Connect with us

ಕೆಎಸ್‌ಆರ್‌ಟಿಸಿ ಸೇರಿ ರಾಜ್ಯ ಸಾರಿಗೆ ಸಂಸ್ಥೆ ಬಸ್‌ಗಳ ಪ್ರಯಾಣ ದರ ಹೆಚ್ಚಳ: ಶೇ. 12 ರಷ್ಟು ಏರಿಕೆ

Published

on

ಕೆಎಸ್‌ಆರ್‌ಟಿಸಿ ಸೇರಿ ರಾಜ್ಯ ಸಾರಿಗೆ ಸಂಸ್ಥೆ ಬಸ್‌ಗಳ ಪ್ರಯಾಣ ದರ ಹೆಚ್ಚಳ: ಶೇ. 12 ರಷ್ಟು ಏರಿಕೆ

ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್‌ ದರ ತೀವ್ರ ಹೆಚ್ಚಳವಾಗಿದೆ. ಶೇಕಡ 12 ದರ ಏರಿಕೆಯಾಗಿದೆ. ಕೆಎಸ್‌ಆರ್‌ಟಿಸಿ, ವಾಯುವ್ಯ ಮತ್ತು ಈಶಾನ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್‌ ಗಳ ಪ್ರಯಾಣ ದರ ಹೆಚ್ಚಳವಾಗಿದೆ.

ಶೇ 12ರಷ್ಟು ಹೆಚ್ಚಿಸಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದ್ದು, ಮಧ್ಯರಾತ್ರಿಯಿಂದಲೇ ನೂತನ ದರ ಜಾರಿಯಾಗಿದೆ. ಬಿಎಂಟಿಸಿ ಹಾಗೂ ಕೆಎಸ್​ಆರ್​ಟಿಸಿ ಕಳೆದ ಹಲವು ವರ್ಷಗಳಿಂದ ವಾರ್ಷಿಕ ನೂರಾರು ಕೋಟಿ ನಷ್ಟದಲ್ಲಿದೆ. ಆದರೂ ಈವರೆಗೆ ಟಿಕೆಟ್​ ದರವನ್ನು ಏರಿಸಲಾಗಿರಲಿಲ್ಲ.ಆದರೆ, ಈ ಬಾರಿ ನಷ್ಟದ ಪ್ರಮಾಣ ಅಧಿಕವಾಗಿದ್ದು, ಬಸ್​ ಪ್ರಯಾಣ ದರ ಹೆಚ್ಚಳ ಅನಿವಾರ್ಯ ಎನ್ನಲಾಗುತ್ತಿದೆ. ಪರಿಷ್ಕೃತ ದರ ಇಂದಿನಿಂದ ಚಾಲ್ತಿಗೆ ಬರಲಿದ್ದು, ಬಸ್​ ಪ್ರಯಾಣಿಕರಿಗೆ ಬೆಲೆ ಏರಿಕೆ ಬಿಸಿ ತಟ್ಟಲಿದೆ.

Click to comment

Leave a Reply

Your email address will not be published. Required fields are marked *

DAKSHINA KANNADA

ಕಾರ್ಪೋರೇಟರ್ ಮಗಳ ಹ*ತ್ಯೆ..! ಒಂಬತ್ತು ಬಾರಿ ಇರಿದ ಪಾಪಿ…!

Published

on

ಮಂಗಳೂರು (ಹುಬ್ಬಳ್ಳಿ) : ಕಾರ್ಪೋರೇಟರ್ ನಿರಂಜನ್ ಹಿರೇಮಠ ಎಂಬವರ ಮಗಳನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನಡೆದಿದೆ. ನೇಹಾ ಹಿರೇಮಠ ಕೊಲೆಗೀಡಾದಾಕೆ. ಕಾಲೇಜ್ ಕ್ಯಾಂಪಸ್​ನಲ್ಲಿರುವ ಕ್ಯಾಂಟೀನ್​ನಲ್ಲಿ ಫೈಜಲ್ ಎಂಬಾತ 9 ಬಾರಿ ಚಾಕುವಿನಿಂದ ಇರಿದಿದ್ದಾನೆ. ತಕ್ಷಣ ನೇಹಾಳನ್ನು ಹುಬ್ಬಳ್ಳಿಯ ಕಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನೇಹಾ ಮೃತಪಟ್ಟಿದ್ದಾಳೆ.

                  ತಂದೆ ನಿರಂಜನ್ ಹಿರೇಮಠ ಜೊತೆಗೆ ನೇಹಾ

ಪ್ರೀತಿ ನಿರಾಕರಣೆಗೆ ಪಾಪಿಯಿಂದ ಹೇಯ ಕೃತ್ಯ..!

ಹುಬ್ಬಳ್ಳಿಯ ಬಿವಿಬಿ‌ ಕಾಲೇಜಿನಲ್ಲಿ ಓದುತ್ತಿರುವ ನೇಹಾ ಹಿರೇಮಠಗೆ ಆರೋಪಿ ಫೈಜಲ್ ಎಂಬಾತ ಪ್ರೀತಿಸುವಂತೆ ಪೀಡಿಸಿದ್ದಾನೆ. . ಆದರೆ, ನೇಹಾ ಇದನ್ನು ನಿರಾಕರಿಸುತ್ತಲೇ ಬಂದಿದ್ದಾಳೆ. ಇದರಿಂದ ರೊಚ್ಚಿಗೆದ್ದ ಆತ ಗುರುವಾರ ಕಾಲೇಜು ಕ್ಯಾಂಪಸ್‌ಗೆ ಬಂದಿದ್ದಾನೆ. ಪುನಃ ಆಕೆ ಬಳಿ ಪ್ರೇಮ ನಿವೇದನೆ ಮಾಡಿಕೊಂಡಿದ್ದಾನೆ. ಆದರೆ, ನೇಹಾ ಪ್ರೀತಿಸಲು‌ ನಿರಾಕರಿಸಿದ್ದಾಳೆ. ಹೀಗಾಗಿ ಮೊದಲೇ ನಿರ್ಧರಿಸಿ ಬಂದಿದ್ದ ಆರೋಪಿಯು ನೇಹಾಳಿಗೆ ಕಾಲೇಜು ಕ್ಯಾಂಟೀನ್‌ನಲ್ಲಿಯೇ ಚಾಕುವಿನಿಂದ ಇರಿದಿದ್ದಾನೆ.
ಆರೋಪಿ ಫೈಜಲ್ ಕೊಂಡಿಕೊಪ್ಪನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿಯ ವಿದ್ಯಾನಗರ ಠಾಣೆ‌ ಪೊಲೀಸರಿಂದ ಆರೋಪಿಯ ವಿಚಾರಣೆ ನಡೆಸಲಾಗಿದೆ.ಇನ್ನು ನೇಹಾ ಸಾವಿನಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

 

Continue Reading

DAKSHINA KANNADA

“ಸೆಕ್ಸ್‌” ನನ್ನ ಸಾಮರ್ಥ್ಯದ ರಹಸ್ಯ…! ಮಾಜಿ ಸಂಸದೆಯ ಹೇಳಿಕೆ ವೈರಲ್‌..!

