Connect with us

LATEST NEWS

ಇದು ಕಳ್ಳನೊಬ್ಬ ಜಡ್ಜ್‌ ಆದ ರೋಚಕ ಕಥೆ..! ಜಡ್ಜ್‌ ಆಗಿ ಆತ ಮಾಡಿದ್ದೇನು ಗೊತ್ತಾ..?

Published

on

ನವದೆಹಲಿ : ಆತ ಖತರ್ನಾಕ್ ಕಳ್ಳ. ಭಾರತದ ಚಾರ್ಲ್ಸ್ ಎಂದೇ ಕುಖ್ಯಾತನಾಗಿದ್ದ. ಅವನ ಮಾಸ್ಟರ್ ಮೈಂಡ್ ಗೆ ಇಡೀ ದೇಶವೇ ಬೆರಗಾಗಿತ್ತು. ಆತನೇ ಧನಿ ರಾಮ್ ಮಿತ್ತಲ್. ನ್ಯಾಯಾಧೀಶರಂತೆ ನಟಿಸಿ, ಜೈಲಿನಲ್ಲಿದ್ದ 2 ಸಾವಿರಕ್ಕೂ ಅಧಿಕ ವಿಚಾರಣಾಧೀನ ಕೈದಿಗಳನ್ನು ಬಿಡುಗಡೆ ಮಾಡಿದ್ದ ಧನಿ ರಾಮ್ ಇಹಲೋಕ ತ್ಯಜಿಸಿದ್ದಾನೆ. ಆತನಿಗೆ 85 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಏಪ್ರಿಲ್ 18ರಂದು ಆತ ನಿಧ*ನನಾಗಿದ್ದಾನೆ.

150 ಕ್ಕೂ ಹೆಚ್ಚು ಪ್ರಕರಣ:

ಮಿತ್ತಲ್ ವೈಯಕ್ತಿಕ ಖುಷಿಗಾಗಿ 1968 ರಿಂದ ಕಳ್ಳತನ ಮಾಡಲು ಪ್ರಾರಂಭಿಸಿದ್ದ. ಬೇರೆ ಬೇರೆ ಫ್ಯಾನ್ಸಿ ನಂಬರ್ ನ ಕಾರುಗಳನ್ನು ಕದಿಯುತ್ತಿದ್ದ. ಹರಿಯಾಣ, ಚಂಡೀಗಢ, ಪಂಜಾಬ್, ರಾಜಸ್ಥಾನಗಳಲ್ಲಿ 150ಕ್ಕೂ ಹೆಚ್ಚು ಕಳ್ಳತನ ಪ್ರಕರಣಗಳಲ್ಲಿ ಆತ ಭಾಗಿಯಾಗಿದ್ದ. ಅಲ್ಲದೇ, ಆತ, 90ಕ್ಕೂ ಹೆಚ್ಚು ಬಾರಿ ಕಂಬಿ ಎಣಿಸಿದ್ದ. 1000ಕ್ಕೂ ಅಧಿಕ ವಂಚನೆ ಕೇಸ್ ಇವನ ಮೇಲಿತ್ತು. ತನ್ನ ವೈಯಕ್ತಿಕ ಬಳಕೆಗಾಗಿ ಹರಿಯಾಣದ ಝಜ್ಜರ್‌ ನ್ಯಾಯಾಲಯದ ಪಾರ್ಕಿಂಗ್ ಏರಿಯಾದಲ್ಲಿ ಕಾರೊಂದನ್ನು ಕಳವುಗೈದು ಸುದ್ದಿಯಾಗಿದ್ದ. ಕೊನೆಯದಾಗಿ 2017 ರಲ್ಲಿ ತನ್ನ 77 ನೇ ವಯಸ್ಸಿನಲ್ಲಿ ಕಾರು ಕಳ್ಳತನ ಮಾಡಿದ್ದಕ್ಕೆ 95ನೇ ಸಲ ಅರೆಸ್ಟ್ ಮಾಡಿದ್ದು ದಾಖಲೆಯಾಗಿತ್ತು.

