Connect with us

    DAKSHINA KANNADA

    ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಆರೋಗ್ಯ ವಿಚಾರಿಸಿದ ಬಿಜೆಪಿ ರಾಜ್ಯಾಧ್ಯಕ್ಷರು..

    Published

    on

    ಮಂಗಳೂರು : ತೀವ್ರ ಅನಾರೋಗ್ಯದಿಂದ ಮಂಗಳೂರಿ ಖಾಸಾಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ರಾಜ್ಯ ಸಭಾ ಸದಸ್ಯ ಆಸ್ಕರ್  ಫೆರ್ನಾಂಡಿಸ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

    ಆಸ್ಕರ್ ಅವರನ್ನು ಕಂಡ ಬಳಿಕ ಆಸ್ಕರ್  ಕುಟುಂಬದ ಜೊತೆ ಮಾತನಾಡಿ ಅವರಲ್ಲಿ ಕಟೀಲ್ ಅವರು ಧೈರ್ಯ ತುಂಬಿದರು. ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಮತ್ತಿತರ ನಾಯಕರು ಈ ಸಂದರ್ಭ ಉಪಸ್ಥಿತರಿದ್ದರು,

    ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಟೀಲ್ ಆಸ್ಕರ್ ಒಬ್ಬ ಹಿರಿಯ ರಾಜಕೀಯ ‌ಮುತ್ಸದ್ದಿ, ಸಜ್ಜನಿಕೆಯ ರಾಜಕಾರಣಿ, ಹಿಂದಿಗಿಂತ ‌ಇವತ್ತು ಇವರ ಆರೋಗ್ಯ ಸುಧಾರಿಸ್ತಾ ಇರುವುದು ಕಂಡಿದ್ದೇನೆ.ವೈದ್ಯರ ಜೊತೆಗೂ ಮಾತನಾಡಿದ್ದೇವೆ, ಅವರ ಆರೋಗ್ಯ ಸುಧಾರಿಸ್ತಾ ಇದೆ.

    ಶೀಘ್ರ ಗುಣಮುಖರಾಗಿ ಆಸ್ಪತ್ರೆಯಿಂದ ಹೊರಗೆ ಬರಲಿ ಅಂತ ಪ್ರಾರ್ಥನೆ ಮಾಡ್ತೇವೆ.ರಾಜ್ಯಸಭೆಯಲ್ಲಿ ದೇಶಕ್ಕೆ ಅವರ ಮಾರ್ಗದರ್ಶನ ಸಿಗಲಿ ಎಂದರು.

     

    DAKSHINA KANNADA

    ಜಾತ್ರಾ ವ್ಯಾಪಾರಿಯ ಪ್ರಾಮಾಣಿಕತೆ..! ಬೆಲೆಬಾಳುವ ಬ್ಯಾಗ್ ಮಾಲೀಕರಿಗೆ ವಾಪಾಸ್‌..!

    Published

    on

    ಕಾಪು : ಉಚ್ಚಿಲ ದಸರಾದಲ್ಲಿ ನಮ್ಮ ಸನಾತನ ಹಿಂದೂ ಜಾತ್ರಾ ವ್ಯಾಪಾರಸ್ಥರ ಸಂಘದ ಪ್ರಧಾನ ಕಾರ್ಯದರ್ಶಿ ರಘು ಧರ್ಮಸ್ಥಳ ಇವರಿಗೆ ದೇವಸ್ಥಾನದ ವಠಾರದಲ್ಲಿ 20,000.ಸಾವಿರ ನಗದು ಮತ್ತು ಕೆಲವೊಂದು ದಾಖಲೆ ಪತ್ರಗಳು, ಬ್ಯಾಗ್ ಸಮೇತ ಸಿಕ್ಕಿತ್ತು.


    ತಕ್ಷಣ ಅವರು ವಾರೀಸುದಾರರಾದ ಧರಣೇಂದ್ರ ಬಳ್ಳಾಂಜ ಅವರ ಫೋನ್ ನಂಬರನ್ನು ಸಂಪರ್ಕಿಸಿ ಸೊತ್ತುಗಳನ್ನು ತಲುಪಿಸಿ ಮಾನವೀಯತೆ ಮೆರೆದಿದ್ದಾರೆ. ಇವರ ಈ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

    Continue Reading

    DAKSHINA KANNADA

    ಫ್ರಾಡ್ ಕಾಲ್; ಬ್ಯಾಂಕ್ ಖಾತೆಯಿಂದ 76 ಸಾವಿರ ವಂಚನೆ

    Published

    on

    ಕಾರ್ಕಳ: ಬ್ಯಾಂಕ್ ಅಕೌಂಟ್‌ನಲ್ಲಿ ಸಮಸ್ಯೆಯಾಗಿದ್ದು, ಅದನ್ನು ನಿವಾರಿಸುವುದಾಗಿ ವ್ಯಕ್ತಿಯೊಬ್ಬರಿಗೆ 76 ಸಾವಿರ ರೂ. ವಂಚನೆ ಮಾಡಿರುವ ಘಟನೆ ಕಾರ್ಕಾಳದಲ್ಲಿ ನಡೆದಿದೆ.