Published

on

ಮಂಗಳೂರು ( ಪಶ್ಚಿಮ ಬಂಗಾಳ ) : ಮಾಜಿ  ಸಂಸದೆ ಮಹುವಾ ಮೋಯಿತ್ರಾ ( Mahua Moitra ) ವಿವಾದದ ಕಾರಣದಿಂದ ಸಂಸತ್‌ನಿಂದ ಉಚ್ಚಾಟಿತರಾಗಿದ್ದರು. ಕೇಂದ್ರ ಸರ್ಕಾರದ ವಿರುದ್ಧ ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಲಂಚ ಪಡೆದಿದ್ದರು ಎಂಬ ಆರೋಪ ಅವರ ಮೇಲಿತ್ತು. ಈಗ ಅವರು ಮತ್ತೊಂದು ವಿವಾದಕ್ಕೆ ಸಿಲುಕಿದ್ದು ಅವರ ಹೇಳಿಕೆ ಬಾರಿ ವೈರಲ್ ಆಗಿದೆ. ಕೃಷ್ಣ ನಗರ ಲೋಕಸಭಾ ಕ್ಷೇತ್ರದಿಂದ ಟಿಎಂಸಿ ಅಭ್ಯರ್ಥಿಯಾಗಿ ಅವರು ಕಣಕ್ಕೆ ಇಳಿದಿದ್ದಾರೆ. ಭರ್ಜರಿ ಪ್ರಚಾರ ನಡೆಸುತ್ತಿರುವ ಅವರನ್ನ ಪತ್ರಕರ್ತರೊಬ್ಬರು ಸಂದರ್ಶನ ನಡೆಸಿದ್ದಾರೆ. ಈ ವೇಳೆ ಪತ್ರಕರ್ತ ನಿಮ್ಮ ಸಾಮಾರ್ಥ್ಯದ ರಹಸ್ಯ ಏನು ಎಂಬ ಪ್ರಶ್ನೆ ಕೇಳಿದ್ದಾರೆ. ಅದಕ್ಕೆ ಮೊಯಿತ್ರಾ ಅವರು “ಸೆಕ್ಸ್‌” ಎಂದು ಹೇಳಿರುವ ವಿಡಿಯೋವನ್ನು ಮೋದಿ ಕಾ ಪರಿವಾರ ವೈರಲ್ ಮಾಡಿದೆ. ವಿಡಿಯೊ ವೈರಲ್‌ ಆಗುತ್ತಲೇ ಜನ ಟೀಕೆ ವ್ಯಕ್ತಪಡಿಸಿದ್ದಾರೆ. ಒಬ್ಬ ಸಂಸದೆಯಾಗಿ ಬಹಿರಂಗವಾಗಿ ಹೀಗೆ ಹೇಳುವುದು ತಪ್ಪು ಎಂದು ಖಂಡಿಸಿದ್ದಾರೆ.

ನ್ಯೂಸ್‌ ದಿ ಟ್ರುತ್‌ ಎಂಬ ಮಾದ್ಯಮ ಮಾಡಿದ ಸಂದರ್ಶನ

ಸ್ಪಷ್ಟನೆ ನೀಡಿದ ಸಂದರ್ಶನ ನೀಡಿದ ವರದಿಗಾರ..!

“ಮಹುವಾ ಮೊಯಿತ್ರಾ ಅವರನ್ನು ಸಂದರ್ಶನ ಮಾಡಿದ್ದು ನಾನೇ. ನಿಮ್ಮ ಸಾಮರ್ಥ್ಯದ ಗುಟ್ಟೇನು ಎಂಬುದಾಗಿ ಕೇಳಿದೆ. ಅದಕ್ಕೆ ಅವರು, ಎಗ್ಸ್‌ (ಮೊಟ್ಟೆಗಳು) ಎಂಬುದಾಗಿ ಎರಡು ಬಾರಿ ಉತ್ತರಿಸಿದರು. ಆದರೆ, ಭಕ್ತ ಮಂಡಳಿಯು ಎಗ್ಸ್‌ ಎಂಬುದನ್ನು ಸೆಕ್ಸ್‌ ಎಂಬುದಾಗಿ ತಿರುಚಿದೆ” ಎಂಬುದಾಗಿ ನ್ಯೂಸ್‌ ದಿ ಟ್ರುತ್‌ ಎಂಬ ಮಾಧ್ಯಮ ಸಂಸ್ಥೆ ವರದಿಗಾರ ತಮಲ್‌ ಸಾಹ ಅವರು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿದ್ದಾರೆ. ಆದರೆ, ವರದಿಗಾರ ಸ್ಪಷ್ಟನೆ ನೀಡುವ ಹೊತ್ತಿಗೆ ವಿಡಿಯೊ ಭಾರಿ ವೈರಲ್‌ ಆಗಿದ್ದು, ಟೀಕೆಗಳು ವ್ಯಕ್ತವಾಗಿವೆ.

