LATEST NEWS
ಉಡುಪಿ ಪರ್ಯಾಯ ಸಂಭ್ರಮೋತ್ಸವಕ್ಕೆ ಕೃಷ್ಣಾಪುರ ಮಠದಿಂದ ಬಾಳೆ ಮುಹೂರ್ತ ..!
ಉಡುಪಿ ಪರ್ಯಾಯ ಸಂಭ್ರಮೋತ್ಸವಕ್ಕೆ ಕೃಷ್ಣಾಪುರ ಮಠದಿಂದ ಬಾಳೆ ಮುಹೂರ್ತ
ಉಡುಪಿ: ಉಡುಪಿಯ ಕೃಷ್ಣಮಠದಲ್ಲಿ ಪರ್ಯಾಯ ಅನ್ನೋದು ಒಂದು ಅದ್ಬುತ ಆಡಳಿತ ವ್ಯವಸ್ಥೆ. ಸದ್ಯ ಅದಮಾರು ಸ್ವಾಮೀಜಿಗಳ ಪರ್ಯಾಯ ಮಹೋತ್ಸವ ನಡೆಯುತ್ತಿದೆ.ಮುಂದಿನ ಸರದಿ ಕೃಷ್ಣಾಪುರ ಮಠದ್ದು, 2022 ಜನವರಿಯಲ್ಲಿ ನಡೆಯುವ ಕೃಷ್ಣಾಪುರ ಪರ್ಯಾಯಕ್ಕೆ ಬಾಳೆ ಮುಹೂರ್ತ ನಡೆಯಿತು. ಸಂಪ್ರದಾಯಕ್ಕೆ ಒತ್ತು ನೀಡುವ ಕೃಷ್ಣಾಪುರ ಮಠದ ಬಾಳೆ ಮುಹೂರ್ತ ಸಾಂಪ್ರದಾಯಿಕವಾಗಿವೇ ಸಂಪನ್ನಗೊಂಡಿತು.
ಅಧಿಕಾರಕ್ಕಾಗಿ ನಡೆಯುವ ನಾನಾ ಕಚ್ಚಾಟಗಳನ್ನು ನೋಡ್ತೇವೆ. ಆದರೆ ಇಲ್ಲೊಂದು ಧಾರ್ಮಿಕ ವ್ಯವಸ್ಥೆಯಲ್ಲಿ ಶಿಸ್ತುಬದ್ಧ ಅಧಿಕಾರ ಹಸ್ತಾಂತರ ನಡೆಯುತ್ತಾ ಬಂದಿದೆ. ಒಂದಲ್ಲ ಎರಡಲ್ಲ ಎಂಟ್ನೂರು ವರ್ಷಗಳಿಂದ ಈ ಶಿಸ್ತು ಪಾಲನೆಯಾಗುತ್ತಿದೆ.
ಉಡುಪಿಯ ಕೃಷ್ಣಮಠದಲ್ಲಿ ಕಳೆದ ಎಂಟು ಶತಮಾನಗಳಿಂದ ಒಬ್ಬ ಯತಿಯೂ ಅಧಿಕಾರ ಬಿಟ್ಟು ಕೊಡೋದಿಲ್ಲ ಎಂದು ಬಂಡಾಯವೆದ್ದಿಲ್ಲ. ನಿಯಮಿತ ಕಾಲಕ್ಕೆ ಸರಿಯಾಗಿ ಕೃಷ್ಣಮಠದ ಆಡಳಿತ, ಅಷ್ಟಮಠಗಳ ನಡುವೆ ಅಧಿಕಾರ ಹಸ್ತಾಂತರವಾಗುತ್ತದೆ.
ಪರ್ಯಾಯ ಮಹೋತ್ಸವ ಎಂದು ಕರೆಯಲಾಗುವ ಈ ಆಡಳಿತ ಹಸ್ತಾಂತರ ಒಂದು ಸಾಂಪ್ರದಾಯಿಕ ಮಾದರಿ ಆಚರಣೆ. 2022 ರಿಂದ ಕೃಷ್ಣಾಪುರ ಮಠದ ಪರ್ಯಾಯ ಆರಂಭವಾಗಲಿದೆ.
ಸರಿ ಸುಮಾರು ಒಂದು ವರ್ಷ ಮುಂಚಿತವಾಗಿ ಈ ಮಹೋತ್ಸವಕ್ಕೆ ಪೂರಕವಾಗಿ ಬಾಳೆ ಮುಹೂರ್ತ ನಡೆಯಿತು. ಕೃಷ್ಣಾಪುರ ಮಠದ ವಿದ್ಯಾಸಾಗರ ತೀರ್ಥರು 16 ವರ್ಷಗಳ ನಂತರ ಸರ್ವಜ್ಞ ಪೀಠಾರೋಹಣ ಮಾಡಲಿದ್ದಾರೆ. ಮುಂದಿನ ಒಂದು ವರ್ಷಗಳ ಕಾಲ ದೇಶದ ನಾನಾ ತೀರ್ಥಕ್ಷೇತ್ರಗಳನ್ನು ಅವರು ಸಂದರ್ಶಿಸಲಿದ್ದಾರೆ.
