LATEST NEWS
ಶೀಘ್ರದಲ್ಲೇ ಎತ್ತಿನಹೊಳೆ ನೀರು ಕೋಲಾರ ಜಿಲ್ಲೆಗೆ: ಸಚಿವ ಮಾಧುಸ್ವಾಮಿ
ಕೋಲಾರ: ‘ಕೆ. ಸಿ. ವ್ಯಾಲಿ ಯೋಜನೆ ಮೂಲಕ ರಾಜ್ಯದಲ್ಲಿ ಅತೀ ಹೆಚ್ಚು ಅಂದರೆ 8 ಟಿಎಂಸಿ ಅಡಿ ನೀರನ್ನು ಕೋಲಾರ ಜಿಲ್ಲೆಗೆ ಹರಿಸಲಾಗಿದೆ.
ಜಿಲ್ಲೆಯ ರೈತರು ಅಗತ್ಯವಾದ ಭೂಮಿಯನ್ನು ಬಿಟ್ಟು ಕೊಟ್ಟರೆ ಶೀಘ್ರದಲ್ಲಿ ಎತ್ತಿನಹೊಳೆ ನೀರನ್ನು ಜಿಲ್ಲೆಗೆ ಹರಿಸಲಾಗುವುದು” ಎಂದು ಸಣ್ಣ ನೀರಾವರಿ ಸಚಿವ ಜೆ. ಸಿ. ಮಧುಸ್ವಾಮಿ ಹೇಳಿದರು.
ಮುಳಬಾಗಿಲು ತಾಲ್ಲೂಕಿನ ಜಮ್ಮನಹಳ್ಳಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಹೊಳಲಿ ಕೆರೆ ಪಂಪ್ಹೌಸ್ನಿಂದ ನೀರನ್ನು ಎತ್ತುವಳಿ
ಮಾಡಿ 32 ಕೆರೆಗಳನ್ನು ತುಂಬಿಸುವ ಕಾಮಗಾರಿ ಮತ್ತು ಕೆ. ಸಿ. ವ್ಯಾಲಿ ಯೋಜನೆಯ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಸಚಿವರು ಮಾತನಾಡಿದರು.
“ಕೆ. ಸಿ. ವ್ಯಾಲಿ ನೀರಿಂದ ಯಾವುದೇ ರೀತಿಯ ತೊಂದರೆಯಿಲ್ಲ. ಎಲ್ಲಾ ವಿಧದ ಪರೀಕ್ಷೆಗಳನ್ನು ನಡೆಸಿ ಸಂಸ್ಕರಿಸಿ, ನೀರನ್ನು ಕೆರೆಗಳಿಗೆ ತುಂಬಿಸಲಾಗುತ್ತಿದೆ.
ಈ ನೀರನ್ನು ಕುಡಿಯಬಾರದು. ನೀರನ್ನು ಭೂಮಿಯಲ್ಲಿ ಇಂಗಿಸಿ ನಂತರ ಬೋರ್ ವೆಲ್ ಮೂಲಕ ಹೊರತೆಗೆದು ಬಳಸಬೇಕು. ಕೆರೆಗಳಿಗೆ ಚರಂಡಿ ನೀರನ್ನು ಹರಿಸದೆ ಇಂಗುಗುಂಡಿಗಳ ಮೂಲಕ ಇಂಗಿಸಬೇಕು” ಎಂದು ಸಚಿವರು ಕರೆ ನೀಡಿದರು.
DAKSHINA KANNADA
ಪುತ್ತೂರಿನಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಯುವಕ!
ಪುತ್ತೂರು : ಪುತ್ತೂರಿನ ಬೆಟ್ಟಂಪ್ಪಾಡಿಯಲ್ಲಿ ಯುವಕನೊಬ್ಬ ಅನುಮಾನಾಸ್ಪದವಾಗಿ ಸಾ*ವನ್ನಪ್ಪಿದ್ದು, ಈ ಬಗ್ಗೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿ ಮೃ*ತ ಯುವಕನ ತಾಯಿ ಸೇರಿದಂತೆ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಪಕ್ಕದ ಮನೆ ಕದ ತಟ್ಟಿದ ಮಗ; ಸಂಕೋಲೆ ಹಾಕಿ ಎಳೆತಂದ ತಾಯಿ :
ಬೆಟ್ಟಂಪ್ಪಾಡಿಯ ನಿವಾಸಿ ಚೇತನ್ (33) ಮೃ*ತ ಪಟ್ಟಿರುವ ಯುವಕ. ನಿನ್ನೆ ರಾತ್ರಿ ಕುಡಿದು ಮನೆಗೆ ಬಂದಿದ್ದ ಚೇತನ್ ತಾಯಿ ಜತೆ ಜಗಳವಾಡಿದ್ದ. ಬಳಿಕ ಪಕ್ಕದ ಯೂಸುಫ್ ಎನ್ನುವವರ ಮನೆ ಬಾಗಿಲು ಬಡಿದಿದ್ದ. ಈ ಬಗ್ಗೆ ಯೂಸುಫ್ ಅವರು ಚೇತನ್ ತಾಯಿಗೆ ಕರೆ ಮಾಡಿ ವಿಷಯ ತಿಳಿಸಿದ್ದರು.
