38 ಲಕ್ಷ ರೂ.ವೆಚ್ಚದಲ್ಲಿ ಕೂಳೂರು ಹಳೆ ಸೇತುವೆ ನೂತನ ತಂತ್ರಜ್ಞಾನದೊಂದಿಗೆ ದುರಸ್ತಿ
38 ಲಕ್ಷ ರೂ.ವೆಚ್ಚದಲ್ಲಿ ಕೂಳೂರು ಹಳೆ ಸೇತುವೆ ನೂತನ ತಂತ್ರಜ್ಞಾನದೊಂದಿಗೆ ದುರಸ್ತಿ
ಕೂಳೂರು: ಕೂಳೂರು ಹಳೇ ಸೇತುವೆ ನೂತನ ತಂತ್ರಜ್ಞಾನದೊಂದಿಗೆ ದುರಸ್ತಿಯಾಗಿದ್ದು, ಮೇ 20ರ ಬುಧವಾರ ಸಾಂಕೇತಿಕವಾಗಿ ಸಂಸದ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸಿದರು.
ಮೈಕ್ರೋ ಕೊನ್ಟೆಸ್ಟ್ ತಂತ್ರಜ್ಞಾನದೊಂದಿಗೆ ಇದನ್ನು 38 ಲಕ್ಷ ರೂ.ವೆಚ್ಚದಲ್ಲಿ ದುರಸ್ತಿಗೊಳಿಸಲಾಗಿದೆ.
ಈ ಸೇತುವೆ ಜೀರ್ಣಾವಸ್ಥೆಯಲ್ಲಿತ್ತು. ಇದನ್ನು ದುರಸ್ತಿ ಮಾಡದೆ ನೂತನ ಸೇತುವೆ ನಿರ್ಮಾಣಕ್ಕಿಳಿದರೆ ವಾಹನ ಓಡಾಟಕ್ಕೆ ಸಮಸ್ಯೆ ಆಗುತ್ತದೆ.
ಹೀಗಾಗಿ ಇದನ್ನು ದುರಸ್ತಿಗೊಳಿಸಲಾಗಿದೆ. ಹೊಸ ಸೇತುವೆ ಶೀಘ್ರ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು.
ಇದೇ ವೇಳೆ ಗುರುಪುರ ಸೇತುವೆ ಕುರಿತಂತೆ ಉತ್ತರಿಸಿದ ಅವರು, ಸೇತುವೆ ಕೆಲಸ ಪೂರ್ಣವಾಗಿದ್ದು ಸಂಪರ್ಕ ರಸ್ತೆ ನಿರ್ಮಾಣವಾಗಬೇಕಿದೆ.
ಕೊರೊನಾ ಸಮಸ್ಯೆಯಿಂದ ವಿಳಂಬವಾಗಿದೆ ಎಂದರು. ಪಂಪ್ ವೆಲ್ ಮೇಲ್ಸೇತುವೆ ಬಗ್ಗೆ ಯಾವುದೇ ಭೀತಿ ಬೇಡ.
ತಜ್ಞರು ಇದರಿಂದ ಸಮಸ್ಯೆ ಇಲ್ಲ ಎಂದಿದ್ದಾರೆ ಎಂದರು. ಶಾಸಕ ಡಾ.ಭರತ್ ಶೆಟ್ಟಿ, ನಿತಿನ್ ಕುಮಾರ್, ತಿಲಕ್ ರಾಜ್ ಕೃಷ್ಣಾಪುರ, ಹೆದ್ದಾರಿ ಅಧಿಕಾರಿಗಳಾದ ಶಿಶು ಮೋಹನ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
LATEST NEWS
ಇನ್ಮುಂದೆ ಅನ್ನಪೂರ್ಣೇಶ್ವರಿ ದರ್ಶನಕ್ಕೆ ಸಾಂಪ್ರದಾಯಿಕ ಉಡುಗೆ ಕಡ್ಡಾಯ…!
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಹೊರನಾಡಿನಲ್ಲಿ ನೆಲೆಸಿರುವ ಅನ್ನಪೂರ್ಣೇಶ್ವರಿ ದರ್ಶನಕ್ಕೆ ಸಾಂಪ್ರದಾಯಿಕ ಉಡುಗೆಯನ್ನು ಕಡ್ಡಾಯ ಮಾಡಿದ್ದು, ಭಕ್ತರು ಈ ನಿಯಮವನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆ ಅಡಳಿತ ಮಂಡಳಿ ಮನವಿ ಮಾಡಿಕೊಂಡಿದೆ.
