LATEST NEWS
ಕೊಡೇರಿ ನಾಡದೋಣಿ ದುರಂತ ಮೂವರು ಮೀನುಗಾರರ ಮೃತ ದೇಹ ಪತ್ತೆ ..ಓರ್ವ ನಾಪತ್ತೆ
ಉಡುಪಿ : ಕೊಡೇರಿ ನಾಡದೋಣಿ ದೋಣಿ ದುರಂತದಲ್ಲಿ ನಾಪತ್ತೆಯಾಗಿದ್ದ ನಾಲ್ವರು ಮೀನುಗಾರರಲ್ಲಿ ಇಂದು ಇಬ್ಬರು ಮೀನುಗಾರರ ಶವ ಪತ್ತೆಯಾಗಿದೆ. ಇದರೊಂದಿಗೆ ನಾಲ್ವರಲ್ಲಿ ಮೂವರು ಮೃತದೇಹ ಪತ್ತೆಯಾದಂತಾಗಿದೆ.
ಇಂದು ಪತ್ತೆಯಾದ ಎರಡು ಮೃತದೇಹಗಳಲ್ಲಿ ಲಕ್ಷ್ಮಣ ಖಾರ್ವಿ ಹಾಗೂ ಶೇಖರ ಖಾರ್ವಿ ಅವರದ್ದೆಂದು ಗುರುತಿಸಲಾಗಿದೆ. ಈ ಮೃತ ದೇಹ ಘಟನೆ ನಡೆದ ಸ್ಥಳವಾದ ಕೊಡೇರಿ ಅಳಿವೆ ಬಾಗಿಲಿನಿಂದ ದಕ್ಷಿಣದ ಸುಮಾರು 5 ಕಿ.ಮೀ. ದೂರದಲ್ಲಿರುವ ಹಾದರಗೋಳಿ ಎಂಬಲ್ಲಿ ಪತ್ತೆಯಾಗಿದೆ. ನಾಡದೋಣಿ ಬಂಡೆಗೆ ಡಿಕ್ಕಿಯಾಗಿ ನಾಲ್ವರು ನಾಪತ್ತೆಯಾಗಿದ್ದರು, ನಾಲ್ವರ ಪೈಕಿ ನಾಗರಾಜ ಖಾರ್ವಿ, ಲಕ್ಷ್ಮಣ ಖಾರ್ವಿ, ಶೇಖರ ಖಾರ್ವಿ ಶವ ಪತ್ತೆಯಾಗಿದ್ದು, ಮಂಜುನಾಥ ಖಾರ್ವಿ ಅವರ ಶವ ಇನ್ನೂ ಪತ್ತೆಯಾಗಿಲ್ಲ.
ಈ ನಡುವೆ ಕೊಡೇರಿ ನಾಡದೋಣಿ ದುರಂತ ಪ್ರಕರಣ ನಡೆದ ಸ್ಥಳದಿಂದ ಅರ್ಧ ಕಿ.ಮೀ ದೂರದಲ್ಲಿ ಶವ ತೆಲುತ್ತಿರುವ ದೃಶ್ಯ ಡ್ರೋನ್ ಕ್ಯಾಮರಕ್ಕೆ ಸೆರೆಯಾಗಿದೆ. ಆದರೆ ಕಡಲು ಪ್ರಕ್ಷ್ಯುಬ್ದವಾಗಿರುವ ಹಿನ್ನಲೆಯಲ್ಲಿ ಕಾರ್ಯಾಚರಣೆಗೆ ತೊಡಕು ಉಂಟಾಗಿದೆ.
ಹವಮಾನ ಇಲಾಖೆ ಈಗಾಗಲೇ ಕಡಲು ಪ್ರಕ್ಷುಬ್ದಗೊಂಡಿರುವ ಬಗ್ಗೆ ಎಚ್ಚರಿಕೆ ನೀಡಿತ್ತು. ಈ ಹಿನ್ನಲೆ ನಾಪತ್ತೆಯಾಗಿರುವ ಮೀನುಗಾರರ ಹುಡುಕಾಟಕ್ಕೆ ಕಡಲಿಗಿಳಿಯಲು ಅಸಾಧ್ಯವಾಗಿದೆ. ಈ ಹಿನ್ನಲೆ ಕೋಸ್ಟ್ ಗಾರ್ಡ್ ಸಿಬ್ಬಂದಿಗಳು ಸಮುದ್ರದ ದಡದಿಂದ ಡ್ರೋನ್ ಮೂಲಕ ಹುಡುಕಾಟ ನಡೆಸಿದ್ದರು. ಈ ವೇಳೆ ಶವ ಪತ್ತೆಯಾಗಿದೆ.
