Connect with us

DAKSHINA KANNADA

ಮಂಗಳೂರಿನ ಕೆಎಂಸಿ ಆಸ್ಪತ್ರೆಯಿಂದ ಮಣಿಪಾಲ್ comprehensive liver clinic ಪ್ರಾರಂಭ..

Published

on

ಕರಾವಳಿ ಕರ್ನಾಟಕದ ಮುಂಚೂಣಿಯ ಆರೋಗ್ಯ ಸೇವೆ ಪೂರೈಕೆದಾರರಾದ ಕೆಎಂಸಿ ಆಸ್ಪತ್ರೆ, ದೀರ್ಘಕಾಲದ ಲಿವರ್ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳ ಸಮಗ್ರ ಅಗತ್ಯಗಳನ್ನು ಪೂರೈಸಲು ಮಣಿಪಾಲ್ ಕಾಂಪ್ರೆಹೆನ್ಸಿವ್ ಲಿವರ್ ಕ್ಲಿನಿಕ್ (ಎಂಸಿಎಲ್ಸಿ) ಅನ್ನು ಪ್ರಾರಂಭಿಸಿದೆ.

ಮಂಗಳೂರು : ಕರಾವಳಿ ಕರ್ನಾಟಕದ ಮುಂಚೂಣಿಯ ಆರೋಗ್ಯ ಸೇವೆ ಪೂರೈಕೆದಾರರಾದ ಕೆಎಂಸಿ ಆಸ್ಪತ್ರೆ, ದೀರ್ಘಕಾಲದ ಲಿವರ್ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳ ಸಮಗ್ರ ಅಗತ್ಯಗಳನ್ನು ಪೂರೈಸಲು ಮಣಿಪಾಲ್ ಕಾಂಪ್ರೆಹೆನ್ಸಿವ್ ಲಿವರ್ ಕ್ಲಿನಿಕ್ (ಎಂಸಿಎಲ್ಸಿ) ಅನ್ನು ಪ್ರಾರಂಭಿಸಿದೆ. 

ಲಿವರ್ ಮಾನವ ದೇಹದಲ್ಲಿನ ಅತಿದೊಡ್ಡ ಅಂಗವಾಗಿದೆ, ದುರದೃಷ್ಟವಶಾತ್, ಇದನ್ನು ಸಾಮಾನ್ಯವಾಗಿ ನಿರ್ಲಕ್ಷಿಸಲಾಗುತ್ತದೆ ಮತ್ತು ದೀರ್ಘಕಾಲದ ಲಿವರ್ ಕಾಯಿಲೆಯಿಂದ ಕಾಲ ಕಳೆದಂತೆ ಹಂತಹoತವಾಗಿ ಲಿವರ್ ಕಾರ್ಯಗಳು ಕೆಡುವುದಕ್ಕೆ ದಾರಿಯಾಗಬಹುದು.

ಕನ್ಸಲ್ಟೆಂಟ್ ಗ್ಯಾಸ್ಟ್ರೋಎಂಟರಾಲಜಿಸ್ಟ್(ಪಚನಾoಗರೋಗಶಾಸ್ತ್ರ ಸಲಹಾತಜ್ಞರು) ಡಾ. ಅನುರಾಗ್ ಶೆಟ್ಟಿ ಅವರು ಸುದ್ದಿಗೋಷ್ಟಿಯಲ್ಲಿ  ಮಾತನಾಡಿ, “1,000 ರೂ. +ಜಿಎಸ್ಟಿಗಳಷ್ಟು ಕಡಿಮೆ ಶುಲ್ಕ ಪಾವತಿಸುವ ಮೂಲಕ ಕ್ಲಿನಿಕ್ ಅಡಿಯಲ್ಲಿ ನೋಂದಾಯಿಸಲಾದ ರೋಗಿಗಳು ಹೊರರೋಗಿ(ಒಪಿ) ಸಲಹಾಸೇವೆ, ಹೊರರೋಗಿ(ಒಪಿ) ವೈದ್ಯಕೀಯ ಕಾರ್ಯವಿಧಾನಗಳು, ಪ್ರಯೋಗಾಲಯ ಮತ್ತು ವಿಕಿರಣಶಾಸ್ತ್ರದ ತನಿಖೆಗಳು, ವಿಶೇಷ ವಾರ್ಡ್ಗಳು ಮತ್ತು ಶಸ್ತ್ರಚಿಕಿತ್ಸೆಗಳು ಸೇರಿದಂತೆ ರೋಗಿಗಳ ದಾಖಲಾತಿಗಳಲ್ಲಿ ರಿಯಾಯಿತಿಗಳು ಒಳಗೊಂಡಿರುವ ಬಹು ಲಾಭ ಒದಗಿಸುವ ಎಂಸಿಎಲ್ಸಿ ಕಾರ್ಡ್ ಸ್ವೀಕರಿಸುತ್ತಾರೆ” ಎಂದರು.