ವೆಲ್ ಎಜ್ಯುಕೇಟೆಡ್ ಕಳ್ಳ :

ಅಂದಹಾಗೆ ಈತ ಕಾಂಜಿಪೀಂಜಿ ಕಳ್ಳ ಅಂದುಕೊಳ್ಳಬೇಡಿ. ಈತ ವೆಲ್ ಎಜ್ಯುಕೇಟೆಡ್ ಕಳ್ಳ. ಬಿಎಸ್ಸಿ ಪದವೀಧರ. ತನ್ನ ಓದಿಗೆ ಕೆಲಸ ಸಿಕ್ಕಿಲ್ಲವೆಂದು ಸ್ಟೇಷನ್ ಮಾಸ್ಟರ್ ಆಗಿ ಕೆಲಸಕ್ಕೆ ಸೇರಿದ್ದ. ತಾನಾಯ್ತು ತನ್ನ ಕೆಲಸವಾಯ್ತು ಅಂತ ಇದ್ದಿದ್ರೆ ಆಗ್ತಿತ್ತು. ಆದ್ರೆ, ಆತ ಕಳ್ಳತನಕ್ಕೆ ಕೈ ಹಾಕಿ ಕೆಲಸ ಕಳೆದುಕೊಂಡ. ಕೋರ್ಟ್ ಆವರಣದಲ್ಲಿ ಕಾರು ಕದ್ದು ಕೆಲಸ ಕಳೆದುಕೊಂಡ. ಬಳಿಕ, ಕಳ್ಳತನವೇ ಕಸುಬಾಯಿತು.

ಅಂದಹಾಗೆ, ಈತ ಕಾನೂನು ಪದವಿಯೂ ಮುಗಿಸಿದ್ದ. ಓದಿ ಜನರಿಗೆ ನ್ಯಾಯ ಕೊಡಿಸಬೇಕೆಂದು ಕಾನೂನು ಪದವಿ ಮಾಡುತ್ತಾರೆ. ಆದರೆ ಈತ ಜೈಲ್‌ಗೆ ಹೋಗುತ್ತಿದ್ದಾಗ ವಕೀಲರಿಗೆ ಫೀಸ್‌ ಕೊಡಬೇಕಾಗಿತ್ತು, ಅದೇ ನಾನೇ ಕಾನೂನು ಓದಿದರೆ ನಮ್ಮ ಕೇಸ್‌ ನಾನೇ ವಾದಿಸಬಹುದಲ್ವಾ ಎಂಬ ಉದ್ದೇಶದಿಂದ ಕಾನೂನು ಪದವಿ ಪೂರ್ಣಗೊಳಿಸುತ್ತಾನೆ. ಅಲ್ಲದೆ, ಕೋರ್ಟ್‌ನಲ್ಲಿ ತನ್ನ ಮೇಲಿದ್ದ ಕೇಸ್‌ಗಳನ್ನು ತಾನೇ ವಾದಿಸಿ ಗೆಲ್ಲುತ್ತಿದ್ದ.

ಜಡ್ಜ್ ಕೂಡ ಆದ ಖದೀಮ:

ಮಿತ್ತಲ್ ಜಡ್ಜ್ ಸೀಟ್ ನಲ್ಲೂ ಕೂತು ನ್ಯಾಯತೀರ್ಮಾನವನ್ನೂ ಮಾಡಿದ್ದ. ಆತ ಕಾನೂನು ಪದವಿಯನ್ನೂ ಮಾಡಿದ್ದ. ಹ್ಯಾಂಡ್ ರೈಟಿಂಗ್ ಅನಾಲಿಸಿಸ್ ಕೂಡ ಮಾಡಿದ್ದ. ಹೀಗಾಗಿ ಜಡ್ಜ್‌ ಪಕ್ಕದಲ್ಲೇ ಕುಳಿತುಕೊಳ್ಳವ ಕ್ಲರ್ಕ್ ಕೂಡ ಆಗಿ ಬಳಿಕ ಅಲ್ಲಿ ಖತರ್ನಾಕ್ ಕೆಲಸ ಮಾಡಿ ಜಡ್ಜ್ ಆಗಿದ್ದ. ಹರಿಯಾಣದ ಜಿಲ್ಲಾ ನ್ಯಾಯಾದೀಶರ ಮೇಲೆ ಭ್ರಷ್ಟಾಚಾರದ ಆರೋಪ ಕೇಳಿ ಬಂದಾಗ ಈತ ನಕಲಿ ಲೆಟರ್ ತಯಾರಿಸಿ ಜಡ್ಜನ್ನೇ 2 ತಿಂಗಳು ಮನೆಗೆ ಕಳುಹಿಸಿದ್ದ. ಬಳಿಕ ಮತ್ತೊಂದು ಲೆಟರ್ ತಯಾರಿಸಿ ಆ ನ್ಯಾಯಾಲಯಕ್ಕೆ ತನ್ನನ್ನೇ ಜಡ್ಜ್‌ ಆಗಿ ನೇಮಕ ಮಾಡಿಕೊಂಡಿದ್ದ.  ತಾನೇ ಬರೆದಿರುವ ಲೆಟರ್ ಇದಾಗಿದ್ರೂ, ಯಾರಿಗೂ ಅನುಮಾನ ಬಾರದಂತೆ ನಕಲಿ ಸೀಲ್‌ಗಳನ್ನು ಉಪಯೋಗಿಸಿ ಬರೆದಿದ್ದ. ಹೀಗೇ ಹೊಸ ಜಡ್ಜ್‌ ಆಗಿ ಕೋರ್ಟ್‌ಗೆ ಎಂಟ್ರಿ ಕೊಟ್ಟ ಈತ ಕೇವಲ 40 ದಿನದಲ್ಲಿ 2 ಸಾವಿರ ಖೈದಿಗಳನ್ನು ರಿಲೀಸ್ ಮಾಡಿದ್ದ. ಯಾವಾಗ ಈತನ ಮೇಲೆ ಅಧಿಕಾರಿಗಳಿಗೆ ಅನುಮಾನ ಬರಲು ಆರಂಭವಾಗಿತ್ತೋ ಆವಾಗ ಅಲ್ಲಿಂದ ಎಸ್ಕೇಪ್ ಆಗಿದ್ದ.

ಇದನ್ನೂ ಓದಿ : WATCH VIDEO : ಮದುವೆಯಲ್ಲಿ ಪುರೋಹಿತರಿಗೆ ಯುವಕರ ಕೀಟಲೆ; ಛೇ! ಹೀಗೂ ಮಾಡ್ಬೋದಾ? ಎಂದ ನೆಟ್ಟಿಗರು

ಈತ ಬುದ್ದಿವಂತ ಅಪರಾಧಿ! 

ಕಳ್ಳತನ ಪ್ರಕರಣ ಸಾಮಾನ್ಯ. ಚಾಣಾಕ್ಷತನದಿಂದ ಕಳವುಗೈಯುವಲ್ಲಿ ಖದೀಮರು ನಿಸ್ಸೀಮರಾಗಿರುತ್ತಾರೆ. ಆದ್ರೆ, ಧನಿ ರಾಮ್ ಮಿತ್ತಲ್ ಮಾತ್ರ ಎಲ್ಲರಿಗಿಂತ ಒಂದು ಕೈ ಮೇಲು. ಭಾರತದ ಅತೀ ಹೆಚ್ಚು ಕಲಿತಿರುವ ಬುದ್ಧಿವಂತ ಅಪರಾಧಿ ಎಂಬ ಕುಖ್ಯಾತಿ ಈತನಿಗಿತ್ತು. ವಯಸ್ಸಾಗುತ್ತಿದ್ದಂತೆ ಕಳ್ಳತನ ಕೆಲಸ ಕಡಿಮೆ ಮಾಡುತ್ತಿದ್ದ. ಇಂತಹ ಭಯಂಕರ ಕಳ್ಳ ಇದೀಗ ಇಹಲೋಕ ತ್ಯಜಿಸಿದ್ದಾನೆ. ಆತನ ಮಗ ಈ ಬಗ್ಗೆ ಖಚಿತ ಪಡಿಸಿದ್ದಾರೆ.