ನಾಳೆ ಇನ್ನಷ್ಟು ಕಾರ್ಯಾಚರಣೆ ಚುರುಕುಗೊಳ್ಳಲಿದೆ. ಇಲ್ಲಿಯವರೆಗೆ ನಾಪತ್ತೆಯಾಗಿರುವ ನಾಲ್ವರ ಪೈಕಿ ಈವರೆಗೆ ದಡ ಸೇರಿದ್ದು 3 ಶವ. ಆದರೆ ಡ್ರೋಣ್ ಕಾರ್ಯಾಚರಣೆಯಲ್ಲಿ ಕಣ್ಣೆದುರು ಶವ ಕಾಣಿಸುತ್ತಿದ್ದರೂ ಸಮುದ್ರಕ್ಕಿಳಿದು ಕಾರ್ಯಾಚರಣೆ ನಡೆಸಲು ಅಸಾಧ್ಯವಾದ ಸ್ಥಿತಿ ಬಂದೊದಗಿದೆ. ಇದು ಕೊಡೇರಿ ದೋಣಿ ದುರಂತದ ಭಯಾನಕ ಸ್ಥಿತಿ ಕಡಲಿನ ಅಲೆಯಲ್ಲಿ ಎರಡು ಶವಗಳು ಸಿಕ್ಕಿಬಿದ್ದರೂ ಕಡಲ ಮಕ್ಕಳಿಗೆ ತಮ್ಮವರ ಶವಗಳನ್ನು ಮೇಲೆ ತರಲಾಗದೆ ಅಸಹಾಯಕ ಸ್ಥಿತಿಯಲ್ಲಿದ್ದಾರೆ.
DAKSHINA KANNADA
ಹಿಂಜಾವೇ ಮುಖಂಡ ಅಕ್ಷಯ್ ರಜಪೂತ್ ಹಾವೇರಿಗೆ ಗಡಿಪಾರು..!
ಪುತ್ತೂರು: ಹಿಂದೂ ಜಾಗರಣ ವೇದಿಕೆಯ ಮುಖಂಡ ಅಕ್ಷಯ್ ರಜಪೂತ್ ರವರನ್ನು (ನಿನ್ನೆ) ಎ.25ರಂದು ರಾತ್ರಿ ಗಡಿಪಾರು ಮಾಡಲಾಗಿದೆ. ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ಸಮಿತಿಯ ಸದಸ್ಯ ಅಕ್ಷಯ್ ರಜಪೂತ್ ರವರನ್ನು ತಡರಾತ್ರಿ ವೇಳೆ ಅವರ ಮನೆಯಲ್ಲಿ ಬಂಧಿಸಿ ಇದೀಗ ಅವರನ್ನು ಹಾವೇರಿ ಜಿಲ್ಲೆಗೆ ಗಡಿಪಾರು ಮಾಡಲಾಗಿದೆ.
ಮುಂದೆ ಓದಿ..; ಪತ್ನಿಗೆ ಮೆಸೇಜ್ ಮಾಡಿದ್ದಕ್ಕೆ ಖಾದರ್ ಭಾಷಾನನ್ನು ಭೀಕರವಾಗಿ ಹ*ತ್ಯೆಗೈದ ಆಂಜನೇಯ ಗುಡಿಯ ಪೂಜಾರಿ..!
ಅಕ್ಷಯ್ ಗಡಿಪಾರನ್ನು ಹಿಂದೂ ಜಾಗರಣ ವೇದಿಕೆ ತೀವ್ರವಾಗಿ ಖಂಡಿಸಿದ್ದು ಕಾಂಗ್ರೆಸ್ಸಿನ ಹಿಂದೂ ವಿರೋಧೀ ನೀತಿ ಎಂದು ಹೇಳಿದ್ದಾರೆ.