ಕೂಡಲೇ ಯೂಸುಫ್ ಮನೆಗೆ ಬಂದ ಚೇತನ್ ತಾಯಿ ನಾಯಿಯನ್ನು ಕಟ್ಟುವ ಸಂಕೊಲೆಯನ್ನು ಚೇತನ್ ಸೊಂಟಕ್ಕೆ ಕಟ್ಟಿ ಮನೆಗೆ ಎಳೆದೊಯ್ದಿದ್ದರು. ಇದಕ್ಕೆ ಯೂಸುಫ್ ಸೇರಿದಂತೆ ಸ್ಥಳೀಯ ನಿವಾಸಿಗಳು ಸಾಥ್ ನೀಡಿದ್ದರು. ಎಳೆದೊಯ್ಯುವ ಸಂದರ್ಭದಲ್ಲಿ ಚೇತನ್ನ ಕುತ್ತಿಗೆಗೆ ಸಂಕೋಲೆ ಸುತ್ತಿಕೊಂಡಿದೆ ಎನ್ನಲಾಗಿದೆ. ಇದರಿಂದಾಗಿ ಚೇತನ್ ಸಾ*ವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಆದರೆ ಚೇತನ್ ನೇಣು ಬಿಗಿದು ಸಾ*ವನ್ನಪ್ಪಿದ್ದಾನೆ ಎಂದು ತಾಯಿ ಪೊಲೀಸರಿಗೆ ದೂರು ನೀಡಿದ್ದರು.
ಇದನ್ನೂ ಓದಿ : ಪ್ರಜ್ವಲ್ ರೇವಣ್ಣ ಪ್ರಕರಣ; ವೀಡಿಯೋ, ಫೋಟೋ ಅಪ್ಲೋಡ್ ಮಾಡಿದ್ದಾತ ಅರೆಸ್ಟ್
ಮೃ*ತ ದೇಹ ನೋಡಿ ಅನುಮಾನಗೊಂಡ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ಕೊಂಡಿದ್ದರು. ಘಟನೆಗೆ ಸಂಬಂಧಿಸಿ ತಾಯಿ ಉಮಾವತಿ ಸೇರಿದಂತೆ ಮೂವರನ್ನು ವಶಕ್ಕೆ ಪಡೆದಿರುವ ಪೋಲೀಸರು ಮೃ*ತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಂಗಳೂರಿಗೆ ರವಾನಿಸಿದ್ದಾರೆ. ಪುತ್ತೂರು ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಾಗಿದೆ.
DAKSHINA KANNADA
ಹೊಸ ಮನೆಗೆ ಸ್ಥಳಾಂತರಿಸುವಾಗ ಈ ವಿಷಯವನ್ನು ನೆನಪಿನಲ್ಲಿಟ್ಟುಕೊಳ್ಳಿ
ಮಂಗಳೂರು: ಪ್ರತಿಯೊಬ್ಬರಿಗೂ ತಮ್ಮದೇ ಆದ ಸ್ವಂತ ಮನೆಯನ್ನು ಹೊಂದಿರಬೇಕು ಎನ್ನುವ ಕನಸು, ಆಸೆ ಇದ್ದೇ ಇರುತ್ತದೆ. ಮನೆ ಕಟ್ಟುವುದು ಆಗಲಿ ಅಥವಾ ಕೊಂಡುಕೊಳ್ಳುವುದಾಗಲಿ ಅದೇನು ಸುಲಭದ ಮಾತಲ್ಲ. ಬ್ಯಾಂಕ್ನಲ್ಲಿ, ಸ್ನೇಹಿತರಲ್ಲಿ, ಕುಟುಂಬದವರಲ್ಲಿ ಸಾಲ ಮಾಡಿ ಹೇಗೊ ಮನೆ ಖರೀದಿಸುತ್ತೇವೆ. ಆದರೆ ಕನಸಿನ ಮನೆ ವಾಸ್ತವಕ್ಕೆ ಬಂದಾಗ ಅದರಲ್ಲಿ ಆಗುವ ಖುಷಿಯೇ ಬೇರೆ.
