗೂ ಆಡಳಿತ ಮಂಡಳಿಯ ಎಲ್ಲಾ ನಿರ್ದೇಶಕರುಗಳು ನೀಡಿದ ಸಂಪೂರ್ಣ ಬೆಂಬಲ ಹಾಗೂ ಮಾರ್ಗದರ್ಶನಕ್ಕಾಗಿ ಅವರಿಗೆ ವಿಶೇಷ ಕೃತಜ್ಞತೆಗಳು.
ಒಂದು ಕೋಟಿಗೂ ಮಿಕ್ಕಿದ ಸಂತೃಪ್ತ ಗ್ರಾಹಕರ ಆಶೀರ್ವಾದ. ಸಂಸ್ಥೆಯಲ್ಲಿ ದುಡಿಯುವ 8500ಕ್ಕೂ ಮಿಕ್ಕಿದ ನನ್ನ ಸಹೋದ್ಯೋಗಿಗಳ ಸಹಕಾರಕ್ಕಾಗಿ ನಾನು ಚಿರಋಣಿ.
ಭಾರತೀಯ ರಿಸರ್ವ್ ಬ್ಯಾಂಕಿನ ಅನನ್ಯ ಬೆಂಬಲ ಹಾಗೂ ಮಾರ್ಗದರ್ಶನಕ್ಕಾಗಿ ಹೃತ್ಪೂರ್ವಕ ಧನ್ಯವಾದಗಳು.
ವಿಶ್ವವು ಹಿಂದೆಂದೂ ಕಂಡು ಕೇಳರಿಯದ ಕೋವಿಡ್-19 ವೈರಸ್ ಗೆ ಸಿಕ್ಕಿ ನಲುಗುತ್ತಿದ್ದು ಮುಂದೆ ಆರ್ಥಿಕ ಹಿಂಜರಿತಗಳು ವಿಶ್ವದ ಆರ್ಥಿಕತೆಗೆ ದೊಡ್ಡ ಸವಾಲಾಗುವ ಸಂಶಯಗಳು ವ್ಯಕ್ತವಾಗುತ್ತಲಿವೆ.
ಇಂತಹ ಸಂಕಷ್ಟದ ಸ್ಥಿತಿಯನ್ನು ಎದುರಿಸಲು ಕರ್ಣಾಟಕ ಬ್ಯಾಂಕ್ ಸರ್ವಸನ್ನದ್ಧವಾಗಿದೆ.
ಉತ್ತಮ ಆಡಳಿತವನ್ನು ನೀಡುವುದು ಹಾಗೂ ಬ್ಯಾಂಕಿನ ಸರ್ವ ಪಾಲುದಾರರ ಮೌಲ್ಯ ಸಂವರ್ಧನೆಗೆ ಅವಿರತ ಶ್ರಮಿಸುವುದಲ್ಲದೆ ಬ್ಯಾಂಕನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯುವಲ್ಲಿ ನಾವು ಕಟಿಬದ್ಧರಾಗಿದ್ದೇವೆ.
ಮುಂಬರುವ ದಿನಗಳು ತುಂಬಾ ಫಲಪ್ರದವಾಗುವಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಶ್ರಮಿಸಿ, ಬ್ಯಾಂಕಿನ ಸರ್ವಾಂಗೀಣ ಪ್ರಗತಿಗೆ ಒತ್ತು ನೀಡಲಿದ್ದೇವೆ.
ಬ್ಯಾಂಕಿನ ಆದರಣೀಯ ಗ್ರಾಹಕರ ಹಾಗೂ ಅಭಿಮಾನಿಗಳ ಹೃತ್ಪೂರ್ವಕ ಬೆಂಬಲ ಸದಾ ನಮ್ಮೊಂದಿಗಿದೆ ಎಂಬ ತುಂಬು ಭರವಸೆ ನನಗಿದೆ” ಎಂದವರು ಸಂತಸ ವ್ಯಕ್ತಪಡಿಸಿದ್ದಾರೆ.
