Connect with us

    FILM

    ಸುದೀಪ್ ಮಗಳು ಸಾನ್ವಿ ಬಗ್ಗೆ ಯಾಕಿಷ್ಟು ಟ್ರೋಲ್? ಅವರು ಮಾಡಿದ ತಪ್ಪೇನು?

    Published

    on

    ಕಿಚ್ಚ ಸುದೀಪ್ ಅವರ ಮಗಳು ಸಾನ್ವಿ ಸಾಕಷ್ಟು ಟ್ರೋಲ್ ಆಗುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರ ಬಗ್ಗೆಯೇ ಚರ್ಚೆಗಳು ನಡೆಯುತ್ತಿವೆ. ಹಾಗಾದರೆ, ಏಕಾಏಕಿ ಸುದೀಪ್ ಮಗಳ ಮೇಲೆ ನೆಟ್ಟಿಗರು ಕೋಪಗೊಂಡಿದ್ದು ಏಕೆ? ಅವರು ಮಾಡಿದ ತಪ್ಪೇನು? ಆ ಎಲ್ಲಾ ಪ್ರಶ್ನೆಗಳಿಗೆ ಈ ಸ್ಟೋರಿಯಲ್ಲಿ ಉತ್ತರ ಸಿಗಲಿದೆ. ಸುದೀಪ್ ಅವರು ಈ ವಿಚಾರವಾಗಿ ಏನಾದರೂ ಸ್ಪಷ್ಟನೆ ನೀಡುತ್ತಾರಾ ಎನ್ನುವ ಕುತೂಹಲವೂ ಇದೆ.

    ಘಟನೆ ಏನು?

    ಇತ್ತೀಚೆಗೆ ಜೀ ಕನ್ನಡದ ‘ಸರಿಗಮಪ’ ವೇದಿಕೆ ಮೇಲೆ ಕಿಚ್ಚ ಸುದೀಪ್, ಪತ್ನಿ ಪ್ರಿಯಾ ಹಾಗೂ ಮಗಳು ಸಾನ್ವಿ ಆಗಮಿಸಿದ್ದರು. ಈ ವೇಳೆ ಸಾನ್ವಿ ಅವರು ತಂದೆಗಾಗಿ, ‘ಜಸ್ಟ್ ಮಾತ್ ಮಾತಲ್ಲಿ..’ ಹಾಡನ್ನು ಸುಮಧುರವಾಗಿ ಹಾಡಿದರು. ಈ ಹಾಡಿನ ಬಳಿಕ ಅವರು ಸಂಪೂರ್ಣವಾಗಿ ಮಾತನಾಡಿದ್ದು ಇಂಗ್ಲಿಷ್​​ನಲ್ಲಿ. ‘ಪ್ರತಿವರ್ಷ’ ಎಂಬ ಶಬ್ದ ಬಿಟ್ಟು ಅವರು ಮತ್ತೆಲ್ಲಿಯೂ ಕನ್ನಡ ಶಬ್ದ ಮಾತನಾಡಿಲ್ಲ. ಇದು ಟ್ರೋಲ್​ಗೆ ಕಾರಣವಾದ ವಿಚಾರ.

    ಸುದೀಪ್ ಕನ್ನಡ ಪ್ರೀತಿ

    ಕಿಚ್ಚ ಸುದೀಪ್ ಅವರಿಗೆ ಕನ್ನಡದ ಮೇಲೆ ವಿಶೇಷ ಪ್ರೀತಿ ಇದೆ. ಬಿಗ್ ಬಾಸ್​ನಲ್ಲಿ ಕನ್ನಡಕ್ಕೆ ಗೌರವ ನೀಡದ ಸಂದರ್ಭದಲ್ಲಿ ಅವರು ಇದನ್ನು ಪ್ರಶ್ನೆ ಮಾಡಿದ್ದರು ಎನ್ನಲಾಗಿದೆ. ಸ್ಪರ್ಧಿಗಳು ಇಂಗ್ಲಿಷ್ ಮಾತನಾಡಿದಾಗ ಅದನ್ನು ಪ್ರಶ್ನೆ ಮಾಡಬೇಕು ಮತ್ತು ಕನ್ನಡ ಬಳಕೆ ಹೆಚ್ಚುವಂತೆ ಆಗಬೇಕು ಎಂದು ಸುದೀಪ್ ಅವರು ಬಿಗ್ ಬಾಸ್ ಆಯೋಜಕರ ಬಳಿ ಒತ್ತಾಯಿಸಿದ್ದರು ಎನ್ನಲಾಗಿದೆ. ಪರಭಾಷಾ ಸಂದರ್ಶನಗಳಲ್ಲಿ ಯಾರಾದರೂ ‘ಕನ್ನಡ್’ ಎಂದರೆ ‘ಅದು ಕನ್ನಡ್ ಅಲ್ಲ ಕನ್ನಡ’ ಎಂದು ತಿದ್ದುವ ಕೆಲಸ ಮಾಡಿದ್ದಾರೆ. ಆದರೆ, ಕನ್ನಡ ರಿಯಾಲಿಟಿ ಶೋನಲ್ಲಿ ಮಗಳಿಗೇಕೆ ಅವರು ಕನ್ನಡ ಮಾತನಾಡುವಂತೆ ಒತ್ತಾಯಿಸಿಲ್ಲ ಎಂದು ಅನೇಕರು ಪ್ರಶ್ನೆ ಮಾಡುತ್ತಾ ಇದ್ದಾರೆ.

