Connect with us

    DAKSHINA KANNADA

    ನಾಳೆ ಕುದ್ರೋಳಿಯಲ್ಲಿ ದಸರಾ ವೈಭವದ ಶೋಭಾಯಾತ್ರೆ-ವಾಹನ ಸಂಚಾರಕ್ಕೆ ಬದಲಿ ರಸ್ತೆ ವ್ಯವಸ್ಥೆ

    Published

    on

    ಮಂಗಳೂರು: ನಗರದ ಶ್ರೀ ಗೋಕರ್ಣನಾಧೇಶ್ವರ ದೇವಸ್ಥಾನದಿಂದ ನವದುರ್ಗೆಯರು, ಶಾರದೆ, ಗಣೇಶ ವಿಗ್ರಹ, ವಿವಿಧ ಟ್ಯಾಬ್ಲೋಗಳ ಶೋಭಾಯಾತ್ರೆಗೆ ಅಪಾರ ಜನಸಂಖ್ಯೆ ಸೇರುವ ನಿರೀಕ್ಷೆ ಇರುವುದರಿಂದ ಕಾನೂನು ಸುವ್ಯವಸ್ಥೆ, ವಾಹನಗಳ ಸುಗಮ ಸಂಚಾರ ಹಾಗೂ ಸಾರ್ವಜನಿಕ ಸುರಕ್ಷತೆಯ ದೃಷ್ಠಿಯಿಂದ ಭಾರತೀಯ ಮೋಟಾರು ವಾಹನ ಕಾಯ್ದೆ 1988 ಕಲಂ 115 ಮತ್ತು 116ರಲ್ಲಿ ಪ್ರದತ್ತ ಅಧಿಕಾರವನ್ನು ಚಲಾಯಿಸಿ ನಾಳೆ ಮಧ್ಯಾಹ್ನ 2 ಗಂಟೆಯಿಂದ ಅ.06ರ ಗುರುವಾರ ಬೆಳಿಗ್ಗೆ 6 ಗಂಟೆಯವರೆಗೆ ವಾಹನ ಸಂಚಾರಕ್ಕೆ ಬದಲಿ ವ್ಯವಸ್ಥೆ ಮಾಡಲಾಗಿದೆ.


    ಕೊಟ್ಟಾರ ಚೌಕಿ ಜಂಕ್ಷನ್ ಮುಖಾಂತರ ನಗರಕ್ಕೆ ಬರುವ ವಾಹನಗಳ ನಗರ ಪ್ರವೇಶವನ್ನು ನಿಷೇಧಿಸಲಾಗಿದೆ ಹಾಗೂ ವಾಹನಗಳು ಕುಂಟಿಕಾನ, ಕೆ.ಪಿ.ಟಿ, ನಂತೂರು ಮಾರ್ಗವಾಗಿ ನಗರ ಪ್ರವೇಶಿಸುತ್ತದೆ.

    ನಗರದಿಂದ ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಮುಖೇನ ಕೊಟ್ಟಾರ ಚೌಕಿ ಕಡೆಗೆ ಸಂಚರಿಸುವ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ನಗರದಿಂದ ಲಾಲ್‍ಬಾಗ್ ಮಾರ್ಗವಾಗಿ ಕುಂಟಿಕಾನ ಹಾಗೂ ಕೆ.ಪಿ.ಟಿ ಕಡೆಗೆ ಸಂಚರಿಸುವ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.

    ಕೆ.ಎಸ್.ಆರ್ ರಸ್ತೆಯಿಂದ ಎಂ.ಜಿ ರಸ್ತೆಯಲ್ಲಿ ಸಂಚರಿಸುವ ವಾಹನಗಳು ಪಿ.ವಿ.ಎಸ್ ಮಾರ್ಗವಾಗಿ ಬಂಟ್ಸ್ ಹಾಸ್ಟೆಲ್ ಮೂಲಕ ಸಂಚರಿಸುವುದು. ಅಂಬೇಡ್ಕರ್ ಸರ್ಕಲ್ ಮೂಲಕ ಎಂ.ಜಿ ರಸ್ತೆಗೆ ಸಾಗುವ ವಾಹನಗಳು ಬಂಟ್ಸ್ ಹಾಸ್ಟೆಲ್‍ನಿಂದ ಸಂಚರಿಸುವುದು.