FILM

ಬಾಲಿವುಡ್ ಜನಪ್ರಿಯ ನಿರೂಪಕಿ ಭಾರತಿ ಸಿಂಗ್ ಆಸ್ಪತ್ರೆ ದಾಖಲು..!

Published

on

ಮುಂಬೈ: ಬಾಲಿವುಡ್ ನಿರೂಪಕಿ, ಹಾಸ್ಯ ನಟಿ ಭಾರತಿ ಸಿಂಗ್ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಸ್ತುತ ಡ್ಯಾನ್ಸ್ ದೀವಾನೆ ಸೀಸನ್ 4 ಅನ್ನು ಹೋಸ್ಟ್ ಮಾಡುತ್ತಿರುವ ಖ್ಯಾತ ನಿರೂಪಕಿ ಭಾರತಿ ಸಿಂಗ್  ತೀವ್ರ ಹೊಟ್ಟೆ ನೋವಿನಿಂದ ಕೋಕಿಲಾಬೆನ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

bharathi

‘ಕಳೆದ ಮೂರು ದಿನಗಳಿಂದ ತೀವ್ರವಾದ ಹೊಟ್ಟೆ ನೋವನ್ನು ಅನುಭವಿಸುತ್ತಿದ್ದೇನೆ’ ಎಂದು ತನ್ನ ವ್ಲಾಗ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಆರಂಭದಲ್ಲಿ ಅದನ್ನು ಗ್ಯಾಸ್ಟ್ರೊನಲ್ ಅಥವಾ ಆಮ್ಲೀಯ ಅಸ್ವಸ್ಥತೆ ಆಗಿರಬಹುದೆಂದು ಭಾವಿಸಿ ನಿರ್ಲಕ್ಷ ಮಾಡಿದ್ದರಂತೆ. ಆದರೆ, ನೋವು ತಡೆದುಕೊಳ್ಳಲಾಗದೆ ವೈದ್ಯಕೀಯ ಚಿಕಿತ್ಸೆ ಪಡೆಯಲು ನಿರ್ಧರಿಸಿ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ವ್ಲಾಗ್‌ನಲ್ಲಿ ಹೇಳಿದ್ದಾರೆ. ಇನ್ನು ವೈದ್ಯಕೀಯ ಪರೀಕ್ಷೆ ಬಳಿಕ ಭಾರತಿಗೆ ಪಿತ್ತಕೋಶದಲ್ಲಿ ಕಲ್ಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.  ಏನೂ ತಿನ್ನಲು ಆಗುತ್ತಿಲ್ಲ ತಿಂದರೂ ವಾಂತಿ ಆಗುತ್ತಿದೆ ಎಂದ ಹೇಳಿದ ಅವರು ಭಾವುಕರಾದರು.

ಮುಂದೆ ಓದಿ..;‘ಅರ್ಜುನ’ ಆನೆಯನ್ನು ನೆನೆದ ಡಿಬಾಸ್; ದರ್ಶನ್ ಕೋರಿಕೆ ಏನು?

ಈ ನಡುವೆ ಭಾರತಿ ಆರೋಗ್ಯದಲ್ಲಿ ಏರುಪೇರು ಉಂಟಾಗಿರುವುದಕ್ಕೆ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರು ಸೋಶಿಯಲ್ ಮೀಡಿಯಾದಲ್ಲಿ ಬೇಗ ಚೇತರಿಸಿಕೊಳ್ಳುವಂತೆ ದೇವರಲ್ಲಿ ಪ್ರಾರ್ಥಿಸುತ್ತೇವೆ ಎಂದು ಕಮೆಂಟ್‌ಗಳನ್ನು ಹಾಕಿದ್ದಾರೆ.