    ಸಮರ್ಥನೆ

    ಇನ್ನೂ ಕೆಲವು ಸಾನ್ವಿ ಅವರನ್ನು ಸಮರ್ಥಿಸಿಕೊಂಡಿದ್ದಾರೆ. ಸುದೀಪ್ ಮಗಳು ಸಾನ್ವಿ ಇಂಗ್ಲಿಷ್​ನಲ್ಲೇ ಮಾತನಾಡಿರಬಹುದು, ಆದರೆ, ಅವರು ಹಾಡಿದ್ದು ಕನ್ನಡದ ಹಾಡನ್ನೇ. ಈ ಕಾರಣಕ್ಕೆ ಸಂತೋಷ ವ್ಯಕ್ತಪಡಿಸಬೇಕು ಎಂದು ಕೆಲವರು ಹೇಳಿದ್ದಾರೆ. ಈ ಬಗ್ಗೆ ಚರ್ಚೆ ಜೋರಾಗಿದೆ.

    FILM

    ಅಬ್ಬಬ್ಬಾ! 31 ಕೋಟಿಗೆ ಅಪಾರ್ಟ್ಮೆಂಟ್ ಖರೀದಿಸಿದ್ದ ಅಮಿತಾಬ್ ಬಚ್ಚನ್  ಮಾರಿದ್ದೆಷ್ಟು ರೇಟ್‌ಗೆ ಗೊತ್ತಾ!?

    Published

    on

    ಮಂಗಳೂರು/ಮುಂಬೈ : ಬಿಗ್ ಬಿ ಅಮಿತಾಬ್ ಬಚ್ಚನ್   ಮುಂಬೈನ ಓಶಿವಾರಾದಲ್ಲಿರುವ ತಮ್ಮ  ಡುಪ್ಲೆಕ್ಸ್ ಅಪಾರ್ಟ್ಮೆಂಟ್ ಅನ್ನು ಮಾರಾಟ ಮಾಡಿದ್ದಾರೆ. ಭಾರೀ ಮೊತ್ತಕ್ಕೆ ಅಪಾರ್ಟ್ಮೆಂಟ್ ಮಾರಾಟವಾಗಿದೆ. ಹೌದು, 31 ಕೋಟಿ ಕೊಟ್ಟು ಅಪಾರ್ಟ್ಮೆಂಟ್ ಖರೀದಿಸಿದ್ದ ಬಿಗ್ ಬಿ ಈಗ ಲಾಭ ಪಡೆದಿದ್ದಾರೆ.

    ಓಶಿವಾರಾದಲ್ಲಿ ಕ್ರಿಸ್ಟಲ್ ಗ್ರೂಪ್‌ನ ವಸತಿ ಸಮುಚ್ಚಯವಾದ ‘ದಿ ಅಟ್ಲಾಂಟಿಸ್‌’ನಲ್ಲಿ ಅಮಿತಾಬ್ ಅಪಾರ್ಟ್ಮೆಂಟ್ ಇದೆ. 2021ರ ಎಪ್ರಿಲ್‌ನಲ್ಲಿ ಈ ಅಪಾರ್ಟ್ಮೆಂಟ್ ಅನ್ನು ಅಮಿತಾಬ್ ಖರೀದಿಸಿದ್ದರು. ಅವರು 31 ಕೋಟಿ ಕೊಟ್ಟಿದ್ದರು. ಅದೇ ವರ್ಷ ನವೆಂಬರ್‌ನಲ್ಲಿ ನಟಿ ಕೃತಿ ಸನೋನ್‌ಗೆ ಭದ್ರತಾ ಠೇವಣಿ 60 ಲಕ್ಷ ಮತ್ತು ಮಾಸಿಕ 10 ಲಕ್ಷ ರೂ. ಬಾಡಿಗೆಗೆ ನೀಡಿದ್ದರು ಎನ್ನಲಾಗಿದೆ.