    ನ್ಯೂ ಚಿತ್ರಾ ಜಂಕ್ಷನ್‍ನಿಂದ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದ ಮಾರ್ಗವಾಗಿ ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಕಡೆಗೆ ಸಂಚರಿಸುವ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ, ವಾಹನಗಳು ನ್ಯೂ ಚಿತ್ರಾ ಜಂಕ್ಷನ್‍ನಿಂದ ಕಂಡತ್‍ಪಳ್ಳಿ, ಮಂಡಿ, ಕುದ್ರೋಳಿ, ಬೊಕ್ಕಪಟ್ಟ, ಸುಲ್ತಾನ್‍ಬತ್ತೇರಿ ಮೂಲಕ ಉರ್ವಮಾರ್ಕೆಟ್ ಮಾರ್ಗವಾಗಿ ನಗರದಿಂದ ಹೊರ ಹೋಗುವುದು ಹಾಗೂ ನ್ಯೂ ಚಿತ್ರಾ ಜಂಕ್ಷನ್‍ನಿಂದ ಡೊಂಗರಕೇರಿ ವೆಂಕಟರಮಣ ದೇವಸ್ಥಾನ ಜಂಕ್ಷನ್, ರಾಷ್ಟ್ರ ಕವಿ ಎಂ. ಗೋವಿಂದ ಪೈ ವೃತ್ತ, ಪಿ.ವಿ.ಎಸ್ ಮಾರ್ಗವಾಗಿ ಮುಂದುವರೆದು ಬಂಟ್ಸ್ ಹಾಸ್ಟೆಲ್ ಕಡೆಗೆ ಸಂಚರಿಸುವುದು.

    ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಕಡೆಯಿಂದ ಕುದ್ರೋಳಿ ದೇವಸ್ಥಾನದ ಕಡೆಗೆ ಸಂಚರಿಸುವ ಎಲ್ಲಾ ತರಹದ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.

    ಉರ್ವಾಸ್ಟೋರ್ ಕಡೆಯಿಂದ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದ ಕಡೆಗೆ ಬರುವ ವಾಹನಗಳು ಕೋಟೆಕಣಿ ರಸ್ತೆಯಾಗಿ ಕೊಟ್ಟಾರಕ್ರಾಸ್, ಕಾಪಿಕಾಡು, ಕೆ.ಎಸ್.ಆರ್.ಟಿ.ಸಿ, ಬಿಜೈ ಮಾರ್ಕೆಟ್ ಜಂಕ್ಷನ್ ಮೂಲಕ ಸಂಚರಿಸುತ್ತದೆ.

    ಕೆ.ಎಸ್.ಆರ್.ಟಿ.ಸಿ. ಜಂಕ್ಷನ್ ಕಡೆಯಿಂದ ಎಂ.ಜಿ. ರಸ್ತೆಗೆ (ಲಾಲ್‍ಬಾಗ್ ಜಂಕ್ಷನ್ ಕಡೆಗೆ) ಹಾಗೂ ಬಿಜೈ ಮಾರ್ಕೆಟ್ ಜಂಕ್ಷನ್ ಕಡೆಯಿಂದ ಕೆ.ಎಸ್.ಆರ್.ಟಿ.ಸಿ ಕಡೆಗೆ ಬರುವ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಕುಂಟಿಕಾನ ಕಡೆಯಿಂದ ಬರುವ ವಾಹನಗಳು ಕೆ.ಎಸ್.ಆರ್.ಟಿ.ಸಿ. ಜಂಕ್ಷನ್ ಬಳಿ ಎಡಕ್ಕೆ ತಿರುಗಿ ಬಿಜೈ ಮಾರ್ಕೆಟ್ ಜಂಕ್ಷನ್ ಮೂಲಕ ಸಂಚರಿಸುವುದು.

