Connect with us

ಬೈಂದೂರು ತಾಲೂಕು ವ್ಯಾಪ್ತಿಯ ಕ್ವಾರಂಟೈನ್ ಕೇಂದ್ರಕ್ಕೆ ಕೋಟ ಭೇಟಿ

Published

on

ಬೈಂದೂರು ತಾಲೂಕು ವ್ಯಾಪ್ತಿಯ ಕ್ವಾರಂಟೈನ್ ಕೇಂದ್ರಕ್ಕೆ ಕೋಟ ಭೇಟಿ

ಉಡುಪಿ : ಉಡುಪಿ ಗಡಿ ಭಾಗವಾದ ಬೈಂದೂರಿನ ವ್ಯಾಪ್ತಿಯ ಕ್ವಾರಂಟೈನ್ ಕೇಂದ್ರಕ್ಕೆ ಹಿಂದೂ ಧಾರ್ಮಿಕ ದತ್ತಿ, ಬಂದರು, ಒಳನಾಡು ಜಲಸಾರಿಗೆ ಮಂತ್ರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕ್ವಾರಂಟೈನ್‌ ಕೇಂದ್ರದ‌ಲ್ಲಿದ್ದ ಜನರ ಸಮಸ್ಯೆಗಳ‌ನ್ನು ಸಮಗ್ರವಾಗಿ ಆಲಿಸಿ ಸಚಿವರು ಮೂಲ ಸೌಕರ್ಯ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಊಟೋಪಚಾರಕ್ಕೆ ಸಮಸ್ಯೆಯಾಗದಂತೆ ತಾಲೂಕು‌ ವ್ಯಾಪ್ತಿಯ ದೇವಸ್ಥಾನಗಳಿಗೆ ಭರಿಸಲು ಅಧಿಕಾರಿಗಳಿಗೆ ಆದೇಶ ನೀಡಿದರು.

ಬಳಿಕ ಉಡುಪಿ ಗಡಿ ಶಿರೂರು ತಪಾಸಣಾ ಕೇಂದ್ರಕ್ಕೂ ಭೇಟಿ ನೀಡಿ ಸಚಿವ ಕೋಟ ಪರಿಶೀಲನೆ ನಡೆಸಿದರು.

Click to comment

Leave a Reply

Your email address will not be published. Required fields are marked *

bangalore

ಐದು ವರ್ಷದಲ್ಲಿ ನಾಲ್ಕು ಪಟ್ಟು ಏರಿದ ಆಸ್ತಿ…! ಪ್ರಜ್ವಲ್ ರೇವಣ್ಣ ಘೋಷಿಸಿದ ಆಸ್ತಿ ವಿವರದಲ್ಲಿ ಬಹಿರಂಗ..!!

Published

on

ಬೆಂಗಳೂರು: ಲೋಕಸಭಾ ಕ್ಷೇತ್ರದ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಸಂಸದ ಪ್ರಜ್ವಲ್ ರೇವಣ್ಣ ಅವರು ನಿನ್ನೆ(ಮಾ.28) ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

