DAKSHINA KANNADA
ಕುದ್ರೆಬೆಟ್ಟು ಕಾರಣಿಕದ ಕಲ್ಲುರ್ಟಿ ದೈವಸ್ಥಾನದ ಪುನ: ಪ್ರತಿಷ್ಠಾ ಮಹೋತ್ಸವದ ಸಂಭ್ರಮ
ಬಂಟ್ವಾಳ : ಬಾಳ್ತಿಲ ಗ್ರಾಮದ ಕುದ್ರಬೆಟ್ಟು ಪರಿಸರದಲ್ಲಿ ರಾಷ್ಟ್ರೀಯ ಹೆದ್ದಾರಿ 75 ರ ದಕ್ಷಿಣ ಭಾಗದ ಗುಡ್ಡಗಳ ನಡುವೆ ಹಚ್ಚ ಹಸುರಿನ ಮೇರು ವೃಕ್ಷಗಳಿಂದ ನಯನಮನೋಹರ ಪರಿಸರದ ನಡುವೆ ಕಂಗೊಳಿಸುತ್ತಿರುವ ಊರಿನ ಸಾಮಾಜಿಕ ಧಾರ್ಮಿಕ ಸಾಂಸ್ಕೃತಿಕ ಶ್ರದ್ಧಾ ಭಕ್ತಿಯ ಕೇಂದ್ರ ಶ್ರೀ ಮಣಿಕಂಠ ಮಂದಿರದ ವಠಾರದಲ್ಲಿರುವ ಸಾನಿಧ್ಯವೇ “ಶ್ರೀ ಕಲ್ಲುರ್ಟಿ ದೈವಸ್ಥಾನ ಕುದ್ರೆಬೆಟ್ಟು”.
ಇಲ್ಲಿ ಶ್ರದ್ಧಾ ಭಕ್ತಿಯಿಂದ ತಾಯಿ ಕಲ್ಲುರ್ಟಿಯಲ್ಲಿ ಪ್ರಾರ್ಥಿಸಿದರೆ, ಭಕ್ತರ ಇಷ್ಟಾರ್ಥಗಳು ಕ್ಷಣಮಾತ್ರದಲ್ಲಿ ಈಡೇರುತ್ತದೆ ಎಂಬ ನಂಬಿಕೆಯಿದೆ. ಈ ಕ್ಷೇತ್ರದಲ್ಲಿ ದಿನೇ ದಿನೇ ಹರಕೆ ಸೇವೆಗಳು, ಅಗೆಲು ಸೇವೆಗಳ ಸಂಖ್ಯೆ ಗಣನೀಯ ಏರುತ್ತಿವೆ. ಸುಮಾರು 15 ವರ್ಷಗಳ ಹಿಂದೆ ಈ ಸಾನಿಧ್ಯದ ಪ್ರತಿಷ್ಠಾ ಕಾರ್ಯಗಳು ನಡೆದಿವೆ.
ಇದೀಗ ಶಿಥಿಲಾವಸ್ಥೆಯಲ್ಲಿರುವ ಈ ಸಾನಿಧ್ಯವನ್ನು ಊರ ಪರ ಊರ ಭಗವತ್ ಭಕ್ತರ ಸಹಕಾರದೊಂದಿಗೆ ಜೀರ್ಣೋದ್ಧಾರ ಮಾಡಲು ನಿರ್ಧರಿಸಿದ್ದು, ಆ ಪ್ರಕಾರ ಜನಶಕ್ತಿ ಸೇವಾ ಟ್ರಸ್ಟ್ (ರಿ )ಕುದ್ರೆಬೆಟ್ಟು, ಶ್ರೀ ಮಣಿಕಂಠ ಯುವಶಕ್ತಿ( ರಿ) ಕುದ್ರೆಬೆಟ್ಟು, ಶ್ರೀ ಮಣಿಕಂಠ ಮಾತೃಶಕ್ತಿ ಕುದ್ರೆಬೆಟ್ಟು ಜವಾಬ್ದಾರಿಯನ್ನು ಹೆಗಲಿಗೇರಿಸಿಕೊಂಡಿದೆ. ಅಂತೆಯೇ, ಇದೀಗ ಕೇವಲ ಒಂದೇ ತಿಂಗಳ ಅವಧಿಯಲ್ಲಿ ನೂತನ ಸಾನಿಧ್ಯ ನಿರ್ಮಿಸಲಾಗಿದ್ದು, ಅದರ ಪುನಃ ಪ್ರತಿಷ್ಠಾ ಮಹೋತ್ಸವ ಶುಕ್ರವಾರ ನಡೆದಿದೆ.
