Connect with us

DAKSHINA KANNADA

ಮತದಾನಕ್ಕೆ ಮೂರೇ ದಿನಗಳು ಬಾಕಿ: ಲೋಕ್‌ಪೋಲ್‌ ಮೆಗಾ ಸಮೀಕ್ಷೆ ಪ್ರಕಟ, ಯಾವ ಪಕ್ಷಕ್ಕೆ ಎಷ್ಟು ಸ್ಥಾನ?

Published

on

ಬೆಂಗಳೂರು: ರಾಜ್ಯ ಚುನಾವಣೆ ಮತದಾನ ದಿನಕ್ಕೆ 3 ದಿನಗಳು ಬಾಕಿ ಇರುವಂತೆ ಮತ್ತೊಂದು ಚುನಾವಣೆ ಪೂರ್ವ ಸಮೀಕ್ಷೆ ವರದಿ ಪ್ರಕಟಗೊಂಡಿದೆ. ಲೋಕ್‌ಪೋಲ್‌ ಎಂಬ ಸಂಸ್ಥೆ ನಡೆಸಿದ ಈ ಸಮೀಕ್ಷೆ ಪ್ರಕಾರ, ಕಾಂಗ್ರೆಸ್‌ ಭರ್ಜರಿ ಮುನ್ನಡೆ ಪಡೆದುಕೊಂಡು ಅಧಿಕಾರಕ್ಕೇರಲಿದೆ.

ರಾಜ್ಯ ಚುನಾವಣೆ ಮತದಾನ ಮೇ 10ಕ್ಕೆ ನಿಗದಿಯಾಗಿದ್ದು, ಮೇ 13ಕ್ಕೆ ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ. ಮತದಾನಕ್ಕೆ ನಾಲ್ಕು ದಿನ ಬಾಕಿ ಇರುವಂತೆ ರಾಷ್ಟ್ರೀಯ ಸಮೀಕ್ಷಾ ಸಂಸ್ಥೆಯಾದ ಲೋಕ್‌ಪೋಲ್‌ ತನ್ನ ಸಮೀಕ್ಷೆಯನ್ನು ನೀಡಿದೆ. ಮೊದಲ ಸ್ಥಾನದಲ್ಲಿ ಕಾಂಗ್ರೆಸ್‌ ಬಹುಮತಗಳೊಂದಿಗೆ ಮೊದಲ ಸ್ಥಾನದಲ್ಲಿದ್ದು, ಉಳಿದಂತೆ ಬಿಜೆಪಿ ಎರಡನೇ ಸ್ಥಾನ ಪಡೆದುಕೊಳ್ಳಲಿದ್ದು, ಮೂರನೇ ಸ್ಥಾನದಲ್ಲಿ ಜೆಡಿಎಸ್‌ ಇರಲಿದೆ.

ಯಾವ ಪಕ್ಷಕ್ಕೆ ಎಷ್ಟು ಸ್ಥಾನ?

ಕಾಂಗ್ರೆಸ್‌ 129 -134 ಸ್ಥಾನಗಳು, ಬಿ

ಜೆಪಿ 59-65 ಸ್ಥಾನಗಳು

ಜೆಡಿಎಸ್‌ 23 – 28 ಸ್ಥಾನಗಳಲ್ಲಿ ಗೆಲುವು ಸಾಧಿಸಬಹುದು.

ಇನ್ನು ಪಕ್ಷೇತರ/ಸ್ವತಂತ್ರ ಅಭ್ಯರ್ಥಿಗಳು 0-2 ಸ್ಥಾನಗಳಿಸಬಹುದು ಎಂದು ಲೋಕ್‌ಪೋಲ್‌ ತನ್ನ ಸಮೀಕ್ಷೆ ವರದಿಯಲ್ಲಿ ತಿಳಿಸಿದೆ.

