HomeLATEST NEWSಕೇರಳದಲ್ಲಿ ಒಂದೇ ದಿನದ ಅಂತರದಲ್ಲಿ BJP-SDPI ಕಾರ್ಯಕರ್ತರ ಬರ್ಬರ ಹತ್ಯೆ

ಕೇರಳದಲ್ಲಿ ಒಂದೇ ದಿನದ ಅಂತರದಲ್ಲಿ BJP-SDPI ಕಾರ್ಯಕರ್ತರ ಬರ್ಬರ ಹತ್ಯೆ

ತಿರುವನಂತಪುರಂ: ಕೇರಳದಲ್ಲಿ ಒಂದು ದಿನದ ಅಂತರದಲ್ಲೇ ಎರಡು ರಾಜಕೀಯ ಪಕ್ಷದ ನಾಯಕರ ಬರ್ಬರ ಹತ್ಯೆಯಾಗಿದ್ದು, ಬಿಜೆಪಿ ಮತ್ತು ಎಸ್​ಡಿಪಿಐ ಪಕ್ಷಕ್ಕೆ ಸೇರಿದ ನಾಯಕರನ್ನು ಹತ್ಯೆ ಮಾಡಲಾಗಿದೆ. ಆಲುಪ್ಪುಳ ನಗದಲ್ಲಿ ಸದ್ಯ 144 ಸೆಕ್ಷನ್​ ಜಾರಿ ಮಾಡಲಾಗಿದೆ.


ನಿನ್ನೆ ಸಂಜೆ ಎಸ್​ಡಿಪಿಐನ ರಾಜ್ಯ ಕಾರ್ಯದರ್ಶಿ ಕೆ.ಎಸ್​. ಶಾನ್​ ಮನೆಗೆ ಹೋಗುವಾಗ ಕೊಲೆಯಾಗಿದ್ದಾರೆ.

ಶಾನ್​ ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುವಾಗ ಗುಂಪೊಂದು ಅವರ ಮೇಲೆ ಹಲ್ಲೆ ಮಾಡಿದೆ. ಗಂಭೀರವಾಗಿ ಗಾಯಗೊಂಡಿದ್ದ ಶಾನ್​ ಚಿಕಿತ್ಸೆ ಫಲಕಾರಿಯಾಗದೇ ಕೊಚ್ಚಿ ಆಸ್ಪತ್ರೆಯಲ್ಲಿ ಮಧ್ಯರಾತ್ರಿ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದಾದ 12 ಗಂಟೆ ಬಳಿಕ ಕೆಲ ಅಪರಿಚಿತ ವ್ಯಕ್ತಿಗಳು ಬಿಜೆಪಿ ನಾಯಕ ರೆಂಜಿತ್​ ಶ್ರೀನಿವಾಸನ್​ ಮನೆಗೆ ನುಗ್ಗಿ ಕೊಲೆ ಮಾಡಿದ್ದಾರೆ.

ರೆಂಜಿತ್​ ಅವರು ಪಕ್ಷದ ಒಬಿಸಿ ಘಟಕದ ಮುಖ್ಯಸ್ಥರಾಗಿದ್ದರು.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಎರಡು ಘಟನೆಗಳ ಮೇಲೆ ತನಿಖೆ ಕೈಗೊಂಡಿದ್ದಾರೆ.
ಈ ಕೃತ್ಯಗಳನ್ನು ಎಸಗಿದ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯನ್ನು ನೀಡಲಾಗುತ್ತದೆ ಎಂದು ಸಿಎಂ ಪಿಣರಾಯಿ ವಿಜಯನ್​ ತಿಳಿಸಿದ್ದಾರೆ.

ಈ ಘಟನೆಯಲ್ಲಿ 11 ಎಸ್‌ಡಿಪಿಐ ಕಾರ್ಯಕರ್ತರು ಹಾಗೂ 6 ಆರ್‌ಎಸ್‌ಎಸ್‌ ಕಾರ್ಯಕರ್ತರ ಬಂಧಿಸಿದ್ದು, ತನಿಖೆ ನಡೆಯುತ್ತಿದೆ.

Latest articles

ಕೆಲಸ ಇಲ್ಲದವನು ಎಂದು ಬೈಯುತ್ತಿದ್ದ ಅಜ್ಜಿಯನ್ನು ಕೊಂದು ಸುಟ್ಟು ಹಾಕಿದ ಕಿರಾತಕ ಮೊಮ್ಮಗ

ಮೈಸೂರು: ದುಡಿಯುವ ವಯಸ್ಸಿನಲ್ಲಿ ಪುಂಡ ಪೋಕರಿಯಂತೆ ಅಲೆಯುತ್ತಿದ್ದುದಕ್ಕೆ ಬೈಯುತ್ತಿದ್ದ ಅಜ್ಜಿಯನ್ನು ಸ್ವಂತ ಮೊಮ್ಮಗನೇ ಕೊಂದು ಸುಟ್ಟು ಹಾಕಿ ಶವವನ್ನು...

ಚಿತ್ರದುರ್ಗ : ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಯ್ತು ಅಕ್ರಮ ಗೋಸಾಗಾಟ- ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹ..!

ಚಿತ್ರದುರ್ಗದಲ್ಲಿ ರಾತ್ರಿ ವೇಳೆ ಕಳ್ಳರು ಬೀದಿ ಬದಿಯ ಗೋವುಗಳನ್ನು ಕಳ್ಳತನ ಮಾಡಿ ಟೆಂಪೋದಲ್ಲಿ ತುಂಬಿಸಿಕೊಂಡು ಹೋಗುತ್ತಿರುವ ದೃಶ್ಯ ಸಿಸಿಟಿವಿ...

ಕೇರಳಕ್ಕೆಮುಂಗಾರು ಪ್ರವೇಶ- ಮಂಗಳೂರಿನಲ್ಲಿ ಸಂಜೆ ಬಿರುಸಿನ ಮಳೆ..!

ಕೇರಳದಲ್ಲಿ ಇಂದು ಮುಂಗಾರು ಪ್ರವೇಶಿಸಿದ್ದು ಈ ಹಿನ್ನೆಲೆಯಲ್ಲಿ ಕರಾವಳಿಯ ಬಂದರು ನಗರ ಮಂಗಳೂರಿನಲ್ಲಿ ಇಂದು ಸಂಜೆ ಬಿರುಸಿನ ಮಳೆಯಾಗಿದೆ.ಮಂಗಳೂರು...

ಬೆಂಗಳೂರು: ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ರನ್ನು ಭೇಟಿಯಾದ ಸ್ಪೀಕರ್ ಯು.ಟಿ.ಖಾದರ್

ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾಗಿ ಆಯ್ಕೆಯಾದ ಸ್ಪೀಕರ್ ಯು.ಟಿ.ಖಾದರ್ ಅವರು ಮೊದಲ ಬಾರಿಗೆ ದೆಹಲಿಯಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರನ್ನು...