ಮನೆ ಬದಲು ಮಾಡುವಾಗ ಈ ವಿಷಯ ನೆನಪಿಡಿ
ತಮ್ಮ ಹೊಸ ಮನೆಗೆ ಹೋಗುವ ಖುಷಿಯಲ್ಲಿ ಜನರು ಸಾಮಾನ್ಯವಾಗಿ ಕೆಲವು ವಿಷಯಗಳನ್ನು ಮರೆತು ಬಿಡುತ್ತಾರೆ. ಇದರಿಂದಾಗಿ ಅವರಿಗೆ ನಂತರದ ದಿನಗಳಲ್ಲಿ ಸಮಸ್ಯೆ ಆಗಬಹುದು. ನೀವು ಮನೆ ಬದಲು ಮಾಡುವಾಗ ಕೆಲವು ಪ್ರಮುಖ ವಿಷಯಗಳನ್ನು ತಿಳಿದುಕೊಳ್ಳಿ.
ಮನೆಯ ಪ್ರತಿಯೊಂದು ಮೂಲೆಯನ್ನು ಪರಿಶೀಲಿಸಿ
ನೀವು ಹೊಸ ಮನೆಗೆ ಸ್ಥಳಾಂತರಗೊಳ್ಳುತ್ತಿದ್ದರೆ ಮೊದಲು ನೀವು ದಿನ ಬಳಕೆಯ ವಿಷಯಗಳತ್ತ ಗಮನ ಕೊಡಬೇಕು. ಆದುದರಿಂದ ನಿಮ್ಮ ಮನೆಯ ಪ್ರತಿಯೊಂದು ನಳ್ಳಿಯಲ್ಲಿ ನೀರು ಬರುತ್ತಿದ್ದೇಯೋ, ವಾಶ್ ರೂಂ ಅನ್ನು ಚೆನ್ನಾಗಿ ಪರಿಶೀಲಿಸಿ, ಮನೆಯ ಫ್ಯಾನ್, ಲೈಟ್ ಸರಿಯಾಗಿ ಇದೆಯೋ ಎಂದು ಗಮನಿಸಿ. ಇದರಿಂದ ಹೊಸ ಮನೆಗೆ ಬಂದ ತಕ್ಷಣ ಯಾವೂದೇ ಸಮಸ್ಯೆ ಎದುರಾಗುವುದಿಲ್ಲ.
ಶುಚಿಗೊಳಿಸುವಿಕೆಯನ್ನು ಮುಂಚಿತವಾಗಿ ಮಾಡಿ
ಹೊಸ ಮನೆಗೆ ಸ್ಥಳಾಂತರಗೊಳ್ಳುವ ಮೊದಲು ಒಮ್ಮೆ ಸ್ವಚ್ಛಗೊಳಿಸಬೇಕು. ಏಕೆಂದರೆ ವಸ್ತುಗಳನ್ನು ಸ್ಥಳಾಂತರಿಸಿದ ನಂತರ ನಿಮಗೆ ಸ್ವಚ್ಛಗೊಳಿಸಲು ಕಷ್ಟವಾಗಬಹುದು. ಮನೆಯನ್ನು ಬದಲಾಯಿಸಿದ ನಂತರವೂ ಕೊಳಕು ಕಾಣುತ್ತದೆ. ಹೀಗಾಗಿ ಹೊಸ ಮನೆಗೆ ಬಂದ ನಂತರ ಮೊದಲ ದಿನದಿಂದಲೇ ಮನೆಯನ್ನು ಶುಚಿಯಾಗಿಡಿ.
