Connect with us

LATEST NEWS

RSS ಈ ದೇಶದ ಸಪುಂಸಕ ಸಂಘಟನೆ: ಕಾಂಗ್ರೆಸ್‌ನಿಂದ ಟ್ವಿಟ್ಟರ್‌ನಲ್ಲಿ ವಾಗ್ದಾಳಿ

Published

on

ಬೆಂಗಳೂರು: ಗಾಂಧಿ ಹತ್ಯೆಯನ್ನು ಸಂಭ್ರಮಿಸುವ RSS ಈ ದೇಶದ ಸಪುಂಸಕ ಸಂಘಟನೆ. ಮಹಾತ್ಮ ಗಾಂಧಿಯವರು ಸತ್ತ ದಿನ ಸಿಹಿ ಹಂಚಿದ ಗುಳ್ಳೆನರಿ RSS ಹೇಗೆ ತಾನೇ ದೇಶಪ್ರೇಮಿ ಸಂಘಟನೆಯಾಗಬಲ್ಲದು? ಎಂದು ಸಿದ್ದರಾಮಯ್ಯ ನಂತರ ಕಾಂಗ್ರೆಸ್‌ ತನ್ನ ಟ್ವಿಟ್ಟರ್‌ನಲ್ಲಿ ವಾಗ್ದಾಳಿ ನಡೆಸಿದೆ.


ಸಿದ್ದರಾಮಯ್ಯ ಟ್ವಿಟ್ವರ್‌ನಲ್ಲಿ ಆರ್‌ಎಸ್‌ಎಸ್‌ ವಿರುದ್ಧ ಟ್ವೀಟ್‌ ಮಾಡುತ್ತಿದ್ದಂತೆ ಕರ್ನಾಟಕ ಕಾಂಗ್ರೆಸ್‌ ಸಹ ತನ್ನ ಟ್ವಿಟ್ಟರ್‌ನಲ್ಲಿ ಸರಣಿ ಟ್ವಿಟ್‌ ಮಾಡಿ, ಈ ದೇಶದ ರಾಷ್ಟ್ರಧ್ವಜಕ್ಕೆ ಬೆಲೆಕೊಡದೆ ಅವಮಾನಿಸುವ,

ಈ ದೇಶ ಕಂಡ ಮಹಾ ದಾರ್ಶನಿಕ ಗಾಂಧಿ ಹತ್ಯೆಯನ್ನು ಸಂಭ್ರಮಿಸುವ RSS ಈ ದೇಶದ ಸಪುಂಸಕ ಸಂಘಟನೆಯೇ ಹೊರತಾಗಿ ಯಾವುದೇ ಕಾರಣಕ್ಕೂ ದೇಶಪ್ರೇಮಿ ಸಂಘಟನೆಯಾಗಲಾರದು.


ಹೆಜ್ಜೆ ಹೆಜ್ಜೆಗೂ ಈ ದೇಶದ ಸ್ವಾತಂತ್ರ್ಯ ಹೋರಾಟವನ್ನು ಹೀಗಳೆಯುತ್ತಾ ಬ್ರಿಟೀಷರ ಸೈನ್ಯ ಸೇರಲು RSS ತುದಿಗಾಲಲ್ಲಿ ನಿಂತಿರಲಿಲ್ಲವೇ?

ಈ ದೇಶದ ಸ್ವಾತಂತ್ರ್ಯಕ್ಕೆ ನಯಾಪೈಸೆ ಕೊಡುಗೆ ಕೊಡದ, ಸ್ವಾತಂತ್ರ್ಯ ಹೋರಾಟಗಾರರನ್ನು ಬ್ರಿಟೀಷರಿಗೆ ಹಿಡಿದುಕೊಡುತ್ತಿದ್ದ RSS ಸಂಘಟನೆ ದೇಶದ್ರೋಹಿ ಸಂಘಟನೆಯಲ್ಲದೆ ಮತ್ತಿನೇನು?

ಈ ದೇಶದ ಸ್ವಾತಂತ್ರ್ಯಕ್ಕಾಗಿ ತನ್ನ ಜೀವನವನ್ನೇ ಮುಡಿಪಿಟ್ಟ ಬಾಪೂಜೀ ಮಹಾತ್ಮ ಗಾಂಧಿಯವರು

ಸತ್ತ ದಿನ ಸಿಹಿ ಹಂಚಿದ ಗುಳ್ಳೆನರಿ RSS ಹೇಗೆ ತಾನೇ ದೇಶಪ್ರೇಮಿ ಸಂಘಟನೆಯಾಗಬಲ್ಲದು?
RSS ಮುಖವಾಣಿ ಆರ್ಗನೈಸರ್ 1970 ಜನವರಿ 11 ರಂದು ತನ್ನ ಸಂಪಾದಕೀಯದಲ್ಲಿ ಗಾಂಧಿಯವರ ಬಗ್ಗೆ ವಿಷಪೂರಿತ ಲೇಖನ ಪ್ರಕಟಿಸಿರಲಿಲ್ಲವೇ?

ರಾಷ್ಟ್ರಪಿತ ಮಹಾತ್ಮ ಗಾಂಧಿಯನ್ನು ಕೊಂದಂಥಹ ಈ ದೇಶದ ಮೊದಲ ಭಯೋತ್ಪಾದಕ ಗೋಡ್ಸೆ ತಯಾರಾಗಿದ್ದು ಸಹ ಇದೇ RSS ಗರಡಿಯಲ್ಲೇ.

ಈ ಬಗ್ಗೆ ನಾಥೂರಾಮ ಗೋಡ್ಸೆಯ ಸಹೋದರ ಗೋಪಾಲ ಗೋಡ್ಸೆ ಜನವರಿ 28 1994ರಲ್ಲಿ ಫ್ರಂಟ್ ಲೈನ್ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಖಚಿತಪಡಿಸಿದ್ದಾನೆ.

1929 ರ ಲಾಹೋರ್ ಅಧಿವೇಶನದಲ್ಲಿ ಅಂದಿನ ಅಧ್ಯಕ್ಷರಾದ ಜವಾಹರಲಾಲ್ ನೆಹರೂರವರು ದೇಶದ ಎಲ್ಲಾ ಸಂಸ್ಥೆಗಳ ಮೇಲೆ 1930 ಜನವರಿ 26ರಂದು ತ್ರಿವರ್ಣ ಧ್ವಜ ಹಾರಿಸಬೇಕೆಂದು ಕರೆಕೊಡುತ್ತಾರೆ ಇದನ್ನು ನಿರಾಕರಿಸಿದ RSS ತನ್ನ ಸಂಘದ ಕಛೇರಿಯ ಮೇಲೆ ಭಗವಾಧ್ವಜ ಹಾರಿಸುತ್ತದೆ.

Click to comment

Leave a Reply

Your email address will not be published. Required fields are marked *

DAKSHINA KANNADA

‘ನಾಟು ನಾಟು’ ರೀತಿಯ ಸಾಂಗ್‌..! ಕುತೂಹಲ ಮೂಡಿಸಿದ ‘ವಾರ್ 2’

Published

on

2019 ರಲ್ಲಿ ಸೂಪರ್ ಹಿಟ್ ಆಗಿದ್ದ ‘ವಾರ್’ ಸಿನೆಮಾದ ಸೆಕಂಡ್ ವರ್ಷನ್‌ ‘ವಾರ್ 2’ ತೆರೆ ಮೇಲೆ ಬರಲು ಭರದ ಸಿದ್ಧತೆ ನಡೆಸಿದೆ. ‘ವಾರ್’ ಸಿನೆಮಾದಲ್ಲಿ ‘ ಜೈ ಜೈ ಶಿವಶಂಕರ್’ ಹಾಡು ಸುಪರ್ ಹಿಟ್ ಆಗಿದ್ದು ಫ್ಯಾನ್ಸ್‌ಗಳು ಹಾಡಿಗೆ ಫಿದಾ ಆಗಿದ್ರು. ಟೈಗರ್ ಶ್ರಾಫ್ ಹಾಗೂ ಹೃತಿಕ್ ರೋಷನ್ ನಟನೆಯ ‘ವಾರ್’ ಸಿನೆಮಾ ಬಳಿಕ ಈಗ ‘ವಾರ್‌ 2’ ರೆಡಿ ಆಗ್ತಾ ಇದೆ. ಇದರಲ್ಲಿ ಹೃತಿಕ್ ರೋಷನ್ ಹಾಗೂ ಜ್ಯೂನಿಯರ್ ಎನ್‌ಟಿಆರ್ ಜೊತೆಯಾಗಿದ್ದಾರೆ.