ಸದ್ಯ ಅಧಿಕಾರಕ್ಕೇರಲು ಮ್ಯಾಜಿಕ್‌ ನಂಬರ್‌ 113 ಇದ್ದು, ಕಾಂಗ್ರೆಸ್‌ ಬಹುಮತ ಪಡೆಯುವುದು ಮಾತ್ರವಲ್ಲ ಸುಮಾರು 20 ಸ್ಥಾನಗಳು ಹೆಚ್ಚು ಪಡೆಯಬಹುದು ಎಂದು ಅಂದಾಜಿಸಲಾಗಿದೆ.

 ಮತ ಹಂಚಿಕೆ ಎಷ್ಟು ?

ಚಲಾವಣೆಯಾಗುವ ಮತಗಳಲ್ಲಿ ಶೇ. 42 ರಿಂದ 45 ರಷ್ಟು ಕಾಂಗ್ರೆಸ್‌ ಪಡೆದುಕೊಳ್ಳಲಿದೆ. ಬಿಜೆಪಿ ಶೇ 31 ರಿಂದ 32 ರಷ್ಟು ಹಾಗೂ ಜೆಡಿಎಸ್‌ ಶೇ 14 ರಿಂದ 18 ರಷ್ಟು ಮತಗಳನ್ನು ಪಡೆದುಕೊಳ್ಳಲಿದೆ. ಉಳಿದಂತೆ ಶೇ.5 ರಿಂದ 9 ರಷ್ಟು ಮತಗಳು ಇತರೆ ಪಕ್ಷಗಳ/ ಸ್ವತಂತ್ರ ಅಭ್ಯರ್ಥಿಗಳ ಪಾಲಾಗಲಿವೆ ಎಂದು ಲೋಕ್‌ಪೋಲ್‌ ತಿಳಿಸಿದೆ.

ಸಮೀಕ್ಷೆಯ ವಿಧಾನ ?

ಲೋಕ್‌ಪೋಲ್‌ 150 ವಿಧಾನಸಭಾ ಕ್ಷೇತ್ರಗಳಲ್ಲಿ ಅಭಿಪ್ರಾಯ ಸಂಗ್ರಹ ಮಾಡಿದೆ. ಇದಕ್ಕಾಗಿ 15,000 ಕರೆಗಳನ್ನು ಮಾಡಿ ಆ ಮೂಲಕ ಮಾಹಿತಿ ಪಡೆಯಲಾಗಿದೆ. ಕಳೆದ ಎರಡು ತಿಂಗಳಿಂದಲ್ಲಿ ರಾಜ್ಯದ ಹಲವು ಕ್ಷೇತ್ರಗಳಲ್ಲಿ ತಳಮಟ್ಟದಿಂದ 65 ಸಾವಿರ ಮಾದರಿ ಸಂಗ್ರಹ ಮಾಡಲಾಗಿದೆ. ಒಟ್ಟಾರೆ ಈ ಹಿಂದಿನ ಎಲ್ಲಾ ಮಾಹಿತಿ ಸಂಗ್ರಹ ಮಾಡಿ ಅಂತಿಮ ವರದಿ ಪ್ರಕಟಿಸಲಾಗಿದೆ ಎಂದು ಸಮೀಕ್ಷಾ ಸಂಸ್ಥೆ ತಿಳಿಸಿದೆ.

ಮೂರನೇ ಸಮೀಕ್ಷೆ

ಫೆಬ್ರವರಿ, ಮಾರ್ಚ್‌ ತಿಂಗಳಲ್ಲಿಯೂ ಈ ಲೋಕ್‌ಪೋಲ್‌ ಚುನಾವಣಾ ಪೂರ್ವ ಸಮೀಕ್ಷೆ ನಡೆಸಿತ್ತು. ಆ ಸಂದರ್ಭದಲ್ಲಿಯೂ ಕಾಂಗ್ರೆಸ್‌ ಬಹುಮತ ಪಡೆಯಲಿದೆ ಎಂದು ತಿಳಿಸಿತ್ತು. ಕಳೆದ ಎರಡೂ ಸಮೀಕ್ಷೆ ವರದಿಗಿಂತಲೂ ಮೇ 6 ರಂದು ಬಂದ ಅಂತಿಮ ಸಮೀಕ್ಷೆಯಲ್ಲಿ ಕಾಂಗ್ರೆಸ್‌ ಹೆಚ್ಚಿನ ಸ್ಥಾನಗಳಿಸಲಿದೆ ಎಂದು ತಿಳಿಸಲಾಗಿದೆ.

