Friday, March 24, 2023

ಮಂಗಳೂರು ವಿಮಾನ ನಿಲ್ದಾಣಕ್ಕೆ KSRTC ಬಸ್‌-ಅ.31ರಿಂದ ಸಂಚಾರ ಆರಂಭ

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮಣಿಪಾಲ ಮತ್ತು ಮಂಗಳೂರಿನಿಂದ ಕೆಎಸ್ಸಾರ್ಟಿಸಿ ಬಸ್‌ ಸಂಚಾರ ಅ. 31ರಂದು ಆರಂಭಗೊಳ್ಳಲಿದ್ದು, ತಾತ್ಕಾಲಿಕ ವೇಳಾಪಟ್ಟಿಯನ್ನು ಸಿದ್ಧಗೊಳಿಸಲಾಗಿದೆ.


ಈ ಹಿಂದೆ ನಿಗದಿ ಪಡಿಸಿದಂತೆ ಅಕ್ಟೋಬರ್‌ 27ರಂದು ಬಸ್‌ ಸಂಚಾರ ಆರಂಭಗೊಳ್ಳಬೇಕಿತ್ತು. ಕೆಲವು ತಾಂತ್ರಿಕ ಕಾರಣದಿಂದ ವಿಳಂಬವಾಗಿದೆ ಎಂದು ಕೆಎಸ್ಸಾರ್ಟಿಸಿ ಮೂಲಗಳು ತಿಳಿಸಿವೆ.

ಮಂಗಳೂರು ರೈಲು ನಿಲ್ದಾಣ ದಿಂದ ವಿಮಾನ ನಿಲ್ದಾಣಕ್ಕೆ ಬಸ್ಸು ಬೆಳಗ್ಗೆ 6.30, 8.45, 11.10, ಮಧ್ಯಾಹ್ನ 3, ಸಂಜೆ 5.15, 7.30ಕ್ಕೆ ಹೊರಡಲಿದೆ.

ವಿಮಾನ ನಿಲ್ದಾಣದಿಂದ ರೈಲು ನಿಲ್ದಾಣಕ್ಕೆ ಬೆಳಗ್ಗೆ 7.40, 10, ಮಧ್ಯಾಹ್ನ 12.20, ಸಂಜೆ 4.05, 6.25, ರಾತ್ರಿ 08.45ಕ್ಕೆ ಬಸ್ಸು ಹೊರಡುತ್ತದೆ. ಮಂಗಳೂರಿನ ಜ್ಯೋತಿ ಜಂಕ್ಷನ್‌, ಲಾಲ್‌ಬಾಗ್‌, ಕುಂಟಿಕಾನ, ಕಾವೂರು ಮೂಲಕ ವಿಮಾನ ನಿಲ್ದಾಣಕ್ಕೆ ಸಂಚರಿಸಲಿದೆ. ಒಬ್ಬರಿಗೆ 100 ರೂ. ದರ ನಿಗದಿಪಡಿಸಲಾಗಿದೆ.

ಹಾಗೆಯೇ ಮಣಿಪಾಲದಿಂದ ವಿಮಾನ ನಿಲ್ದಾಣಕ್ಕೆ ಬಸ್ಸು ಬೆಳಗ್ಗೆ 7.15, 8.45, ಸಂಜೆ 5.15ಕ್ಕೆ ಹೊರಡಲಿದೆ. ವಿಮಾನ ನಿಲ್ದಾಣದಿಂದ ಮಣಿಪಾಲಕ್ಕೆ ಬೆಳಗ್ಗೆ 10.45, ಮಧ್ಯಾಹ್ನ 12.30 ಮತ್ತು ರಾತ್ರಿ 9.15ಕ್ಕೆ ಹೊರಡಲಿದೆ.

300 ರೂ. ಟಿಕೆಟ್‌ ದರ ನಿಗದಿ ಮಾಡಲಾಗಿದೆ. ಮಂಗಳೂರಿನಿಂದ ಮಣಿಪಾಲಕ್ಕೂ ವೋಲ್ವೊ ಬಸ್‌ ಸೇವೆ ಪುನರಾರಂಭಿಸಲು ಉದ್ದೇಶಿಸಲಾಗಿದೆ.