LATEST NEWS
ಪ್ರಿಯಕರನ ಮೇಲೆ ಆ್ಯ*ಸಿಡ್ ಎರಚಿದ ಯುವತಿ!
ಮಂಗಳೂರು/ ಉತ್ತರ ಪ್ರದೇಶ : ಪ್ರೀತಿಸಿ ಮೋಸ ಮಾಡಿದರೆ ಯುವಕರು ಪ್ರೇಯಸಿಯನ್ನು ಹ*ತ್ಯೆ ಮಾಡುವುದನ್ನು, ಆ್ಯಸಿ*ಡ್ ಎರಚುವ ಸುದ್ದಿಗಳನ್ನು ಕೇಳುತ್ತೇವೆ. ಆದರೆ, ಉತ್ತರ ಪ್ರದೇಶದಲ್ಲಿ ವಿಭಿನ್ನವಾದ ಘಟನೆ ನಡೆದಿದೆ. ಇಲ್ಲಿ ಪ್ರೇಯಸಿಯೊಬ್ಬಳು ತನ್ನ ಪ್ರಿಯಕರನ ಮೇಲೆ ಆ್ಯ*ಸಿಡ್ ದಾಳಿ ನಡೆಸಿದ್ದಾರೆ. ಮಂಗಳವಾರ(ಏ.23) ಬಲಿಯಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.
ಕೃತ್ಯ ಎಸಗಿದ್ದು ಯಾಕೆ?
ಯುವತಿ ಈ ರೀತಿ ದುಷ್ಕೃತ್ಯ ಮೆರೆಯಲು ಕಾರಣ ‘ಪ್ರೀತಿ’. ಆಕೆಯ ಪ್ರಿಯತಮ ಪ್ರೀತಿಸಿ ಮೋಸ ಮಾಡಿ ಮತ್ತೊಬ್ಬಳನ್ನು ಮದುವೆಯಾಗಲು ಮುಂದಾಗಿದ್ದ ಎನ್ನಲಾಗಿದೆ. ಹೀಗಾಗಿ ಯುವತಿ ಆತನ ಮುಖದ ಮೇಲೆ ಆ್ಯ*ಸಿಡ್ ಎರಚಿದ್ದಾಳೆ. ಮದುವೆಯ ಮೆರವಣಿಗೆಯ ವೇಳೆ ಯುವತಿ ವೇಷ ಮರೆಸಿಕೊಂಡು ಬಂದು ವರನ ಮುಖಕ್ಕೆ ಆ್ಯಸಿಡ್ ಎರಚಿದ್ದಾಳೆ ಎನ್ನಲಾಗಿದೆ.
ಆ್ಯ*ಸಿಡ್ ಬಿದ್ದ ಪರಿಣಾಮ ಗಾಯಗೊಂಡ ಯುವಕನನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಯುವಕನಿಗೆ ಆ್ಯ*ಸಿಡ್ ಎರಚಿದ ಯುವತಿಯನ್ನು ಹಿಡಿದ ಮಹಿಳೆಯರು ಸರಿಯಾಗಿ ಥಳಿಸಿದ್ದು, ಪೊಲೀಸರಿಗೆ ಒಪ್ಪಿಸಿದ್ದಾರೆ. ಯುವಕನ ತಾಯಿಯ ದೂರಿನ ಆಧಾರದ ಮೇಲೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 326 ಬಿ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಬಲಿಯಾದ ಪೊಲೀಸ್ ಅಧಿಕಾರಿ ಮುನ್ನಾ ಲಾಲ್ ಯಾದವ್ ತಿಳಿಸಿದ್ದಾರೆ.
ಇದನ್ನೂ ಓದಿ : ಪತ್ನಿಗೆ ಮೆಸೇಜ್ ಮಾಡಿದ್ದಕ್ಕೆ ಖಾದರ್ ಭಾಷಾನನ್ನು ಭೀಕರವಾಗಿ ಹ*ತ್ಯೆಗೈದ ಆಂಜನೇಯ ಗುಡಿಯ ಪೂಜಾರಿ..!
