ಕೇರಳ ಕೋಯಿಕ್ಕೋಡ್ ಏರ್ ಇಂಡಿಯಾ ವಿಮಾನ ದುರಂತ; ಸಾವಿನ ಸಂಖ್ಯೆ 20ಕ್ಕೆ ಏರಿಕೆ
ಕಾಸರಗೋಡು : ದುಬೈನಿಂದ 180 ಮಂದಿ ಪ್ರಯಾಣಿಕರನ್ನು ಹೊತ್ತು ಬಂದ ಏರ್ ಇಂಡಿಯಾ ವಿಮಾನ ನಿನ್ನೆ ಸಂಜೆ ಕೇರಳದ ಕೋಯಿಕ್ಕೋಡ್ನ ಕರಿಪುರ್ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುವಾಗ ರನ್ವೇಯಿಂದ ಜಾರಿ ನಡೆದ ದುರ್ಘಟನೆಯಲ್ಲಿ ಸತ್ತವರ ಸಂಖ್ಯೆ 17 ಕ್ಕೇರಿದೆ.
ಈ ಅವಘಡದಲ್ಲಿ ವಿಮಾನದ ಇಬ್ಬರು ಪೈಲಟ್ ಗಳು ಸಾವನ್ನಪ್ಪಿದ್ದಾರೆ. ಈ ವಿಮಾನದಲ್ಲಿ 180 ಮಂದಿ ಪ್ರಯಾಣಿಕರು ಇದ್ದರು. ಅವಘಡದಲ್ಲಿ ಇಬ್ಬರು ಪೈಲಟ್ಗಳು ಸೇರಿದಂತೆ 20 ಮಂದಿ ಮೃತಪಟ್ಟಿದ್ದಾರೆ ಎಂದು ವಿಮಾನಯಾನ ಸಂಸ್ಥೆ ಏರ್ ಇಂಡಿಯಾ ಮಾಹಿತಿ ನೀಡಿದೆ.
ನಿನ್ನೆ ರಾತ್ರಿಯಿಡಿ ನಡೆದ ಕಾರ್ಯಾಚರಣೆಯಲ್ಲಿ 24 ಆ್ಯಂಬುಲೆನ್ಸ್ಗಳು ಹಾಗೂ ಅಗ್ನಿ ಶಾಮಕ ವಾಹನಗಳು , ಇತರ ರಕ್ಷಣಾ ಪಡೆಗಳು ಭಾಗವಹಿಸಿದ್ದುವು.
ದುರ್ಘಟನೆಯಲ್ಲಿ 35 ಮಂದಿ ಗಂಭೀರ ಗಾಯಗೊಂಡಿದ್ದು ಅವರನ್ನು ನಗರದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ದುರ್ಘಟನೆಯ ಸಂದರ್ಭ ವಿಮಾನಕ್ಕೆ ಬೆಂಕಿ ಹತ್ತದ ಕಾರಣ ಹೆಚ್ಚಿನ ಸಾವುಗಳು ತಪ್ಪಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ದುರ್ಘಟನೆಯ ಬಗ್ಗೆ ಡಿಜಿಸಿಎ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದೆ.ದುರ್ಘಟನೆಗೆ ರಾಷ್ಟ್ರಪತಿ ರಮನಾಥ್ ಕೋವಿಂದ್, ಪ್ರಧಾನಿ ಮೋದಿ ಸಹಿತ ಅನೆಕ ಗಣ್ಯರು ದುಃಖ ವ್ಯಕ್ತಪಡಿಸಿದ್ದಾರೆ.
ಈ ದುರಂತ ತಪ್ಪಿಸಲು ವಿಮಾನದ ಪೈಲಟ್ ಬಹಳ ಹರಸಾಹಸ ಮಾಡಿರುವುದು ಬೆಳಕಿಗೆ ಬಂದಿದೆ. ಮಳೆಯ ಮಧ್ಯೆ ಉಬ್ಬಿದ ರನ್ ವೇಯಲ್ಲಿ ವಿಮಾನವನ್ನು ಸುರಕ್ಷಿತವಾಗಿ ಇಳಿಸಲು ಪೈಲಟ್ ಎರಡು ಬಾರಿ ಪ್ರಯತ್ನಿಸಿದ್ದು ತಿಳಿದುಬಂದಿದೆ. ಅಷ್ಟೇ ಅಲ್ಲ, ವಿಮಾನ ಇಳಿಯುವ ಮುನ್ನ ಹಲವು ಬಾರಿ ಏರ್ಪೋರ್ಟ್ ಅನ್ನು ವಿಮಾನ ಸುತ್ತಾಡಿದೆ. ಜಾಗತಿಕವಾಗಿ ವಿಮಾನಗಳನ್ನ ಲೈವ್ ಆಗಿ ಟ್ರ್ಯಾಕ್ ಮಾಡುವ FlightRadar24 ಎಂಬ ಫ್ಲೈಟ್ ಟ್ರ್ಯಾಕರ್ ವೆಬ್ಸೈಟ್ನಲ್ಲಿನ ಮಾಹಿತಿಯಲ್ಲಿ ಇದು ಬೆಳಕಿಗೆ ಬಂದಿದೆ. ಈ ದುರಂತದಲ್ಲಿ ಬದುಕುಳಿದವರೂ ಕೂಡ ಇದನ್ನು ದೃಢಪಡಿಸಿದ್ದಾರೆ. ವಿಮಾನ ಕೆಳಗಿಳಿಯುವ ಮುನ್ನ ಹಲವು ಬಾರಿ ಸುತ್ತಾಡಿತು. ರನ್ ವೇಗೆ ಇಳಿದಾಗ ವಿಮಾನ ಜಾರಿ ಕೆಳಗಿನ ಹಳ್ಳಕ್ಕೆ ಬಿದ್ದಿತು ಎಂದು ಪ್ರಯಾಣಿಕರು ಈ ಘೋರ ದುರಂತ ಘಟನೆಯನ್ನು ವಿವರಿಸಿದ್ಧಾರೆ.
#keralaplanecrash update
19 death, 171 injured,
Atleast 15 passengers including one pregnant women and 4 kids are said to be critical.@indiatvnews #Calicut #planecrash #KozhikodePlaneCrash pic.twitter.com/4pmTWnRYLp pic.twitter.com/jGVAlWLSj8— Manas Bharadwaj (@bharadwaj_manas) August 8, 2020