revannaನಾಮಪತ್ರದಲ್ಲಿ ಪ್ರಜ್ವಲ್ ಅವರು ತಮ್ಮ ಆಸ್ತಿ ಮೌಲ್ಯಗಳನ್ನು ಘೋಷಿಸಿದ್ದಾರೆ. ತಮ್ಮ ಒಟ್ಟು ಆಸ್ತಿ ಮೌಲ್ಯ 40.94 ಕೋಟಿ ಎಂದು ಘೋಷಿಸಿದ್ದಾರೆ. 2019ರ ಚುನಾವಣೆಯಲ್ಲಿ ಘೋಷಿಸಿದ ಆಸ್ತಿ ಮೌಲ್ಯಕ್ಕೆ ನಾಲ್ಕು ಪಟ್ಟು ಹೆಚ್ಚಳವಾಗಿದೆ. 2019 ರ ಲೋಕಸಭಾ ಚುನಾವಣೆ ವೇಳೆ ಸಲ್ಲಿಸಿದ್ದ ಅಫಿದವಿಟ್‌ನಲ್ಲಿ ಅವರು ತಮ್ಮ ಒಟ್ಟು ಆಸ್ತಿ ಮೌಲ್ಯ 9.78 ಕೋಟಿ ರೂಪಾಯಿ ಎಂದು ಘೋಷಿಸಿದ್ದರು. ಈ ಬಾರಿ ಪ್ರಜ್ವಲ್ ರೇವಣ್ಣ ಅವರು ಅಫಿಡವಿಟ್‌ನಲ್ಲಿ ತಮ್ಮ ಒಟ್ಟು ಆಸ್ತಿ ಮೌಲ್ಯ 40.94 ಕೋಟಿ ರೂಪಾಯಿ ಎಂದು ಘೋಷಿಸಿದ್ದಾರೆ. ಈ ಪೈಕಿ 5.44 ಕೋಟಿ ರೂಪಾಯಿ ಮೌಲ್ಯದ ಚರಾಸ್ತಿ, 35.40 ಕೋಟಿ ರೂಪಾಯಿ ಸ್ಥಿರಾಸ್ತಿ ಹೊಂದಿದ್ದಾರೆ. ಅಲ್ಲದೆ, 9.29 ಲಕ್ಷ ನಗದು ಹೊಂದಿರುವುದಾಗಿ ಪ್ರಮಾಣ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ವಿವಿಧ ಬ್ಯಾಂಕ್​ಗಳ ಉಳಿತಾಯ ಖಾತೆಯಲ್ಲಿ 56 ಲಕ್ಷ ನಗದು ಇದ್ದು, 5 ವರ್ಷದಲ್ಲಿ ಕೃಷಿಯಿಂದ 2.75 ಕೋಟಿ ಆದಾಯ ಗಳಿಸಿದ್ದಾರೆ ಎಂದು ಅಫಿಡವಿಟ್‌ನಲ್ಲಿ ತಿಳಿಸಿದ್ದಾರೆ. ಕೃಷಿಯೇತರ ಮೂಲದಿಂದ 1.33 ಕೋಟಿ ಆದಾಯ ಗಳಿಸಿದ್ದು, 31 ಹಸುಗಳು, 4 ಎತ್ತುಗಳು, 1 ಟ್ರ್ಯಾಕ್ಟರ್ ಹೊಂದಿದ್ದಾರೆ.

ಪ್ರಜ್ವಲ್ ರೇವಣ್ಣ ಮಾಡಿದ ಸಾಲ
ಬೆಂಗಳೂರು ನಗರ, ಮೈಸೂರು ಸೇರಿದಂತೆ ವಿವಿಧೆಡೆ ವಾಣಿಜ್ಯ ಕಟ್ಟಡ, ಹೊಳೆನರಸೀಪುರ, ನೆಲಮಂಗಲದಲ್ಲಿ ಆಸ್ತಿ ಹೊಂದಿದ್ದಾರೆ. ಅತ್ತೆ ಅನುಸೂಯಾರಿಂದ 22 ಲಕ್ಷ, ಅತ್ತೆ ಶೈಲಜಾರಿಂದ 10 ಲಕ್ಷ ಸಾಲ ಪಡೆದಿದ್ದು, ತಂದೆ ರೇವಣ್ಣರಿಂದ 86 ಲಕ್ಷ, ಸೋದರ ಸೂರಜ್​ರಿಂದ 1 ಕೋಟಿ ಸಾಲ ಮಾಡಿದ್ದಾರೆ. ಹೀಗೆ ಒಟ್ಟು 4.48 ಕೋಟಿ ಸಾಲ ಹೊಂದಿದ್ದಾರೆ.