ದೇವರ ಪೂಜೆಗೂ ಬಾಳೆ ಮುಹೂರ್ತಕ್ಕೂ ಅವಿನಾಭಾವ ಸಂಬಂಧವಿದೆ. ಉಡುಪಿಯ ಕೃಷ್ಣನನ್ನು ಅನ್ನಬ್ರಹ್ಮ ಎಂದು ಕರೆಯುತ್ತಾರೆ. ಇಲ್ಲಿ ದಿನವೂ ನಡೆಯುವ ಅನ್ನ ದಾಸೋಹಕ್ಕೆ ವಿಶೇಷ ಮಹತ್ವ. ಬಾಳೆಯ ಗಿಡಗಳನ್ನು ನೆಟ್ಟು ಮುಂದಿನ ವರ್ಷಕ್ಕೆ ಬೇಕಾದ ಬಾಳೆ ಎಲೆಗಳನ್ನು ಸಂಗ್ರಹಿಸುವುದು ಉದ್ದೇಶ.
ಕೃಷ್ಣಾಪುರ ಮಠದಲ್ಲಿ ಪೂಜೆ ಮಾಡಿ, ರಥಬೀದಿಯಲ್ಲಿರುವ ಅನಂತೇಶ್ವರ, ಚಂದ್ರೇಶ್ವರ ದೇವಸ್ಥಾನ ಸಂದರ್ಶಿಸಿ, ಕೃಷ್ಣ ದೇವರಿಗೂ ಪೂಜೆ ಸಲ್ಲಿಸಲಾಗುತ್ತೆ. ಬಳಿಕ ಮೆರವಣಿಗೆಯಲ್ಲಿ ತೆರಳಿ ಬಾಳೆಯ ಗಿಡಗಳನ್ನು ನೆಡುವುದು ಸಂಪ್ರದಾಯ. ಅಷ್ಟಮಠಗಳ ಪ್ರಮುಖರು ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ.
ಊಟೋಪಚಾರಕ್ಕೆ ಬೇಕಾದ ಅಕ್ಕಿ ಸಂಗ್ರಹಕ್ಕೆ ಅಕ್ಕಿ ಮುಹೂರ್ತ, ಧಾನ್ಯ ಸಂಗ್ರಹಕ್ಕೆ ಧಾನ್ಯ ಮುಹೂರ್ತ, ಕಟ್ಟಿಗೆ ಸಂಗ್ರಹಕ್ಕೆ ಕಟ್ಟಿಗೆ ಮುಹೂರ್ತ ಮುಂದಿನ ದಿನಗಳಲ್ಲಿ ನಡೆಯಲಿದೆ. 2022ರ ಜನವರಿಯಲ್ಲಿ ಅದಮಾರು ಸ್ವಾಮಿಜಿಯವರು ಕೃಷ್ಣಾಪುರ ಸ್ವಾಮೀಜಿಗೆ ಅಧಿಕಾರ ಹಸ್ತಾಂತರ ಮಾಡಲಿದ್ದಾರೆ.
DAKSHINA KANNADA
Sullia: ನದಿಗೆ ಸ್ನಾನಕ್ಕೆ ತೆರಳಿದ ವ್ಯಕ್ತಿ ಶವವಾಗಿ ಪತ್ತೆ..!
ಸುಳ್ಯ: ನದಿಗೆ ಸ್ನಾನಕ್ಕೆಂದು ಹೋದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸುಳ್ಯದಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಎರಡನೇ ಮಣ್ಣಗೇರಿಯ ನಿವಾಸಿ ವೆಂಕಟರಮಣ ಎಂದು ಗುರುತಿಸಲಾಗಿದೆ.
