DAKSHINA KANNADA
ಖಾಕಿ ಆರಂಭ ಆಗಿದ್ದು ಹೇಗೆ ಗೊತ್ತಾ..? ಇಲ್ಲಿದೆ ಖಾಕಿ ಬಣ್ಣದ ಕಥೆ..!
ದೇಶದ ಸೈನಿಕರಿಂದ ಹಿಡಿದು, ಪೊಲೀಸ್, ಫಾರೆಸ್ಟ್, ಶಾಲಾ ಮಕ್ಕಳು ಅಷ್ಟೇ ಅಲ್ಲದೆ ಸಂಘ ಪರಿವಾರದ ನಿಷ್ಠಾವಂತ ಕಾರ್ಯಕರ್ತರು ಎಲ್ಲಾ ಈ ಖಾಕಿ ಬಣ್ಣದ ವಸ್ತ್ರ ಬಳಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಈ ಬಣ್ಣದ ಬಟ್ಟೆ ಬದಲಾಗಿ ಬೇರೆ ಬೇರೆ ಬಣ್ಣ ಬಂದಿದೆಯಾದ್ರೂ ಕೆಲವೊಂದು ಇಲಾಖೆ ಹಾಗೂ ಕೆಲ ಸಂಘಟನೆಗಳು ಇಂದಿಗೂ ಈ ಖಾಕಿ ಬಣ್ಣದ ಬಟ್ಟೆ ಉಪಯೋಗಿಸ್ತಾ ಇದೆ. ಆದ್ರೆ ಈ ಖಾಕಿ ಬಣ್ಣದ ಹುಟ್ಟು ಹೇಗಾಯ್ತು ಅನ್ನೋ ಕಥೆ ಬಹಳಷ್ಟು ರೋಚಕವಾಗಿದೆ. ಐತಿಹಾಸಿಕವಾಗಿಯೂ ಈ ಬಣ್ಣ ಮಹತ್ವ ಪಡೆದುಕೊಂಡಿದ್ದು, ಇದು ಭಾರತದಲ್ಲೇ ಸ್ವದೇಶಿ ಮಾತ್ರವಲ್ಲದೇ ಇದರ ಹುಟ್ಟು ಮಂಗಳೂರಿನಲ್ಲೇ ಆಗಿತ್ತು ಅನ್ನೋ ಸತ್ಯ ಬಹುತೇಕರಿಗೆ ಗೊತ್ತಿಲ್ಲ.
ಈ ಖಾಕಿ ಬಣ್ಣ ಮಂಗಳೂರಿನಲ್ಲೇ ಹುಟ್ಟು ಪಡೆದುಕೊಂಡಿತ್ತು ಅನ್ನೋದು ಖಾಕಿ ಬಣ್ಣದ ಪ್ಯಾಂಟ್, ಶರ್ಟ್ ಹಾಕಿದ ಬಹುತೇಕ ಜನರಿಗೆ ಗೊತ್ತಿಲ್ಲ. ಆದ್ರೆ ಇದು ಮಂಗಳೂರಿನಲ್ಲಿ ಬಾಷಿಲ್ ಮಿಷಿನ್ ಸಂಸ್ಥೆ ಈ ಬಣ್ಣದ ಬಟ್ಟೆಯನ್ನು ತಯಾರಿಸಲು ಆರಂಭಿಸಿ ಇಡೀ ಜಗತ್ತಿಗೇ ಹಂಚಿತ್ತು. 1844 ರಲ್ಲಿ ಮಂಗಳೂರಿನ ಬಲ್ಮಠದಲ್ಲಿ ಬಟ್ಟೆ ಮಿಲ್ ಆರಂಭಿಸಿದ ಬಾಷಿಲ್ ಮಿಷಿನ್ ಸಂಸ್ಥೆ ಇಲ್ಲಿ ಹಲವು ಬಣ್ಣದ ಬಟ್ಟೆ ತಯಾರಿ ಮಾಡುತ್ತಿತ್ತು. ಆದರೆ 1852 ರಲ್ಲಿ ಜರ್ಮಿಯಿಂದ ಬಂದಿದ್ದ ಜಾನ್ ಹೆಲರ್ ಎಂಬವರು ಸಂಶೋದನೆ ಮಾಡಿದ ಪರಿಣಾಮವಾಗಿ ಈ ಖಾಕಿ ಬಣ್ಣದ ಆವಿಷ್ಕಾರವಾಗಿತ್ತು. ಗೇರು ಮರದ ಕೆತ್ತೆ ಹಾಗೂ ಗೇರು ಬೀಜದ ಸಿಪ್ಪೆಯಿಂದ ಈ ಬಣ್ಣವನ್ನು ಆವಿಷ್ಕಾರ ಮಾಡಿದ್ದ.
