BIG BOSS
BBK11 ವೇದಿಕೆಗೆ ಬರುತ್ತಿದ್ದಂತೆ ರೀಲ್ಸ್ ಸ್ಟಾರ್ ಮೇಲೆ ಕೋಪಗೊಂಡ ಕಿಚ್ಚ: ಇಂತವರನ್ನ ಏಕೆ ಕರೆಸಿದ್ರಿ ಎಂದು ಗರಂ?
ಮಂಗಳೂರು: ರೀಲ್ಸ್ ಸ್ಟಾರ್ ಹಾಗೂ ಕಾಮಿಡಿ ಕಲಾವಿದ ಧನರಾಜ್ ಆಚಾರ್ ಅವರು ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಇನ್ನೂ ಧನರಾಜ್ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡುತ್ತಿದ್ದಂತೆ ಕಿಚ್ಚ ಸುದೀಪ್ ಗರಂ ಆಗಿದ್ದಾರೆ.
ಕಿಚ್ಚ ಕೊಂಚ ಮುನಿಸಿಕೊಳ್ಳಲು ಕಾರಣವೂ ಇದೆ. ಹಿಂದೆ ಬಿಗ್ ಬಾಸ್’ ಬಗ್ಗೆ, ಧನರಾಜ್ ಅವರು ಒಂದು ವಿಡಿಯೋ ಮಾಡಿದ್ದರು. ಜಗಳ ನಡೆಯೋದು ಟಿಆರ್ಪಿಗಾಗಿ ಎಂದು ಅವರು ಹೇಳಿದ್ದರು. ಈ ವಿಡಿಯೋನ ಬಿಗ್ಬಾಸ್ ವೇದಿಕೆಯ ಮೇಲೆ ಪ್ಲೇ ಮಾಡಲಾಯಿತು. ಆ ಬಳಿಕ ಸುದೀಪ್ ಗಂಭೀರವಾಗಿ ಕ್ಲಾಸ್ ತೆಗೆದುಕೊಂಡರು.
‘ನಾವು ಹೆಂಗ್ ಕಾಣಿಸ್ತೀವಿ? ನಾನು ತಮಾಷೆ ಮಾಡೋ ಹಾಗೆ ಕಾಡ್ತಾ ಇದೀನಾ? ಜಗಳ ಮಾಡೋದು ಟಿಆರ್ಪಿಗಾ? ನಾನು ನೋಡದನ್ನು ಬದಲಾಯಿಸಿಕೊಳ್ಳೋಕೆ ಆಗಲ್ಲ. ಬಿಗ್ಬಾಸ್ ಮೇಲೆ ಗೌರವ ಇಲ್ಲದ ವ್ಯಕ್ತಿನ ಏಕೆ ಕಳುಹಿಸುತ್ತಿದ್ದೀರಿ” ಎಂದು ಸುದೀಪ್ ಪ್ರಶ್ನೆ ಮಾಡಿದರು. ನಾನು ಮಾಡಿರೋದು ತಮಾಷೆಗೆ ಇದನ್ನು ಗಂಭೀರವಾಗಿ ಸ್ವೀಕರಿಸಬೇಡಿ’ ಎಂದು ಧನರಾಜ್ ಕೇಳಿಕೊಂಡರು.
ಆ ಬಳಿಕ ಸುದೀಪ್ ನಮಗೂ ರೀಲ್ಸ್ ಮಾಡೋಕೆ ಬರುತ್ತೇರಿ ಎಂದು ಜೋರಾಗಿ ನಕ್ಕರು. ಆಗ ಧನರಾಜ್ ನಿಟ್ಟುಸಿರು ಬಿಟ್ಟರು. ಒಂದು ಕಡೆಯಿಂದ ಧನರಾಜ್ ಪತ್ನಿ ಅವರ ಪ್ರಶ್ನೆ ಹಾಗೂ ಸುದೀಪ್ ಅವರ ವರ್ತನೆಯನ್ನು ಕಂಡು ಜೋರಾಗಿ ಅಳಲು ಆರಂಭಿಸಿದರು. ನಂತರ ಇದು ತಮಾಷೆಗಾಗಿ ಎಂದು ಅವರಿಗೆ ತಿಳಿಯಿತು.