ಬೆಳಿಗ್ಗೆ ಗಣಹೋಮ ಬಳಿಕ 10.00 ರಿಂದ 10.25ರ ಒಳಗೆ ಒದಗುವ ಮಿಥುನ ಲಗ್ನದ ಸುಮೂಹೂರ್ತದಲ್ಲಿ ಸೂರ್ಯನಾರಾಯಣ ಭಟ್ ಕಶೆಕೋಡಿ ಇವರ ವೈದಿಕತ್ವದಲ್ಲಿ ಶ್ರೀಕಲ್ಲುರ್ಟಿ ದೈವದ ಪ್ರತಿಷ್ಠೆ, ಸಾನಿಧ್ಯ ನವಕ ಕಲಶಾಭಿಷೇಕ, ಪರ್ವ ಸೇವೆ ನಡೆಯಿತು.
ಇದನ್ನೂ ಓದಿ : ಮೇ 3 ರಂದು ಕುದ್ರೆಬೆಟ್ಟು ಕಾರಣಿಕದ ಕಲ್ಲುರ್ಟಿ ದೈವಸ್ಥಾನದ ಪುನ: ಪ್ರತಿಷ್ಠಾ ಮಹೋತ್ಸವ; ಈ ದೈವಸ್ಥಾನದ ಹಿಂದಿದೆ ರೋಚಕ ಕಥೆ!
ಕಲ್ಲಡ್ಕ ಬಾಳ್ತಿಲ ಗ್ರಾಮದ ಕುದ್ರೆಬೆಟ್ಟು ಶ್ರೀಕಲ್ಲುರ್ಟಿ ದೈವಸ್ಥಾನದಲ್ಲಿ ಶ್ರೀಕಲ್ಲುರ್ಟಿ ದೈವದ ಪುನಃ ಪ್ರತಿಷ್ಠಾ ಮಹೋತ್ಸವ ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಿತು. ರಾತ್ರಿ ಶ್ರೀ ಕಲ್ಲುರ್ಟಿ ಮತ್ತು ಗುಳಿಗ ದೈವಗಳ ನೇಮ ನಡೆಯಿತು. ಇದೇ ಸಂದರ್ಭ ದೈವಸ್ಥಾನದ ಪುನಃ ಪ್ರತಿಷ್ಠಾ ಕಾರ್ಯಕ್ಕಾಗಿ ಶ್ರಮಿಸಿದವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಜನಶಕ್ತಿ ಸೇವಾ ಟ್ರಸ್ಟ್ ಕುದ್ರೆಬೆಟ್ಟು, ಶ್ರೀ ಮಣಿಕಂಠ ಯುವಶಕ್ತಿ ಕುದ್ರೆಬೆಟ್ಟು, ಶ್ರೀ ಮಣಿಕಂಠ ಮಾತೃಶಕ್ತಿ ಕುದ್ರೆಬೆಟ್ಟು ಸಂಘದ ಅಧ್ಯಕ್ಷರುಗಳು, ಪದಾಧಿಕಾರಿಗಳು, ಸರ್ವ ಸದಸ್ಯರುಗಳು, ಊರಿನ ಪರ ಊರಿನ ಅಪಾರ ಭಕ್ತಾದಿಗಳು ಉಪಸ್ಥಿತರಿದ್ದರು.
DAKSHINA KANNADA
ಮಂಗಳೂರು : ಮೇ 25 ರಂದು ಉಚಿತ ವೈದ್ಯಕೀಯ ಮತ್ತು ರಕ್ತದಾನ ಶಿಬಿರ
ಮಂಗಳೂರು : ಅಖಿಲ ಭಾರತ ಬಿಲ್ಲವರ ಯೂನಿಯನ್ (ರಿ.), ಮಂಗಳೂರು ಮತ್ತು ನಾರಾಯಣ ಗುರು ಕಾಲೇಜು ಇದರ ಆಶ್ರಯದಲ್ಲಿ ಕೆ.ಎಮ್.ಸಿ. ಆಸ್ಪತ್ರೆ ಅತ್ತಾವರ ಮಂಗಳೂರು ಇದರ ಸಹಕಾರದಿಂದ ಹಿಂದುಳಿದ ಸಮಾಜದ ಸಾಮಾಜಿಕ ಕ್ರಾಂತಿಯ ಹರಿಕಾರ ದಿ.ದಾಮೋದರ ಆರ್.ಸುವರ್ಣ ಜನ್ಮಶತಾಬ್ದಿ ಪ್ರಯುಕ್ತ ಮೇ 25 ರಂದು ಕುದ್ರೋಳಿ ನಾರಾಯಣ ಗುರು ಕಾಲೇಜಿನ ದಾಮೋದರ ಆರ್.ಸಭಾಂಗಣದಲ್ಲಿ ಉಚಿತ ವೈದ್ಯಕೀಯ ಮತ್ತು ರಕ್ತದಾನ ಶಿಬಿರ ನಡೆಯಲಿದೆ. ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ಘಂಟೆ ತನಕ ಈ ಕಾರ್ಯಕ್ರಮ ನಡೆಯಲಿದೆ.