ತೆರಿಗೆ ಬಾಕಿ ಉಳಿಸಿಕೊಂಡ ಪ್ರಜ್ವಲ್ ರೇವಣ್ಣ
ಸರ್ಕಾರಕ್ಕೆ 3.4 ಕೋಟಿ ತೆರಿಗೆ ಬಾಕಿ ಉಳಿಸಿಕೊಂಡಿದ್ದಾರೆ. ಈ ಬಗ್ಗೆ ಕಾನೂನು ಹೋರಾಟ ನಡೆಸುತ್ತಿರುವ ಬಗ್ಗೆಯೂ ಉಲ್ಲೇಖ ಮಾಡಿದ್ದಾರೆ. 67 ಲಕ್ಷ ಮೌಲ್ಯದ 1 ಕೆ.ಜಿ. 100 ಗ್ರಾಂ ಚಿನ್ನ ಹೊಂದಿದ್ದಾರೆ. 17.48 ಲಕ್ಷ ಮೌಲ್ಯದ 23 ಕೆ.ಜಿ. ಬೆಳ್ಳಿ, 1.90 ಲಕ್ಷ ಮೌಲ್ಯದ ವಜ್ರಾಭರಣ ಹೊಂದಿದ್ದಾರೆ ಎಂದು ನಾಮಪತ್ರ ಸಲ್ಲಿಕೆ ವೇಳೆ ಘೋಷಿಸಿದ್ದಾರೆ.

Continue Reading

LATEST NEWS

ಈ ದೇವಸ್ಥಾನದಲ್ಲಿ ಒಂದು ಲಿಂಬೆಹಣ್ಣಿಗೆ ಲಕ್ಷಾಂತರ ರೂ. ಬೇಡಿಕೆ..! ಅಂತದ್ದೇನಿದೆ ಈ ಲಿಂಬೆ ಹಣ್ಣಲ್ಲಿ?

Published

on

ತಮಿಳುನಾಡು: ತಮಿಳುನಾಡಿನಲ್ಲಿರುವ ದೇವಸ್ಥಾನದಲ್ಲಿ ಒಂದು ಲಿಂಬೆ ಹಣ್ಣಿಗೆ ಲಕ್ಷಾಂತರ ರೂಪಾಯಿ ಬೇಡಿಕೆ ಇದ್ದು, ಲಿಂಬೆಹಣ್ಣಿಗಾಗಿ ಜನ ಮುಗಿ ಬೀಳುತ್ತಿದ್ದಾರೆ.  ವಿಲ್ಲುಪುರಂ ಜಿಲ್ಲೆಯ ಮುರುಗನ್ ದೇವಸ್ಥಾನದ ಉತಿರಂ ಹಬ್ಬದ ಸಂದರ್ಭದಲ್ಲಿ ಒಟ್ಟು ಒಂಬತ್ತು ನಿಂಬೆ ಹಣ್ಣು ಬರೋಬ್ಬರಿ 2.36 ಲಕ್ಷ ರೂಪಾಯಿಗೆ ಹರಾಜಿನಲ್ಲಿ ಮಾರಾಟವಾಗಿದೆ. ಸಾಮಾನ್ಯವಾಗಿ ಅಂಗಡಿಗಳಲ್ಲಿ 10 ರೂಪಾಯಿಗೆ ಎರಡು ಮೂರು ನಿಂಬೆ ಹಣ್ಣು ಖರೀದಿಸಬಹುದು. ಆದ್ರೆ, ಇಲ್ಲಿನ ಲಿಂಬೆ ಹಣ್ಣು ಮಾತ್ರ ವಿಶೇಷವಾಗಿದೆ. ಹಾಗಾಗಿ ಭಾರೀ ಬೇಡಿಕೆ ಗಿಟ್ಟಿಸಿಕೊಂಡಿದೆ.

ಈ ಲಿಂಬೆಹಣ್ಣಿನಲ್ಲೇನಿದೆ?

ಮುರುಗನ್ ದೇವಸ್ಥಾನದಲ್ಲಿ ಪತ್ರೀ ವರ್ಷ ಅದ್ಧೂರಿಯಾಗಿ ಒಂಭತ್ತು ದಿನಗಳ ಕಾಲ ಉತಿರಂ ಹಬ್ಬವನ್ನು ಆಚರಿಸಲಾಗುತ್ತದೆ. ಒಂಭತ್ತು ದಿನಗಳ ದೇವರ ಪೂಜಾ ಸಮಯದಲ್ಲಿ ಒಂದೊಂದು ದಿನ ದೇವರ ತ್ರಿಶೂಲದ ಮೇಲೆ ಲಿಂಬೆ ಹಣ್ಣುಗಳನ್ನು ಇಟ್ಟು ಅರ್ಚಕರು ಪೂಜೆ ಸಲ್ಲಿಸುತ್ತಾರೆ.

