LATEST NEWS
3.5 ಕೋಟಿ ಆಸ್ತಿ ಇರುವ ಕೋಟ ಶ್ರೀನಿವಾಸ ಪೂಜಾರಿ! ಇಲ್ಲಿದೆ ಆಸ್ತಿ ವಿವರ
ಉಡುಪಿ : ಉಡುಪಿ – ಚಿಕ್ಕಮಗಳೂರು ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿರುವ ಕೋಟ ಶ್ರೀನಿವಾಸ ಪೂಜಾರಿ ಅವರು ಹಾಗೂ ಅವರ ಕುಟುಂಬದ ಆಸ್ತಿ ವಿವರ ಸಲ್ಲಿಸಿದ್ದಾರೆ. ಅವರು ಸಲ್ಲಿಸಿದ ಆಸ್ತಿ ವಿವರ ಪ್ರಕಾರ ಕೋಟ ಕುಟುಂಬ ಕೋಟ್ಯಧಿಪತಿ ಅನ್ನೋದು ಗೊತ್ತಾಗಿದೆ. ಕೋಟ ಶ್ರೀನಿವಾಸ ಪೂಜಾರಿ, ಅವರ ಪತ್ನಿ ಸಹನಾ ಮಕ್ಕಳಾದ ಸ್ವಾತಿ, ಶಶಿಧರ್ ಹಾಗೂ ಶ್ರುತಿ ಅವರ ಹೆಸರಿನಲ್ಲಿ ಇರುವ ಆಸ್ತಿಗಳ ವಿವರವನ್ನು ಸಲ್ಲಿಸಿದ್ದಾರೆ.
ಕೋಟ ಶ್ರೀನಿವಾಸ ಪೂಜಾರಿ ಅವರ ಕೈನಲ್ಲಿ 90 ಸಾವಿರ ನಗದು ಹೊಂದಿದ್ದರೆ, ಪತ್ನಿ ಸಹನಾ ಅವರ ಬಳಿ 20 ಸಾವಿರ ನಗದು ಇದೆ.
ಇನ್ನು ಕೋಟ ಶ್ರೀನಿವಾಸ ಪೂಜಾರಿಯವರ ಬ್ಯಾಂಕ್ ಹಾಗೂ ಚರಾಸ್ತಿ ವಿವರಗಳು ಕೂಡಾ ದೊಡ್ಡದಾಗಿಯೇ ಇದೆ.
- ಕೋಟ ಶ್ರೀನಿವಾಸ ಪೂಜಾರಿ ಅವರ ಬಳಿಯಲ್ಲಿರುವ 90 ಸಾವಿರ ನಗದು ಹಾಗೂ ಚರಾಸ್ತಿ ಮೌಲ್ಯ 31,95,082 ( ಮುವತ್ತೊಂದು ಲಕ್ಷದ ತೊಂಬತೈದು ಸಾವಿರದ ಎಂಬತ್ತೆರಡು ರೂಪಾಯಿ )
- ಕೋಟ ಅವರ ಪತ್ನಿ ಸಹನಾ ಅವರ ಬಳಿ ಇರುವ 20 ಸಾವಿರ ನಗದು ಹಾಗೂ ಚರಾಸ್ತಿ 10,29,027 ( ಹತ್ತು ಲಕ್ಷದ ಇಪ್ಪತ್ತೊಂಬತ್ತು ಸಾವಿರದ ಇಪ್ಪತ್ತೇಳು ರೂಪಾಯಿ )
- ಮಗಳು ಸ್ವಾತಿ ಚರಾಸ್ತಿ 3,70,00 (ಮೂರು ಲಕ್ಷದ ಎಪ್ಪತ್ತು ಸಾವಿರ )
- ಮಗ ಶಶಿಧರ್ ಅವರ ಚರಾಸ್ತಿ 17,59,935 (ಹದಿನೇಳು ಲಕ್ಷದ ಐವತ್ತೊಂಬತ್ತು ಸಾವಿರದ ಒಂಬೈನೂರ ಮುವತ್ತೈದು ರೂಪಾಯಿ)
- ಮಗಳು ಶೃತಿ ಅವರ ಚರಾಸ್ತಿ 66, 446 ( ಅರುವತ್ತಾರು ಸಾವಿರದ ನಾನೂರ ಅರುವತ್ತಾರು )
- ಚರಾಸ್ತಿಯ ಒಟ್ಟು ಮೌಲ್ಯ 64,20,510 ( ಅರುವತ್ತ ನಾಲ್ಕು ಲಕ್ಷದ ಇಪ್ಪತ್ತು ಸಾವಿರದ ಐನೂರ ಹತ್ತು ರೂಪಾಯಿಗಳು)
ಕೋಟ ಶ್ರೀನಿವಾಸ ಪೂಜಾರಿ ಅವರ ಕುಟುಂಬ ಸ್ಥಿರಾಸ್ತಿ ವಿವರ ಹೀಗಿದೆ:
- ಕೋಟ ಶ್ರೀನಿವಾಸ ಪೂಜಾರಿ ಅವರ ಬಳಿಯಲ್ಲಿ 79,95,082 ಎಪ್ಪತ್ತೊಂಬತ್ತು ಲಕ್ಷದ ತೊಂಬತ್ತೈದು ಸಾವಿರದ ಎಂಬತ್ತೆರಡು ರೂಪಾಯಿ
- ಪತ್ನಿ ಸಹನಾ ಅವರ ಬಳಿ ಇರುವ ಸ್ಥಿರಾಸ್ತಿ 1,62,79,027 ( ಒಂದು ಕೋಟಿಯ ಅರುವತ್ತೆರಡು ಲಕ್ಷದ ಎಪ್ಪತ್ತೋಂಬತ್ತು ಸಾವಿರದ ಇಪ್ಪತ್ತೇಳು ರೂಪಾಯಿ)
- ಮಗಳು ಸ್ವಾತಿ ಅವರ ಬಳಿ ಇರುವ ಸ್ಥಿರಾಸ್ತಿ 3,70,00 ( ಮೂರು ಲಕ್ಷದ ಎಪ್ಪತ್ತು ಸಾವಿರ )
- ಮಗ ಶಶಿಧರ್ ಬಳಿ ಇರುವ ಸ್ಥಿರಾಸ್ತಿ 47,59,935 (ನಲುವತ್ತೇಳು ಲಕ್ಷದ ಐವತ್ತೊಂಬತ್ತು ಸಾವಿರದ ಒಂಬೈನೂರ ಮುವತ್ತೈದು ರೂಪಾಯಿ )
- ಮಗಳು ಶೃತಿ ಬಳಿ ಇರುವ ಸ್ಥಿರಾಸ್ಥಿ 66,466 ( ಅರುವತ್ತಾರು ಸಾವಿರದ ನಾನೂರ ಅರುವತ್ತಾರು )
- ಕೋಟ ಶ್ರೀನಿವಾಸ ಪೂಜಾರಿ ಅವರ ಕುಟುಂಬದ ಒಟ್ಟು ಸ್ಥಿರಾಸ್ತಿ ಮೌಲ್ಯ 2,94,70,510 ( ಎರಡು ಕೋಟಿ ತೊಂಬತ್ತನಾಲ್ಕು ಲಕ್ಷದ ಎಪ್ಪತ್ತು ಸಾವಿರದ ಐನೂರ ಹತ್ತು ರೂಪಾಯಿ )
ಇದನ್ನೂ ಓದಿ : ಕೋಟಾ ಕೋಟ್ಯಾಧಿಪತಿಯಾ..? ಈ ಸುದ್ದಿ ನಿಜನಾ?
ಇನ್ನು ಕೋಟ ಶ್ರೀನಿವಾಸ ಪೂಜಾರಿಯವರು ಘೋಷಿಸಿದ ಸಾಲಗಳ ವಿವರ ಇಂತಿದೆ:
- ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಹಲವು ಬ್ಯಾಂಕ್ಗಳಲ್ಲಿ 40,64,924 ( ನಲುವತ್ತು ಲಕ್ಷದ ಅರುವತ್ತನಾಲ್ಕು ಸಾವಿರದ ಒಂಬೈನೂರ ಇಪ್ಪತ್ತನಾಲ್ಕು ರೂಪಾಯಿ )
- ಪತ್ನಿ ಹೆಸರಿನಲ್ಲಿ ಇರುವ ಸಾಲ 35,43,757 (ಮುವತ್ತೈದು ಲಕ್ಷದ ನಲವತ್ತ ಮೂರು ಸಾವಿರದ ಏಳುನೂರ ಐವತ್ತೇಳು ರೂಪಾಯಿ )
- ಮಕ್ಕಳ ಹೆಸರಿನಲ್ಲಿ ಒಟ್ಟು 28,35,964 ( ಇಪ್ಪತ್ತೆಂಟು ಲಕ್ಷದ ಮುವತ್ತೈದು ಸಾವಿರದ ಒಂಬೈನೂರ ಅರುವತ್ತನಾಲ್ಕು ರೂಪಾಯಿ )
- ಕೋಟ ಶ್ರೀನಿವಾಸ ಪೂಜಾರಿ ಅವರ ಕುಟುಂಬದ ಒಟ್ಟು ಸಾಲ 1,04,44,645 ( ಒಂದು ಕೋಟಿ ನಾಲ್ಕು ಲಕ್ಷದ ನಲುವತ್ತ ನಾಲ್ಕು ಸಾವಿರದ ಆರುನೂರ ನಲುವತ್ತೈದು ರೂಪಾಯಿ )
ಹೀಗಾಗಿ ಸಿಂಪಲ್ ಮ್ಯಾನ್ ಕೋಟ ಶ್ರೀನಿವಾಸ ಪೂಜಾರಿಯವರ ಕುಟುಂಬ ಕೋಟ್ಯಧಿಪತಿ ಅನ್ನೋದು ಅವರು ಸಲ್ಲಿಸಿದ ಆಸ್ತಿ ವಿವರದಿಂದ ಬಹಿರಂಗವಾಗಿದೆ. ಇವರ ಸ್ಥಿರಾಸ್ತಿ ಹಾಗೂ ಚರಾಸ್ತಿಯ ಒಟ್ಟು ಮೌಲ್ಯ 3,58,91,020 ( ಮೂರು ಕೋಟಿ ಐವತ್ತೆಂಟು ಲಕ್ಷದ ತೊಂಬತ್ತ ಒಂದು ಸಾವಿರದ ಇಪ್ಪತ್ತು ರೂಪಾಯಿ).
kerala
5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್..!
ಮಂಗಳೂರು ( ಕೇರಳ ) : ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹಿಳೆಯೊಬ್ಬರು ಐದು ವರ್ಷದಲ್ಲಿ ಸಂಸ್ಥೆಯ 20 ಕೋಟಿ ಹಣವನ್ನು ತನ್ನ ಸಂಬಂಧಿಕರ ಖಾತೆಗೆ ವರ್ಗಾಯಿಸಿದ್ದಾರೆ. ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಧನ್ಯ ಮೋಹನ್ ಎಂಬ ಮಹಿಳೆ ಈ ವಂಚನೆ ನಡೆಸಿದ್ದಾರೆ.
ಕಳೆದ ಐದು ವರ್ಷಗಳಿಂದ ಹಂತ ಹಂತವಾಗಿ ಹಣಕಾಸು ಸಂಸ್ಥೆಯ ಖಾತೆಯಿಂದ ತನ್ನ ಸಂಬಂಧಿಕರ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ. ಹಣಕಾಸು ಸಂಸ್ಥೆಯ ಆಡಿಟಿಂಗ್ ಸಮಯದಲ್ಲಿ 20 ಕೋಟಿ ಹಣದ ಲೆಕ್ಕಾಚಾರ ಸಿಗದೇ ಇದ್ದಾಗ ಈ ವಿಚಾರ ಬೆಳಕಿಗೆ ಬಂದಿತ್ತು. ಈ ವಿಷಯ ಬಹಿರಂಗವಾಗುತ್ತಿದ್ದಂತೆ ವಂಚಕಿ ಧನ್ಯ ಮೋಹನ್ ತಲೆಮರೆಸಿಕೊಂಡಿದ್ದರು. ಧನ್ಯ ಮೋಹನ್ ಪತ್ತೆಗಾಗಿ ಪೊಲೀಸರು ಲುಕ್ಔಟ್ ನೋಟೀಸ್ ಕೂಡ ಜಾರಿ ಮಾಡಿದ್ದರು.
ಆನ್ ಲೈನ್ ಗೇಮಿಂಗ್ ಚಟಕ್ಕೆ ಬಲಿಯಾಗಿದ್ದ ಮಹಿಳೆ..!?
ಕುಟುಂಬಸ್ಥರ ತೀವ್ರ ವಿಚಾರಣೆಯ ಹೊರತಾಗಿಯೂ ಧನ್ಯ ಮೋಹನ್ ಎಲ್ಲಿ ಹೋಗಿದ್ದಾರೆ ಅನ್ನೋ ವಿಚಾರದ ಮಾಹಿತಿ ದೊರೆತಿರಲಿಲ್ಲ. ಆದ್ರೆ, ಇದೀಗ ಆರೋಪಿ ವಂಚಕಿ ಧನ್ಯ ಮೋಹನ್ ಕೊಲ್ಲಂ ಪೊಲೀಸ್ ಠಾಣೆಯಲ್ಲಿ ಶರಣಾಗತಳಾಗಿದ್ದಾಳೆ.
ಧನ್ಯ ಮನೆಯವರು ಆರ್ಥಿಕವಾಗಿ ಅಷ್ಟೊಂದು ಸದೃಢವಾಗಿಲ್ಲವಾಗಿದ್ದರೂ ಧನ್ಯ ಮೋಹನ್ ಈ ಹಣ ಎಲ್ಲಿ ಹೂಡಿಕೆ ಮಾಡಿದ್ದಾರೆ ಅನ್ನೋ ಕುತೂಹಲ ಮೂಡಿದೆ. ಮೂಲಗಳ ಪ್ರಕಾರ, ಆಕೆ ಹಣವನ್ನು ಆನ್ಲೈನ್ ಗೇಮಿಂಗ್ನಲ್ಲಿ ತೊಡಗಿಸಿಕೊಂಡು ಕಳೆದುಕೊಂಡಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಅದೇನೆ ಇದ್ರೂ ಸದ್ಯ ಆಕೆಯ ವಿಚಾರಣೆಯ ಬಳಿಕ ಹಣ ಏನಾಯ್ತು ಅನ್ನೋ ವಿಚಾರ ಬಹಿರಂಗವಾಗಬೇಕಾಗಿದೆ.
DAKSHINA KANNADA
ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ
ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.
ಉತ್ತರದ ಬ್ರೇಕ್ ವಾಟರ್ 831 ಮೀಟರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.
ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.
LATEST NEWS
WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
ಮಂಗಳೂರು/ಮಹಾರಾಷ್ಟ್ರ : ಬಸ್ಸಿನಲ್ಲಿ ಸೀಟಿಗಾಗಿ ಹಂಬಲಿಸೋರು ಅನೇಕ ಮಂದಿ ಇದ್ದಾರೆ. ಅದೂ ಸಿಎಂ ಕುರ್ಚಿಗಾಗಿ ನಡೆಯೋ ರಾಜಕೀಯ ಗುದ್ದಾಟಕ್ಕಿಂತಲೂ ಮಿಗಿಲು. ಬಸ್ ಬಂದು ನಿಂತಾಗ ಪರಸ್ಪರ ತಳ್ಳಾಡಿ ಸೀಟು ಹಿಡಿಯುವ ದೃಶ್ಯ ಸಾಮಾನ್ಯ. ಕೆಲವೊಮ್ಮೆ ಬಸ್ ಹತ್ತಿದವರು ತಮ್ಮರಿಗಾಗಿ ಕರ್ಚೀಫ್ ಹಾಕಿಡೋದೂ ಇದೆ. ಇನ್ನೂ ಕೆಲವರು ಸೀಟ್ ಹಿಡಿಯಲು ಕಿಟಕಿಯಿಂದಲೂ ಕರ್ಚೀಫ್ ಹಾಕೋದು, ಬ್ಯಾಗ್ ಇಡುವ ದೃಶ್ಯ ಕಾಣಲು ಸಿಗುತ್ತದೆ.
ಆದರೆ, ಇಲ್ಲೊಬ್ಬ ಸೀಟಿಗಾಗಿ ಕಿಟಕಿಯಿಂದ ಬಸ್ ಏರಲು ಹೋಗಿ ಅವಾಂತರವಾಗಿದೆ. ಸದ್ಯ ಆ ವಿದ್ಯಾರ್ಥಿಯ ಎಡವಟ್ಟಿನ ವೀಡಿಯೋ ವೈರಲ್ ಆಗುತ್ತಿದೆ.
ಸೀಟ್ ಗಾಗಿ ಎಡವಟ್ಟು :
ಈ ವೈರಲ್ ದೃಶ್ಯ ನಡೆದಿರೋದು ಮಹಾರಾಷ್ಟ್ರದಲ್ಲಿ. ಅವನು ಮಾಮೂಲಿನಂತೆ ಬಾಗಿಲಿನಿಂದ ಬಸ್ ಏರಬಹುದಿತ್ತು. ಆದರೆ, ಸರ್ಕಸ್ ಮಾಡಲು ಹೋಗಿ ಎಡವಟ್ಟಾಗಿದೆ.
ಇದನ್ನೂ ಓದಿ : ವಿದ್ಯುತ್ ಇಲ್ಲದೆ ಪರದಾಡುತ್ತಿರುವ ಮಲೆನಾಡು: ಮೊಬೈಲ್ ಫುಲ್ ಚಾರ್ಜ್ಗೆ 60 ರೂ., ಹಾಲ್ಫ್ಗೆ 40 ರೂ.
ಆ ವಿದ್ಯಾರ್ಥಿ ಕಿಟಕಿಯ ಮೂಲಕ ಬಸ್ ಏರಿದ್ದಾನೆ. ಆದರೆ, ಕಿಟಕಿ ಸಮೇತ ಕೆಳಗೆ ಬಿದ್ದಿದ್ದಾನೆ.
ರೋಹಿತ್ (avaliyapravasi) ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಈ ವೀಡಿಯೋ ಹಂಚಿಕೊಂಡಿದ್ದಾರೆ. ಸೀಟ್ ಗಾಗಿ ವಿದ್ಯಾರ್ಥಿ ಕಿಟಕಿ ಏರುವ ಸರ್ಕಸ್ ಮಾಡಿದ್ದಾನೆ. ಕಿಟಕಿ ಗ್ಲಾಸ್ ಸರಿಸಿ ಒಳ ಹೋಗಲು ಪ್ರಯತ್ನಿಸುತ್ತಿದ್ದಂತೆ, ಕಿಟಕಿ ಸಹಿತ ಕೆಳಗೆ ಬಿದ್ದಿದ್ದಾನೆ. ಈ ವೀಡಿಯೋವನ್ನು ಅಲ್ಲೇ ಇದ್ದ ಇನ್ನೊಂದು ಬಸ್ ನಲ್ಲಿದ್ದ ವ್ಯಕ್ತಿ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ.
ಜುಲೈ 22 ರಂದು ಈ ವೀಡಿಯೋ ಹಂಚಿಕೊಳ್ಳಲಾಗಿದ್ದು, ವೈರಲ್ ಆಗಿದೆ. ನೆಟ್ಟಿಗರು ತರಹೇವಾರಿ ಕಮೆಂಟ್ಸ್ ಮಾಡುತ್ತಿದ್ದಾರೆ.
- LATEST NEWS5 days ago
ಗೀಸರ್ನಿಂದ ವಿಷಾನಿಲ ಸೋರಿಕೆ; ಇಹಲೋಕ ತ್ಯಜಿಸಿದ ತಾಯಿ, ಮಗ
- LATEST NEWS5 days ago
ಕಸದ ತೊಟ್ಟಿಯಲ್ಲಿ ಪತ್ತೆಯಾಯ್ತು ಲಕ್ಷಾಂತರ ರೂ. ಬೆಲೆ ಬಾಳುವ ವಜ್ರದ ನೆಕ್ಲೇಸ್
- LATEST NEWS7 days ago
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಕ್ರಿಕೆಟಿಗ
- DAKSHINA KANNADA2 days ago
ವಿಟ್ಲದ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ; ಸಾರ್ವಜನಿಕರನ್ನು ನೋಡಿ ಕಾಲ್ಕಿತ್ತ ಜೋಡಿ