ವೈದ್ಯಕೀಯ ಶಿಬಿರದಲ್ಲಿ ಕಣ್ಣು, ಕಿವಿ, ಮೂಗು, ಗಂಟಲು, ಎಲುಬು, ಕೀಲು ಮತ್ತು ಸಾಮಾನ್ಯ ರೋಗ ತಪಾಸಣೆ, ಮಧುಮೇಹ, ರಕ್ತದೊತ್ತಡ ಪರೀಕ್ಷೆ, ರೀಡಿಂಗ್ ಕನ್ನಡಕ ಅಗತ್ಯ ಇದ್ದವರಿಗೆ ಉಚಿತವಾಗಿ ನೀಡಲಾಗುವುದು. ಶಿಬಿರದಲ್ಲಿ ಭಾಗವಹಿಸುವವರಿಗೆ ಕೆ.ಎಮ್.ಸಿ.ಯ ಹಸಿರು ಕಾರ್ಡ್ ನೀಡಲಾಗುವುದು.
ಇದನ್ನೂ ಓದಿ : ಟಿ 20 ವಿಶ್ವಕಪ್ ಗೆ ಲಗ್ಗೆಯಿಟ್ಟ ‘ನಂದಿನಿ’; ಕ್ರಿಕೆಟಿಗರ ಜೆರ್ಸಿಯಲ್ಲಿ ಕರ್ನಾಟಕದ ಹೆಮ್ಮೆಯ ಬ್ರ್ಯಾಂಡ್
ಸಾರ್ವಜನಿಕರು ಶಿಬಿರದ ಸದುಪಯೋಗ ಪಡೆಯಬೇಕು. ಅದೇ ರೀತಿ ರಕ್ತದಾನದಲ್ಲೂ ಸ್ವಯಂ ಸ್ಪೂರ್ತಿಯಿಂದ ಭಾಗವಹಿಸಬೇಕೆಂದು ಅಖಿಲ ಭಾರತ ಬಿಲ್ಲವರ ಯೂನಿಯನ್ ನ ಅಧ್ಯಕ್ಷ ನವೀನ್ ಚಂದ್ರ ಸುವರ್ಣ ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.
DAKSHINA KANNADA
ಈ 7 ರೈಲು ನಿಲ್ದಾಣಗಳಲ್ಲಿ ಸಿಗುತ್ತೆ ಅತೀ ಕಡಿಮೆ ಬೆಲೆಗೆ ತಿಂಡಿ, ಊಟ
ಮಂಗಳೂರು: ಭಾರತೀಯ ರೈಲ್ವೆ ಮಂಡಳಿಯು ಕರ್ನಾಟಕದ ಏಳು ನಿಲ್ದಾಣಗಳು ಸೇರಿದಂತೆ ದೇಶದ 100ಕ್ಕೂ ಹೆಚ್ಚು ರೈಲು ನಿಲ್ದಾಣಗಳಲ್ಲಿ ಸಾಮಾನ್ಯ ಕಂಪಾರ್ಟ್ಮೆಂಟ್ ಕೋಚ್ಗಳ ಬಳಿ ಕಡಿಮೆ ದರದಲ್ಲಿ ಉತ್ತಮ ಆಹಾರವನ್ನು ಒದಗಿಸುವ ಕೌಂಟರ್ಗಳನ್ನು ತೆರೆದಿದೆ.
ಕರ್ನಾಟಕದಲ್ಲಿ ದಕ್ಷಿಣ ರೈಲ್ವೆ ಅಡಿಯಲ್ಲಿ ಮಂಗಳೂರು ಸೆಂಟ್ರಲ್ ಮತ್ತು ಜಂಕ್ಷನ್ ರೈಲ್ವೆ ವಿಭಾಗಗಳಲ್ಲಿ ಸಬ್ಸಿಡಿ ಆಹಾರ ಕೌಂಟರ್ಗಳನ್ನು ತೆರೆಯಲಾಗಿದೆ. ಹಾಗೆಯೇ ನೈರುತ್ಯ ರೈಲ್ವೆಯ ಅಡಿಯಲ್ಲಿ ಕೆಎಸ್ಆರ್ ಬೆಂಗಳೂರು, ಯಶವಂತಪುರ, ಮೈಸೂರು, ವಿಜಯಪುರ ಮತ್ತು ಬಳ್ಳಾರಿ ರೈಲು ನಿಲ್ದಾಣಗಳಲ್ಲಿ ಈ ಆಹಾರ ಕೌಂಟರ್ಗಳನ್ನು ತೆರೆಯಲಾಗಿದೆ.