ವಿಡಿಯೋಗಾಗಿ..
DAKSHINA KANNADA
ಹಳ್ಳ ಹಿಡಿದ ಸ್ಮಾರ್ಟ್ ಸಿಟಿಯ ಕಾಮಗಾರಿ; ಕುಂಟುತ್ತಾ ಸಾಗಿದ ಮಹಾಕಾಳಿ ಪಡ್ಪು ಅಂಡರ್ ಪಾಸ್
ಮಂಗಳೂರು: ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಕೈಗೆತ್ತಿಕೊಂಡಿರುವ ಮಹಾಕಾಳಿ ಪಡ್ಪುವಿನ ರೈಲ್ವೇ ಅಂಡರ್ ಪಾಸ್ ಕಾಮಗಾರಿ ಸದ್ಯಕ್ಕಂತು ಮುಗಿಯುವ ಲಕ್ಷಣ ಕಾಣಿಸುತ್ತಿಲ್ಲ. ಈ ಕಾಮಗಾರಿ ಕೈಗೆತ್ತಿಕೊಂಡು ವರ್ಷಗಳೇ ಕಳೆದರೂ ಕಾಮಗಾರಿ ಮುಗಿಸಬೇಕು ಅನ್ನೋ ಇಚ್ಚೆ ಸ್ಮಾರ್ಟ್ ಸಿಟಿ ಯೋಜನೆಯವರಿಗೂ ಇದ್ದಂತಿಲ್ಲ.
ಕೆಲ ತಿಂಗಳ ಹಿಂದೆ ಕಳಪೆ ಕಾಮಗಾರಿಯಿಂದಾಗಿ ಇಲ್ಲಿ ಕಾಮಗಾರಿ ಕುಸಿತ ಕೂಡಾ ಉಂಟಾಗಿತ್ತು. ಇದೀಗ ಕೆಲ ದಿನಗಳಿಂದ ಯಾವುದೇ ಕಾಮಗಾರಿ ನಡೆಸದೆ ಕಾರ್ಮಿಕರು ಕೂಡಾ ಕೆಲಸ ಇಲ್ಲದೆ ಸುಮ್ಮನೆ ಕುಳಿತಿರುವ ದೃಶ್ಯ ಇಲ್ಲಿ ಮಾಮೂಲಾಗಿದೆ. ಮಾರ್ಗನ್ ಗೇಟ್ ಮೂಲಕವಾಗಿ ಜೆಪ್ಪಿನ ಮೊಗೆರು ಹೈವೆ ಸಂಪರ್ಕಿಸುವ ಈ ರಸ್ತೆಯಲ್ಲಿ ನಿತ್ಯ ಸಾವಿರಾರು ವಾಹನಗಳು ಓಡಾಡುತ್ತಿದೆ. ಸದ್ಯ ಈ ಕಾಮಗಾರಿ ಆರಂಭವಾದ ಬಳಿಕ ಇಲ್ಲಿ ದ್ವಿಚಕ್ರ ವಾಹನಕ್ಕಷ್ಟೇ ಓಡಾಡಲು ವ್ಯವಸ್ಥೆ ಮಾಡಲಾಗಿದೆ.
ಉಪ್ಪಳದಲ್ಲಿ 3.5 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ವಶ; ಓರ್ವ ಬಂಧನ
ಹೀಗಾಗಿ ಈ ರಸ್ತೆಯ ಮೂಲಕ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಕಾಮಗಾರಿ ಯಾವಾಗ ಮುಗಿಸ್ತೀರಿ ಅಂತ ಪ್ರಶ್ನೆ ಮಾಡುತ್ತಿದ್ದಾರೆ. ಆದರೆ ಇಲ್ಲಿ ನಡಿಯುತ್ತಿರುವ ಕಾಮಗಾರಿಯ ವೇಗ ನೋಡಿದರೆ ಇದು 2024 ರಲ್ಲಿ ಪೂರ್ಣಗೊಳ್ಳುವ ಯಾವುದೇ ಲಕ್ಷಣ ಇಲ್ಲ ಅನ್ನೋದು ಸ್ಪಷ್ಟವಾಗುತ್ತಿದೆ. ಹೀಗಾಗಿ ತಕ್ಷಣ ಅಂಡರ್ ಪಾಸ್ ಕೆಲಸ ಮಗಿಸಿ ಅಂತ ಜನ ಒತ್ತಾಯಿಸಿದ್ದಾರೆ.