ಕೆಎಂಸಿ ಇಡೀ ಜಿಲ್ಲೆಯಲ್ಲಿ ಪಿಒಇಎಂ, ಇಎಸ್‌ಡಿ ಮತ್ತು ಲಿವರ್ ಕಸಿ ಸೌಲಭ್ಯಗಳನ್ನು ಪೂರೈಸುವ ಏಕೈಕ ಆಸ್ಪತ್ರೆಯಾಗಿದೆ.

ವಿಭಾಗವು ಅಂತರರಾಷ್ಟ್ರೀಯ ವೈದ್ಯಕೀಯ ಪ್ರಯೋಗಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದೆ ಮತ್ತು ನ್ಯಾಷನಲ್ ಬೋರ್ಡ್(ರಾಷ್ಟ್ರೀಯ ಮಂಡಳಿ), ನವದೆಹಲಿಯಿಂದ ಮಾನ್ಯತೆ ಪಡೆದ ಕರಾವಳಿ ಕರ್ನಾಟಕದ ಏಕೈಕ ಗ್ಯಾಸ್ಟ್ರೋಎಂಟರಾಲಜಿ ವಿಭಾಗವಾಗಿದೆ.

ಕ್ಲಿನಿಕ್ ಆರಂಭ ಕುರಿತು ಮುಖ್ಯ ಲಿವರ್ ಕಸಿ ಶಸ್ತ್ರಚಿಕಿತ್ಸಕ ಡಾ. ರಾಜೀವ್ ಲೋಚನ್ ಪ್ರತಿಕ್ರಿಯಿಸಿ, “ಕರಾವಳಿ ಕರ್ನಾಟಕ ಮತ್ತು ಉತ್ತರ ಕೇರಳದ ನೆರೆಹೊರೆಯ ವಲಯದಲ್ಲಿನ ದೀರ್ಘಕಾಲದ ಲಿವರ್ ಕಾಯಿಲೆಗಳು ಮತ್ತು ನಿರ್ಣಾಯಕ ಪಿತ್ತಜನಕಾಂಗಕ್ಕೆ ಸಂಬoಧಿಸಿದ ಸಮಸ್ಯೆಗಳಿಂದ ಬಳಲುತ್ತಿರುವ ರೋಗಿಗಳಿಗೆ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯಗಳು ಮತ್ತು ಆರೋಗ್ಯ ಸೇವೆಗಳನ್ನು ಒದಗಿಸುವ ಪ್ರಾಥಮಿಕ ಉದ್ದೇಶದಿಂದ ಮಣಿಪಾಲ್ ಸಮಗ್ರ ಲಿವರ್ ಕ್ಲಿನಿಕ್ ಅನ್ನು ಸ್ಥಾಪಿಸಲಾಗಿದೆ” ಎಂದರು.

