Tuesday, March 28, 2023

ಮಹಾದಾನಿ ಕೀಳಿಂಗಾರು ಸಾಯಿರಾಂ ಭಟ್‌ ವಿಧಿವಶ

ಕಾಸರಗೋಡು: ಜಿಲ್ಲೆಯ ಕೊಡುಗೈ ದಾನಿ, ಕೀಳಿಂಗಾರು ಸಾಯಿರಾಂ ಭಟ್‌(85) ಅವರು ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದು ಇಂದು ವಿಧಿವಶರಾಗಿದ್ದಾರೆ.

ಕುಂಬಳೆ ಸಮೀಪದ ಬದಿಯಡ್ಕ ನಿವಾಸಿಯಾಗಿದ್ದ ಇವರು 265 ಮನೆಗಳನ್ನು ಬಡಮಂದಿಗೆ ಕಟ್ಟಿಸಿಕೊಟ್ಟ ಮಹಾದಾನಿ. ಜಾಗವನ್ನು ತಾವೇ ಖುದ್ದಾಗಿ ಖರೀದಿಸಿ ಮನೆಗಳನ್ನು ತನ್ನದೇ ಖರ್ಚಿನಲ್ಲಿ ಕಟ್ಟಿಸಿ ಬಡವರಿಗೆ ದಾನ ಮಾಡಿದ್ದರು.

ಇದಲ್ಲದೇ ಬಡವರಿಗೆ ಕುಡಿಯುವ ನೀರಿಗಾಗಿ ಬಾವಿಯನ್ನು ಕೂಡಾ ಕಟ್ಟಿಸಿಕೊಟ್ಟಿದ್ದರು. ಪ್ರತೀ ವಾರ ಬಡವರಿಗೆ ವೈದ್ಯಕೀಯ ಚಿಕಿತ್ಸೆ ನೀಡಲು ಶಿಬಿರಗಳನ್ನು ಏರ್ಪಡಿಸುತ್ತಿದ್ದರು.

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸಹಿತ ಹಲವು ಮಂದಿ ಸಾಯಿರಾಂ ಭಟ್‌ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದರು. ಭಟ್ ಅವರ ನಿಧನಕ್ಕೆ ಹಲವು ಮಂದಿ ಸಂತಾಪ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಕಾರ್ಕಳ : ಅನಾರೋಗ್ಯದಿಂದ ಸಾವನ್ನಪ್ಪಿದ ಮನೆ ಮಗನ ಆಘಾತದಿಂದ ತಾಯಿ ಜೀವಾಂತ್ಯ..!

ಮಗನನ್ನು ಕಳೆದುಕೊಂಡ ನೋವಿನಲ್ಲಿ ತಾಯಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕೆರ್ವಾಶೆ ಗ್ರಾಮದ ಬಂಗ್ಲೆಗುಡ್ಡೆಯಲ್ಲಿ ಸೋಮವಾರ ನಡೆದಿದೆ.ಕಾರ್ಕಳ : ಮಗನನ್ನು ಕಳೆದುಕೊಂಡ ನೋವಿನಲ್ಲಿ ತಾಯಿಯೊಬ್ಬರು...

ಸೌದಿ ಅರೇಬಿಯಾದಲ್ಲಿ ಭೀಕರ ರಸ್ತೆ ಅಪಘಾತ-20 ಉಮ್ರಾ ಯಾತ್ರಾರ್ಥಿಗಳ ದಾರುಣ ಮೃತ್ಯು..!

ಸೌದಿ ಅರೇಬಿಯಾದಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಕನಿಷ್ಠ 20 ಉಮ್ರಾ ಯಾತ್ರಿಕರು ಸಾವನ್ನಪ್ಪಿದ್ದಾರೆ ಮತ್ತು 29 ಮಂದಿ ಗಾಯಗೊಂಡಿದ್ದಾರೆ.ಜಿದ್ದಾ: ಸೌದಿ ಅರೇಬಿಯಾದಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಕನಿಷ್ಠ 20 ಉಮ್ರಾ...

ಪತ್ನಿ ಆತ್ಮಹತ್ಯೆ ಬಗ್ಗೆ ಸಂಶಯ- ತನಿಖೆ ನಡೆಸಿ ನ್ಯಾಯ ಕೊಡಿಸುವಂತೆ ಠಾಣೆ ಮೆಟ್ಟಲೇರಿದ ಪತಿ..!

ತನ್ನ ಪತ್ನಿ ಆತ್ಮಹತ್ಯೆ ಮಾಡಿದ ಬಗ್ಗೆ ಸಂಶಯವಿದ್ದು, ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸುವಂತೆ ಪತಿ ಜಿಲ್ಲಾ ಪೋಲೀಸ್ ವರಿಷ್ಢಾಧಿಕಾರಿಗೆ ಮನವಿ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ...