DAKSHINA KANNADA
ಮಸ್ಕತ್ ನಲ್ಲಿ ಪ್ರಪ್ರಥಮ ಬಾರಿಗೆ ಕೊರಗಜ್ಜನ ಚರಿತ್ರೆ ಯಕ್ಷಗಾನ ತಾಳಮದ್ದಳೆ ಪ್ರದರ್ಶನ
ಒಮನ್ ಮಸ್ಕತ್ ನಲ್ಲಿ ಪ್ರಪ್ರಥಮ ಬಾರಿಗೆ ತುಳು ನಾಡಿನ ಕಾರಣೀಕ ದೈವ ಕೊರಗಜ್ಜನ ಚರಿತ್ರೆ ಯಕ್ಷಗಾನ ತಾಳಮದ್ದಳೆ ರೂಪದಲ್ಲಿ ಪ್ರದರ್ಶನಗೊಂಡಿದೆ.
ಮಸ್ಕತ್ : ಒಮನ್ ಮಸ್ಕತ್ ನಲ್ಲಿ ಪ್ರಪ್ರಥಮ ಬಾರಿಗೆ ತುಳು ನಾಡಿನ ಕಾರಣೀಕ ದೈವ ಕೊರಗಜ್ಜನ ಚರಿತ್ರೆ ಯಕ್ಷಗಾನ ತಾಳಮದ್ದಳೆ ರೂಪದಲ್ಲಿ ಪ್ರದರ್ಶನಗೊಂಡಿದೆ.
ಶ್ರೀ ಶನೀಶ್ವರ ಭಕ್ತ ವೃಂದ, ಪಕ್ಷಿಕೆರೆ ತಂಡ ದವರು ಹರೀಶ್ ಶೆಟ್ಟಿ ಸೂಡ ವಿರಚಿತ “ಸ್ವಾಮಿ ಕೊರಗಜ್ಜ ” ಪ್ರಸಂಗ ವನ್ನು ಕಾಲಮಿತಿಯಲ್ಲಿ ಪ್ರಸ್ತುತಿ ಮಾಡಿದರು.
ಬಿರುವ ಜವನೆರ್ ಮಸ್ಕತ್ ವಾಟ್ಸಾಪ್ ಬಳಗ ದ ಸೇವಾ ಸಂಘಟನೆಯು ಸಂಯೋಜಿಸಿದ ಈ ಕಾರ್ಯಕ್ರಮ ಸಾವಿರಾರು ತುಳುವ ಯಕ್ಷಗಾನ ಅಭಿಮಾನಿಗಳ ಹಾಗೂ ಕೊರಗಜ್ಜ ಭಕ್ತರ ಮನ ಗೆದ್ದಿತು.
ಹನುಮಗಿರಿ ಮೇಳ ದಲ್ಲಿ ಕಲಾ ವ್ಯವಸಾಯ ಮಾಡುತ್ತಿರುವ ಖ್ಯಾತ ಭಾಗವತ ರವಿಚಂದ್ರ ಕನ್ನಡಿಕಟ್ಟೆ ಅವರು ಭಾಗವತಿಕೆ , ಪಕ್ಷಿಕೆರೆ ಪದ್ಮನಾಭ ಶೆಟ್ಟಿಗಾರ್, ಭಾಸ್ಕರ ಭಟ್ ಕಟೀಲು ಅವರು ಚೆಂಡೆ ಮದ್ದಳೆ ಹಿಮ್ಮೆಳ ದಲ್ಲಿ ಸಹಕರಿಸಿದರು.
ಶಿವಯೋಗಿ ಯಾಗಿ ಕದ್ರಿ ನವನೀತ ಶೆಟ್ಟಿ, ಕೊರಗಜ್ಜನಾಗಿ ಸದಾಶಿವ ಆಳ್ವ ತಲಪಾಡಿ, ಮೈರಕ್ಕೆ ಪಾತ್ರದಲ್ಲಿ ರಾಮಚಂದ್ರ ಮುಕ್ಕ, ಮೈಸಂದಾಯನಾಗಿ ಕಾವಲಕಟ್ಟೆ ದಿನೇಶ್ ಶೆಟ್ಟಿ, ಪಂಜಂದಾಯ ದೈವ ವಾಗಿ ದಯಾನಂದ ಜಿ. ಕತ್ತಲ್ಸಾರ್ , ಹಾಗೂ ಪುಷ್ಪರಾಜ್ ಕುಕ್ಕಾಜೆ ಅವರು ಅರಸು ದೈವ ಪಾತ್ರ ದಲ್ಲಿ ಅರ್ಥಗಾರಿಕೆ ಮೆರೆಸಿದರು.
ತುಳು ಸಂದಿ, ಪಾರ್ದನ, ಗಾದೆ, ನುಡಿಕಟ್ಟುಗಳ ಬಳಕೆಯೊಂದಿಗೆ ಗ್ರಾಮ್ಯ ತುಳು ಭಾಷೆಯ ಸೊಗಡನ್ನು ಅನಾವರಣ ಗೊಳಿಸಲಾಯಿತು.
ಕಾರ್ಯಕ್ರಮದ ಪೋಷಕ ಮಸ್ಕತ್ ಫಾರ್ಮಸಿ ಯ ಆಡಳಿತ ನಿರ್ದೇಶಕ ಬಕುಲ್ ಭಾಯ್ ಮೆಹತಾ ಅವರನ್ನು ಸನ್ಮಾನಿಸಲಾಯಿತು.
ಬಿರುವ ಜವನೆರ್ ಮಸ್ಕತ್ ನ ಸ್ಥಾಪಕ ಸಂಚಾಲಕ ಗುರುಪ್ರಸಾದ್ ರಾಮ ಅಮೀನ್ ನಾನಿಲ್ ಸ್ವಾಗತಿಸಿದರು.
ಶ್ವೇತಾ ಸುವರ್ಣ ನಿರೂಪಿಸಿದರು. ಮಸ್ಕತ್ ಧಾರ್ ಸೈಟ್ ಶ್ರೀ ಕೃಷ್ಣ ದೇವಸ್ಥಾನ ದಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಿ, ಚೆಂಡೆ ಬಳಗ ದೊಂದಿಗೆ ಕಲಾವಿದರನ್ನು ವೇದಿಕೆಗೆ ಬರಮಾಡಿ ಕೊಳ್ಳಲಾಯಿತು.
ಶಂಕರ್ ಉಪ್ಪುರ್ ದಂಪತಿಗಳು ದೀಪ ಪ್ರಜ್ವಲನ ಮಾಡಿದರು. ಮಕ್ಕಳು, ಮಹಿಳೆಯರು ಸೇರಿ ಹೆಚ್ಚಿನ ಪ್ರೇಕ್ಷಕರು ಚಾಪೆ ಯಲ್ಲಿ ಕುಳಿತು ಕೊರಗಜ್ಜನ ಕತೆಯನ್ನು ಉತ್ಸಾಹದಿಂದ ಆಸ್ವಾದಿಸಿದರು.
ಕಾರ್ಯಕ್ರಮದ ಕೊನೆಯಲ್ಲಿ ನಡೆದ “ತುಳುವರ ಕೂಟ”ದಲ್ಲಿ ಕದ್ರಿ ನವನೀತ ಶೆಟ್ಟಿ ಕಲಾವಿದರ ಪರಿಚಯ ಮಾಡಿದರು.
ವಿವಿಧ ಸಮುದಾಯಗಳ ಪ್ರಮುಖರಾದ ಶಶಿಧರ ಶೆಟ್ಟಿ ಮಲ್ಲಾರ್, ನ್ಯಾಷನಲ್ ಬ್ಯಾಂಕ್ ಒಫ್ ಓಮನ್ ನ ರಾಮ್ಕಿ ಜಿ.ವಿ , ಲಕ್ಷ್ಮೀ ನಾರಾಯಣ ಆಚಾರ್, ಮಂಜುನಾಥ್ ನಾಯಕ್, ಪದ್ಮಾಕರ ಮೆಂಡನ್, ಡಾ. ಸಿ. ಕೆ. ಅಂಚನ್, ರತ್ನಾಕರ ಆಚಾರ್ಯ, ರಮಾನಂದ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು .
ದಯಾನಂದ ಜಿ. ಕತ್ತಲ್ಸಾರ್ ಅವರು “ಕೂಟದ ಬಿನ್ನೆ ” ನೆಲೆಯಲ್ಲಿ ತುಳು ಯಕ್ಷಗಾನದ ಮೂಲಕ ಕೊರಗಜ್ಜ ನ ಕಥೆಯನ್ನು ತುಳುವರಿಗೆ ಪರಿಚಯಿಸಿದ ಸಂಘಟಕರನ್ನು ಅಭಿನಂದಿಸಿದರು
BANTWAL
ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!
ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.
ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.
DAKSHINA KANNADA
ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ
ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.
ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.
ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು
ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ. ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.
DAKSHINA KANNADA
ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು
ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.
ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.
- FILM5 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ
- FILM5 days ago
‘ಬಘೀರ’ ಸಿನೆಮಾ ಶೂಟಿಂಗ್ ವೇಳೆ ಅವಘಡ.. ರೋರಿಂಗ್ ಸ್ಟಾರ್ ಆಸ್ಪತ್ರೆ ದಾಖಲು
- FILM6 days ago
ವಿಚ್ಛೇದನದ ಸುದ್ದಿಗೆ ಉತ್ತರ ಕೊಟ್ಟ ಐಶ್ – ಅಭಿ ಆ್ಯನಿವರ್ಸರಿ ಫೋಟೋ!
- chikkamagaluru5 days ago
ಎಟಿಎಂ ಮೆಷಿನ್ಗೆ ಬೆಂಕಿ ಅವಘಡ..! ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿ..!!