ಅದ್ಧೂರಿಯಾಗಿ ನಿರ್ಮಾಣ ಆಗ್ತಾ ಇರೋ ‘ವಾರ್ 2’ ಸಿನೆಮಾಗೆ ದೊಡ್ಡ ಮಟ್ಟದಲ್ಲಿ ಹೂಡಿಕೆ ಮಾಡಲಾಗ್ತಾ ಇದೆ. ಯಶ್‌ ರಾಜ್ ಫಿಲಂಸ್‌ ಸಂಸ್ಥೆ ಈ ‘ವಾರ್ 2’ ಸಿನೆಮಾಗೆ ಬಂಡವಾಳ ಹಾಕುತ್ತಿದೆ. ‘ವಾರ್’ ಸಿನೆಮಾದಂತೆ ಈ ಸಿನೆಮಾದಲ್ಲೂ ವಿಶೇಷ ಹಾಡನ್ನ ಸಿನೆಮಾ ತಂಡ ಪ್ಲ್ಯಾನ್ ಮಾಡಿದೆ. ಜೂನಿಯರ್ ಎನ್‌ಟಿಆರ್ ಅವರ ಆಸ್ಕರ್ ಅವಾರ್ಡ್‌ ವಿನ್ ಆಗಿದ್ದ ‘ನಾಟು ನಾಟು” ಹಾಡಿನಂತೆ ಇರೋ ಹಾಡಿಗೆ ಹೃತಿಕ್ ಹಾಗೂ ಜ್ಯೂನಿಯರ್ ಎನ್‌ಟಿಆರ್‌ ಹೆಜ್ಜೆ ಹಾಕಲಿದ್ದಾರೆ ಎನ್ನಲಾಗಿದೆ. ‘ನಾಟು ನಾಟು’ ರೀತಿಯ ಹಾಡು ಹಾಗೂ ಡ್ಯಾನ್ಸ್‌ ‘ವಾರ್ 2’ ಸಿಎನಮಾದ ಹೈಲೈಟ್ ಆಗಲಿದೆ ಎಂದು ಬಾಲಿವುಡ್ ಹಂಗಾಮ ವರದಿ ಮಾಡಿದೆ.


ಈಗಾಗಲೇ ‘ವಾರ್ 2’ ಚಿತ್ರದ ಶೂಟಿಂಗ್ ಆರಂಭವಾಗಿದೆ. ಚಿತ್ರದ ಸೆಟ್​ ಫೋಟೋಗಳು ಕೂಡಾ ಲೀಕ್ ಆಗಿವೆ. ಅಯಾನ್ ಮುಖರ್ಜಿ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಆದಿತ್ಯ ಚೋಪ್ರಾ ಅವರು ದೊಡ್ಡ ಬಜೆಟ್​ನಲ್ಲಿ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ‘ವಾರ್ 2’ ಚಿತ್ರದಲ್ಲಿ ಕಿಯಾರಾ ಅಡ್ವಾಣಿ ನಟಿಸುತ್ತಿದ್ದಾರೆ. ಈ ಸಿನಿಮಾ 2025ರಲ್ಲಿ ಆಗಸ್ಟ್ 14ರಂದು ರಿಲೀಸ್ ಆಗಲಿದೆ.

Continue Reading

LATEST NEWS

ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ

Published

on

ಉಡುಪಿ : ಪ್ರಧಾನಿ ಮೋದಿ ಚಿಕ್ಕಬಳ್ಳಾಪುರ ಬೆಂಗಳೂರು ಪ್ರವಾಸ ಮಾಡ್ತಿದ್ದಾರೆ. ಮೂರು ಬಾರಿ ಕಾರಣಾಂತರದಿಂದ ಉಡುಪಿಗೆ ಬರಲು ಸಾಧ್ಯವಾಗಿರಲಿಲ್ಲ. ಪ್ರಧಾನಮಂತ್ರಿ ಕಚೇರಿಯಿಂದ ಅನುಮತಿ ಪಡೆದು ಉಡುಪಿ ಬಂದಿದ್ದೇನೆ. ಕರಾವಳಿ ಜನರ ರಕ್ತದಲ್ಲಿ ಹಿಂದುತ್ವ ಇದೆ. ಮೋದಿಯ 10 ವರ್ಷದ ಆಡಳಿತವನ್ನು ಜಗತ್ತು ಕೊಂಡಾಡಿದೆ. ಎಲ್ಲಾ ಅಸಾಧ್ಯಗಳನ್ನು ಪ್ರಧಾನಿ ಮೋದಿ ಸಾಧ್ಯ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಹೇಳಿದ್ದಾರೆ.