9 Comments

9 Comments

  1. Nagaraj SK

    07/05/2023 at 4:24 PM

    Congress party 🪣 media, save this survey. Congress will get 78 seats, JDS 32, BJP between 98-105

  2. Shishir

    07/05/2023 at 5:07 PM

    What is this your doing joke right suvarna news they done two survey with Janki bath fist of all Janki bath is a not local Chanel it’s a national Chanel
    Then what is way of doing survey by phone this is a nonsense survey and moreover we are not fool🙏🙏🙏
    Give your number because after the counting i will tell the who got mejority and who got 55-70 seats.

  3. Poorna

    07/05/2023 at 10:45 PM

    ಜೆಡಿಎಸ್42 ಬಿಜೆಪಿ 90 ಕಾಂಗ್ರೆಸ್ 85 others 1

  4. Prasanna

    08/05/2023 at 10:13 AM

    In the 2018 election there was anti incumbency+ BSY + PM Modi wave in favour of BJP .They got 104 seats .This time no wave and anti incumbency.

  5. Ravikumar

    08/05/2023 at 10:51 AM

    No chance to Congress…
    BJP 132 – 139
    Congress – 70- 75
    JDS – 19 – 22
    AAP – 1
    Others – 2- 5

  6. Cheluvaraj D

    08/05/2023 at 10:56 AM

    BJP will win 120 to 130 seats… No chance to Congress n JDS

  7. Raghu

    08/05/2023 at 11:05 AM

    BJP will get 110 to 130 seats as per professional channels survey

  8. Manjula R

    08/05/2023 at 1:11 PM

    Congress yes

  9. H. B. Murugeshi

    08/05/2023 at 5:31 PM

    No party will cross magic number 112,but there is neck to neck fight between bjp & congress,where in Former I.e bjp get 98 Cong 90 JDS 30 others get 06.totalling 224.

Leave a Reply

Your email address will not be published. Required fields are marked *

DAKSHINA KANNADA

ಗಂಡ-ಹೆಂಡತಿ ಬೇರೆ ಬೇರೆ ಮಲಗಿದ್ರೆ ಏನೆಲ್ಲಾ ಪ್ರಯೋಜನ ಇದೆ ಗೊತ್ತಾ?

Published

on

ಮಂಗಳೂರು: ಇತ್ತೀಚಿನ ದಿನಗಳಲ್ಲಿ ಜನರು ರಾತ್ರಿಯ ಹೊತ್ತನ್ನು ಮೊಬೈಲ್, ಆನ್ಲೈನ್ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಕಳೆಯುತ್ತಾರೆ. ಇದು ಅವರಿಗೆ ನಿದ್ರಾಹೀನತೆ ಸಮಸ್ಯೆಗೂ ಕಾರಣವಾಗುತ್ತದೆ. ರಾತ್ರಿ ಬೇಗ ಮಲಗದೇ ಇರುವುದು ಮತ್ತು ಮಧ್ಯಾಹ್ನ ನಿದ್ದೆ ಮಾಡುವುದು ಹೀಗೆ ಮಾಡಿದರೆ ಆರೋಗ್ಯ ಹಾಳಾಗುತ್ತದೆ. ರಾತ್ರಿಯ ಹೊತ್ತು ಚಿಕ್ಕ ಮಕ್ಕಳು ಅಪ್ಪ ಅಮ್ಮನ ಒಟ್ಟಿಗೆ ಮಲಗುತ್ತಾರೆ. ಅದೇ ರೀತಿ ಗಂಡ ಹೆಂಡತಿಯರು ಒಟ್ಟಿಗೆ ಮಲಗುವುದು ಸರ್ವೇ ಸಾಮಾನ್ಯ.