ಮಂಗಳೂರಿನಿಂದ ಮಣಿಪಾಲಕ್ಕೆ ಈ ಹಿಂದೆ ವೋಲ್ವೊ ಬಸ್‌ ಸೇವೆ ಇತ್ತು. ಆದರೆ ಕಡಿಮೆ ಆದಾಯದ ಹಿನ್ನೆಲೆಯಲ್ಲಿ ಸಂಚಾರ ನಿಲ್ಲಿಸಲಾಗಿತ್ತು.

ಇದೀಗ ಮತ್ತೆ ಈ ಮಾರ್ಗದಲ್ಲಿ 2 ಟ್ರಿಪ್‌ ಕಾರ್ಯಾಚರಿಸಲು ನಿರ್ಧರಿಸಲಾಗಿದೆ. ಕೆಎಸ್ಸಾರ್ಟಿಸಿ ನಿಲ್ದಾಣದಿಂದ ಮಣಿಪಾಲಕ್ಕೆ ಬೆಳಗ್ಗೆ 7ಕ್ಕೆ ಒಂದು ಟ್ರಿಪ್‌ ಮತ್ತು ಮಧ್ಯಾಹ್ನ 1.15ಕ್ಕೆ ಮಣಿಪಾಲ ದಿಂದ ಮಂಗಳೂರಿಗೆ ಒಂದು ಟ್ರಿಪ್‌ ನಡೆಸಲಿದೆ. ಟಿಕೆಟ್‌ ದರ 150 ರೂ. ನಿಗದಿಪಡಿಸಲಾಗಿದೆ.

 

LEAVE A REPLY

Please enter your comment!
Please enter your name here

Hot Topics

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಂದಿದ್ದ ಕುಮಟಾದ ಯುವತಿ ಡಿಡೀರ್ ನಾಪತ್ತೆ..! 

ಕುಟುಂಬಸ್ಥರ ಜೊತೆ ಉತ್ತರ ಕನ್ನಡದಿಂದ ದಕ್ಷಿಣ ಕನ್ನಡದ ಶ್ರೀ ಕ್ಷೇತ್ರಗಳನ್ನು ಸಂದರ್ಶಿಸಲು ಬಂದಿದ್ದ ಹದಿ ಹರೆಯದ ಯುವತಿ ನಾಪತ್ತೆಯಾಗಿದ್ದಾಳೆ.ಬೆಳ್ತಂಗಡಿ : ಕುಟುಂಬಸ್ಥರ ಜೊತೆ ಉತ್ತರ ಕನ್ನಡದಿಂದ ದಕ್ಷಿಣ ಕನ್ನಡದ ಶ್ರೀ ಕ್ಷೇತ್ರಗಳನ್ನು...

ಚಿಕ್ಕಮಗಳೂರು : ಬೈಕಿಗೆ ಬಸ್ ಡಿಕ್ಕಿ – ಇಬ್ಬರು ಸವಾರರು ಸ್ಥಳದಲ್ಲೇ ಮೃತ್ಯು..!

ಕೆಎಸ್ಆರ್ ಟಿಸಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರಿನಲ್ಲಿ ಸಂಭವಿಸಿದೆ. ಚಿಕ್ಕಮಗಳೂರು: ಕೆಎಸ್ಆರ್ ಟಿಸಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು...

ಉಡುಪಿ : ಕಳವಾದ 74 ಲಕ್ಷ ರೂಪಾಯಿ ಸೊತ್ತುಗಳು ಮರಳಿ ಮಾಲಕರಿಗೆ ಹಸ್ತಾಂತರಿಸಿದ ಪೊಲೀಸರು.!

ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಳ್ಳತನ ,ದರೋಡೆ ಮತ್ತಿತರ ಕಾರಣಗಳಿಂದ ಸುತ್ತುಗಳನ್ನು ಕಳೆದುಕೊಂಡವರಿಗೆ ಅವರ ಚಿನ್ನಾಭರಣ ಸೊತ್ತು ಮತ್ತು ನಗದನ್ನು ಹಸ್ತಾಂತರಿಸಲಾಯಿತು.ಉಡುಪಿ : ಉಡುಪಿ ಜಿಲ್ಲೆಯ ವಿವಿಧ ಪೊಲೀಸ್...