Friday, March 24, 2023

ಕಾಸರಗೋಡು: ಬಾಲಕಿಗೆ ಲೈಂಗಿಕ ದೌರ್ಜನ್ಯ-ಯುವಕನಿಗೆ ಜೀವಾವಧಿ ಶಿಕ್ಷೆ

ಕಾಸರಗೋಡು: ಹದಿನಾಲ್ಕರ ಹರೆಯದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಕಾಸರಗೋಡು ಹೆಚ್ಚುವರಿ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯ ಬೇಕಲ ಪೊಲೀಸ್ ಠಾಣಾ ವ್ಯಾಪ್ತಿಯ ಸಂಜೀವ ಯಾನೆ ಸಜಿತ್‌ (30) ಗೆ ಜೀವಾವಧಿ ಹಾಗೂ ಒಂದೂವರೆ ಲಕ್ಷ ರೂ. ದಂಡ ವಿಧಿಸಿ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗ ದೌರ್ಜನ್ಯ ತಡೆ ಕಾಯ್ದೆ ಪ್ರಕಾರ ತಿರ್ಪು ನೀಡಲಾಗಿದೆ.


2016ರ ಎ.14 ರಂದು ಈ ಘಟನೆ ನಡೆದಿತ್ತು. ಆಟೋರಿಕ್ಷಾ ಚಾಲಕ ಸಜಿತ್ ಬಾಲಕಿಯನ್ನು ತನ್ನ ಆಟೋದಲ್ಲಿ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿದ್ದಾಗಿ ಮೊಕದ್ದಮೆ ದಾಖಲಿಸಲಾಗಿತ್ತು.

ಲೈಂಗಿಕ ದೌರ್ಜನ್ಯಕ್ಕೆ ಐಪಿಸಿ ನಿಯಮ ಪ್ರಕಾರ 15 ವರ್ಷ ಸಜೆ ಹಾಗೂ 50 ಸಾವಿರ ರೂ ದಂಡ, ಲೈಂಗಿಕ ದೌರ್ಜನ್ಯಕ್ಕೆ ಕರೆದುಕೊಂಡು ಹೋದುದಕ್ಕೆ 10 ವರ್ಷ ಸಜೆ ಮತ್ತು 50 ಸಾವಿರ ರೂ ದಂಡ ವಿಧಿಸಲಾಗಿದೆ.

ಅಲ್ಲದೆ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗ ದೌರ್ಜನ್ಯ ತಡೆ ಕಾಯ್ದೆ ಪ್ರಕಾರ ಜೀವನ ಪರ್ಯಂತ ಸಜೆ ಕೂಡ ಅನುಭವಿಸಬೇಕು. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಎರಡು ವರ್ಷ ಸಜೆ ಅನುಭವಿಸಬೇಕು.

LEAVE A REPLY

Please enter your comment!
Please enter your name here

Hot Topics

‘ಕಳ್ಳರ ಹೆಸರೆಲ್ಲ ಮೋದಿ ಎಂದೇ ಇರುತ್ತದೆ ಏಕೆ’ ಎಂದಿದ್ದ ರಾಹುಲ್ ಗಾಂಧಿಗೆ 2 ವರ್ಷ ಜೈಲು

ನವದೆಹಲಿ: ಮೋದಿ ಪದನಾಮ ಪ್ರಕರಣ ಸಂಬಂಧ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಗೆ ಗುಜರಾತ್​ನ ಸೂರತ್ ನ್ಯಾಯಾಲಯವು ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ.ಈ ಬಗ್ಗೆ ಅಂತಿಮ ವಿಚಾರಣೆ ನಡೆಸಿ...

ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಜಿನೈಕ್ಯ..!

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ಜೈನ ಮಠದ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಆವರು ಜಿನೈಕ್ಯರಾಗಿದ್ದಾರೆ.ಹಾಸನ : ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ಜೈನ ಮಠದ ಸ್ವಸ್ತಿ ಶ್ರೀ...

ಉಡುಪಿ : ಕಳವಾದ 74 ಲಕ್ಷ ರೂಪಾಯಿ ಸೊತ್ತುಗಳು ಮರಳಿ ಮಾಲಕರಿಗೆ ಹಸ್ತಾಂತರಿಸಿದ ಪೊಲೀಸರು.!

ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಳ್ಳತನ ,ದರೋಡೆ ಮತ್ತಿತರ ಕಾರಣಗಳಿಂದ ಸುತ್ತುಗಳನ್ನು ಕಳೆದುಕೊಂಡವರಿಗೆ ಅವರ ಚಿನ್ನಾಭರಣ ಸೊತ್ತು ಮತ್ತು ನಗದನ್ನು ಹಸ್ತಾಂತರಿಸಲಾಯಿತು.ಉಡುಪಿ : ಉಡುಪಿ ಜಿಲ್ಲೆಯ ವಿವಿಧ ಪೊಲೀಸ್...