    ಬಿಜೈ ಮಾರ್ಕೆಟ್ ಜಂಕ್ಷನ್ ಕಡೆಯಿಂದ ಎಂ.ಜಿ ರಸ್ತೆಗೆ (ಲಾಲ್‍ಬಾಗ್ ಜಂಕ್ಷನ್ ಕಡೆಗೆ) ಬರುವ ವಾಹನಗಳು ಕೆ.ಎಸ್.ಆರ್.ಟಿ.ಸಿ. ಜಂಕ್ಷನ್ ಬಳಿ `ಯು’ ತಿರುವು ಪಡೆದುಕೊಂಡು ಬಿಜೈ ಮಾರ್ಕೆಟ್ ಜಂಕ್ಷನ್ ಕಡೆಗೆ ಸಂಚರಿಸುವುದು.

    ಪಶು ಆಸ್ಪತ್ರೆ ಜಂಕ್ಷನ್ (ಕಪುಚಿನ್ ಚರ್ಚ್)ನಿಂದ ಕೋರಿರೊಟ್ಟಿ ಜಂಕ್ಷನ್ (ಎಂ.ಜಿ.ರಸ್ತೆ) ಕಡೆಗೆ ಸಾಗುವ ಎಲ್ಲಾ ವಾಹನ ಸಂಚಾರ ನಿಷೇಧಿಸಲಾಗಿದೆ.

    ಕೆ.ಎಸ್.ಆರ್.ಟಿ.ಸಿ. ಬಸ್ಸು ನಿಲ್ದಾಣಕ್ಕೆ ಬಂದು ಹೋಗುವ ಎಲ್ಲಾ ಕೆ.ಎಸ್.ಆರ್.ಟಿ.ಸಿ ಬಸ್ಸುಗಳ ಪೈಕಿ ಪಂಪ್‍ವೆಲ್ ಕಡೆಗೆ ಸಂಚರಿಸುವ ಬಸ್ಸುಗಳು ಕೆ.ಪಿ.ಟಿ ಜಂಕ್ಷನ್ ಮೂಲಕ ಮತ್ತು ಉಡುಪಿ ಕಡೆಗೆ ಸಂಚರಿಸುವ ಬಸ್ಸುಗಳು ಕುಂಟಿಕಾನ ಜಂಕ್ಷನ್ ಮೂಲಕ ಸಂಚರಿಸುತ್ತದೆ.

    ಮೆರವಣಿಗೆ ಹಾದು ಹೋಗುವ ರಸ್ತೆಯ ಇಕ್ಕೆಲಗಳಲ್ಲಿ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ.
    ಕುದ್ರೋಳಿ ನಾರಾಯಣಗುರು ಕಾಲೇಜು ಬಳಿಯಿಂದ ನವದುರ್ಗೆಯರ ಟ್ಯಾಬ್ಲೊಗಳು ತಯಾರಿಗೊಂಡು ದೇವಸ್ಥಾನಕ್ಕೆ ಬರಲಿರುವುದರಿಂದ ಕುದ್ರೋಳಿ ನಾರಾಯಣ ಗುರು ಕಾಲೇಜು ಜಂಕ್ಷನ್ ರಸ್ತೆಯಿಂದ ಬರ್ಕೆ ಜಂಕ್ಷನ್ ತನಕ ಮತ್ತು ಬರ್ಕೆ ಜಂಕ್ಷನ್‍ನಿಂದ ದುರ್ಗಾಮಹಲ್ ಜಂಕ್ಷನ್‍ವರೆಗೆ ಹಾಗೂ ದುರ್ಗಾಮಹಲ್ ಜಂಕ್ಷನ್‍ನಿಂದ ಅಳಕೆ ಬ್ರಿಡ್ಜ್ ತನಕ ರಸ್ತೆಯ ಇಕ್ಕೆಲಗಳಲ್ಲಿ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ.