 

Continue Reading

DAKSHINA KANNADA

ಪ್ರವಾಸಿಗರಿಗೆ ಗುಡ್ ನ್ಯೂಸ್ : ಮತ್ತೆ ಆರಂಭವಾಯ್ತು ಲಕ್ಷದ್ವೀಪ – ಮಂಗಳೂರು ಸ್ಪೀಡ್ ಪ್ಯಾಸೆಂಜರ್ ಹಡಗು

Published

on

ಮಂಗಳೂರು : ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿಯವರು ಲಕ್ಷದ್ವೀಪದ ಬೀಚ್‌ನಲ್ಲಿ ವಾಯುವಿಹಾರ ನಡೆಸುವ ಮೂಲಕ ಲಕ್ಷದ್ವೀಪ ಬಾರಿ ಸುದ್ದಿಯಾಗಿತ್ತು. ಈ ವೇಳೆ ಮಂಗಳೂರು ಲಕ್ಷದ್ವೀಪ ನಡುವೆ ಈ ಹಿಂದೆ ಇದ್ದ ಪ್ರಯಾಣಿಕರ ಹಡಗು ಆರಂಭಿಸಲು ಬೇಡಿಕೆ ಕೂಡಾ ಆರಂಭವಾಗಿತ್ತು.

ಇದೀಗ ಲಕ್ಷದ್ವೀಪದ ಆಡಳಿತ ಮಂಗಳೂರಿಗೆ ಸ್ಪೀಡ್ ಪ್ಯಾಸೆಂಜರ್ ಹಡಗನ್ನು ಆರಂಭಿಸಿದೆ. ಗುರುವಾರ ಸಂಜೆ ಮಂಗಳೂರಿಗೆ ಆಗಮಿಸಿದ ಸ್ಪೀಡ್ ಪ್ಯಾಸೆಂಜರ್ ಬೋಟ್‌ನಲ್ಲಿ 150 ಜನ ಲಕ್ಷದ್ವೀಪವಾಸಿಗಳು ಆಗಮಿಸಿದ್ದಾರೆ.

ಪ್ರಯಾಣ ದರ ಎಷ್ಟು?


ಮಂಗಳೂರು ಲಕ್ಷದ್ವೀಪದ ನಡುವೆ ಮತ್ತೆ ಸಂಪರ್ಕ ಸೇತುವೆ ನಿರ್ಮಿಸಲು ಲಕ್ಷದ್ವೀಪ ಆಡಳಿತ ಸ್ಪೀಡ್ ಪ್ಯಾಸೆಂಜರ್ ಹಡಗು ಆರಂಭಿಸಿದೆ. ಕೋವಿಡ್ ಆರಂಭಕ್ಕೂ ಮೊದಲು ಮಂಗಳೂರು ಲಕ್ಷದ್ವೀಪದ ನಡುವೆ ಎರಡು ಪ್ರಯಾಣಿಕ ಹಡಗುಗಳು ಸಂಚಾರ ಮಾಡುತ್ತಿತ್ತು. ಸಾಕಷ್ಟು ಪ್ರಯಾಣಿಕರು ಮಂಗಳೂರು ಲಕ್ಷದ್ವೀಪ ನಡುವೆ ಪ್ರಯಾಣ ಮಾಡುವ ಮೂಲಕ ಅದರ ಅನುಕೂಲ ಪಡೆದುಕೊಂಡಿದ್ದರು.


ಲಕ್ಷದ್ವೀಪದವರಿಗೆ ತಮ್ಮ ದೈನಂದಿನ ಅವಶ್ಯಕತೆಗೆ ಮಂಗಳೂರು ಅವಲಂಬಿತರಾಗಿದ್ದರೆ, ಮಂಗಳೂರಿನ ಜನರಿಗೆ ಲಕ್ಷದ್ವೀಪ ವೀಕೆಂಡ್ ಪಾಯಿಂಟ್. ಆದ್ರೆ ಕೋವಿಡ್ ಕಾರಣದಿಂದ ಲಕ್ಷಾದ್ವೀಪಕ್ಕೆ ಇದ್ದ ಹಡಗಿನ ವ್ಯವಸ್ಥೆ ನಿಂತು ಹೋಗಿದ್ದು, ಈಗ ಮತ್ತೆ ಆರಂಭವಾಗಿದೆ. ಹಿಂದೆ 24 ಗಂಟೆ ಇದ್ದ ಪ್ರಯಾಣ ಕೇವಲ 5.30 ರಿಂದ 6 ಗಂಟೆಗಳಿಗೆ ಇಳಿದಿದೆ. ಹಡಗಿನಲ್ಲಿ ಎಲ್ಲಾ ವ್ಯವಸ್ಥೆ ಇರೋ ಕಾರಣದಿಂದ ಜನರು ಕೂಡಾ ಉತ್ಸಾಹದಿಂದ ಟಿಕೆಟ್ ಬುಕ್ ಮಾಡಿಕೊಂಡಿದ್ದಾರೆ. ಅಂದಹಾಗೆ, ಈ ಹೈ-ಸ್ಪೀಡ್ ಪ್ರಯಾಣಿಕ ಹಡಗಿನ ದರ ಕೇವಲ 450 ರೂ. ಆಗಿದೆ.