49 ವರ್ಷದ ಮಹುವಾ ಮೊಯಿತ್ರಾ ಅವರು ನರೇಂದ್ರ ಮೋದಿ ಸರ್ಕಾರವನ್ನು ಟೀಕಿಸುವ ಪ್ರಶ್ನೆಗಳನ್ನು ಕೇಳಲು 2 ಕೋಟಿ ರೂ. ನಗದು ಸೇರಿದಂತೆ ಲಂಚ ಪಡೆದ ಆರೋಪ ಹೊತ್ತಿದ್ದಾರೆ. ಮೊಯಿತ್ರಾ ಅವರು ತಮ್ಮ ಸಂಸತ್ತಿನ ಲಾಗ್-ಇನ್ ವಿವರಗಳನ್ನು ಉದ್ಯಮಿ ದರ್ಶನ್ ಹಿರಾನಂದಾನಿಗೆ ನೀಡಿದ್ದನ್ನು ಮೋಯಿತ್ರಾ ಒಪ್ಪಿಕೊಂಡಿದ್ದರು.  ಈ ಹಿನ್ನೆಲೆಯಲ್ಲಿ ಅವರನ್ನು ಡಿಸೆಂಬರ್ 8, 2023ರಂದು ಲೋಕಸಭೆಯಿಂದ ಉಚ್ಚಾಟಿಸಲಾಗಿತ್ತು.

 

Continue Reading

LATEST NEWS

ಸಾಕು ಪ್ರಾಣಿಗಳ ಕೃತ್ಯಕ್ಕೆ ಮಾಲೀಕರೇ ಜವಾಬ್ದಾರಿ : ಕರ್ನಾಟಕ ಹೈಕೋರ್ಟ್

Published

on

ಬೆಂಗಳೂರು : ಅಪಾಯಕಾರಿ ತಳಿಯ ಶ್ವಾನಗಳು ಮಾತ್ರ ಜನರಿಗೆ ಗಾಯವನ್ನುಂಟು ಮಾಡಲ್ಲ. ಯಾವ ನಾಯಿಯೂ ಉಗ್ರವಾಗಬಹುದು ಎಂದು ಪರಿಗಣಿಸಿರುವ ಕರ್ನಾಟಕ ಹೈಕೋರ್ಟ್ ಸಾಕುಪ್ರಾಣಿಗಳ ಮಾಲೀಕರ ಜವಾಬ್ದಾರಿಯನ್ನು ನಿಗದಿಪಡಿಸಲು ಸಂಬಂಧಿತ ನಿಯಮಗಳ ಅಡಿಯಲ್ಲಿ ಕೆಲವು ಮಾರ್ಗಸೂಚಿಗಳನ್ನು ಹೊರಡಿಸುವುದು ಅಗತ್ಯ ಎಂದು ಹೇಳಿದೆ.


ಕೇಂದ್ರ ಸರ್ಕಾರದ ಮೂರು ನಿಯಮಗಳಾದ ಪ್ರಾಣಿಗಳ ಜನನ ನಿಯಂತ್ರಣ (ನಾಯಿಗಳು) ನಿಯಮಗಳು, 2001, ಪ್ರಾಣಿಗಳ ಮೇಲಿನ ಕ್ರೌರ್ಯ ತಡೆಗಟ್ಟುವಿಕೆ (ನಾಯಿ ಸಂತಾನೋತ್ಪತ್ತಿ ಮತ್ತು ಮಾರುಕಟ್ಟೆ) ನಿಯಮಗಳು, 2017 ಮತ್ತು ಪ್ರಾಣಿಗಳ ಮೇಲಿನ ಕ್ರೌರ್ಯ (ಪೆಟ್ ಶಾಪ್) ನಿಯಮಗಳು, 2018 ಅಡಿಯಲ್ಲಿ ಅಂತಹ ಮಾರ್ಗಸೂಚಿಗಳನ್ನು ನೀಡಲು ಪರಿಗಣಿಸಬಹುದು ಎಂದು ಕೋರ್ಟ್ ಹೇಳಿದೆ.