ಗಂಡಸರು ಶಲ್ಯ, ಪ್ಯಾಂಟ್, ಪಂಚೆ ಧರಿಸಬೇಕು. ಹೆಣ್ಣು ಮಕ್ಕಳು ಸೀರೆ ಹಾಗೂ ಚೂಡಿದಾರ ಧರಿಸುವಂತೆ ದೇವಾಲಯದ ಆಡಳಿತ ಮಂಡಳಿ ಆದೇಶ ಹೊರಡಿಸಿದೆ. ಸಾಂಪ್ರದಾಯಿಕ ಉಡುಗೆಯಲ್ಲಿ ಬರದಿದ್ದರೆ ದೇವಸ್ಥಾನದ ಒಳಗೆ ಪ್ರವೇಶವಿಲ್ಲ ಅಂತ ಅಡಳಿತ ಮಂಡಳಿ ತಿಳಿಸಿದೆ.
LATEST NEWS
ಎಂಟು ಕಾಲುಗಳೊಂದಿಗೆ ಜನಿಸಿದ ಕರು..! ಈ ವಿಚಿತ್ರ ನೋಡಲು ಮುಗಿಬಿದ್ದ ಜನ..!!
ಉತ್ತರಪ್ರದೇಶ/ಮಂಗಳೂರು: ಇಲ್ಲಿನ ಗ್ರಾಮದ ರೈತರೊಬ್ಬರ ಮನೆಯಲ್ಲಿ ಎಮ್ಮೆಯೊಂದು ಎಂಟು ಕಾಲುಗಳಿರುವ ಕರುವಿಗೆ ಜನ್ಮ ನೀಡುವ ಮೂಲಕ ವಿಸ್ಮಯವನ್ನುಂಟುಮಾಡಿದೆ. ಅಲ್ಲದೇ ಈ ವಿಚಿತ್ರ ಕರುವನ್ನು ನೋಡಲು ಊರವರೆಲ್ಲಾ ಮನೆಗೆ ದೌಡಾಯಿಸಿದ್ದಾರೆ.
ಎರಡು ಬೆನ್ನು ಹಾಗೂ ಎಂಟು ಕಾಲು ಹಾಗೂ ಒಂದು ತಲೆಯೊಂದಿಗೆ ಜನಿಸಿದ ಈ ಕರುವನ್ನು ನೋಡಿ ಎಲ್ಲರೂ ಬೆಚ್ಚಿ ಬಿದ್ದಿದ್ದಾರೆ. ಕರುವನ್ನು ಪರೀಕ್ಷಿಸಿದ ವೈದ್ಯರು ಆನುವಂಶಿಕ ದೋಷದಿಂದ ಇಂತಹ ಕರುಗಳು ಜನಿಸುತ್ತವೆ ಎಂದು ಹೇಳಿದ್ದಾರೆ. ಈ ಘಟನೆ ಸ್ಥಳೀಯರು ಹಾಗೂ ನೆಟ್ಟಿಗರ ಗಮನ ಸೆಳೆದಿದೆ.
ಕರುವಿನ ವಿಡಿಯೋ ಮತ್ತು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
FILM
‘ಬಿಗ್ ಬಾಸ್’ ಟೀಮ್ ಜೊತೆ ಅಪ್ಡೇಟ್ ಹೊತ್ತು ತರುತ್ತಿದ್ದಾರೆ ಸುದೀಪ್- ಏನದು?
‘ಬಿಗ್ ಬಾಸ್ ಕನ್ನಡ 11’ಕ್ಕೆ ಕೌಂಟ್ ಡೌನ್ ಶುರುವಾಗಿದೆ. ಇದೇ ಸೆ.29ಕ್ಕೆ ಶೋ ಅದ್ಧೂರಿಯಾಗಿ ಆಗಿ ಲಾಂಚ್ ಆಗಲಿದೆ. ಶೋ ಚಾಲನೆಗೂ ಮುನ್ನ ಬಿಗ್ ಬಾಸ್ ತಂಡದ ಜೊತೆ ಬಿಗ್ ಅಪ್ಡೇಟ್ವೊಂದನ್ನು ಸುದೀಪ್ ಹೊತ್ತು ತರುತ್ತಿದ್ದಾರೆ.