ಸುಳ್ಯದಲ್ಲಿರುವ ಆರಂಬೂರು ಸೇತುವೆ ಬಳಿಯ ಪಯಸ್ವಿನಿ ನದಿಗೆ ಸ್ನಾನಕ್ಕೆಂದು ಹೋದ ವ್ಯಕ್ತಿಯು ಕಾಣೆಯಾಗಿದ್ದಾರೆ. ಬಳಿಕ ಅವರ ಹುಡುಕಾಟ ನಡೆಸಲಾಗಿದೆ. ಆದರೆ ಎಷ್ಟು ಹುಡುಕಾಟ ನಡೆಸಿದರೂ ಸಿಕ್ಕಿರಲಿಲ್ಲ. ಆ ಕಾರಣದಿಂದ ಸುಳ್ಯದ ಪೈಚಾರ್ ನ ಮುಳುಗು ತಜ್ಞರ ತಂಡವು ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ಮೇಳಕ್ಕೆತ್ತುವಲ್ಲಿ ಯಶಸ್ವಿಯಾಗಿದೆ. ಸುಳ್ಯ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ
DAKSHINA KANNADA
Sullia: ಮದ್ಯ ಸೇವಿಸಿ ಅಡ್ಡಾದಿಡ್ಡಿ ವಾಹನ ಚಲಾವಣೆ- ಎಪಿಎಂಸಿ ಕಾರ್ಯದರ್ಶಿ ಅಮಾನತು
ಸುಳ್ಯ: ಮದ್ಯಪಾನ ಮಾಡಿ ಹೆದ್ದಾರಿಯಲ್ಲಿ ಅಡ್ಡಾದಿಡ್ಡಿಯಾಗಿ ಸರಕಾರಿ ವಾಹನ ಚಲಾಯಿಸಿದ ಪ್ರಕರಣದ ಆರೋಪಿ ಸುಳ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ನವೀನ್ ಕುಮಾರ್ನನ್ನು ಅಮಾನತುಗೊಳಿಸಿ ಇಲಾಖೆ ಆದೇಶ ಹೊರಡಿಸಿದೆ.
ನವೀನ್ ಕುಮಾರ್ ಮಂಗಳವಾರ ರಾತ್ರಿ ಅರಂಬೂರು ಬಳಿ ರಾಜ್ಯ ಹೆದ್ದಾರಿಯಲ್ಲಿ ಅಪಾಯಕಾರಿಯಾಗಿ ಸರಕಾರಿ ಇಲಾಖೆಯ ನಾಮಫಲಕವಿರುವ ವಾಹನವನ್ನು ಅಪಾಯಕಾರಿಯಾಗಿ ಚಲಾಯಿಸಿದ್ದನೆಂದು ಆರೋಪಿಸಲಾಗಿದೆ. ಅಡ್ಡಾದಿಡ್ಡಿಯಾಗಿ ವಾಹನ ಚಲಾಸುತ್ತಿರುವುದನ್ನು ಗಮನಿಸಿದ ಸ್ಥಳೀಯರು ವಾಹನವನ್ನು ಬೆನ್ನಟ್ಟಿ ಅಡ್ಡಗಟ್ಟಿ ವಿಚಾರಿಸಿದ್ದರು. ಈ ಸಂದರ್ಭ ತಾನು ಸುಳ್ಯ ಎಪಿಎಂಸಿ ಕಾರ್ಯದರ್ಶಿ, ನನ್ನದು ತಪ್ಪಾಯಿತು ಎಂದು ಕ್ಷಮೆ ಯಾಚಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಬುಧವಾರ ಎಪಿಎಂಸಿ ಕಾರ್ಯದರ್ಶಿಯವರನ್ನು ಅಮಾನತುಗೊಳಿಸಿ ಆದೇಶ ಮಾಡಲಾಗಿದೆ. ಬೆಳ್ತಂಗಡಿ ಎಪಿಎಂಸಿ ಕಾರ್ಯದರ್ಶಿ ರವೀಂದ್ರ ಅವರಿಗೆ ಸುಳ್ಯ ಎಪಿಎಂಸಿ ಪ್ರಭಾರ ವಹಿಸಲಾಗಿದೆ.
LATEST NEWS
ಕೋಟಿಯ ಒಡೆಯನಾದ 8ನೇ ತರಗತಿ ಪೋರ..!!
ನವದೆಹಲಿ: ಕೌನ್ ಬನೇಗಾ ಕರೋಡ್ ಪತಿ ಎಂಬ ಹಿಂದಿ ಶೋ ನಲ್ಲಿ ಕೋಟಿ ಗೆದ್ದ 14ವರ್ಷದ ಪೋರ ಸಣ್ಣ ವಯಸ್ಸಿನಲ್ಲೇ ದಾಖಲೆ ಬರೆದಿದ್ದಾನೆ.