LATEST NEWS
11 ವರ್ಷದ ಬಾಲಕ ಹೃದಯಘಾ*ತಕ್ಕೆ ಬ*ಲಿ
ಹಾಸನ : ಹೃದಯಾಘಾ*ತ ಎಂಬುದು ಇತ್ತೀಚೆಗೆ ಸಾಮಾನ್ಯವಾಗಿದೆ. ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಸಾದವರೂ ಹೃದಯಾ*ಘಾತಕ್ಕೆ ಒಳಗಾಗುತ್ತಿದ್ದಾರೆ. ರಾಜ್ಯದಲ್ಲಿ ಮತ್ತೊಂದು ಕಳವಳಕಾರಿ ಘಟನೆ ನಡೆದಿದ್ದು, 11 ವರ್ಷದ ಬಾಲಕ ಹೃದಯಾ*ಘಾತಕ್ಕೆ ಬ*ಲಿಯಾಗಿದ್ದಾನೆ. ಈ ಘಟನೆ ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಚನ್ನಾಪುರ ಗ್ರಾಮದಲ್ಲಿ ನಡೆದಿದೆ. ಸಚಿನ್ ಮೃ*ತ ಬಾಲಕ.
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿದ್ದ ಸಚಿನ್, ಮನೆಯಲ್ಲಿ ಟಿವಿ ನೋಡುತ್ತಿದ್ದ ವೇಳೆ ಹೃದಯಾ*ಘಾತವಾಗಿದೆ.
ಇದನ್ನೂ ಓದಿ : ಮನೆಯಲ್ಲಿ ಹಲ್ಲಿ ಕಾಟವೇ? ಈ ಸಿಂಪಲ್ ಮನೆಮದ್ದು ಟ್ರೈ ಮಾಡಿ
ಟಿವಿ ನೋಡುತ್ತಲೇ ಕುಸಿ*ದು ಬಿದ್ದ ಮಗನನ್ನು ಮಾತನಾಡಿಸಲು ಮನೆಯವರು ಪ್ರಯತ್ನಿಸಿದ್ದು, ಏನು ಮಾತನಾಡದೆ ಇರೋದನ್ನು ಗಮನಿಸಿ ಪೋಷಕರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಆಲೂಕು ಸರ್ಕಾರಿ ಆಸ್ಪತ್ರೆಗೆ ಕರೆತರುವ ಮುನ್ನವೇ ಬಾಲಕ ಸಾ*ವನ್ನಪ್ಪಿದ್ದ ಎಂದು ವೈದ್ಯರು ಘೋಷಿಸಿದ್ದಾರೆ ಎಂದು ತಿಳಿದು ಬಂದಿದೆ.