ಹೆಚ್ಚಿನ ಹಡಗಿಗೆ ಬೇಡಿಕೆ :


ಲಕ್ಷದ್ವೀಪದ ನಡುವೆ ಪ್ರಯಾಣಿಕರ ಹಡಗು ಆರಂಭದಿಂದ ಮಂಗಳೂರಿನಲ್ಲಿ ವ್ಯಾಪಾರ ವಹಿವಾಟು ಇನ್ನಷ್ಟು ಹೆಚ್ಚಾಗಲಿದೆ. ಅಷ್ಟೇ ಅಲ್ಲದೆ, ಲಕ್ಷದ್ವೀಪಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಮಂಗಳೂರಿನಿಂದ ತೆರಳುವ ಮೂಲಕ ಅಲ್ಲೂ ಕೂಡಾ ಆರ್ಥಿಕ ಅಭಿವೃದ್ದಿ ಆಗಲಿದೆ.


ಸ್ಪೀಡ್ ಪ್ಯಾಸೆಂಜರ್ ಹಡಗು ಕನಿಷ್ಟ ಎರಡು ದಿನಕ್ಕೊಮ್ಮೆ ಮಂಗಳೂರಿನಿಂದ ಲಕ್ಷದ್ವೀಪಕ್ಕೆ ಹೋಗುವ ವ್ಯವಸ್ಥೆ ಮಾಡಬೇಕು ಅನ್ನೋದು ಸ್ಥಳೀಯರ ಆಗ್ರಹ. ಈಗ ಆರಂಭವಾಗಿರೋ ಹಡಗಿನಲ್ಲಿ ಸುಖಕರ ಪ್ರಯಾಣಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ. ಪ್ರಯಾಣಿಕರಿಗೆ ಟಿವಿ, ಎಸಿ, ಸೇರಿದಂತೆ ಅಗತ್ಯ ಸೇವೆಗಳು ಲಭ್ಯವಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಈ ಹಡಗಿನ ಬಳಕೆ ಮಾಡುವ ಸಾಧ್ಯತೆ ಇರುವ ಕಾರಣ ಹೆಚ್ಚಿನ ಹಡಗಿನ ವ್ಯವಸ್ಥೆ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಇದೀಗ ಆರಂಭಗೊಂಡಿರೋ ಪ್ರಯಾಣಿಕರ ಹಡಗು ಸೇವೆ ಜೂನ್ ತಿಂಗಳ ಬಳಿಕ ಸ್ಥಗಿತವಾಗಲಿದೆ.

ಇದನ್ನೂ ಓದಿ :  ‘ಅರ್ಜುನ’ ಆನೆಯನ್ನು ನೆನೆದ ಡಿಬಾಸ್; ದರ್ಶನ್ ಕೋರಿಕೆ ಏನು?

ಮಳೆಗಾಲ ಕಳೆದ ಬಳಿಕ ಇದು ಮತ್ತೆ ಆರಂಭವಾಗುತ್ತದೆಯೋ ಇಲ್ಲವೋ ಅನ್ನೋದು ಇನ್ನೂ ನಿರ್ಧಾರವಾಗಿಲ್ಲ. ಆದ್ರೆ, ಮತ್ತೆ ಆರಂಭಿಸುವ ಬಗ್ಗೆ ಲಕ್ಷಾದ್ವೀಪ ಆಡಳಿತ ಭರವಸೆ ನೀಡಿದೆ. ಒಟ್ಟಾರೆ ಹೇಳೋದಾದ್ರೆ ಸದ್ಯಕ್ಕಂತೂ ಲಕ್ಷದ್ವೀಪಕ್ಕೆ ಸ್ಪೀಡ್ ಪ್ಯಾಸೆಂಜರ್ ಹಡಗು ಆರಂಭದಿಂದ ಮಂಗಳೂರಿನ ಜನರಿಗಂತೂ ಸಾಕಷ್ಟು ಖುಷಿಯಾಗಿರೋದಂತು ನಿಜ.