ಈ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟವೂ ತೀವೃವಾಗುತ್ತಾ ಹೊಗುತ್ತಿದ್ದ ಕಾಲವಾಗಿದ್ದು, ಬ್ರಿಟೀಷ್ ಸೈನದ್ಯದಲ್ಲಿದ್ದ ಭಾರತೀಯ ಸೈನಿಕರಿಗೆ ಮೊದಲಬಾರಿಗೆ ಈ ಬಟ್ಟೆಯಿಂದ ಯುನಿಫಾರ್ಮ್ ಹೊಲಿಸಿ ಕೊಡಲಾಗಿತ್ತು. ಒಂದು ರೀತಿಯಲ್ಲಿ ಮಣ್ಣಿನ ಬಣ್ಣವನ್ನು ಹೋಲುತ್ತಿದ್ದ ಈ ಬಣ್ಣ ಸೈನಿಕರ ಡ್ರೆಸ್ ಕೊಳೆಯಾದ್ರೂ ಅಷ್ಟು ಬೇಗ ಗೊತ್ತಾಗುತ್ತಿರಲಿಲ್ಲ. 1860 ರಲ್ಲಿ ಮದ್ರಾಸ್ ಪ್ರಾಂತ್ಯದ ಗವರ್ನರ್ ಲಾರ್ಡ್ ರೋಬರ್ಟ್ ಮಂಗಳೂರಿಗೆ ಭೇಟಿ ನೀಡಿದಾಗ ಈ ಖಾಕಿ ಬಣ್ಣ ನೋಡಿ ಅದನ್ನು ಯುನಿಫಾರ್ಮ್ ಡ್ರೆಸ್ ಮಾಡಲು ತೀರ್ಮಾನಿಸಿದ್ದ. ಹೀಗಾಗಿ ಮಂಗಳೂರಿನಲ್ಲಿ ತಯಾರಾಗಿದ್ದ ಖಾಕಿ ಬಣ್ಣದ ಬಟ್ಟೆಯಿಂದ ಮದ್ರಾಸ್ ಪ್ರಾಂತ್ಯದ ಸೈನಿಕರಿಗೆ ಸಮವಸ್ತ್ರವಾಗಿ ಮೊದಲು ಬಳಕೆಯಾಗಿತ್ತು. ಅಲ್ಲಿಂದ ಆರಂಭವಾದ ಈ ಖಾಕಿ ಬಣ್ಣದ ಪ್ರಯಾಣ ಜಗತ್ತಿನ ನಾನಾ ದೇಶದ ಸೈನಿಕರು, ಪೊಲೀಸರು, ಶಾಲಾ ಮಕ್ಕಳು ಹೀಗೆ ಎಲ್ಲರೂ ಬಳಕೆ ಮಾಡಲು ಆರಂಭಿಸಿದ್ರು. ಇತ್ತೀಚಿನ ದಿನಗಳಲ್ಲಿ ಖಾಕಿ ಬಣ್ಣದ ಸಮವಸ್ತ್ರದ ಬಳಕೆ ಕಡಿಮೆ ಆಗಿದೆಯಾದ್ರೂ ಕೆಲವೊಂದು ಇಲಾಖೆಯಲ್ಲಿ ಇದೇ ಬಳಕೆ ಆಗುತ್ತಿದೆ. ಬ್ರಿಟೀಷ್ ಸರ್ಕಾರದಲ್ಲಿ ಈಗಲೂ ಮಿಲಿಟರಿಯಲ್ಲಿ ಇದೇ ಸಮವಸ್ತ್ರವನ್ನು ಬಳಕೆ ಮಾಡುತ್ತಿದ್ದಾರೆ.
DAKSHINA KANNADA
ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ
ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.
ಉತ್ತರದ ಬ್ರೇಕ್ ವಾಟರ್ 831 ಮೀಟರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.
ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.
DAKSHINA KANNADA
ವಿದೇಶಿ ಹಡಗಿನಲ್ಲಿ ಬೆಂಕಿ ಅವಘಡ; ಕರ್ನಾಟಕ ಕರಾವಳಿಯಲ್ಲಿ ಲಂಗರು ಹಾಕಿದ ಕಾರ್ಗೋ ಹಡಗು
ಮಂಗಳೂರು: ಗುಜರಾತ್ನಿಂದ ಕೊಲಂಬೋಕ್ಕೆ ವಿವಿಧ ಸರಕುಗಳನ್ನು ಸಾಗಾಟ ಮಾಡುತ್ತಿದ್ದ ವಿದೇಶಿ ಮೂಲದ ಸರಕು ಸಾಗಾಟ ಹಡಗಿನಲ್ಲಿ ಅಗ್ನಿ ಆಕಸ್ಮಿಕ ನಡೆದ ಘಟನೆ ಬೆಳಕಿಗೆ ಬಂದಿದೆ.