ಹೊಸ ಸೀಸನ್ ಪ್ರಾರಂಭಕ್ಕೆ ಬಿಗ್ ಬಾಸ್ ತಂಡ ತೆರೆಮರೆಯಲ್ಲಿ ಎಲ್ಲ ರೀತಿಯಲ್ಲೂ ತಯಾರಿ ಮಾಡಿಕೊಳ್ಳುತ್ತಿದೆ. ಈಗ ಬಿಗ್ ಬಾಸ್ ತಂಡದಿಂದ ಸುದ್ದಿಗೋಷ್ಠಿ ಆಯೋಜಿಸಲಾಗಿದೆ. ಇಂದು 3 ಗಂಟೆ ಸುಮಾರಿಗೆ ಬಿಗ್ ಬಾಸ್ ಸೀಸನ್ 11ರ ಬಗ್ಗೆ ಅಧಿಕೃತ ಚಾಲನೆ ಸಿಗಲಿದೆ. ಈ ಸುದ್ದಿಗೋಷ್ಠಿಯಲ್ಲಿ ಸುದೀಪ್ ಕೂಡ ಭಾಗಿಯಾಗಲಿದ್ದಾರೆ. ಹಲವು ವಿಚಾರಗಳ ಕುರಿತು ನಟ ಮಾತನಾಡಲಿದ್ದಾರೆ.
ಮೊದಲ ಸೀಸನ್ನಿಂದ ಹಿಡಿದು ಹತ್ತು ಸೀಸನ್ಗಳು ಯಶಸ್ವಿಯಾಗಿ ಪ್ರಸಾರ ಕಂಡಿದೆ. ಇದೀಗ ಬಿಗ್ ಬಾಸ್ ಶೋ 11ನೇ ಸೀಸನ್ಗೆ ಕಾಲಿಟ್ಟಿದೆ. ಈಗಾಗಲೇ ಪ್ರೋಮೋಗಳ ಮೂಲಕ ಬಿಗ್ ಬಾಸ್ ಸೀಸನ್ 11ರ ಮೇಲೆ ಫ್ಯಾನ್ಸ್ಗೆ ಸಾಕಷ್ಟು ನಿರೀಕ್ಷೆಯಿದೆ. ಜೊತೆಗೆ ಈ ಬಾರಿ ಸುದೀಪ್ ಕಾರ್ಯಕ್ರಮ ನಿರೂಪಣೆ ಮಾಡ್ತಿಲ್ಲ ಅನ್ನೋ ಸುದ್ದಿಯೂ ಹರಿದಾಡಿತ್ತು. ಆ ನಂತರ ಪ್ರೋಮೋದಲ್ಲಿ ನಟನ ಆಗಮನದ ಮೂಲಕ ವದಂತಿಗಳಿಗೆ ಬ್ರೇಕ್ ಬಿದ್ದಿತ್ತು.
ಅಂದಹಾಗೆ, ಬಿಗ್ ಬಾಸ್ಗೆ ಬರಲಿರುವ ಕೆಲ ಸ್ಪರ್ಧಿಗಳ ಹೆಸರು ಸದ್ದು ಮಾಡುತ್ತಿದೆ. ಮೋಕ್ಷಿತಾ ಪೈ, ಹುಲಿ ಕಾರ್ತಿಕ್, ಸುಕೃತಾ ನಾಗ್, ಕಿರುತೆರೆ ನಟಿ ಅಮೂಲ್ಯ, ಭವ್ಯಾ ಗೌಡ, ವರ್ಷಾ ಕಾವೇರಿ ಸೇರಿದಂತೆ ಅನೇಕರು ಹೆಸರು ಚಾಲ್ತಿಯಲ್ಲಿದೆ. ಯಾರೆಲ್ಲಾ ದೊಡ್ಮನೆ ಬರುತ್ತಾರೆ ಎಂಬುದನ್ನು ಕಾದುನೋಡಬೇಕಿದೆ. ಶೋ ಶುರುವಾದ್ಮೇಲೆ ಎಲ್ಲದ್ದಕ್ಕೂ ಉತ್ತರ ಸಿಗಲಿದೆ.