ಮದುವೆಯ ನಂತರ ಸಾಮಾನ್ಯವಾಗಿ ಗಂಡ ಹೆಂಡತಿ ಒಟ್ಟಿಗೆ ಮಲಗುತ್ತಾರೆ. ಇದು ಸಮಾಜದ ಸಾಮಾನ್ಯ ನಿಯಮ ಸಹ ಹೌದು ಎನ್ನಬಹುದು. ಮದುವೆಯ ನಂತರ ಪತಿ-ಪತ್ನಿಯರ ನಡುವಿನ ಚರ್ಚೆಗಳು, ಮಾತುಗಳು ಸಾಮಾನ್ಯವಾಗಿ ಮಲಗುವ ಸಮಯದಲ್ಲೇ ಆಗುತ್ತದೆ. ಇನ್ನು ಪತಿ-ಪತ್ನಿಯರು ಪ್ರತ್ಯೇಕವಾಗಿ ಮಲಗುವುದರಿಂದಲೂ ಹಲವಾರು ರೀತಿಯ ಪ್ರಯೋಜನಗಳಿವೆ ಎಂದು ವರದಿ ಮೂಲಕ ತಿಳಿದುಬಂದಿದೆ.

ಮೊದಲಿಗೆ, ಈ ವಿಷಯದ ಬಗ್ಗೆ ಮಾಡಿದ ಎಲ್ಲಾ ಸಂಶೋಧನೆಗಳು ಗಂಡ ಮತ್ತು ಹೆಂಡತಿ ಪ್ರತ್ಯೇಕವಾಗಿ ಮಲಗುವುದು ತಪ್ಪಲ್ಲ ಎಂದು ತೋರಿಸುತ್ತದೆ ಮತ್ತು ಪ್ರತಿ ದಂಪತಿಗಳು ತಮ್ಮದೇ ಆದ ನಿಯಮಗಳನ್ನು ಮಾಡುವ ಹಕ್ಕನ್ನು ಹೊಂದಿದ್ದಾರೆ ಎಂದು ತಿಳಿಸಿದೆ. ಆದರೆ ಅನೇಕ ಬಾರಿ ಜನರು ಇಂತಹ ಮಾತುಗಳನ್ನು ಕೇಳಲು ವಿಭಿನ್ನವಾಗಿ ಪ್ರತಿಕ್ರಿಯಿಸುತ್ತಾರೆ ಮತ್ತು ಈ ದಂಪತಿಗಳ ಜೀವನದಲ್ಲಿ ಏನೋ ಸರಿಯಾಗಿಲ್ಲ ಎಂದು ಭಾವಿಸುತ್ತಾರೆ.

ಆದರೆ ಅಷ್ಟೇ ಅಲ್ಲ, ಕೆಲವೊಮ್ಮೆ ಬೇರೆ ಬೇರೆ ಕೋಣೆಗಳಲ್ಲಿ ದಂಪತಿಗಳಿಗೆ ಮಲಗುವುದರಿಂದ ದಂಪತಿಗಳಿಗೆನೇ ಹೆಚ್ಚು ಅನುಕೂಲಕರವಾಗಿರುತ್ತದೆ. ಸಂಶೋಧನೆಯ ಪ್ರಕಾರ ನೀವು ಪ್ರತ್ಯೇಕವಾಗಿ ಏಕೆ ಮಲಗುವುದರಿಂದ ಯಾವುದೇ ನಿದ್ರಾ ಭಂಗವನ್ನು ಉಂಟುಮಾಡುವುದಿಲ್ಲ. ಇದರಿಂದ ಸುಖಕರವಾಗಿ ನಿದ್ರೆ ಮಾಡಬಹುದು.

