Connect with us

    DAKSHINA KANNADA

    ಮಂಗಳೂರು: ಜೂ.13 ರಿಂದ 29ರ ವರೆಗೆ ಕೃಷಿ ಅಭಿಯಾನ

    Published

    on

    ಮಂಗಳೂರು: ಜಿಲ್ಲಾ ಪಂಚಾಯತ್ ಹಾಗೂ ಮಂಗಳೂರು ತಾಲೂಕು ಕೃಷಿ ಇಲಾಖೆಯಿಂದ 2022-23ನೇ ಸಾಲಿಗೆ ಕೃಷಿ, ತೋಟಗಾರಿಕೆ, ಪಶುಪಾಲನೆ, ಮೀನುಗಾರಿಕೆ, ಅರಣ್ಯ, ರೇಷ್ಮೆ ಇಲಾಖೆಗಳ ಸಮನ್ವಯದೊಂದಿಗೆ ಇದೇ ಜೂ.13 ರಿಂದ 29ರ ವರೆಗೆ ಕೃಷಿ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.


    ಸಂಬಂಧಿಸಿದ ಇಲಾಖೆಗಳಲ್ಲಿ ಅನುಷ್ಠಾನಗೊಳ್ಳುವ ಕಾರ್ಯಕ್ರಮಗಳ ಹಾಗೂ ರೈತರಿಗೆ ದೊರೆಯುವ ಸೌಲಭ್ಯಗಳ ಕುರಿತು ಕೃಷಿ ಮಾಹಿತಿ ರಥ ಸಿದ್ದಪಡಿಸಿಕೊಂಡು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳೊಂದಿಗೆ ಹೋಬಳಿಯ ಪ್ರತಿ ಗ್ರಾಮ ಪಂಚಾಯತ್‍ಗಳಿಗೆ ಭೇಟಿ ನೀಡಿ ಆ ವ್ಯಾಪ್ತಿಯ ಕೃಷಿಕರಿಗೆ, ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಸದಸ್ಯರಿಗೆ ಮಾಹಿತಿ ನೀಡಲಾಗುವುದು.
    ತಾಲೂಕಿನ ಹೋಬಳಿಯ ಗ್ರಾಮ ಪಂಚಾಯತ್‍ಗಳಿಗೆ ಭೇಟಿ ನೀಡುವ ದಿನಾಂಕ ಹಾಗೂ ಸಮಯದ ವಿವರ ಇಂತಿದೆ:
    ಮೂಡಬಿದ್ರೆ:
    ಮೂಡಬಿದ್ರೆ ಹೋಬಳಿಯ ಗ್ರಾಮ ಪಂಚಾಯತ್‍ಗಳಲ್ಲಿ ಜೂ.13ರ ಬೆಳಿಗ್ಗೆ 11.30ರಿಂದ ಮಧ್ಯಾಹ್ನ 12ರ ವರೆಗೆ ಪುತ್ತಿಗೆ, ಮಧ್ಯಾಹ್ನ 2 ರಿಂದ 3 ರವರೆಗೆ ಕಡಂದಲೆ, ಮಧ್ಯಾಹ್ನ 3ರಿಂದ 4ರವರೆಗೆ ಕಲ್ಲಮುಂಡ್ಕೂರು, ಸಂಜೆ 4ರಿಂದ 5.30 ರವರೆಗೆ ತೆಂಕ ಮಿಜಾರು.
