ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ನಾಳೆ ದ.ಕ. ಉಡುಪಿ ಜಿಲ್ಲೆಗಳಿಗೆ ಭೇಟಿ..
ಮಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರು ಸೆ.8ರಂದು( ನಾಳೆ) ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ಬೆಳಗ್ಗೆ ಮಂಗಳೂರು ಪೊಲೀಸ್ ಕಮಿಷನರೇಟ್ ಕಚೇರಿಗೆ ಆಗಮಿಸುವ ಅವರು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸುವರು.
ಆ ಬಳಿಕ ಉಡುಪಿಗೆ ತೆರಳಿ ಅಲ್ಲಿಯೂ ಸಭೆ ನಡೆಸಿ, ರಾತ್ರಿ ಅಲ್ಲಿಯೇ ವಾಸ್ತವ್ಯ ಹೂಡುವರು.
ಸೆ.9ರಂದು ಬೆಂಗಳೂರಿಗೆ ಹಿಂದಿರುಗುವರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.