ರಾತ್ರಿಯಲ್ಲಿ ಗೊರಕೆ ಹೊಡೆಯುವುದು, ಒದೆಯುವುದು, ದೇಹದ ಉಷ್ಣತೆಯ ಬದಲಾವಣೆ ವಿಭಿನ್ನವಾಗಿರುತ್ತದೆ. ನೀವು ಕೆಲವೊಮ್ಮೆ ಪ್ರತ್ಯೇಕವಾಗಿ ಮಲಗಲು ಪ್ರಯತ್ನಿಸಿದರೆ ನಿಮ್ಮ ದೇಹವು ಅರಾಮವಾಗಲು ಸಹಾಯಕವಾಗುತ್ತದೆ. ಸ್ವಲ್ಪ ಸಮಯದ ಅಂತರವು ನಿಮ್ಮ ಸಂಬಂಧವನ್ನು ಹೆಚ್ಚು ಉತ್ತಮಗೊಳಿಸುತ್ತದೆ. ನಿಮಗೆ ವಿಶ್ರಾಂತಿ ಪಡೆಯಲು ಸಮಯ ಸಿಗುತ್ತದೆ.


ಜೊತೆಗೆ ಕೆಲವೊಮ್ಮೆ ದಂಪತಿಗಳ ನಡುವೆ ಮನಸ್ಥಾಪವಾದಾಗ ಈ ರೀತಿ ಕೆಲ ದಿನ ದೂರ ಮಲಗಿದರೆ ಆ ವಿರಹ ವೇದನೆಯಿಂದ ಕೋಪವೂ ತಣ್ಣಗಾಗುತ್ತದೆ. ದೈಹಿಕ ಅನ್ಯೋನ್ಯತೆ ಮತ್ತು ಭಾವನಾತ್ಮಕ ಪ್ರೀತಿಯ ಅವಶ್ಯಕತೆ ಯಾವಾಗಲೂ ಇರುತ್ತದೆ ಮತ್ತು ಆದ್ದರಿಂದ ಕೆಲವೊಮ್ಮೆ ಪ್ರತ್ಯೇಕವಾಗಿ ಮಲಗುವುದು ಉತ್ತಮ. ಜೊತೆಗೆ ಕೆಲವೊಮ್ಮೆ ಜ್ವರ ರೀತಿಯ ಅನಾರೋಗ್ಯವಿದ್ದಾಗ ದೂರ ಮಲಗಿದರೆ ಒಬ್ಬರಿಂದ ಒಬ್ಬರಿಗೆ ಅದು ಹರಡುವುದಿಲ್ಲ.

ಇದನ್ನೂ ಓದಿ ULLALA : ಮಲಗಿದ್ದಲ್ಲೇ ಹೃದಯಾಘಾ*ತಕ್ಕೆ ಬ*ಲಿಯಾದ ಯುವಕ

ಕೆಲವೊಮ್ಮೆ ದಂಪತಿಗಳಿಗೆ ಸ್ವಲ್ಪ ಅಂತರ ಕಾಯ್ದುಕೊಳ್ಳುವುದು ಅವರ ಲೈಂಗಿಕ ಜೀವನಕ್ಕೆ ಒಳ್ಳೆಯದು ಎಂದು ಸಂಶೋಧನೆ ಸೂಚಿಸುತ್ತದೆ. ಇದರಿಂದ ದಣಿವು ಆಗುವುದು ಕಡಿಮೆ ಆಗುತ್ತದೆ. ಪರಿಣಾಮವಾಗಿ, ಲೈಂಗಿಕ ಜೀವನವನ್ನು ಸುಧಾರಿಸಬಹುದು.

Continue Reading

DAKSHINA KANNADA

ಮೊಬೈಲ್ ನೋಡುತ್ತಿದ್ದಾಗ 16 ವರ್ಷದ ಬಾಲಕ ದಿಢೀರ್ ಸಾ*ವು; ವೈದ್ಯರಿಂದ ಶಾಕಿಂಗ್‌ ರಿಪೋರ್ಟ್‌; ಆಗಿದ್ದೇನು?

Published

on

ಸಾ*ವು ಹೇಗೆ, ಎಲ್ಲಿ ಬೇಕಾದರೂ ಬರಬಹುದು ಅನ್ನೋದಕ್ಕೆ ಈ ಘಟನೆಯೇ ಸಾಕ್ಷಿ. 16 ವರ್ಷದ ಬಾಲಕ ಮೊಬೈಲ್ ಫೋನ್ ನೋಡುತ್ತಿದ್ದಾಗಲೇ ಕುಸಿದು ಬಿದ್ದು ಸಾ*ವನ್ನಪ್ಪಿದ್ದಾರೆ. ಉತ್ತರ ಪ್ರದೇಶದ ಅಮ್ರೋಹಾದಲ್ಲಿ ಈ ದುರಂತ ನಡೆದಿದೆ.