ಪ್ಯಾಕಿಂಗ್ ವಿಧಾನ
ಹೊಸ ಮನೆಗೆ ಬದಲಾಯಿಸುವ ಮೊದಲು ಹಳೆಯ ವಸ್ತುಗಳನ್ನು ಪ್ಯಾಕಿಂಗ್ ಮಾಡುವುದು ದೊಡ್ಡ ಸಮಸ್ಯೆಯಾಗಿದೆ. ಆದ್ಧರಿಂದ ಸರಕುಗಳನ್ನು ಪ್ಯಾಕ್ ಮಾಡುವಾಗ ಪೆಟ್ಟಿಗೆಯಲ್ಲಿ ಹೆಸರನ್ನು ಬರೆಯಿರಿ. ಇದರಿಂದಾಗಿ ಬಾಕ್ಸ್ ತೆರೆಯುವಾಗ ಯಾವೂದೇ ಗೊಂದಲ ಉಂಟಾಗುವುದಿಲ್ಲ.
ಪೀಠೋಪಕರಣಗಳ ಬಗ್ಗೆಯೂ ಕಾಳಜಿ ವಹಿಸಿ
ಸ್ಥಳಾಂತರಗೊಳ್ಳುವ ಮೊದಲು, ಮನೆಯ ಪೀಠೋಪಕರಣಗಳು ನಿಮ್ಮ ಅಗತ್ಯಗಳಿಗೆ ಸರಿಹೊಂದುತ್ತವೆಯೇ ಅಥವಾ ಇಲ್ಲವೇ ಎಂಬುದನ್ನು ಸಹ ನೀವು ಪರಿಶೀಲಿಸಬೇಕು. ನಿಮಗೆ ಸರಿಹೊಂದುವ ಸ್ಥಳದಲ್ಲಿ ಹಾಗೂ ಕೆಲವೊಂದು ವಸ್ತುಗಳನ್ನು ವಾಸ್ತು ಪ್ರಕಾರವೇ ಇಡಬೇಕಾಗುತ್ತದೆ. ಆದ್ದರಿಂದ ಅದರ ಬಗ್ಗೆ ಕಾಳಜಿ ವಹಿಸಿ.
LATEST NEWS
ಪ್ರಜ್ವಲ್ ರೇವಣ್ಣ ಪ್ರಕರಣ; ವೀಡಿಯೋ, ಫೋಟೋ ಅಪ್ಲೋಡ್ ಮಾಡಿದ್ದಾತ ಅರೆಸ್ಟ್
ಚಿಕ್ಕಮಗಳೂರು : ಸದ್ಯ ಪ್ರಜ್ವಲ್ ಹೆಸರು ದೇಶದಾದ್ಯಂತ ಚಾಲ್ತಿಯಂತಿದೆ. ಆತ ಮಾಡಿರುವ ಕುಕೃತ್ಯಕ್ಕೆ ಆಕ್ರೋಶ ಕೇಳಿ ಬರುತ್ತಿದೆ. ಇದೀಗ ಪ್ರಜ್ವಲ್ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಆರೋಪಿಯನ್ನು ಬಂಧಿಸಲಾಗಿದೆ.
ಮೂಡುಗೆರೆ ತಾಲೂಕಿನ ಸಂಸೆ ಗ್ರಾಮದ ಪ್ರಜ್ವಲ್ ಬಂಧಿತ. ಆರೋಪಿ ಪ್ರಜ್ವಲ್, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳು ಎಂದು ಫೇಸ್ಬುಕ್, ಯೂಟ್ಯೂಬ್, ಇನ್ಸ್ಟಾಗ್ರಾಮ್ನಲ್ಲಿ ಅಪ್ಲೋಡ್ ಮಾಡಿದ್ದನು. ಪ್ರಜ್ವಲ್ ವಿರುದ್ಧ ಕುದುರೆಮುಖ ಠಾಣೆಯಲ್ಲಿ ಐಪಿಸಿ ಸೆಕ್ಷನ್ 67,67 (ಎ) ಕಲಂ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿ ಪ್ರಜ್ವಲ್ ಟ್ರೋಲ್ ಪೇಜ್ ಅಡ್ಮಿನ್ ಆಗಿದ್ದ. ಸದ್ಯ ಪ್ರಜ್ವಲ್ ರೇವಣ್ಣ ಲೈಂ*ಗಿಕ ದೌರ್ಜ*ನ್ಯ ಪ್ರಕರಣ ಭಾರೀ ಸದ್ದು ಮಾಡುತ್ತಿದೆ. ಪ್ರಜ್ವಲ್ ರೇವಣ್ಣ ಜರ್ಮನಿಗೆ ಎಸ್ಕೇಪ್ ಆಗಿದ್ದಾರೆ. ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿರುವ ಎಸ್ ಐಟಿ ತನಿಖೆ ಚುರುಕುಗೊಳಿಸಿದೆ.