ಬಾಲಿವುಡ್ ಸ್ಟಾರ್ ಅಮಿತಾಭ್ ಬಚ್ಚನ್ ನಡೆಸಿಕೊಡುವಂತಹ ಹಿಂದಿಯ ಕೌನ್ ಬನೇಗಾ ಕರೋಡ್ ಪತಿ ಎಂಬ ಶೋ ನಲ್ಲಿ ಹರಿಯಾಣದ ಮಹೇಂದ್ರಗಢ್ ಮೂಲದ 8ನೇ ತರಗತಿ ವಿದ್ಯಾರ್ಥಿ ಮಯಾಂಕ್ ಭಾಗವಹಿಸಿ 15 ಪ್ರಶ್ನೆಗಳಿಗೆ ಉತ್ತರಿಸಿ ಒಂದು ಕೋಟಿ ಗೆದ್ದು ದಾಖಲೆ ಬರೆದಿದ್ದಾನೆ. ಕೌನ್ ಬನೇಗಾ ಕರೋಡ್ ಪತಿಯಲ್ಲಿ ನಡೆಯುವ ಜನಪ್ರಿಯ ಪ್ರಶ್ನೆಗಳಿಗೆ ಉತ್ತರಿಸಿದ 14 ವರ್ಷದ ಕಿರಿಯ ಪೋರ ಎಲ್ಲರ ಮೆಚ್ಚುಗೆಗೆ ಪಾತ್ರನಾಗಿದ್ದಾನೆ.
ಜನಪ್ರಿಯ ರಸಪ್ರಶ್ನೆ ಕಾರ್ಯಕ್ರಮ ಕೌನ್ ಬನೇಗಾ ಕರೋಡ್ಪತಿಯಲ್ಲಿ 1 ಕೋಟಿ ರೂ.ಗೆದ್ದ ಹೆಗ್ಗಳಿಕೆಗೆ ಹರಿಯಾಣದ ಮಹೇಂದ್ರಗಢ್ನ 8 ನೇ ತರಗತಿಯ ವಿದ್ಯಾರ್ಥಿ ಮಯಾಂಕ್ ಪಾತ್ರನಾಗಿದ್ದಾನೆ. 14 ವರ್ಷದ ಈ ಬಾಲಕ 1 ಕೋಟಿ ರೂ.ಗೆದ್ದ ಅತ್ಯಂತ ಕಿರಿಯ ಸ್ಪರ್ಧಿಯಾಗಿದ್ದು, ಹೊಸ ಇತಿಹಾಸ ನಿರ್ಮಿಸಿದ್ದಾನೆ. 15 ಪ್ರಶ್ನೆಗಳಿಗೆ ಉತ್ತರ ಕೊಟ್ಟು, 1 ಕೋಟಿ ರೂ ಗೆದ್ದು, 16ನೇ ಪ್ರಶ್ನೆಗೂ ಸರಿಯಾದ ಉತ್ತರ ನೀಡಿದ್ದಾನೆ. ಈತನ ಗುರಿ ಕೇವಲ ಒಂದು ಕೋಟಿ ಆಗಿರಲಿಲ್ಲ. ಏಳು ಕೋಟಿಯನ್ನು ಗುರಿಯಾಗಿಸಿಟ್ಟುಕೊಂಡಿದ್ದ. ಏಳು ಕೋಟಿಯ ಪ್ರಶ್ನೆಗೆ ಉತ್ತರಿಸೋಕೆ ಆಗದೇ ಆಟದಿಂದ ವಾಪಸ್ಸಾಗಿದ್ದಾನೆ. ಈತನ ಸಾಧನೆಗೆ ಹರಿಯಾಣ ಸಿಎಂ ಮನೊಹರ್ ಲಾಲ್ ಖಟ್ಟರ್ ಅಭಿನಂದಿಸಿದ್ದಾರೆ. ಇದು ಮೊದಲ ಬಾರಿ 14 ವರ್ಷದ ಪೋರ ಕೋಟಿಗೆದ್ದ ಇತಿಹಾಸವಾಗಿದೆ.
- FILM3 days ago
ಆಲಿಯಾ ಭಟ್ ಡೀಫ್ ಫೇಕ್ ವಿಡಿಯೋ ವೈರಲ್ – ವಿಡಿಯೋ ನೋಡಿದ್ರಾ..?
- bangalore4 days ago
ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ನಲ್ಲಿ ಎಂಟ್ರಿಯಾದ ಈ ಸ್ಪರ್ಧಿಗಳು ಯಾರು..?
- bangalore6 days ago
ಬೆಂಗಳೂರು ಕಂಬಳಕ್ಕೆ ಚಾಲನೆ ನೀಡಿದ ಅಶ್ವಿನಿ ಪುನಿತ್ ರಾಜ್ ಕುಮಾರ್
- DAKSHINA KANNADA6 days ago
Puttur: ಮಹಿಳೆಗೆ ಅಮಲು ಬರಿಸುವ ಪಾನೀಯ ಕುಡಿಸಿ ಅತ್ಯಾಚಾರ..!