    ಜೂ.14ರಂದು ಬೆಳಿಗ್ಗೆ 10 ರಿಂದ 11 ರವರೆಗೆ ಹೊಸಬೆಟ್ಟು, 11.30 ರಿಂದ 12.30ರ ವರೆಗೆ ಇರುವೈಲು, ಮಧ್ಯಾಹ್ನ 2ರಿಂದ 3ರವರೆಗೆ ಶಿರ್ತಾಡಿ, 3.30ರಿಂದ 5.30ರವರೆಗೆ ವಾಲ್ಟಾಡಿ.
    ಜೂ.15ರಂದು ಬೆಳಿಗ್ಗೆ 10.30ರಿಂದ 11.30ರವರೆಗೆ ನೆಲ್ಲಿಕಾರು, 12ರಿಂದ 1ರವರೆಗೆ ಧರೆಗುಡ್ಡೆ, 2ರಿಂದ 3ರವರೆಗೆ ಬೆಳುವಾಯಿ ಹಾಗೂ 3ರಿಂದ 5ರವರೆಗೆ ಪಡುಮಾರ್ನಡುನಲ್ಲಿ ನಡೆಯಲಿದೆ.
    ಗುರುಪುರ:
    ಗುರುಪುರ ಹೋಬಳಿಯ ಗ್ರಾಮ ಪಂಚಾಯತ್‍ಗಳಲ್ಲಿ ಜೂ.16ರ ಬೆಳಿಗ್ಗೆ 10.30ರಿಂದ 11.30ರವರೆಗೆ ಬಡಗ ಎಡಪದವು, ಮಧ್ಯಾಹ್ನ 12ರಿಂದ 1ರವರೆಗೆ ತೆಂಕ ಎಡಪದವು, 2ರಿಂದ 3ರವರೆಗೆ ಮುಚ್ಚೂರು, 3.30ರಿಂದ 4.30ರವರೆಗೆ ಕುಪ್ಪೆ ಪದವು, ಸಂಜೆ 5ರಿಂದ 5.30ರವರೆಗೆ ಮುತ್ತೂರು.
    ಜೂ.17ರ ಬೆಳಿಗ್ಗೆ 10ರಿಂದ 11ರವರೆಗೆ ಗಂಜೀಮಠ, 12ರಿಂದ 1 ರವರೆಗೆ ಪಡುಪೆರಾರ್, ಮಧ್ಯಾಹ್ನ 2ರಿಂದ 3ರವರೆಗೆ ಕಂದಾವರ, ಸಂಜೆ 4ರಿಂದ 5ರವರೆಗೆ ಗುರುಪುರ.
    ಜೂ.18ರ ಬೆಳಿಗ್ಗೆ 10ರಿಂದ 11ರವರೆಗೆ ಉಳಾಯಿಬೆಟ್ಟು, 12ರಿಂದ 1 ರವರೆಗೆ ಮಲ್ಲೂರು, ಮಧ್ಯಾಹ್ನ 2ರಿಂದ 3ರವರೆಗೆ ನೀರುಮಾರ್ಗ, ಸಂಜೆ 4ರಿಂದ 5.30ರವರೆಗೆ ಆಡ್ಯಾರುನಲ್ಲಿ ನಡೆಯಲಿದೆ.
    ಸುರತ್ಕಲ್:
    ಸುರತ್ಕಲ್ ಹೋಬಳಿಯ ಗ್ರಾಮ ಪಂಚಾಯತ್‍ಗಳಲ್ಲಿ ಜೂ.20ರ ಬೆಳಿಗ್ಗೆ 11.30ರಿಂದ 12.30ರವರೆಗೆ ಚೇಳ್ಯಾರು, ಮಧ್ಯಾಹ್ನ 12.30ರಿಂದ 1.30ರವರೆಗೆ ಸೂರಿಂಜೆ, 2.30ರಿಂದ 3.30ರವರೆಗೆ ಎಕ್ಕಾರು, ಸಂಜೆ 4.30ರಿಂದ 5.30ರವರೆಗೆ ಪೆರ್ಮುದೆ.