ಯುವಕ – ಯುವತಿ ಪರಸ್ಪರ ಪ್ರೀತಿಸಿದ್ದರು. ದೈಹಿಕ ಸಂಪರ್ಕ ಹೊಂದಿದ್ದರು. ಆದರೆ, ಇವರ ಸಂಬಂಧವನ್ನು ಎರಡೂ ಕುಟುಂಬ ವಿರೋಧಿಸಿತ್ತು ಎನ್ನಲಾಗಿದೆ. ಏಪ್ರಿಲ್ 22 ರಂದು ಯುವಕನ ಮನೆಯವರು ಬೇರೆ ಯುವತಿಯೊಂದಿಗೆ ಮದುವೆ ಮಾಡಲು ಸಿದ್ಧತೆ ಮಾಡಿದ್ದರು. ಇದರಿಂದ ಕೋಪಗೊಂಡ ಯುವತಿ ಮದುವೆ ಮೆರವಣಿಗೆಯಲ್ಲಿ ಈ ಕೃತ್ಯ ಎಸಗಿದ್ದಾಳೆ ಎಂದು ವರದಿಯಾಗಿದೆ.
LATEST NEWS
ಪತ್ನಿಗೆ ಮೆಸೇಜ್ ಮಾಡಿದ್ದಕ್ಕೆ ಖಾದರ್ ಭಾಷಾನನ್ನು ಭೀಕರವಾಗಿ ಹ*ತ್ಯೆಗೈದ ಆಂಜನೇಯ ಗುಡಿಯ ಪೂಜಾರಿ..!
ರಾಯಚೂರು : ಪತ್ನಿಗೆ ಮೆಸೇಜ್ ಮಾಡಿದ ಕಾರಣಕ್ಕೆ ಹನುಮ ಜಯಂತಿಯಂದು ಉಗ್ರ ರೂಪ ತಾಳಿದ ಆಂಜನೇಯ ಗುಡಿ ಪೂಜಾರಿ ಆ ಯುವಕನನ್ನು ಬರ್ಬರವಾಗಿ ಕೊ*ಲೆಗೈದಿರುವ ಘಟನೆ ರಾಯಚೂರಿನ ತುಗ್ಗಲದಿನ್ನಿ ಗ್ರಾಮದಲ್ಲಿ ನಡೆದಿದೆ.
ಖಾದರ್ ಭಾಷಾ (28) ಕೊ*ಲೆಯಾದ ವ್ಯಕ್ತಿ. ಮಾರುತಿ ಹ*ತ್ಯೆಗೈದ ಪೂಜಾರಿ. ಇಬ್ಬರೂ ಮಸ್ಕಿ ತಾಲೂಕಿನ ಬಳಗಾನೂರು ಗ್ರಾಮದ ನಿವಾಸಿಗಳು. ಆದರೆ, ಖಾದರ್ ಭಾಷಾ ಮಾರುತಿ ಪತ್ನಿ ಮೇಲೆ ಕಣ್ಣು ಹಾಕಿದ್ದಾನೆ. ಹೀಗಾಗಿ ಮಾರುತಿ, ಖಾದರ್ ಭಾಷಾನ ಕಣ್ಣು ಕಿತ್ತು ಹಾಕಿ, ಮುಖದ ಗುರುತು ಸಿಗದಂತೆ ಕೊಚ್ಚಿ ಭೀ*ಭತ್ಸವಾಗಿ ಹ*ತ್ಯೆ ಮಾಡಿದ್ದಾನೆ.
ಕೊ*ಲೆಗೈದ ಮಾರುತಿ ಖುದ್ದಾಗಿ ಠಾಣೆಗೆ ಬಂದು ಶರಣಾಗಿದ್ದಾನೆ. ಈ ಕೊ*ಲೆಯಲ್ಲಿ ಇತರರೂ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಬಳಗಾನೂರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.
ಇದನ್ನೂ ಓದಿ : ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಬ್ಯಾಗ್ ಪರಿಶೀಲಿಸಿದ ಕಸ್ಟಮ್ಸ್ ಅಧಿಕಾರಿಗಳಿಗೆ ಶಾಕ್; ಅದರಲ್ಲಿತ್ತು 10 ಅನಕೊಂಡಾ!