ಧನರಾಜ್ಗೆ ಮಗು ಜನಿಸಿ ಇನ್ನೂ ಒಂದು ತಿಂಗಳೂ ಆಗಿಲ್ಲ. ಮಗು ಜನಿಸಿದ ಕೂಡಲೇ ಅವರು ಆಸ್ಪತ್ರೆಯಲ್ಲಿ ಇರುವಾಗಲೇ ಬಿಗ್ಬಾಸ್ ನಿಂದ ಆಫರ್ ಬಂದಿತ್ತು. ಮೊದಲಿಗೆ ಹೋಗುವುದೋ ಬೇಡವೋ ಎಂದುಕೊಂಡರು. ನಂತರ ಮಗಳ ಹುಟ್ಟಿದ ನಂತರ ಹೊಸ ಅವಕಾಶ ಸಿಕ್ಕಿದೆ. ಅವಳಿಗೋಸ್ಕರ ನಾನು ಬಿಗ್ಬಾಸ್ ಗೆ ಹೋಗುತ್ತೇನೆ ಎಂದರು. ಹೀಗಾಗಿ, ಇದಕ್ಕೆ ಒಪ್ಪಿಕೊಂಡರು. ನಂತರ ಒಂದು ತಿಂಗಳ ಮಗುವಿನ ಮುಖ ನೋಡಿ ಬಿಗ್ಬಾಸ್ ಮನೆಗೆ ಎಂಟ್ರಿ ಕೊಟ್ಟರು.
BIG BOSS
ಚೈತ್ರಾ ಕುಂದಾಪುರಗೆ ಮೊದಲ ದಿನವೇ ಹೊಸ ಬಿರುದು ಕೊಟ್ಟ ಲಾಯರ್ ಜಗದೀಶ್
ಬೆಂಗಳೂರು: ಹಿಂದೂ ಕಾರ್ಯಕರ್ತೆ ಆಗಿ ಚೈತ್ರಾ ಕುಂದಾಪುರ ಗುರುತಿಸಿಕೊಂಡಿದ್ದರು. ಅವರ ವಿರುದ್ಧ ವಂಚನೆ ಆರೋಪ ಇದೆ. ಈಗ ಅವರಿಗೆ ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಟಿಕೆಟ್ ಸಿಕ್ಕಿದೆ. ಅವರಿಗೆ ಮೊದಲ ದಿನವೇ ಹೊಸ ಬಿರುದು ಕೂಡ ಸಿಕ್ಕಿದೆ ಅನ್ನೋದು ವಿಶೇಷ.
‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಮೊದಲ ಪ್ರೋಮೋ ರಿಲೀಸ್ ಆಗಿದೆ. ಇದರಲ್ಲಿ ಹಲವು ವಿಚಾರಗಳನ್ನು ರಿವೀಲ್ ಮಾಡಲಾಗಿದೆ. ಗೌತಮಿ ಜಾಧವ್ ಅವರು ಟೋಪನ್ ಹಾಕಿಕೊಂಡ ವಿಚಾರಕ್ಕೆ ಸಂಬಂಧಿಸಿ ಅವರನ್ನು ಮನೆಯ ಕೆಲವರು ಟೀಕೆ ಮಾಡಿದ್ದರು. ಇದಕ್ಕೆ ಅವರು ಕಣ್ಣೀರು ಹಾಕಿದ್ದಾರೆ. ಚೈತ್ರಾ ಕುಂದಾಪುರ್ಗೆ ‘ಲೇಡಿ ಡಾನ್’ ಎಂಬ ಬಿರುದನ್ನು ಜಗದೀಶ್ ಅವರು ಕೊಟ್ಟಿದ್ದಾರೆ.
BIG BOSS
ಭ್ರಷ್ಟರ ವಿರುದ್ಧ ಗುಡುಗಿದ ಸ್ಪರ್ಧಿ ಲಾಯರ್ ಜಗದೀಶ್ಗೆ ಕಿಚ್ಚ ವಾರ್ನಿಂಗ್..!
ಮಂಗಳೂರು: ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಗದ್ದಲ ಮಾಡಿದ್ದ ಲಾಯರ್ ಜಗದೀಶ್ ಬಿಗ್ ಬಾಸ್ ಸೀಸನ್ 11 ಗೆ ಅಧಿಕೃತವಾಗಿ ಎಂಟ್ರಿ ಕೊಟ್ಟಿದ್ದಾರೆ. ಯಾವ ರೀತಿ ತಮ್ಮ ಮಾತಿನಿಂದಲೇ ಸೋಶಿಯಲ್ ಮೀಡಿಯಾದಲ್ಲಿ ಕಮಾಲ್ ಮಾಡಿದ್ರೋ, ಅದೇ ರೀತಿ ಬಿಗ್ ಬಾಸ್ ವೇದಿಕೆಯಲ್ಲೂ ಜಗದೀಶ್ ತಮ್ಮ ಮಾತಿನ ಮಿಂಚು ಹರಿಸಿದ್ದಾರೆ. ಒಂದಲ್ಲ ಒಂದು ದಿನ ನಾನು ಸಿಎಂ ಆಗ್ತಿನಿ ಎಂದು ಹೇಳಿಕೊಂಡಿದ್ದಾರೆ.