ಈ ಲಿಂಬೆಹಣ್ಣಿನಲ್ಲಿ ವಿಶೇಷ ಶಕ್ತಿಯಿದೆ ಎಂದು ಸಾಕಷ್ಟು ವರ್ಷಗಳಿಂದ ಭಕ್ತರು ನಂಬಿಕೊಂಡು ಬಂದಿದ್ದಾರೆ. ಸಂತಾನದೋಷದಿಂದ ಬಳಲುತ್ತಿರುವ ದಂಪತಿಗಳಿಗೆ ಈ ಲಿಂಬೆಹಣ್ಣು ಸಿಕ್ಕಿದರೆ ಸಂತಾನ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆಯಿದೆ. ಈ ಲಿಂಬೆ ಹಣ್ಣನ್ನು ಪಡೆದವರಿಗೆ ಯಶಸ್ಸು ಹೆಗಲೇರಿ ಬರುತ್ತದೆ ಎಂಬ ಪ್ರತೀತಿ ಇದೆ.

Continue Reading

LATEST NEWS

ತ್ರಿಬಲ್ ಮರ್ಡ*ರ್ ಪ್ರಕರಣ: ಏಳು ದಿನಗಳ ಬಳಿಕ ಮನೆಗಳಿಗೆ ತಲುಪಿದ ಮೃ*ತದೇಹ

Published

on

ಬೆಳ್ತಂಗಡಿ: ತುಮಕೂರಿನಲ್ಲಿ ನಡೆದ ತ್ರಿಬಲ್ ಮರ್ಡ*ರ್‌ ಪ್ರಕರಣಕ್ಕೆ ಸಂಬಂಧಿಸಿ ಮೃ*ತಪಟ್ಟ ಮೂವರ ಮೃ*ತ ದೇಹವನ್ನು ಶುಕ್ರವಾರ (ಮಾ.29) ಮುಂಜಾನೆ ಬೆಳ್ತಂಗಡಿಗೆ ತರಲಾಗಿದೆ.

ನಿಧಿ ಆಸೆಗೆ ಮಾ.22ರಂದು ಮೂವರನ್ನು ಕೊಲೆ ಮಾಡಿ ಕಾರಿನಲ್ಲಿ ಹಾಕಿ ಬೆಂಕಿ ಹಚ್ಚಿ ಸುಡಲಾಗಿತ್ತು. ತನಿಖೆ ಬಳಿಕ ಮೃತದೇಹವನ್ನು ಡಿಎನ್‌ಎ ಪರೀಕ್ಷೆ ಮೂಲಕ ಪತ್ತೆ ಹಚ್ಚಲಾಗಿದೆ. ಘಟನೆ ನಡೆದ ಏಳು ದಿನಗಳ ಬಳಿಕ ಸಂಬಂಧಪಟ್ಟವರಿಗೆ ಮೃತದೇಹವನ್ನು ತಲುಪಿಸಲಾಗಿದೆ.

ಮೃತಪಟ್ಟ ಶಾಹುಲ್ ಹಮೀದ್ ಹಾಗೂ ಇಸಾಕ್ ಅವರ ಮೃತದೇಹ ಮೊಯ್ಯುದ್ದೀನ್ ಜುಮಾ ಮಸೀದಿ ಹಳೆಪೇಟೆಗೆ ಮತ್ತು ಸಿದ್ದೀಕ್ ಅವರ ಮೃತದೇಹ ಶಿರ್ಲಾಲ್ ಮಸೀದಿಗೆ ತಲುಪಿದ್ದು, ಅಲ್ಲಿ ಅಂತಿಮ ದರ್ಶನ ಹಾಗೂ ವಿಧಿ ವಿಧಾನ ನೆರವೇರಲಿದೆ.