    ಜೂ.21ರ ಬೆಳಿಗ್ಗೆ 10 ರಿಂದ 11ರವರೆಗೆ ಬಾಳ, 11.30ರಿಂದ 12.30ರವರೆಗೆ ಜೋಕಟ್ಟೆ, ಮಧ್ಯಾಹ್ನ 3.30ರಿಂದ 4.30ರವರೆಗೆ ಮೂಡುಶೆಡ್ಡೆಯಲ್ಲಿ ನಡೆಯಲಿದೆ.
    ಮುಲ್ಕಿ:
    ಮುಲ್ಕಿ ಹೋಬಳಿಯ ಗ್ರಾಮ ಪಂಚಾಯತ್‍ಗಳಲ್ಲಿ ಜೂ.22ರ ಬೆಳಿಗ್ಗೆ 10.30ರಿಂದ 11.30ರವರೆಗೆ ಅತಿಕಾರಿಬೆಟ್ಟು, 12ರಿಂದ 1ರವರೆಗೆ ಕಿಲ್ಪಾಡಿ, ಮಧ್ಯಾಹ್ನ 2.30ರಿಂದ 3.30ರವರೆಗೆ ಕೆಮ್ರಾಲ್.
    ಜೂ.23ರ ಬೆಳಿಗ್ಗೆ 11ರಿಂದ 12.30ರವರೆಗೆ ಹಳೆಯಂಗಡಿ, ಮಧ್ಯಾಹ್ನ 2ರಿಂದ 3.30ರವರೆಗೆ ಪಡುಪಣಂಬೂರು.
    ಜೂ.24ರ ಬೆಳಿಗ್ಗೆ 10.30ರಿಂದ 12ರವರೆಗೆ ಐಕಳ, ಮಧ್ಯಾಹ್ನ 2.30ರಿಂದ 3.30ರವರೆಗೆ ಬಳ್ಕುಂಜೆಯಲ್ಲಿ ನಡೆಯಲಿದೆ.
    ಮಂಗಳೂರು-ಬಿ:
    ಮಂಗಳೂರು-ಬಿ ಹೋಬಳಿಯ ಗ್ರಾಮ ಪಂಚಾಯತ್‍ಗಳಲ್ಲಿ ಜೂ.27ರ ಬೆಳಿಗ್ಗೆ 10.30ರಿಂದ 11.30ರವರೆಗೆ ಮುನ್ನೂರು, 11.30ರಿಂದ 12.30ರವರೆಗೆ ಅಂಬ್ಲಮೊಗರು, ಮಧ್ಯಾಹ್ನ 1ರಿಂದ 2ರವರೆಗೆ ಹರೇಕಳ, 3ರಿಂದ 4ರವರೆಗೆ ಪಾವೂರು.
    ಜೂ.28ರಂದು ಬೆಳಿಗ್ಗೆ 10.30ರಿಂದ 11.30ರವರೆಗೆ ಬೋಳಿಯಾರು, ಮಧ್ಯಾಹ್ನ 12.30ರಿಂದ 1.30ರವರೆಗೆ ಕೊಣಾಜೆ, 3ರಿಂದ 4ರವರೆಗೆ ಬೆಳ್ಮ.
    ಜೂ.29ರ ಬೆಳಿಗ್ಗೆ 10.30ರಿಂದ 11.30ರವರೆಗೆ ಮಂಜನಾಡಿ, ಮಧ್ಯಾಹ್ನ 12ರಿಂದ 1ರವರೆಗೆ ಕಿನ್ಯಾ ಹಾಗೂ 3ರಿಂದ 4ರವರೆಗೆ ತಲಪಾಡಿಯಲ್ಲಿ ನಡೆಯಲಿದೆ ಎಂದು ಮಂಗಳೂರು ತಾಲೂಕಿನ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    DAKSHINA KANNADA