ಕೆಎಂಸಿ ಆಸ್ಪತ್ರೆಯ ವೈದ್ಯಕೀಯ ಗ್ಯಾಸ್ಟ್ರೋಎಂಟರಾಲಜಿ ವಿಭಾಗದ ಮುಖ್ಯಸ್ಥ ಡಾ. ಬಿ ವಿ ತಂತ್ರಿ ಅವರು ಮಾತನಾಡಿ, “ಈ ಕಾಂಪ್ರೆಹೆನ್ಸಿವ್ ಲಿವರ್ ಕ್ಲಿನಿಕ್ ಪರಿಚಯಿಸುವುದರೊಂದಿಗೆ, ವಿವಿಧ ಲಿವರ್ ಕಾಯಿಲೆಗಳ ರೋಗಿಗಳಿಗೆ ನಮ್ಮ ಸೇವೆಗಳನ್ನು ಮತ್ತಷ್ಟು ಹೆಚ್ಚಿಸುವ ಗುರಿ ನಮ್ಮದು. ಇದು ನಮ್ಮ ಸಮುದಾಯದ ಆರೋಗ್ಯದ ಫಲಿತಾಂಶಗಳನ್ನು ಗಣನೀಯವಾಗಿ ಸುಧಾರಿಸುತ್ತದೆ ಎಂಬ ಭರವಸೆಯನ್ನು ನಾವು ಹೊಂದಿದ್ದೇವೆ” ಎಂದರು.

ಮoಗಳೂರಿನ ಕೆಎಂಸಿ ಆಸ್ಪತ್ರೆಯ ಪ್ರಾದೇಶಿಕ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಗೀರ್ ಸಿದ್ದಿಕಿ ಅವರು ಮಾತನಾಡಿ, “ಮಣಿಪಾಲ್ ಕಾಂಪ್ರೆಹೆನ್ಸಿವ್ ಲಿವರ್ ಕ್ಲಿನಿಕ್ ನಮ್ಮ ಸಮುದಾಯದ ಅದರಲ್ಲೂ ವಿಶೇಷವಾಗಿ ದೀರ್ಘಕಾಲದ ಲಿವರ್ ಕಾಯಿಲೆಗಳು ಮತ್ತು ಗಂಭೀರವಾದ ಲಿವರ್ ಸಂಬoಧಿತ ಸಮಸ್ಯೆಗಳಿಂದ ಬಳಲುತ್ತಿರುವವರಿಗೆ ಆರೋಗ್ಯದ ಫಲಿತಾಂಶ ಸುಧಾರಿಸುವಲ್ಲಿ ಮಹತ್ವದ ಪಾತ್ರ ವಹಿಸಲಿದೆ ಎಂಬ ವಿಶ್ವಾಸ ನಮಗಿದೆ” ಎಂದರು

DAKSHINA KANNADA

ಎರಡು ಲಾರಿಗಳ ಮಧ್ಯೆ ಅಪಘಾತ; ಚಾಲಕ ಗಂಭೀ*ರ

Published

on

ಮಂಗಳೂರು: ಬೈಕಂಪಾಡಿ ಹೋಟೆಲ್ ಶ್ರೀ ದ್ವಾರದ ಬಳಿ ಲಾರಿಗಳೆರಡರ ನಡುವೆ ಅಪಘಾತ ಸಂಭವಿಸಿ ಲಾರಿ ಚಾಲಕ ಗಂಭಿರ ಗಾಯಗೊಂಡ ಘಟನೆ ನಡೆದಿದೆ. ಒಂದು ಲಾರಿಯೊಂದು ಗ್ರಾನೈಟ್ ಅಂಗಡಿಯೊಳಗೆ ನುಗ್ಗಿದ್ದು, ಅಪಾರ ಮೌಲ್ಯದ ಗ್ರಾನೈಟ್‌ ಹಾನಿಗೊಂಡಿದೆ.

ಮುಂದೆ ಓದಿ..; ಪುತ್ತೂರು : ಧರೆಗುರುಳಿದ ಬೃಹದಾಕಾರದ ಮರ; ಮಾವಿನಕಾಯಿಗಾಗಿ ಮುಗಿಬಿದ್ದ ಜನ!

accident

ಲಾರಿ ಸಾಗಾಟ ಮಾಡುತ್ತಿದ್ದ ಲಾರಿ ಅಪಘಾತದಿಂದ ನಜ್ಜುಗುಜ್ಜಾಗಿದೆ. ಇನ್ನು ಇದೇ ಭಾಗದಲ್ಲಿ ನಿತ್ಯವೂ ಮಹಿಳೆಯರು ಮೀನ ಮಾರಾಟ ಮಾಡುತ್ತಿದ್ದರು. ಅದೃಷ್ಟವಶಾತ್ ಇದೀಗ ಭಾರೀ ಅನಾಹುತ ತಪ್ಪಿದೆ.