ಪ್ರಕರಣದ ಹಿನ್ನೆಲೆ:

ತುಮಕೂರು ಜಿಲ್ಲೆಯಲ್ಲಿ  ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಮೂವರ ಶ*ವ ಪತ್ತೆಯಾಗಿತ್ತು. ಇದೊಂದು ವ್ಯವಸ್ಥಿತ ಕೊ*ಲೆ ಎಂಬುದು ತನಿಖೆಯಿಂದ ಹೊರಬಂದಿತ್ತು.  ಈಗಾಗಲೇ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಈ ಪ್ರಕರಣದ ತನಿಖೆ ನಡೆಸಿದ ಕೋರಾ ಪೊಲೀಸ್ ಠಾಣೆಯ ಅಧಿಕಾರಿಗಳು ಪ್ರಮುಖ ಆರೋಪಿ ಪಾತರಾಜ ಹಾಗೂ ಗಂಗರಾಜು ಎಂಬವರನ್ನು ಬಂಧಿಸಲಾಗಿದೆ. ನಿಧಿಯ ಆಸೆಗೆ ತುಮಕೂರಿಗೆ ಹೋಗಿದ್ದ ಬೆಳ್ತಂಗಡಿಯ ಮೂವರನ್ನು ಕೊಲೆ ಮಾಡಿ ಕಾರಿನಲ್ಲಿ ಹಾಕಿ ಬೆಂಕಿ ಹಾಕಿ ಸುಡಲಾಗಿತ್ತು.

ಮೃತರಿಗೆ ಪಾತರಾಜ ಎಂಬಾತ ಆರು ತಿಂಗಳ ಹಿಂದೆ ಪರಿಚಿತವಾಗಿದ್ದು, ನಿಧಿ ವಿಚಾರವಾಗಿ ಮೃತರಿಂದ 6 ಲಕ್ಷ ಹಣ ಪಡೆದುಕೊಂಡಿದ್ದ. ಆದರೆ ಆರು ತಿಂಗಳಾದ್ರೂ ಹಣ ವಾಪಾಸು ನೀಡದ ಕಾರಣ ಮೂವರೂ ಕೂಡಾ ಆತನ ಹಿಂದೆ ಬಿದ್ದಿದ್ದರು. ಹೀಗಾಗಿ ಈ ಮೂವರನ್ನು ಮುಗಿಸಲು ಪ್ಲಾನ್ ರೂಪಿಸಿದ್ದ ಪಾತರಾಜ ಸತ್ಯಮಂಗಲ ನಿವಾಸಿ ಗಂಗರಾಜು ಎಂಬಾತನ ಸಹಾಯ ಪಡೆದಿದ್ದ. ಆತನಿಗೆ 3 ಕೆ.ಜಿ ಚಿನ್ನಕೊಡುವುದಾಗಿ ನಂಬಿಸಿ ತನ್ನ ಕೆಲಸ ಮಾಡಿಸಿದ್ದ.

ಗಂಗರಾಜು ಕೂಡಾ ಚಿನ್ನದ ಆಸೆಗೆ ತನ್ನ ಸಹಚರರ ಮೂಲಕ ಇಸಾಕ್, ಹಮೀದ್ ಹಾಗೂ ಸಿದ್ದಿಕ್ ಅವರನ್ನು ಕೊಲೆ ಮಾಡಿಸಿದ್ದ. ತುಮಕೂರಿನ ಬೀರನಕಲ್ಲು ಬೆಟ್ಟದ ಬಳಿ ಬರಲು ಹೇಳಿ ಅಲ್ಲಿ ಮಚ್ಚು ಲಾಂಗ್‌ನಿಂದ ಹಲ್ಲೆ ಮಾಡಿ ಮೂವರನ್ನು ಕೊಲೆ ಮಾಡಲಾಗಿತ್ತು. ಬಳಿಕ ಅಲ್ಲಿಂದ ಅವರದೇ ಕಾರಿನಲ್ಲಿ ಮೃತದೇಹ ಇರಿಸಿ ಕುಚ್ಚಂಗಿ ಕೆರೆ ಬಳಿ ತಂದು ಕಾರಿಗೆ ಬೆಂಕಿ ಹಚ್ಚಿದ್ದಾರೆ. ಇನ್ನು ಪ್ರಕರಣ ಸಂಬಂಧ ತಲೆ ಮರೆಸಿಕೊಂಡಿರುವ ಪ ಮಧುಸೂದನ್ ನವೀನ್,  ಕೃಷ್ಣ,  ಗಣೇಶ್,  ಕಿರಣ್,  ಸೈಮನ್ ಗಾಗಿ ಪೊಲೀಸರು ಬಲೆ ಬೀಸಿದ್ದಾರೆ..

Continue Reading

LATEST NEWS

Trending