ನಾನು ಬಿಗ್ ಬಾಸ್ ಶೋಗೆ ಬರಲು ಸುದೀಪ್ ಅವರೇ ಕಾರಣ. ನನ್ನ ಪತ್ನಿ ಸುದೀಪ್ ಅವರ ಅಭಿಮಾನಿ ಎಂದು ಮಾತು ಆರಂಭಿಸಿದ ಜಗದೀಶ್ ಭ್ರಷ್ಟಾಚಾರದ ವಿರುದ್ಧ ಗುಡುಗಿದ್ದಾರೆ. ಜನಗಳ ಮುಖದಲ್ಲಿ ನಗು ಇಲ್ಲ ಎಂಬುದು ನನ್ನ ಭಾವನೆ. ಭ್ರಷ್ಟಾಚಾರ ಅನ್ನೋದು ಸಮಾಜದಲ್ಲಿ ತುಂಬಿ ತುಳುಕುತ್ತಿದೆ. ಭ್ರಷ್ಟಾಚಾರದ ವಿಷದಲ್ಲಿ ನಮ್ಮ ಸಮಾಜ ಮುಳುಗಿ ಹೋಗಿದೆ ಎಂದಿದ್ದಾರೆ.
ನಾಮಕಾವಸ್ತೆಗೆ ಎಂಎಲ್ಎಗಳಿದ್ದಾರೆ, ಎಂಪಿಗಳಿದ್ದಾರೆ. ಆದರೆ ಜನರ ಕಷ್ಟಗಳನ್ನು ಕೇಳುವವರು ಯಾರು ಇಲ್ಲ. ಹೀಗಾಗಿ ನಮ್ಮ ಮಕ್ಕಳಿಗೋಸ್ಕರ ನಾವು ರಾಜಕಾರಣಿಗಳಾಗೋಣ, ಎಂಪಿ ಆಗೋಣ, ಎಂಎಲ್ಎ ಆಗೋಣ. ಪೊಲೀಸ್ ನವರು ಸಿಎಂ ಮಾತು ಕೇಳ್ತಾರೋ ಇಲ್ವೋ ನನ್ನ ಮಾತು ಕೇಳ್ತಾರೆ ಅಂತ ಜಗದೀಶ್ ಹೇಳಿದ್ದಾರೆ.
ಇನ್ನು ಭ್ರಷ್ಟರಿಗೆ ವಾರ್ನಿಂಗ್ ಕೊಟ್ಟಿರುವ ಲಾಯರ್ ಜಗದೀಶ್, ಸದ್ಯ ಒಳಗೆ ಹೋಗ್ತಿದೀನಿ, ಆದ್ರೆ ನಾನು ಹೊರಗೆ ಬಂದ್ಮೇಲೆ ರುಬ್ಬೋದು ಗ್ಯಾರಂಟಿ. ನಾನು ಯಾರಿಗೂ ಬಗ್ಗೋದೇ ಇಲ್ಲ ಅಂದ್ರು. ಈ ವೇಳೆ ಕಿಚ್ಚ, ಅದೆಲ್ಲಾ ಇಲ್ಲಿ ನಡೆಯೋದಿಲ್ಲ ಎಂದು ವಾರ್ನ್ ಮಾಡಿದ್ದಾರೆ. ಕೊನೆಗೆ ಬಿಗ್ ಬಾಸ್ ಮನೆಯ ರೂಲ್ಸ್ ಫಾಲೋ ಮಾಡುತ್ತೇನೆ ಎಂದು ಜಗದೀಶ್ ಹೇಳಿ ನರಕದತ್ತ ಹೆಜ್ಜೆ ಹಾಕಿದ್ದಾರೆ.
BIG BOSS
ದೊಡ್ಮನೆ ಶೋಗೂ ಮೊದಲೇ ಸ್ವರ್ಗ, ನರಕದ ಲುಕ್ ರಿವೀಲ್-ಸ್ಪರ್ಧಿಗಳು ಶಾಕ್
ಕಿರುತೆರೆಯ ಅತೀ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ 11ರ ಶೋ ಶುರುವಾಗಿದೆ. ಈಗಾಗಲೇ ದೊಡ್ಮನೆಗೆ 17 ಸ್ಪರ್ಧಿಗಳು ಕಾಲಿಟ್ಟಿದ್ದಾರೆ. ಬಿಗ್ ಬಾಸ್ ಶೋ ಪ್ರಸಾರಕ್ಕೂ ಮೊದಲೇ ದೊಡ್ಮನೆಯ ಸ್ಬರ್ಗ ಮತ್ತು ನರಕ ಝಲಕ್ ಅನ್ನು ವಾಹಿನಿ ರಿವೀಲ್ ಮಾಡಿದೆ.