16 ವರ್ಷದ ಅಮನ್ ಖುರೇಷಿ ಮೃ*ತ ದುರ್ದೈವಿ. ಖುರೇಷಿ ಮೊಬೈಲ್ ಫೋನ್ ನೋಡುತ್ತಿದ್ದಾಗ ಹಾಸಿಗೆ ಮೇಲೆ ಕುಸಿದು ಬಿದ್ದಿದ್ದಾನೆ. ತಕ್ಷಣವೇ ಆತನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಅಮನ್ ಖುರೇಷಿ ಆಸ್ಪತ್ರೆ ತಲುಪುವಷ್ಟರಲ್ಲೇ ಪ್ರಾ*ಣ ಕಳೆದುಕೊಂಡಿದ್ದಾರೆ.

ಅಮನ್ ಖುರೇಷಿ ಸಾ*ವನ್ನಪ್ಪಿದ್ದನ್ನು ವೈದ್ಯರು ಖಚಿತ ಪಡಿಸಿದ್ದು, ಹಾರ್ಟ್ ಅಟ್ಯಾಕ್‌ನಿಂದ ಪ್ರಾ*ಣ ಬಿಟ್ಟಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಮೃ*ತಪಟ್ಟ ಬಾಲಕ ಮೊಬೈಲ್ ಫೋನ್‌ನಲ್ಲಿ ವಿಡಿಯೋ ನೋಡುತ್ತಿದ್ದಾಗ ಈ ದುರಂತ ನಡೆದಿದೆ.

ಇತ್ತೀಚೆಗೆ ದೇಶಾದ್ಯಾಂತ ಹೃದಯಾಘಾತಕ್ಕೆ ಸಾ*ವನ್ನಪ್ಪುವವರ ಸಂಖ್ಯೆ ಹೆಚ್ಚಾಗುತ್ತಿದೆ. ಅದರಲ್ಲೂ ಹದಿ ಹರಿಯದ ಯುವಕರು ಹೃದಯಾಘಾತಕ್ಕೆ ಒಳಗಾಗುತ್ತಿರೋದು ನಿಜಕ್ಕೂ ಶಾಕಿಂಗ್‌ ಘಟನೆಯಾಗಿದೆ.

ಹೃದಯಾಘಾತವು ವ್ಯಕ್ತಿಯ ಮಾನಸಿಕ ಒತ್ತಡ ಮತ್ತು ದೈಹಿಕ ಪರಿಶ್ರಮದಿಂದ ಸಂಭವಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ. ದೈನಂದಿನ ಕೆಲಸಗಳಲ್ಲಿ ಒತ್ತಡ ಹೆಚ್ಚಾಗುವುದರಿಂದ ಹೃದಯದ ಮೇಲೆ ಒತ್ತಡವೂ ಹೆಚ್ಚಾಗುತ್ತದೆ.

ಪ್ರಮುಖವಾಗಿ ನಮ್ಮ ದಿನನಿತ್ಯದ ಜೀವನಶೈಲಿ ಹಾಗೂ ಆಹಾರ ಕ್ರಮಗಳು ಸಣ್ಣ ವಯಸ್ಸಿನವರಿಂದ ವಯಸ್ಸಾದವರಿಗೂ ಹೃದಯಾಘಾತ ಆಗಲು ಕಾರಣವಾಗಿದೆ. ನ್ಯುಮೋನಿಯದಂತಹ ತೀವ್ರ ಸೋಂಕು ಹೃದಯ ಸ್ನಾಯುವಿನ ಊತಕವೂ ಸಾ*ವನ್ನು ಉಂಟು ಮಾಡಬಹುದು. ರಕ್ತನಾಳದಲ್ಲಿ ಬೇಗ ರಕ್ತು ಹೆಪ್ಪುಗಟ್ಟುವುದನ್ನು ತಡೆದರೆ ಹೃದಯಾಘಾತದಿಂದ ಪಾರಾಗಬಹುದು.