ಎಚ್ಚರಿಕೆ ನೀಡಿದ್ದ ಬಿ.ಕೆ.ಸಿಂಗ್ :
ಈ ಬಗ್ಗೆ ಎಸ್ಐಟಿಯ ಮುಖ್ಯಸ್ಥ ಬಿ.ಕೆ. ಸಿಂಗ್ ಪ್ರಕಟಣೆ ನೀಡಿದ್ದರು. ಅಶ್ಲೀಲ ವಿಡಿಯೋಗಳನ್ನು ಸಾರ್ವಜನಿಕರು ತಮ್ಮ ಮೊಬೈಲ್ನಲ್ಲಿ ಇಟ್ಟುಕೊಳ್ಳುವುದು ಸಹ ಅಪರಾಧ. ಯಾವುದೇ ವ್ಯಕ್ತಿ ಸಂದೇಶಗಳನ್ನು ರೂಪಿಸುವ, ಇಟ್ಟುಕೊಳ್ಳುವ ಹಾಗೂ ಪ್ರಸಾರ ಮಾಡುವ ಕೆಲಸವನ್ನು ಮಾಡಿದರೇ, ಅಂಥ ವ್ಯಕ್ತಿಗಳನ್ನು ಸಂದೇಶ ರಚನೆಕಾರರು ಎಂದು ಪರಿಗಣಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದರು.
ಇದನ್ನೂ ಓದಿ : ಶಾಲಾ ಬಾಲಕಿಗೆ ಆಟೋ ಚಾಲಕನಿಂದ ಲೈಂಗಿಕ ಕಿರುಕುಳ.! ಹೇಯ ಕೃತ್ಯ ಮೊಬೈಲ್ ನಲ್ಲಿ ಸೆರೆ
ಅಶ್ಲೀಲ ವಿಡಿಯೋ ಹಾಗೂ ಧ್ವನಿ ಮುದ್ರಣವನ್ನು ಇಟ್ಟುಕೊಂಡಿದ್ದರೆ ಅದು ಅಪರಾಧವಾಗುವುದರಿಂದ ಜನರು ತಮ್ಮ ಮೊಬೈಲ್ ಅಥವಾ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳಲ್ಲಿ ಇಟ್ಟುಕೊಳ್ಳಬಾರದು. ಒಂದು ವೇಳೆ ಇಟ್ಟುಕೊಂಡಿದ್ದರೆ ಕೂಡಲೇ ಡಿಲೀಟ್ ಮಾಡಿಬಿಡಿ. ಹೀಗೆ ಡಿಲೀಟ್ ಮಾಡುವುದರಿಂದ ಕಾನೂನು ಕ್ರಮಗಳಿಂದ ಪಾರಾಗುವ ಸಾಧ್ಯತೆ ಇರುತ್ತದೆ ಎಂದು ಬಿ.ಕೆ. ಸಿಂಗ್ ಪ್ರಕಟಣೆಯಲ್ಲಿ ಸೂಚನೆ ನೀಡಿದ್ದರು.
- LATEST NEWS5 days ago
ಐವರು ಮೆಡಿಕಲ್ ವಿದ್ಯಾರ್ಥಿಗಳು ನೀರುಪಾಲು…!
- DAKSHINA KANNADA7 days ago
ಮನೆಯಲ್ಲಿ ಒಂದಕ್ಕಿಂತ ಹೆಚ್ಚು ತುಳಸಿ ಗಿಡ ನೆಟ್ಟರೆ ಏನಾಗುತ್ತದೆ ನೋಡಿ..!
- DAKSHINA KANNADA7 days ago
ಮಂಗಳೂರು : ನಾಳೆಯಿಂದ ರೇಶನಿಂಗ್ ಆರಂಭ; ಎಲ್ಲೆಲ್ಲಿ ನೀರಿಲ್ಲ?
- FILM6 days ago
ರಜನಿಕಾಂತ್-ಐಶ್ವರ್ಯ ರೈ ಸಂಬಂಧಪಟ್ಟ ವೀಡಿಯೋ ಈಗ ವೈರಲ್ ..!! ಅಮಿತಾಬಚನ್, ಅಭಿಷೇಕ್ಗೆ ಏನಾಗಿದೆ? ಎಂದು ಹೇಳಿದ್ಯಾಕೆ?