ಕಳೆದ 10 ಸೀಸನ್ಗಳಿಂದ ಬಿಗ್ ಬಾಸ್ ಮನೆ ಒಂದರಕ್ಕಿಂತ ಒಂದು ಅದ್ಧೂರಿಯಾಗಿ ತೋರಿಸಲಾಗಿತ್ತು. ಈ ಬಾರಿಯು ಮತ್ತಷ್ಟು ವಿಜೃಂಭಣೆಯಿಂದ ಬಿಗ್ ಬಾಸ್ ಮನೆಯನ್ನು ರೆಡಿ ಮಾಡಲಾಗಿದೆ. ಹೊಸ ಸಮಾಚಾರ ಏನೆಂದರೆ, ಈ ಬಾರಿ ಸ್ವರ್ಗ ಮತ್ತು ನರಕ ಎಂದು 2 ಕಾನ್ಸೆಸ್ಟ್ಗಳು ಇರುತ್ತವೆ. ಈ ಬಾರಿ ಕೂಡ ಹೊಸ ಥೀಮ್ನೊಂದಿಗೆ ದೊಡ್ಮನೆಯನ್ನು ವಾಹಿನಿ ಸ್ವರ್ಗ ಮತ್ತು ನರಕದಂತೆಯೇ ಸಿದ್ಧಪಡಿಸಿದ್ದಾರೆ. ಸ್ವರ್ಗದ ಮನೆ ಐಷಾರಾಮಿಯಾಗಿದ್ರೆ, ಇತ್ತ ನರಕದ ಮನೆ ಭಯಾನಕವಾಗಿದೆ.
ಇದೆಲ್ಲದರ ನಡುವೆ ಸುದೀಪ್ ಸನ್ಗ್ಲಾಸ್ ಧರಿಸಿ `ಬಿಗ್ ಬಾಸ್’ ವೇದಿಕೆ ಸ್ಟೈಲೀಶ್ ಎಂಟ್ರಿ ಕೊಟ್ಟಿದ್ದಾರೆ. ಮೋಕ್ಷಿತಾ ಪೈ, ಭವ್ಯಾ ಗೌಡ, ಚೈತ್ರಾ ಕುಂದಾಪುರ, ಅನುಷಾ ರೈ, ಧರ್ಮ ಕೀರ್ತಿರಾಜ್, ಉಗ್ರಂ ಮಂಜು, ಧನರಾಜ್ ಆಚಾರ್, ಐಶ್ವರ್ಯಾ ಸಿಂದೋಗಿ, ಯಮುನಾ ಶ್ರೀನಿಧಿ, ತ್ರಿವಿಕ್ರಮ್, ಶೀಶಿರ್, ಗೋಲ್ಡ್ ಸುರೇಶ್, ಗೌತಮಿ, ಮಾನಸಾ, ರಂಜಿತ್ ಬಿಗ್ ಬಾಸ್ಗೆ ಎಂಟ್ರಿ ಕೊಟ್ಟಾಗಿದೆ.
- LATEST NEWS5 days ago
ಲಕ್ಷ್ಮೀ ಹೆಬ್ಬಾಳ್ಕರ್ಗೆ 1 ಕೆಜಿ ಬಂಗಾರದ ಆಫರ್ ನೀಡಿದ ಮಾಜಿ ಸಚಿವ
- LATEST NEWS6 days ago
ಸೆಪ್ಟಂಬರ್ 29 ರಿಂದ ಆಕಾಶದಲ್ಲಿ ಎರಡು ಚಂದ್ರ ಗೋಚರ..! ಏನಿದು ವಿಸ್ಮಯ..?
- LATEST NEWS6 days ago
ಮಂಗಳೂರು: ಕಾಸ್ಮೆಟಿಕ್ ಸರ್ಜರಿ ವೇಳೆ ಯುವಕ ಮೃ*ತ್ಯು
- LATEST NEWS6 days ago
ಬಜೆಟ್ ಬೆಲೆಯ ಐಫೋನ್ ಹುಡುಕುತ್ತಿದ್ದೀರಾ? ಸದ್ಯದಲ್ಲೇ ಬರಲಿದೆ iPhone SE4