    ಕಸಬಾ ಗ್ರಾಮದ ಬಾಲಚಂದ್ರ ಅವರು ಆಕ್ಸಿಸ್ ಬ್ಯಾಂಕ್ ಹಾಗೂ ಎಚ್‌ಡಿಎಫ್‌ಸಿ ಬ್ಯಾಂಕ್‌ಗಳಲ್ಲಿ ಕ್ರೆಡಿಟ್ ಕಾರ್ಡ್ ಹೊಂದಿದ್ದರು. ಸೆ. 30 ರಂದು ಮನೋಜ್ ಶರ್ಮಾ ಕರೆ ಮಾಡಿ, ಎಚ್‌ಡಿಎಫ್‌ಸಿ ಬ್ಯಾಂಕ್ ಸಮಸ್ಯೆಯನ್ನು ನಿವಾರಿಸುತ್ತೇವೆ ಎಂದು ಹೇಳಿ ಎಲ್ಲಾ ಮಾಹಿತಿಗಳನ್ನು ತೆಗೆದುಕೊಂಡು, ಕೊನೆಯದ್ದಾಗಿ ಒಟಿಪಿ ಪಡೆದುಕೊಂಡನು.
    ಅ.1 ರಂದು ಸಂಜೆ 4 ರಿಂದ 6 ರ ಅವಧಿಯಲ್ಲಿ ಎರಡೂ ಬ್ಯಾಂಕ್‌ನ ಕ್ರೆಡೀಟ್ ಕಾರ್ಡ್ ಮೂಲಕ 76,118 ರೂ. ಕಡಿತವಾಗಿತ್ತು. ಈ ಬಗ್ಗೆ ಕಾರ್ಕಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಸುತ್ತಿದ್ದಾರೆ.

    Continue Reading

    DAKSHINA KANNADA

    ಮಂಗಳೂರಿಗೆ ಬಂದ ಕರ್ನಾಟಕ ಸುವರ್ಣ ರಥ

    Published

    on

    ಮಂಗಳೂರು: ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷ ಪೂರೈಸಿದ ಹಿನ್ನೆಯಲ್ಲಿ ರಾಜ್ಯದಾದ್ಯಂತ ಸಂಚರಿಸುತ್ತಿರುವ ಸುವರ್ಣ ಕರ್ನಾಟಕ ರಥ ಮಂಗಳೂರಿಗೆ ಆಗಮಿಸಿದೆ.

    ರಾಜ್ಯದ ಪ್ರತಿ ಜಿಲ್ಲೆ, ತಾಲೂಕಿನಲ್ಲಿ ಸಂಚರಿಸುವ ಈ ರಥವನ್ನು ದಕ್ಷಿಣ ಕನ್ನಡ ಜಿಲ್ಲೆಗೆ ಸ್ವಾಗತಿಸುವ ಕಾರ್ಯಕ್ರಮ ಸರಳ ರೀತಿಯುಲ್ಲಿ ನಡೆಯಿತು. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿ ಇರುವ ಕಾರಣ ಆಧಿಕಾರಿಗಳು ರಥವನ್ನು ಸ್ವಾಗತಿಸಿದ್ದಾರೆ. ಕುದ್ಮುಲ್ ರಂಗರಾವ್ ಸಭಾಂಗಣದಲ್ಲಿ ರಥಕ್ಕೆ ಸ್ವಾಗತ ಕೋರಲಾಗಿದ್ದು, ಅಧಿಕಾರಿಗಳಿಂದಲೇ ಸರಳ ಕಾರ್ಯಕ್ರಮ ಕೂಡಾ ಆಯೋಜಿಸಲಾಗಿದೆ.

    ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಸಿ.ಎಲ್. ಆನಂದ್‌ ಅವರ ನೇತೃತ್ವದಲ್ಲಿ ರಥವನ್ನು ಸ್ವಾಗತಿಸಲಾಗಿದ್ದು, ಜಿಲ್ಲೆಯ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು. ಕಳೆದ ವರ್ಷ ನವೆಂಬರ್ 1 ರಿಂದ ಈ ರಥ ರಾಜ್ಯದಾದ್ಯಂತ ಸಂಚರಿಸಿ ಕರ್ನಾಟಕ ಸುವರ್ಣ ಸಂಭ್ರಮದ ಸಂದೇಶ ಸಾರುತ್ತಿದೆ.

    Continue Reading

    LATEST NEWS

    Trending