FILM
ಕನ್ನಡದ ಸೀರಿಯಲ್ನಲ್ಲಿ ಮಿಂಚುತ್ತಿರುವ ಉಡುಪಿಯ ಬೆಡಗಿ
ಬೆಂಗಳೂರು/ಮಂಗಳೂರು: ಸಿನೆಮಾದಲ್ಲಿ ನಟಿಸಬೇಕು ಅನ್ನೋದು ಎಲ್ಲರ ಕನಸು. ಆದರೆ ಇಲ್ಲೊಬ್ಬಾಕೆ ನಟಿಗೆ ಸೀರಿಯಲ್ನಲ್ಲಿ ನಟಿಸಬೇಕು ಎಂಬ ಆಸೆ. ಆದರೆ ಆಕೆಗೆ ಮಾತ್ರ ಮೊದಲು ಒಲಿದು ಬಂದಿದ್ದು ಸಿನೆಮಾದಲ್ಲಿ ನಟಿಸುವ ಅವಕಾಶ. ಇದೀಗ ಆ ನಟಿ ಸುರ್ವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಅವನು ಮತ್ತು ಶ್ರಾವಣಿ’ ಧಾರವಾಹಿಯಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹೌದು, ಈ ಧಾರಾವಾಹಿಯಲ್ಲಿ ಶ್ರಾವಣಿಯಾಗಿ ಕಾಣಿಸಿಕೊಂಡಿರುವ ಇಶಿಕಾ ಶೆಟ್ಟಿಗಾರ್ ಮೂಲತಃ ಉಡುಪಿಯವರಾಗಿದ್ದಾರೆ.
ಶ್ರಾವಣಿ ಪಾತ್ರದ ಇಶಿಕಾ ಶೆಟ್ಟಿಗಾರ್ ಮೂಲತಃ ಉಡುಪಿಯವರಾಗಿದ್ದು ಸದ್ಯ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ಈಕೆ 9 ನೇ ತರಗತಿಯಲ್ಲಿದ್ದಅಗಲೇ ಸಿನೆಮಾ ನಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಊರ್ವಿ, ಗರುಡ, ಮನದ ಮರೆಯಲಿ ಸೇರಿದಂತೆ ನಾಳ್ಕೈದು ಸಿನೆಮಾಗಳಲ್ಲಿ ನಟಿಸಿದ್ದಾರೆ. ಬಳಿಕ ಕಾನೂನು ಪದವಿ ಮುಗಿಸಿರುವ ಇವರು ಸೀರಿಯಲ್ ನಲ್ಲಿ ಆಭಿನಯಿಸುವತ್ತ ಒಲವು ಮಾಡಿದ್ದಾರೆ. ಹೀಗಾಗಿ ಲುಕ್ ಟೆಸ್ಟ್ ಕೂಡಾ ಕೊಟ್ಟಿದ್ದಾರೆ.
ಜಾನಿ ಮಾಸ್ಟರ್ ಪತ್ನಿಗೂ ಬಂತು ಕಂಟಕ..! ಅತ್ಯಾಚಾರ ಪ್ರಕರಣಕ್ಕೆ ಟ್ವಿಸ್ಟ್..!!
ಇದೇ ವೇಳೆ ‘ಅವನು ಮತ್ತು ಶ್ರಾವಣಿ’ ಧಾರಾವಾಹಿಗೆ ರಿಪ್ಲೇಸ್ಮೆಂಟ್ ಪಾತ್ರಕ್ಕೆ ಕರೆ ಬರುತ್ತದೆ. ರಿಪ್ಲೇಸ್ಮೆಂಟ್ ಪಾತ್ರ ಆಗಿದ್ದರಿಂದ ಜನರಿಗೆ ಇಷ್ಟ ಆಗ್ಬೋದಾ ಅನ್ನುವ ಮೈಂಡ್ ಸೆಟ್ ನಲ್ಲಿ ಇವರು ಕೊನೆಗೂ ಪಾತ್ರಕ್ಕೆ ಸೈ ಎಂದು ಹೇಳಿದ್ದಾರೆ. ಇದೀಗ ಧಾರಾವಾಹಿ ಮೂಲಕ ಕನ್ನಡಿಗರ ಮನಗೆದ್ದಿದ್ದಾರೆ. ಈ ಧಾರಾವಾಹಿಯಲ್ಲಿ ನಟನೆ ಆರಂಭಿಸಿದ ಮೇಲೆ ಆಫರ್ಗಳು ಬರುತ್ತಿದೆ ಎಂದು ಇಶಿಕಾ ಶೆಟ್ಟಿಗಾರ್ ಹೇಳಿದ್ದಾರೆ.