    ಇದನ್ನೂ ಓದಿ : ಮಹಿಳಾ ನಾಗಸಾಧ್ವಿಗಳು ಮುಟ್ಟಿನ ಸಮಯದಲ್ಲಿ ಏನು ಮಾಡುತ್ತಾರೆ ಗೊತ್ತಾ ?

    ಈಗ ಈ ಅಪಾರ್ಟ್ಮೆಂಟ್‌ನ್ನು  ಅಮಿತಾಬ್ ಬಚ್ಚನ್ 83 ಕೋಟಿಗೆ ಮಾರಾಟ ಮಾಡಿದ್ದಾರೆ ಎಂದು ವರದಿಗಳು ಹೇಳಿವೆ. ನೋಂದಣಿ ಮಹಾಪರಿವೀಕ್ಷಕ ಹಾಗೂ ಮುದ್ರಾಂಕ ಆಯುಕ್ತರ(ಐಜಿಆರ್) ಪ್ರಕಾರ, ಈ ಅಪಾರ್ಟ್ಮೆಂಟ್ ಅನ್ನು 83 ಕೋಟಿ ರೂ. ಗೆ ಮಾರಾಟ ಮಾಡಲಾಗಿದೆ.  ಈ ಮೂಲಕ ಅವರು ಶೇ.168ರಷ್ಟು ಲಾಭ ಪಡೆದಿದ್ದಾರೆ ಎಂದು ಹೇಳಲಾಗಿದೆ.

    ಅಂದ್ಹಾಗೆ ಮುಂಬೈನ ಓಶಿವಾರಾವು ಉತ್ತಮ ಮೂಲಭೂತ ಸೌಕರ್ಯ ಹೊಂದಿರುವ ಪ್ರದೇಶ. ಆಧುನಿಕ ಜೀವನಶೈಲಿಗೆ ತಕ್ಕ ಜಾಗ. ಉತ್ತಮ ರಸ್ತೆಗಳು, ಮೆಟ್ರೋ ಸಂಪರ್ಕಗಳನ್ನು ಹೊಂದಿದೆ.

    Continue Reading

    FILM

    ಚೂರಿ ಇರಿತ ಪ್ರಕರಣ : ಆಸ್ಪತ್ರೆಯಿಂದ ಸೈಫ್ ಆಲಿ ಖಾನ್ ಬಿಡುಗಡೆ

    Published

    on

    ಮಂಗಳೂರು/ಮುಂಬೈ : ಬಾಲಿವುಡ್ ನಟ ಸೈಫ್ ಆಲಿ ಖಾನ್ ಚೇತರಿಸಿಕೊಂಡಿದ್ದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಚೂರಿ ಇ*ರಿತಕ್ಕೊಳಗಾಗಿ ಗಂ*ಭೀರವಾಗಿ ಗಾ*ಯಗೊಂಡ ಸೈಫ್ ಆಲಿ ಖಾನ್‌ ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸೈಫ್ ಆಲಿ ಖಾನ್‌ಗೆ 2 ಸರ್ಜರಿ ಮಾಡಲಾಗಿದೆ. ಚಿಕಿತ್ಸೆಯಿಂದ ಚೇತರಿಸಿಕೊಂಡಿರುವ ಸೈಫ್ ಆಲಿ ಖಾನ್ ಇದೀಗ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

    ಸೈಫ್ ಪತ್ನಿ ಕರೀನಾ ಕಪೂರ್ ಖಾನ್, ತಾಯಿ ಶರ್ಮಿಳಾ ಠಾಗೂರ್ ಜೊತೆ ಬಾಂದ್ರಾ ಮನೆಗೆ ಮರಳಿದ್ದಾರೆ ಎಂದು ತಿಳಿದುಬಂದಿದೆ. ಸೈಫ್‌ಗೆ ಕೆಲ ತಿಂಗಳುಗಳ ಕಾಲ ವಿಶ್ರಾಂತಿಯ ಅಗತ್ಯವಿದೆ ಎನ್ನಲಾಗಿದೆ.