    ವಿದೇಶಿ ಹಡಗಿನಲ್ಲಿ ಬೆಂಕಿ ಅವಘಡ; ಕರ್ನಾಟಕ ಕರಾವಳಿಯಲ್ಲಿ ಲಂಗರು ಹಾಕಿದ ಕಾರ್ಗೋ ಹಡಗು

    Published

    on

    ಮಂಗಳೂರು: ಗುಜರಾತ್‌ನಿಂದ ಕೊಲಂಬೋಕ್ಕೆ ವಿವಿಧ ಸರಕುಗಳನ್ನು ಸಾಗಾಟ ಮಾಡುತ್ತಿದ್ದ ವಿದೇಶಿ ಮೂಲದ ಸರಕು ಸಾಗಾಟ ಹಡಗಿನಲ್ಲಿ ಅಗ್ನಿ ಆಕಸ್ಮಿಕ ನಡೆದ ಘಟನೆ ಬೆಳಕಿಗೆ ಬಂದಿದೆ.

     

     

    ಜುಲೈ 19 ರಂದು ಕರ್ನಾಟಕ ಕರಾವಳಿಯ ಸಮುದ್ರದಲ್ಲಿ ಈ ದುರ್ಘಟನೆ ನಡೆದಿದ್ದು, ಕೋಸ್ಟ್‌ ಗಾರ್ಡ್‌ ತಂಡ ಹೆಲಿಕಾಪ್ಟರ್‌ ಹಾಗೂ ರಕ್ಷಣಾ ಹಡಗಿನ ಮೂಲಕ ಸತತ ನಲುವತ್ತು ಘಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದೆ. ಹಡಗಿನಲ್ಲಿ ಒಟ್ಟು 21 ಸಿಬ್ಬಂದಿ ಇದ್ದು ಒಬ್ಬ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

    ಹಡಗಿನ ಬೆಂಕಿ ನಂದಿಸಿ ಸಿಬ್ಬಂದಿಗಳ ರಕ್ಷಣೆ ಮಾಡಿದ ಬಳಿಕ ಹಡಗನ್ನು ಕರ್ನಾಟಕ ಕರಾವಳಿ ಭಾಗಕ್ಕೆ ತೆಗೆದುಕೊಂಡು ಬರಲಾಗಿದೆ. ಸದ್ಯ ಸುರತ್ಕಲ್ ಕಡಲ ಕಿನಾರೆಯಿಂದ ಸುಮಾರು 33 ನಾಟಿಕಲ್ ಮೈಲ್‌ ದೂರದಲ್ಲಿ ಹಡಗು ಲಂಗರು ಹಾಕಲಾಗಿದೆ. ಗುಜಾರಾತ್‌ನ ಮುಂದ್ರಾ ಬಂದರಿನಿಂದ ಹೊರಟಿದ್ದ ಈ ಹಡಗು ಪನಾಮ ದೇಶಕ್ಕೆ ಸೇರಿದ್ದಾಗಿ ಮಾಹಿತಿ ಲಭ್ಯವಾಗಿದೆ.

    ಬೆಂಕಿ ಅವಘಡದಿಂದ ಸಂಪೂರ್ಣ ಹಾನಿಯಾಗಿರುವ ಹಡಗು ಅಪಾಯಕಾರಿ ಪರಿಸ್ಥಿತಿಯಲ್ಲಿದ್ದು, ಕೋಸ್ಟ್‌ ಗಾರ್ಡ್‌ ಸಿಬ್ಬಂದಿ ಹಡಗಿನ ಮೇಲೆ ನಿಗಾ ಇರಿಸಿದ್ದಾರೆ. ಹಡಗು ಮುಳುಗಡೆಯಾಗುವ ಸಾದ್ಯತೆಯ ಜೊತೆಗೆ ಹಡಗಿನಲ್ಲಿ ಮತ್ತೆ ಬೆಂಕಿ ಕಾಣಿಸಿಕೊಳ್ಳುವ ಸಂಭವ ಕೂಡಾ ಇದೆ. ಹೀಗಾಗಿ ಹಡಗು ಮುಳುಗಡೆಯಾದಲ್ಲಿ ಸಮುದ್ರಕ್ಕೆ ತೈಲ ಸೋರಿಕೆಯ ಆತಂಕ ಕೂಡಾ ಎದುರಾಗಿದೆ. ಹೀಗಾಗಿ ಹಡಗಿನ ಮೇಲೆ ನಿಗಾ ವಹಿಸಿರುವ ಕೋಸ್ಟ್‌ ಗಾರ್ಡ್‌ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.

    Continue Reading

    DAKSHINA KANNADA

    ದಕ್ಷಿಣ ಕನ್ನಡ ಜಿಲ್ಲೆಯ ಮಹಾಪ್ರವಾಹಕ್ಕೆ 50 ವರ್ಷ; ಮರುಕಳಿಸದಿರಲಿ ‘ಆ ಶುಕ್ರವಾರ’ ಎನ್ನುತ್ತಿದ್ದಾರೆ ಕರಾವಳಿಗರು!