ಸಾಕು ಪ್ರಾಣಿ ಮಾಲೀಕರ ಹೊಣೆ :

ನಾಯಿ ಕಚ್ಚಿದರೆ ಅದು ಯಾವುದೇ ನಾಯಿಯಾಗಿದ್ದರೂ ಅದು ನಾಯಿ ಕಚ್ಚಿದ್ದೇ ಆಗಿರುತ್ತದೆ. ಅದು ಬ್ರಾಂಡೆಡ್ ಅಪಾಯಕಾರಿ ನಾಯಿ ಅಥವಾ ಇತರ ಯಾವುದೇ ಸಾಮಾನ್ಯ ನಾಯಿಯಾಗಿರಬಹುದು. ಸಾಕು ಪ್ರಾಣಿ ಮಾಲೀಕರು ತಮ್ಮ ನಾಯಿಗಳ ಕೃತ್ಯಕ್ಕೆ ಸಂಪೂರ್ಣವಾಗಿ ಜವಾಬ್ದಾರರಾಗುತ್ತಾರೆ. ಸಾಕು ಪ್ರಾಣಿಗಳ ಮಾಲೀಕರು ಜವಾಬ್ದಾರಿಯುತವಾಗಿ ವರ್ತಿಸಬೇಕು. ಸೂಕ್ತವಾಗಿ ರಚಿಸಲಾದ ಸಮಿತಿಯು ಜವಾಬ್ದಾರಿಯುತ ಸಾಕುಪ್ರಾಣಿಗಳ ಮಾಲೀಕತ್ವದ ಪರಿಕಲ್ಪನೆಯನ್ನು ರಕ್ಷಿಸಬೇಕು ಮತ್ತು ಬೇಜವಾಬ್ದಾರಿಯುತ ಸಾಕುಪ್ರಾಣಿ ಮಾಲೀಕತ್ವವನ್ನು ದಂಡನೆಗೆ ಒಳಪಡಿಸಬೇಕು ಎಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯ ಅಪಾಯಕಾರಿ ಶ್ವಾನಗಳ ಸಾಕಣೆ ನಿಷೇಧಿಸಿ ಮಾರ್ಚ್ 12, 2024 ರಂದು ಹೊರಡಿಸಿದ್ದ ವಿವಾದಾತ್ಮಕ ಸುತ್ತೋಲೆಯನ್ನು ಕರ್ನಾಟಕ ಹೈಕೋರ್ಟ್ ಬುಧವಾರ (ಏ.10) ರದ್ದುಗೊಳಿಸಿದೆ. ಇಂತಹ ಆಲೋಚನಾ ಪ್ರಕ್ರಿಯೆಯು ಸಮಸ್ಯೆಯನ್ನು ಪರಿಹರಿಸುವುದಿಲ್ಲ ಮತ್ತು ನಾಯಿ ಮಾಲೀಕರು ಅಥವಾ ಯಾವುದೇ ಸಾಕುಪ್ರಾಣಿಗಳು ಮಾಲೀಕರು ಯಾವುದೇ ನಾಗರಿಕರಿಗೆ / ಇತರ ಜೀವಿಗಳಿಗೆ ಹಾನಿಯಾಗದಂತೆ ಜವಾಬ್ದಾರಿಯುತವಾಗಿ ವರ್ತಿಸಬೇಕು ಎಂದು ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ : ಶ್ವಾನ ಪ್ರಿಯರೇ ಎಚ್ಚರ..ಎಚ್ಚರ..! ಮಾಲಕಿಯ ತಲೆ ಸೀಳಿದೆ ಸಾಕು ನಾಯಿ..!
ಆಯಾ ಪ್ರದೇಶದ ಸುತ್ತಮುತ್ತಲಿನ ನಾಗರಿಕರು ಮತ್ತು ಇತರ ಪ್ರಾಣಿಗಳ ಸಂರಕ್ಷಣೆಗೆ ಸಾಕುಪ್ರಾಣಿ ಮಾಲೀಕರು ಜವಾಬ್ದಾರರಾಗಿರುತ್ತಾರೆ. ಸಾಕುಪ್ರಾಣಿಗಳಿಂದಾಗುವ ಯಾವುದೇ ರೀತಿಯ ಬೇಜವಾಬ್ದಾರಿಯುತ ನಡವಳಿಕೆಗೆ ಸಾಕುಪ್ರಾಣಿ ಮಾಲೀಕರೇ ಜವಾಬ್ದಾರರಾಗಿರುತ್ತಾರೆ ಎಂದು ಕೋರ್ಟ್ ತಿಳಿಸಿದೆ.

Continue Reading

LATEST NEWS

Trending