ಉಡುಪಿಯಲ್ಲಿ ನಡೆದ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇಡೀ ದೇಶದ ಜನರಲ್ಲಿ ವಿಶ್ವಾಸ -ಭರವಸೆ ಮೂಡಿಸಿದ್ದು ಮೋದಿ. ರಾಮಮಂದಿರ, ಆರ್ಟಿಕಲ್ 370 ರದ್ದು, ಅಭಿವೃದ್ಧಿ ಎಲ್ಲವೂ ಮೋದಿ ಕಾಲದಲ್ಲಿ ಆಗಿದೆ. ಬಿಜೆಪಿ ಸಂವಿಧಾನ ಬದಲಾವಣೆ ಮಾಡುತ್ತೆ. ನಾವು ರಕ್ಷಣೆ ಮಾಡ್ತೇವೆ ಎಂದು ಖರ್ಗೆ ಹೇಳ್ತಾರೆ. ಮೋದಿ ಮತ್ತೆ ಪ್ರಧಾನಿ ಆಗಬಾರದು ಅಂತ ಖರ್ಗೆ ಕರೆ ಕೊಡ್ತಾರೆ. ಕಾಂಗ್ರೆಸ್ಸಿಗರು ಅಂಬೇಡ್ಕರ್ ಅವರನ್ನು ಬದುಕಿದ್ದಾಗಲೇ ಕಗ್ಗೊ*ಲೆ ಮಾಡಿದ್ದಾರೆ. ಅಂಬೇಡ್ಕರ್ ರನ್ನು ಸೋಲಿಸಿದ್ದು ಕಾಂಗ್ರೆಸ್ ಪಕ್ಷ. ಬಾಬಾ ಸಾಹೇಬರ ಅಂತ್ಯ ಸಂಸ್ಕಾರಕ್ಕೂ ಅವಕಾಶ ಕೊಟ್ಟಿಲ್ಲ. ಅಂಬೇಡ್ಕರ್ ರ ಪಂಚ ತೀರ್ಥಕ್ಷೇತ್ರ ಅಭಿವೃದ್ಧಿ ಮಾಡಿದ್ದು ಮೋದಿ – ಬಿಜೆಪಿ ಸರಕಾರ ಎಂದರು.

ಇದನ್ನೂ ಓದಿ : ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಮಂಗಳೂರು ಮಾಜಿ ಮೇಯರ್ ಕವಿತಾ ಸನಿಲ್

Continue Reading

DAKSHINA KANNADA

ಕಡಬ: ಬಿಳಿನೆಲೆ ಕಾಡಿನಲ್ಲಿ ಅಸ್ಥಿಪಂಜರ ಪತ್ತೆ ..!

Published

on

ಕಡಬ: ಬಿಳಿನೆಲೆ ಗ್ರಾಮದ ಹಳೆ ನರ್ಸರಿ ಬಳಿಯಿರುವ ಕಾಡಿನಲ್ಲಿ ಅಸ್ಥಿಪಂಜರ ಪತ್ತೆಯಾಗಿರುವ ಬಗ್ಗೆ ಎ.19ರಂದು ವರದಿಯಾಗಿದೆ. ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಪಕ್ಕದಲ್ಲಿರುವ ರಕ್ಷಿತಾರಣ್ಯದ ಪಕ್ಕದಲ್ಲಿ ಅಸ್ಥಿಪಂಜರ ದೊರಕಿದೆ.

ಅಸ್ಥಿಪಂಜರ

ಬಿಳಿನೆಲೆಯ ಚಂದ್ರಶೇಖರ್ ಎಂವರು ಕಾಡಿಗೆ ಸೌದೆ ತರಲು ಹೋಗಿದ್ದಾಗ ಕೊಳೆತ ವಾಸನೆ ಬಂದಿದೆ. ಈ ಬಗ್ಗೆ ಹುಡುಕಾಡಿದಾಗ ಮೃತ ವ್ಯಕ್ತಿಯ ಅಸ್ಥಿಪಂಜರ ಕಂಡುಬಂದಿದೆ. ದೂರದದಲ್ಲಿದ್ದ ಮರದ ಕೊಂಬೆಯಲ್ಲಿ ಬಟ್ಟೆಯೊಂದು ನೇತಾಡುವುದು ಕಂಡು ಬಂದಿದೆ.

Read More..;ಸೈಕಲ್ ರಿಪೇರಿ ವಿಚಾರಕ್ಕೆ ಜೀ*ವಾಂತ್ಯಗೊಳಿಸಿದ ಬಾಲಕ..!

ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಯುಡಿ ಆರ್‌:12/2024 ಕಲಂ:174(3),(iv) CrPC ರಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Continue Reading

LATEST NEWS

Trending