Continue Reading

DAKSHINA KANNADA

ದೇವಸ್ಥಾನದಲ್ಲಿ ಚಪ್ಪಲಿ ಕಳೆದುಹೋದರೆ ಒಳ್ಳೆಯದಾ..? ಕೆಟ್ಟದ್ದಾ..?

Published

on

ಸಾಮಾನ್ಯವಾಗಿ ಎಲ್ಲರೂ ಚಪ್ಪಲಿ ತೆಗೆದುಕೊಳ್ಳುವಾಗ ಕೊಟ್ಟಂತಹ ಗಮನವನ್ನ ಅದನ್ನು ತೆಗೆದುಕೊಂಡು ಆದ ಮೇಲೆ ಯಾರೂ ಅದನ್ನ ಗಮನಕ್ಕೆ ತೆಗೆದುಕೊಳ್ಳುವುದಿಲ್ಲ. ಚಪ್ಪಲಿಯನ್ನ ಇನ್ನು ಮುಂದೆ ನಿರ್ಲಕ್ಷ್ಯ ಮಾಡಬೇಡಿ. ಚಪ್ಪಲಿ ಸಹ ನಮ್ಮ ನಸೀಬನ್ನ ಬದಲಿಸಿ ನಮ್ಮ ಜೀವನದಲ್ಲಿ ಬದಲಾವಣೆಯನ್ನು ತರಬಲ್ಲದು.

ನಾವು ಫ್ಯಾಶನೇಬಲ್ ಆದ್ರೆ ಮಾತ್ರ ಬೇರೆಯವರ ಗಮನವನ್ನು ನಮ್ಮ ಕಡೆಗೆ ಸೆಳೆಯಬಹುದು ಅಂತ ತುಂಬಾ ಜನ ಅಂದುಕೊಂಡು ಇರುತ್ತಾರೆ. ಫ್ಯಾಶನೇಬಲ್ ಬಟ್ಟೆ, ಟ್ರೆಂಡೀ ಶೂ ಅಥವಾ ಚಪ್ಪಲಿಗಳಿರಬಹುದು ಅಥವಾ ಫ್ಯಾಶನೇಬಲ್ ಜ್ಯುವೆಲ್ಲರಿ ಆಗಿರಬಹುದು ಈ ರೀತಿ ಟ್ರೆಂಡಿಯಾಗಿ ಡ್ರೆಸ್ ಮಾಡಿದ್ರೆ ಎಲ್ಲರ ಗಮನ ನಮ್ಮ ಹತ್ತಿರ ತಿರುಗುತ್ತೆ. ಭಾರತೀಯ ಸಂಸ್ಕೃತಿಯಲ್ಲಿ ಮನೆಯೊಳಗೆ ಚಪ್ಪಲಿಯನ್ನು ಹಾಕಿಕೊಂಡು ಹೋಗುವುದು ಸೂಕ್ತವಲ್ಲ. ನಾವು ಚಪ್ಪಲಿಯನ್ನು ಹೊರಗಡೆ ಎಲ್ಲಿಗೂ ಹೋಗುವಾಗಲು ಹಾಕುತ್ತೇವೆ.