Continue Reading

LATEST NEWS

ಈಜಲು ಹೋದ ಅಣ್ಣ ನೀರು*ಪಾಲು.! ತಂಗಿಯ ವೀಡಿಯೋದಲ್ಲಿ ಸೆರೆಯಾಯ್ತು ಅಣ್ಣನ ಸಾ*ವಿನ ಕೊನೆ ಕ್ಷಣ..!

Published

on

ಕೋಲಾರ: ಕೃಷಿ ಹೊಂಡದಲ್ಲಿ ಈಜುತ್ತಿರುವುದನ್ನು ತಂಗಿ ವೀಡಿಯೋ ಮಾಡುತ್ತಿದ್ದಾಗಲೇ ಸಹೋದರ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆಯೊಂದು ಕೋಲಾರದಲ್ಲಿ ನಡೆದಿದೆ. ಕೋಲಾರ ತಾಲೂಕಿನ ನಾಗವಾಳ ಗ್ರಾಮದಲ್ಲಿಈ ಘಟನೆ ನಡೆದಿದೆ.

swim death

ಮುಂದೆ ಓದಿ..; ಈ ಸರ್ವಾಧಿಕಾರಿಗೆ ಬೇಕಂತೆ ವರ್ಷಕ್ಕೆ 25 ಕನ್ಯೆಯರು..!! ಏನಿದು ಕಾಮಕಾಂಡ?

ಮೈಸೂರಿನ ರಾಘವೇಂದ್ರ ನಗರ ನಿವಾಸಿ ಗೌತಮ್(26 ವ) ಮೃತ ದುರ್ದೈವಿ. ಗೌತಮ್ ತನ್ನ ತಂದೆಯ ಊರು ವೇಮಗಲ್ ಸಮೀಪದ ನಾಗಾವಾಳಕ್ಕೆ ಬಂದಿದ್ದರು. ಈ ವೇಳೆ ಕುಟುಂಬ ಸದಸ್ಯರು ಹಾಗೂ ತಂಗಿಯ ಜೊತೆ ಕೃಷಿ ಹೊಂಡದ ಬಳಿ ಹೋಗಿದ್ದಾರೆ.  ಅಲ್ಲಿ ತಂಗಿಯ ಬಳಿ ವೀಡಿಯೋ ಮಾಡಲು ಮೊಬೈಲ್ ಕೊಟ್ಟು ಹೊಂಡಕ್ಕೆ ಈಜಲು ಧುಮುಕಿದ್ದಾರೆ. ಸರಿಯಾಗಿ ಈಜಲು ಗೊತ್ತಿರದ ಗೌತಮ್ ನೀರಿಗೆ ಧುಮುಕಿದ್ದು, ಇತ್ತ ತಂಗಿ ಈಚೆ ಬಾ ಎಂದು ಕೂಗುವುದು ವೀಡಿಯೋದಲ್ಲಿ ರೆಕಾರ್ಡ್‌ ಆಗಿದೆ. ನೋಡು ನೋಡುತ್ತಿದ್ದಂತೆ ಗೌತಮ್ ನೀರಲ್ಲಿ ಮುಳುಗಿ ಉಸಿರು ಚೆಲ್ಲಿದ್ದಾರೆ. ಇನ್ನು ಈ ವೀಡಿಯೋದಲ್ಲಿ ಗೌತಮ್ ನೀರಿನಲ್ಲಿ ಮುಳುಗುವ ದೃಶ್ಯ ಸೆರಯಾಗಿದೆ. ಈ ಕುರಿತಾಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Continue Reading

LATEST NEWS

Trending