    Published

    on

    ಮಂಗಳೂರು: 1974 ಜುಲೈ 26ರ ಶುಕ್ರವಾರ ರಾತ್ರಿ ಇಡೀ ಸುರಿದ ಭಾರೀ ಮಳೆ ಮುಂಜಾನೆಯ ವೇಳೆಗೆ ನೆರೆ ರೌದ್ರಾವತಾರ ತಾಳಿತ್ತು.

    ಹಿಂದೆ ಎಂದೂ ಕಾಣದ ರೀತಿ ನೇತ್ರಾವತಿ ನದಿ ಉಕ್ಕಿ ಹರಿದಿತ್ತು. ನಸುಕಿನ ಜಾವ ನೇತ್ರಾವತಿ ನದಿ ಮನೆಯೊಳಗೆಯೇ ಪ್ರವೇಶಿಸಿತ್ತು.

    ಬಂಟ್ವಾಳ ಪೇಟೆ, ಪಕ್ಕದೂರುಗಳಿಗೆ ಸಂಪರ್ಕಿಸುವ ರಸ್ತೆಗಳೆಲ್ಲವೂ ಕ್ಷಣಮಾತ್ರದಲ್ಲೆ ಜಲಮಯ. ಎಲ್ಲಿಗೆ ಹೋಗೋದು? ಏನು ಮಾಡೋದು ಅನ್ನೋದನ್ನು ಯೋಚಿಸುವಷ್ಟರಲ್ಲೇ ಊರಿಗೆ ಊರೇ ಮುಳುಗಿತ್ತು. ಬಂಟ್ವಾಳ ಮತ್ತು ಉಪ್ಪಿನಂಗಡಿ ಪೇಟೆಯಲ್ಲಿ ವಾಹನಗಳ ಬದಲು ದೋಣಿಗಳು ಸಂಚರಿಸಿದ್ದವು. ಆ ಕಾಲದಲ್ಲಿಯೇ ಐವತ್ತು ಲಕ್ಷ ರೂಪಾಯಿ ನಷ್ಟ ಉಂಟಾಗಿತ್ತು.

    ಆ ಸಮಯದಲ್ಲಿ ಜಿಲ್ಲೆಯ ಬಹುತೇಕ ಪ್ರದೇಶಗಳು ನೆರೆ ನೀರಿನಿಂದ ಆವರಿಸಿದ್ದವು, ಆವತ್ತಿನ ಕಾಲದಲ್ಲಿ ಮಣ್ಣಿನಿಂದ ನಿರ್ಮಿಸಿದ್ದ ನೂರಾರು ಮನೆ ಅಂಗಡಿ ನೆರೆ ನೀರಿಗೆ ಕೊಚ್ಚಿಕೊಂಡು ಹೋಗಿದ್ದವು. ಈಗಲೂ ಕೂಡಾ ಆ ಭೀಕರ ನೆರೆಯು ನಮ್ಮ ಹಿರಿಯರ ಬಾಯಲ್ಲಿ (ಎಲ್ಪತ್ತ ನಾಲೆತ್ತ ಬೊಲ್ಲ) ಎಂದು ಪ್ರಖ್ಯಾತಿ ಹೊಂದಿದೆ.

    ಕಾಕತಾಳೀಯ ಎಂಬಂತೇ ಪ್ರವಾಹದ ಆ ದಿನ, ವಾರ ಎಲ್ಲವೂ ಸೇಮ್ ಆಗಿದ್ದು, ಮತ್ತೆ ಅದೇ ರೀತಿಯ ಪ್ರವಾಹ ಪರಿಸ್ಥಿತಿಯೂ ನೇತ್ರಾವತಿ ತಟದಲ್ಲಿದೆ. ಈಗಾಗಲೇ ನೇತ್ರಾವತಿ ಅಪಾಯ ಮಟ್ಟ ಮೀರಿದ್ದು, ಈ ಆತಂಕಕ್ಕೆ ಕಾರಣವೂ ಆಗಿದೆ.

    Continue Reading

    LATEST NEWS

    Trending