 

Continue Reading

DAKSHINA KANNADA

ದೊಡ್ಡವರ ಜಗಳದಲ್ಲಿ ಇಹಲೋಕ ತಜ್ಯಿಸಿದ 3 ರ ಕಂದಮ್ಮ…

Published

on

ಮಂಗಳೂರು (ಬೆಳಗಾವಿ): ಅದು ಎರಡು ಕುಟುಂಬಗಳ ನಡುವೆ ನಡೆದಿರೋ ಜಗಳ . ಆದ್ರೆ ಆ ಜಗಳಕ್ಕೆ ಏನೂ ಅರಿಯದ ಮೂರು ವರ್ಷದ ಪುಟ್ಟ ಮಗು ಬಲಿಯಾಗಿದೆ. ಪಾಪಿಯೊಬ್ಬ ಮಗುವಿನ ಎದೆಗೆ ಕಾಲಿಟ್ಟು ಮಗುವಿನ ಉಸಿರು ನಿಲ್ಲಿಸಿದ್ದಾನೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿ ಎಂಬ ಗ್ರಾಮದಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ. ದೊಡ್ಡವರ ಜಗಳದಲ್ಲಿ ಶ್ರೀನಿಧಿ ಕಾಡಪ್ಪ ಕಾಳಾಪಾಟೀಲ್ ಎಂಬ ಮೂರು ವರ್ಷದ ಮಗು ಹತವಾಗಿದೆ. ಜೋತಿಭಾ ತುಕಾರಾಮ ಬಾಬಬರ ಎಂಬಾತ ಮಗುವಿನ ಜೀವಕ್ಕೆ ಕುತ್ತು ತಂದ ಆರೋಪಿಯಾಗಿದ್ದಾನೆ.
ಹಣಕಾಸಿನ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಜಗಳ ನಡೆದಿತ್ತು. ಈ ವೇಳೆ ಜಗಳ ತಾರಕ್ಕೇರಿದಾಗ ಸಿಟ್ಟಿನಲ್ಲಿ ಜೋತಿಬಾ ತುಕಾರಾಮ ಬಾಬಾಬರ ಮಗುವಿನ ಎದೆ ಮೇಲೆ ಕಾಲಿಟ್ಟು ನಿಂತಿದ್ದಾನೆ. ಈ ವೇಳೆ ಮಗುವನ್ನು ಆತನ ಕಾಲಿನ ಅಡಿಯಿಂದ ತೆಗೆಯಲು ಮಗುವಿನ ತಾಯಿ ಯತ್ನಿಸಿದ್ದಾಳೆ . ಆ ವೇಳಗೆ ಇನ್ನಷ್ಟು ಗಟ್ಟಿಯಾಗಿ ಕಾಲಿನಿಂದ ಮಗುವಿನ ಎದೆಗೆ ಕಾಲಿನಿಂದ ಒತ್ತಿದ ಕಾರಣ ಮಗು ಉಸಿರು ನಿಲ್ಲಿಸಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಗುವಿನ ದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಆರೋಪಿ ಸ್ಥಳದಿಂದ ಎಸ್ಕೇಪ್ ಆಗಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ.

Continue Reading

DAKSHINA KANNADA

ಅಮೇರಿಕಾದಲ್ಲಿ ಕಾರು ಅಪಘಾತ…! ಮೂವರು ಭಾರತೀಯ ಮಹಿಳೆಯರ ಸಾ*ವು…!