    ಇದನ್ನೂ ಓದಿ : ಹೊಸ ಲುಕ್‌ನಲ್ಲಿ ಮಹಾಕುಂಭಮೇಳದ ಸುಂದರಿ ‘ಮೊನಾಲಿಸಾ’

    ಗಾ*ಯ ಗುಣವಾಗಲು ಹಾಗೂ ಸೈಫ್ ಸಂಪೂರ್ಣ ಚೇತರಿಸಿಕೊಳ್ಳಲು ಕೆಲವು ಸಮಯ ಹಿಡಿಯಲಿದೆ. ಹೀಗಾಗಿ ವಿಶ್ರಾಂತಿ ಅಗತ್ಯವಿದೆ. ಇನ್ಫೆಕ್ಷನ್ ಆಗದಂತೆ ಎಚ್ಚರ ವಹಿಸಬೇಕು ಎಂದು ವೈದ್ಯರು ತಿಳಿಸಿದ್ದಾರೆ ಎನ್ನಲಾಗಿದೆ. ಸೈಫ್ ಅಲಿ ಖಾನ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ವೇಳೆ ಮುಂಬೈನ ಲೀಲಾವತಿ ಆಸ್ಪತ್ರೆ ಬಳಿ ಭಾರಿ ಪೊಲೀಸ್ ಭದ್ರತೆ ನಿಯೋಜನೆ ಮಾಡಲಾಗಿತ್ತು. ಅಲ್ಲದೇ, ಸೈಫ್ ಆಲಿ ಖಾನ್ ಮನೆ ಬಳಿಯೂ ಪೊಲೀಸರನ್ನು ನಿಯೋಜಿಸಲಾಗಿದೆ.

    Continue Reading

    FILM

    ಕಾಂತಾರ ಚಾಪ್ಟರ್ 1 ಗೆ ಸಂಕಷ್ಟ; ಎಡವಟ್ಟು ಮಾಡಿಕೊಂಡ್ರಾ ರಿಷಬ್ ಶೆಟ್ಟಿ!

    Published

    on

    ಬೆಂಗಳೂರು/ಮಂಗಳೂರು : ಚಂದನವನದ ಯಶಸ್ವಿ ಚಿತ್ರ ಕಾಂತಾರದ ಪ್ರೀಕ್ವೆಲ್‌ಗಾಗಿ ಸಿನಿರಸಿಕರು ಕಾಯುತ್ತಿರೋದು ಸುಳ್ಳಲ್ಲ. ಚಿತ್ರದ ಶೂಟಿಂಗ್ ಏನೋ ಭರದಿಂದ ಸಾಗುತ್ತಿದೆ. ಈ ನಡುವೆ ಚಿತ್ರತಂಡದ ಎಡವಟ್ಟಿಗೆ ದಂಡ ತೆರುವಂತಾಗಿದೆ.

    ಚಿತ್ರೀಕರಣದ ವೇಳೆ ಸಕಲೇಶಪುರ ಅರಣ್ಯದಲ್ಲಿ ಅಕ್ರಮವಾಗಿ ಶೂಟಿಂಗ್ ಸೆಟ್ ವಸ್ತುಗಳನ್ನು ಸುರಿದಿದ್ದಕ್ಕಾಗಿ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್ ಗೆ ಅರಣ್ಯ ಇಲಾಖೆ ಅಧಿಕಾರಿಗಳು 50,000 ರೂ. ದಂಡ ವಿಧಿಸಿದ್ದಾರೆ.

    ಇದನ್ನೂ ಓದಿ  : ಏನಿದು ಸಿಂಹಸ್ಥ ಕುಂಭಮೇಳ? ಇದರ ವಿಶೇಷತೆ ಏನು?

    ಸಕಲೇಶಪುರ ಅರಣ್ಯದ ಸರ್ವೇ ಸಂಖ್ಯೆ 131 ರ ಡೀಮ್ಡ್ ಫಾರೆಸ್ಟ್ ನಲ್ಲಿ ಚಿತ್ರೀಕರಣ ನಡೆಯುತ್ತಿದೆ. ಜನವರಿ 2 ರಿಂದ ಪ್ರೀಕ್ವೆಲ್‌ನ ಚಿತ್ರೀಕರಣ ಮಾಡಲಾಗುತ್ತಿದೆ. ಚಿತ್ರತಂಡ, ಶೂಟಿಂಗ್​ಗಾಗಿ ಗೋಮಾಳ ಜಾಗಕ್ಕೆ ಪರವಾನಗಿ ಪಡೆದಿದೆ. ಅರಣ್ಯ ಜಾಗದಲ್ಲಿ ಬೆಂಕಿ ಹಚ್ಚಿ ಪರಿಸರಕ್ಕೆ ಹಾನಿಮಾಡುತ್ತಿರುವ ಆರೋಪವನ್ನು ಗ್ರಾಮಸ್ಥರು ಮಾಡಿದ್ದು, ಚಿತ್ರತಂಡದ ನಡೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಗ್ರಾಮಸ್ಥರ ಆರೋಪದ ಬೆನ್ನಲ್ಲೇ ಅರಣ್ಯ ಇಲಾಖೆ ಚಿತ್ರತಂಡದ ವಿರುದ್ಧ ಕ್ರಮ ಕೈಗೊಂಡಿದೆ.

    Continue Reading

    LATEST NEWS

    Trending