ಜುಲೈ 19 ರಂದು ಕರ್ನಾಟಕ ಕರಾವಳಿಯ ಸಮುದ್ರದಲ್ಲಿ ಈ ದುರ್ಘಟನೆ ನಡೆದಿದ್ದು, ಕೋಸ್ಟ್ ಗಾರ್ಡ್ ತಂಡ ಹೆಲಿಕಾಪ್ಟರ್ ಹಾಗೂ ರಕ್ಷಣಾ ಹಡಗಿನ ಮೂಲಕ ಸತತ ನಲುವತ್ತು ಘಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದೆ. ಹಡಗಿನಲ್ಲಿ ಒಟ್ಟು 21 ಸಿಬ್ಬಂದಿ ಇದ್ದು ಒಬ್ಬ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಹಡಗಿನ ಬೆಂಕಿ ನಂದಿಸಿ ಸಿಬ್ಬಂದಿಗಳ ರಕ್ಷಣೆ ಮಾಡಿದ ಬಳಿಕ ಹಡಗನ್ನು ಕರ್ನಾಟಕ ಕರಾವಳಿ ಭಾಗಕ್ಕೆ ತೆಗೆದುಕೊಂಡು ಬರಲಾಗಿದೆ. ಸದ್ಯ ಸುರತ್ಕಲ್ ಕಡಲ ಕಿನಾರೆಯಿಂದ ಸುಮಾರು 33 ನಾಟಿಕಲ್ ಮೈಲ್ ದೂರದಲ್ಲಿ ಹಡಗು ಲಂಗರು ಹಾಕಲಾಗಿದೆ. ಗುಜಾರಾತ್ನ ಮುಂದ್ರಾ ಬಂದರಿನಿಂದ ಹೊರಟಿದ್ದ ಈ ಹಡಗು ಪನಾಮ ದೇಶಕ್ಕೆ ಸೇರಿದ್ದಾಗಿ ಮಾಹಿತಿ ಲಭ್ಯವಾಗಿದೆ.
ಬೆಂಕಿ ಅವಘಡದಿಂದ ಸಂಪೂರ್ಣ ಹಾನಿಯಾಗಿರುವ ಹಡಗು ಅಪಾಯಕಾರಿ ಪರಿಸ್ಥಿತಿಯಲ್ಲಿದ್ದು, ಕೋಸ್ಟ್ ಗಾರ್ಡ್ ಸಿಬ್ಬಂದಿ ಹಡಗಿನ ಮೇಲೆ ನಿಗಾ ಇರಿಸಿದ್ದಾರೆ. ಹಡಗು ಮುಳುಗಡೆಯಾಗುವ ಸಾದ್ಯತೆಯ ಜೊತೆಗೆ ಹಡಗಿನಲ್ಲಿ ಮತ್ತೆ ಬೆಂಕಿ ಕಾಣಿಸಿಕೊಳ್ಳುವ ಸಂಭವ ಕೂಡಾ ಇದೆ. ಹೀಗಾಗಿ ಹಡಗು ಮುಳುಗಡೆಯಾದಲ್ಲಿ ಸಮುದ್ರಕ್ಕೆ ತೈಲ ಸೋರಿಕೆಯ ಆತಂಕ ಕೂಡಾ ಎದುರಾಗಿದೆ. ಹೀಗಾಗಿ ಹಡಗಿನ ಮೇಲೆ ನಿಗಾ ವಹಿಸಿರುವ ಕೋಸ್ಟ್ ಗಾರ್ಡ್ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.
DAKSHINA KANNADA
ದಕ್ಷಿಣ ಕನ್ನಡ ಜಿಲ್ಲೆಯ ಮಹಾಪ್ರವಾಹಕ್ಕೆ 50 ವರ್ಷ; ಮರುಕಳಿಸದಿರಲಿ ‘ಆ ಶುಕ್ರವಾರ’ ಎನ್ನುತ್ತಿದ್ದಾರೆ ಕರಾವಳಿಗರು!
ಮಂಗಳೂರು: 1974 ಜುಲೈ 26ರ ಶುಕ್ರವಾರ ರಾತ್ರಿ ಇಡೀ ಸುರಿದ ಭಾರೀ ಮಳೆ ಮುಂಜಾನೆಯ ವೇಳೆಗೆ ನೆರೆ ರೌದ್ರಾವತಾರ ತಾಳಿತ್ತು.