Published

on

ನ್ಯೂಯಾರ್ಕ್‌ : ಅಮೇರಿಕಾದಲ್ಲಿ ನಡೆದ ಕಾರು ಅಪಘಾತದಲ್ಲಿ ಭಾರತೀಯ ಮೂಲದ ಮೂವರು ಮಹಿಳೆಯರು ಇಹಲೋಕ ತ್ಯಜಿಸಿದ್ದಾರೆ. ಕೌಂಟಿಯ ಹೆದ್ದಾರಿಯ ಸೇತುವೆಯೊಂದರ ಮೇಲೆ ವೇಗವಾಗಿ ಕಾರು ಚಲಾಯಿಸಿದ ಕಾರಣ ಈ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿ ಉತ್ತರದ ಕಡೆಗೆ ಕಾರು ಪ್ರಯಾಣಿಸುತ್ತಿದ್ದು, ಎಲ್ಲಾ ಲೇನ್‌ಗಳನ್ನು ದಾಟಿ, ಹಂಪ್‌ ಮೇಲೆ ವೇಗವಾಗಿ ಏರಿತ್ತು. ಈ ಕಾರಣದಿಂದ ಕನಿಷ್ಟ 20 ಅಡಿಗಳಷ್ಟು ಮೇಲಕ್ಕೆ ಹಾರಿ ಸೇತುವೆಯ ಮುಂದೆ ಇದ್ದ ಮರಗಳಿಗೆ ಕಾರು ಅಪ್ಪಳಿಸಿದೆ. ಗುಜಾರಾತ್ ಮೂಲದ ಮೂವರು ಮಹಿಳೆಯರು ಈ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಗುಜರಾತ್‌ನ ಆನಂದ್ ಜಿಲ್ಲೆಯ ರೇಖಾಬೆನ್‌ ಪಟೇಲ್ , ಸಂಗೀತಾಬೆನ್ ಪಟೇಲ್ ಹಾಗೂ ಮನೀಶಾಬೆನ್ ಪಟೇಲ್‌ ಅವರು ಇಹಲೋಕ ತ್ಯಜಿಸಿದವರಾಗಿದ್ದಾರೆ.

 

ಕಾರು ನಿಗದಿಪಡಿಸಿದ ವೇಗದ ಮಿತಿಗಿಂತ ಹೆಚ್ಚು ವೇಗದಲ್ಲಿತ್ತು ಎಂದು ಅಲ್ಲಿನ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಅಪಘಾತದ ಪ್ರಮಾಣ ಎಷ್ಟಿತ್ತು ಮತ್ತು ಕಾರು ಎಷ್ಟು ಎತ್ತರಕ್ಕೆ ಹಾರಿತ್ತು ಅನ್ನೋದಿಕ್ಕೆ ಮರದ ಮೇಲಿರುವ ಕಾರಿನ ಅವಶೇಷಗಳು ಸಾಕ್ಷಿ ಎಂದು ಅವರು ಹೇಳಿದ್ದಾರೆ. ಮರದ ಮೇಲೆ ಬಿದ್ದ ಕಾರು ಛಿದ್ರಗೊಂಡು ಕಾರಿನ ಅವಶೇಷಗಳು ಚೆಲ್ಲಾಪಿಲ್ಲಿಯಾಗಿತ್ತು.


ದಕ್ಷಿಣ ಕೆರೊಲಿನಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ತಕ್ಷಣ ಸ್ಥಳಕ್ಕೆ ರಕ್ಷಣಾ ತಂಡಗಳು, ಪೊಲೀಸರು ಆಗಮಿಸಿದ್ದಾರೆ. ಅಪಘಾತದಲ್ಲಿ ಓರ್ವ ಬದುಕಿ ಉಳಿದಿದ್ದು, ಆತನ ಸ್ಥಿತಿ ಗಂಭೀರವಾಗಿದ್ದು ಈಗಲೇ ಏನೂ ಹೇಳಲು ಆಗದ ಪರಿಸ್ಥಿತಿಯಲ್ಲಿದ್ದಾನೆ. ವಾಹನ ಅಪಘಾತವಾದ ತಕ್ಷಣ ಅದರಲ್ಲಿದ್ದ ತಾಂತ್ರಿಕ ವ್ಯವಸ್ಥೆಯ ಕಾರಣ ತಕ್ಷಣ ಕುಟುಂಬ ಸದಸ್ಯರಿಗೆ ಅಲರ್ಟ್‌ ಮೆಸೆಜ್ ರವಾನೆಯಾಗಿತ್ತು. ಹೀಗಾಗಿ ತಕ್ಷಣ ಕುಟುಂಬಸ್ಥರು ಕೂಡಾ ತಕ್ಷಣ ಸ್ಥಳಕ್ಕೆ ಆಗಮಿಸಿದ್ದಾರೆ.

Continue Reading

LATEST NEWS

Trending