ಹೀಗೆ ದೇವಸ್ಥಾನಕ್ಕೆ ಹೋಗುವಾಗ ಚಪ್ಪಲಿಯನ್ನು ಹಾಕಿಕೊಂಡು ಹೋಗುತ್ತೇವೆ. ಕೆಲವೊಂದು ದೊಡ್ಡ ದೊಡ್ಡ ದೇವಸ್ಥಾನಗಳಲ್ಲಿ ತುಂಬಾ ಭಕ್ತಾಧಿಗಳು ಹೋಗುತ್ತಾ ಬರುತ್ತಾ ಇರುತ್ತಾರೆ. ಅಲ್ಲಿ ಚಪ್ಪಲಿಗೆಂದೇ ಸ್ಟ್ಯಾಂಡ್ ಇಟ್ಟಿರುತ್ತಾರೆ. ನಾವು ಹಣ ಕೊಟ್ಟು ನಮ್ಮ ಚಪ್ಪಲಿಯನ್ನ ಅಲ್ಲಿ ಕಾಪಾಡಬಹುದು. ಆದ್ರೆ ಕೆಲವರು ಚಪ್ಪಲಿಯನ್ನು ಹೊರಗಡೇ ಇಟ್ಟು ಹೋಗುತ್ತಾರೆ. ದೇವರ ದರ್ಶನ ಮಾಡಿ ಹೊರಗೆ ಬರುವಾಗ ಆ ಚಪ್ಪಲಿ ಕಾಣುವುದಿಲ್ಲ. ಕೆಲವೊಮ್ಮೆ ರಶ್ ಇರಬೇಕಾದ್ರೆ ತಿಳಿಯದೇ ಜನರು ಹಾಕಿಕೊಂಡು ಹೋಗುತ್ತಾರೆ. ಕೆಲವೊಮ್ಮೆ ಬೇಕುಬೇಕಂತಲೆ ಅದನ್ನು ಕದ್ದುಕೊಂಡು ಹೋಗುತ್ತಾರೆ. ದೇವಸ್ಥಾನಗಳಲ್ಲಿ ಚಪ್ಪಲಿ ಕಳುವಾದ್ರೆ ಅದು ಒಳ್ಳೆಯದೇ ಎನ್ನುವ ನಂಬಿಕೆ ಕೂಡ ಇದೆ.

ಚಪ್ಪಲಿ ಹಾಳತ್ತಾಗಿದ್ದರೆ ಕಳೆದು ಹೋದರೂ ಬೇಜಾರಿಲ್ಲ. ಆದರೆ ಹೊಸತ್ತಾದರೆ ತುಂಬಾ ಬೇಜಾರ್ ಆಗುತ್ತದೆ. ಇಂತ ಸಮಯದಲ್ಲಿ ಕೆಲವರು ಹೇಳುತ್ತಾರೆ ಚಪ್ಪಲಿ ಕಳೆದು ಹೋದರೆ ನಿನ್ನ ದಾರಿದ್ರ್ಯ ಹೋಯಿತು. ಇನ್ನು ಮುಂದಕ್ಕೆ ನಿನಗೆ ಒಳ್ಳೆಯದಾಗುತ್ತದೆ ಎಂದು ಹೇಳುತ್ತಾರೆ.

ಜ್ಯೋತಿಷ್ಯ ಶಾಸ್ತ್ರದಲ್ಲಿ ಶುಭ ಚಿಹ್ನೆ:

ಚಪ್ಪಲಿ ಕಳೆದುಹೋದರೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಶುಭ ಚಿಹ್ನೆ ಎಂದು ಹೇಳುತ್ತಾರೆ. ಅದರಲ್ಲೂ ವಿಶೇಷವಾಗಿ ಶನಿವಾರ ಚಪ್ಪಲಿ ಕಳೆದುಹೋದರೆ ಪಾದರಕ್ಷೆಯೊಂದಿಗೆ ನಿಮ್ಮ ಶನಿಯು ದೂರವಾಯಿತು ಎಂದು ಅರ್ಥ. ನಮ್ಮ ದೇಹದ ಭಾಗಗಳು ಗ್ರಹಗಳಿಂದ ಪ್ರಭಾವಿತವಾಗಿರುತ್ತದೆ. ಶನಿ ಚರ್ಮ ಮತ್ತು ಪಾದಗಳಲ್ಲಿ ವಾಸಿಸುತ್ತಾನೆ. ಹೀಗೆ ಪಾದರಕ್ಷೆ ಕಳುವಾದ್ರೆ ನಿಮ್ಮ ಸಮಸ್ಯೆ ದೂರವಾಯ್ತು ಎಂದು ಹೇಳುತ್ತದೆ ಜ್ಯೋತಿಷ್ಯ ಶಾಸ್ತ್ರ.

Continue Reading

LATEST NEWS

Trending