ಹಿಂದೆ ಎಂದೂ ಕಾಣದ ರೀತಿ ನೇತ್ರಾವತಿ ನದಿ ಉಕ್ಕಿ ಹರಿದಿತ್ತು. ನಸುಕಿನ ಜಾವ ನೇತ್ರಾವತಿ ನದಿ ಮನೆಯೊಳಗೆಯೇ ಪ್ರವೇಶಿಸಿತ್ತು.
ಬಂಟ್ವಾಳ ಪೇಟೆ, ಪಕ್ಕದೂರುಗಳಿಗೆ ಸಂಪರ್ಕಿಸುವ ರಸ್ತೆಗಳೆಲ್ಲವೂ ಕ್ಷಣಮಾತ್ರದಲ್ಲೆ ಜಲಮಯ. ಎಲ್ಲಿಗೆ ಹೋಗೋದು? ಏನು ಮಾಡೋದು ಅನ್ನೋದನ್ನು ಯೋಚಿಸುವಷ್ಟರಲ್ಲೇ ಊರಿಗೆ ಊರೇ ಮುಳುಗಿತ್ತು. ಬಂಟ್ವಾಳ ಮತ್ತು ಉಪ್ಪಿನಂಗಡಿ ಪೇಟೆಯಲ್ಲಿ ವಾಹನಗಳ ಬದಲು ದೋಣಿಗಳು ಸಂಚರಿಸಿದ್ದವು. ಆ ಕಾಲದಲ್ಲಿಯೇ ಐವತ್ತು ಲಕ್ಷ ರೂಪಾಯಿ ನಷ್ಟ ಉಂಟಾಗಿತ್ತು.
ಆ ಸಮಯದಲ್ಲಿ ಜಿಲ್ಲೆಯ ಬಹುತೇಕ ಪ್ರದೇಶಗಳು ನೆರೆ ನೀರಿನಿಂದ ಆವರಿಸಿದ್ದವು, ಆವತ್ತಿನ ಕಾಲದಲ್ಲಿ ಮಣ್ಣಿನಿಂದ ನಿರ್ಮಿಸಿದ್ದ ನೂರಾರು ಮನೆ ಅಂಗಡಿ ನೆರೆ ನೀರಿಗೆ ಕೊಚ್ಚಿಕೊಂಡು ಹೋಗಿದ್ದವು. ಈಗಲೂ ಕೂಡಾ ಆ ಭೀಕರ ನೆರೆಯು ನಮ್ಮ ಹಿರಿಯರ ಬಾಯಲ್ಲಿ (ಎಲ್ಪತ್ತ ನಾಲೆತ್ತ ಬೊಲ್ಲ) ಎಂದು ಪ್ರಖ್ಯಾತಿ ಹೊಂದಿದೆ.
ಕಾಕತಾಳೀಯ ಎಂಬಂತೇ ಪ್ರವಾಹದ ಆ ದಿನ, ವಾರ ಎಲ್ಲವೂ ಸೇಮ್ ಆಗಿದ್ದು, ಮತ್ತೆ ಅದೇ ರೀತಿಯ ಪ್ರವಾಹ ಪರಿಸ್ಥಿತಿಯೂ ನೇತ್ರಾವತಿ ತಟದಲ್ಲಿದೆ. ಈಗಾಗಲೇ ನೇತ್ರಾವತಿ ಅಪಾಯ ಮಟ್ಟ ಮೀರಿದ್ದು, ಈ ಆತಂಕಕ್ಕೆ ಕಾರಣವೂ ಆಗಿದೆ.
- LATEST NEWS4 days ago
ಗೀಸರ್ನಿಂದ ವಿಷಾನಿಲ ಸೋರಿಕೆ; ಇಹಲೋಕ ತ್ಯಜಿಸಿದ ತಾಯಿ, ಮಗ
- LATEST NEWS4 days ago
ಕಸದ ತೊಟ್ಟಿಯಲ್ಲಿ ಪತ್ತೆಯಾಯ್ತು ಲಕ್ಷಾಂತರ ರೂ. ಬೆಲೆ ಬಾಳುವ ವಜ್ರದ ನೆಕ್ಲೇಸ್
- LATEST NEWS7 days ago
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಕ್ರಿಕೆಟಿಗ
- DAKSHINA KANNADA1 day ago
ವಿಟ್ಲದ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ; ಸಾರ್ವಜನಿಕರನ್ನು ನೋಡಿ ಕಾಲ್ಕಿತ್ತ ಜೋಡಿ