ಈ ಯೋಜನೆಯು ಭಾರತೀಯ ರೈಲ್ವೆಯ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ ಮತ್ತು ಭಾರತೀಯ ರೈಲ್ವೆಯ ಜಂಟಿ ಉಪಕ್ರಮವಾಗಿದೆ. ಕಾಯ್ದಿರಿಸದ ಬೋಗಿಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಆರೋಗ್ಯಕರ ಆಹಾರವನ್ನು ಒದಗಿಸುವ ಗುರಿಯನ್ನು ಹೊಂದಿದೆ. ಈ ಹಿಂದೆ ಜನತಾ ಊಟದ ಸೇವೆಯ ಅಡಿಯಲ್ಲಿ ರೈಲ್ವೆ ನಿಲ್ದಾಣದ ರೆಸ್ಟೋರೆಂಟ್ಗಳಲ್ಲಿ ಕಡಿಮೆ ದರದ ಆಹಾರ ಲಭ್ಯವಿತ್ತು. ಈಗ ಕೌಂಟರ್ಗಳು ನೇರವಾಗಿ ಪ್ಲಾಟ್ಫಾರ್ಮ್ಗಳಲ್ಲಿ ಈ ಸೇವೆಯನ್ನು ಆರಂಭಿಸಲಾಗಿದೆ.
ಪ್ರಸ್ತುತ 100 ರೈಲು ನಿಲ್ದಾಣಗಳಲ್ಲಿ 150 ಪ್ಲಾಟ್ಫಾರ್ಮ್ಗಳು ಈ ಸೌಲಭ್ಯವನ್ನು ನೀಡುತ್ತವೆ. ಬೆಳಗಿನ ಉಪಹಾರ 20 ರೂ., ಲಘು ಊಟ 50 ರೂ., 3 ರೂ.ಗೆ 200 ಎಂಎಲ್ ನೀರು ನೀಡಲಾಗುತ್ತದೆ. ಈ ಮಾಹಿತಿಯನ್ನು ರೈಲ್ವೆ ಇಲಾಖೆ ಮಾಹಿತಿ ನೀಡಿದೆ. ಒಟ್ಟಾರೆ ಈ ಯೋಜನೆಯು ರೈಲು ಪ್ರಯಾಣಿಕರ ಆಹಾರ ಸಮಸ್ಯೆಯನ್ನು ಪರಿಹರಿಸಲಿದೆ ಎಂಬ ನಿರೀಕ್ಷೆ ಗರಿಗೆದರಿದೆ.
DAKSHINA KANNADA
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ: ಮೇ 19, 20ರಂದು ಆರೆಂಜ್ ಅಲರ್ಟ್
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇದೇ 18 ರಿಂದ 21 ರವರೆಗೆ ಬಿರುಸಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದೇ 19 ಮತ್ತು 20 ರಂದು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಆರೆಂಜ್ ಅಲರ್ಟ್ ಇರುವ ದಿನಗಳಲ್ಲಿ ಮಿಂಚು, ಗುಡುಗು, ಸಿಡಿಲುಗಳಿಂದ ಕೂಡಿದ ಭಾರಿ ಮಳೆಯಾಗಲಿದೆ. ಜಿಲ್ಲೆಯ ಕೆಲವೆಡೆ 11.55 ಸೆಂ.ಮೀ ನಿಂದ 20.44 ಸೆಂ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಇದೇ 18 ಮತ್ತು 21ರಂದು ಜಿಲ್ಲೆಯಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಕೆಲವೆಡೆ 6.45 ಸೆಂ.ಮೀ ನಿಂದ 11.55 ಸೆಂ.ಮೀವರೆಗೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
- LATEST NEWS6 days ago
ಖಾಲಿ ಬಿಯರ್ ಬಾಟಲಿಗಳಿಂದ ಲಕ್ಷಾಧಿಪತಿಯಾದ ವ್ಯಕ್ತಿ..!
- LATEST NEWS6 days ago
ಪ್ರೇಯಸಿಯ ಜೊತೆ ಗೋವಾ ಟೂರ್..! ಕ್ಷೌರಿಕನಿಗೆ ದುಬಾರಿಯಾದ ಟೂರ್..!
- DAKSHINA KANNADA6 days ago
ದೇವರಿಗೆ ಇಟ್ಟ ಹೂವುಗಳನ್ನು ಒಣಗಿದ ನಂತರ ಹೀಗೆ ಮಾಡಿ..!
- LATEST NEWS7 days ago
Watch : ಇಬ್ಬರು ಪುರುಷರೊಂದಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಪತ್ನಿ; ಹಿಗ್ಗಾಮುಗ್ಗ ಥಳಿಸಿದ ಪತಿ