    ಶೋಭಾಯಾತ್ರೆಯಲ್ಲಿ ಪಾಲ್ಗೊಳ್ಳುವ ಎಲ್ಲಾ ಟ್ಯಾಬ್ಲೊಗಳು ಉರ್ವ ಮಾರ್ಕೆಟ್ ಜಂಕ್ಷನ್‍ನಿಂದ, ಗಾಂಧಿನಗರದಿಂದಾಗಿ ಮಣ್ಣಗುಡ್ಡ ಗುರ್ಜಿ ಜಂಕ್ಷನ್‍ನಲ್ಲಿ ಸರದಿ ಸಾಲಿನಲ್ಲಿ ಬಂದು ನಿಂತು ಅಲ್ಲಿಂದ ಸದರಿ ಟ್ಯಾಬ್ಲೊಗಳು ಮೆರವಣಿಗೆಯಲ್ಲಿ ಮುಂದುವರೆಯುವುದರಿಂದ ಮಣ್ಣಗುಡ್ಡ ಗುರ್ಜಿ ಜಂಕ್ಷನ್‍ನಿಂದ ಉರ್ವ ಮಾರ್ಕೆಟ್ ಜಂಕ್ಷನ್‍ವರೆಗಿನ ರಸ್ತೆಯ ಇಕ್ಕೆಲಗಳಲ್ಲಿ ಹಾಗೂ ಮಣ್ಣಗುಡ್ಡ ಗಾಂಧಿನಗರ ಪಾರ್ಕ್ ಮುಂಭಾಗದ ರಸ್ತೆ ಮತ್ತು ಗಾಂಧಿನಗರ 1ರಿಂದ 8ರವರೆಗಿನ ಅಡ್ಡ ರಸ್ತೆಗಳ ಇಕ್ಕೆಲಗಳಲ್ಲಿ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮೀಷನರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    DAKSHINA KANNADA

    ವಿದೇಶಿ ಹಡಗಿನಲ್ಲಿ ಬೆಂಕಿ ಅವಘಡ; ಕರ್ನಾಟಕ ಕರಾವಳಿಯಲ್ಲಿ ಲಂಗರು ಹಾಕಿದ ಕಾರ್ಗೋ ಹಡಗು

    Published

    on

    ಮಂಗಳೂರು: ಗುಜರಾತ್‌ನಿಂದ ಕೊಲಂಬೋಕ್ಕೆ ವಿವಿಧ ಸರಕುಗಳನ್ನು ಸಾಗಾಟ ಮಾಡುತ್ತಿದ್ದ ವಿದೇಶಿ ಮೂಲದ ಸರಕು ಸಾಗಾಟ ಹಡಗಿನಲ್ಲಿ ಅಗ್ನಿ ಆಕಸ್ಮಿಕ ನಡೆದ ಘಟನೆ ಬೆಳಕಿಗೆ ಬಂದಿದೆ.

     

     

    ಜುಲೈ 19 ರಂದು ಕರ್ನಾಟಕ ಕರಾವಳಿಯ ಸಮುದ್ರದಲ್ಲಿ ಈ ದುರ್ಘಟನೆ ನಡೆದಿದ್ದು, ಕೋಸ್ಟ್‌ ಗಾರ್ಡ್‌ ತಂಡ ಹೆಲಿಕಾಪ್ಟರ್‌ ಹಾಗೂ ರಕ್ಷಣಾ ಹಡಗಿನ ಮೂಲಕ ಸತತ ನಲುವತ್ತು ಘಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದೆ. ಹಡಗಿನಲ್ಲಿ ಒಟ್ಟು 21 ಸಿಬ್ಬಂದಿ ಇದ್ದು ಒಬ್ಬ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

    ಹಡಗಿನ ಬೆಂಕಿ ನಂದಿಸಿ ಸಿಬ್ಬಂದಿಗಳ ರಕ್ಷಣೆ ಮಾಡಿದ ಬಳಿಕ ಹಡಗನ್ನು ಕರ್ನಾಟಕ ಕರಾವಳಿ ಭಾಗಕ್ಕೆ ತೆಗೆದುಕೊಂಡು ಬರಲಾಗಿದೆ. ಸದ್ಯ ಸುರತ್ಕಲ್ ಕಡಲ ಕಿನಾರೆಯಿಂದ ಸುಮಾರು 33 ನಾಟಿಕಲ್ ಮೈಲ್‌ ದೂರದಲ್ಲಿ ಹಡಗು ಲಂಗರು ಹಾಕಲಾಗಿದೆ. ಗುಜಾರಾತ್‌ನ ಮುಂದ್ರಾ ಬಂದರಿನಿಂದ ಹೊರಟಿದ್ದ ಈ ಹಡಗು ಪನಾಮ ದೇಶಕ್ಕೆ ಸೇರಿದ್ದಾಗಿ ಮಾಹಿತಿ ಲಭ್ಯವಾಗಿದೆ.

    ಬೆಂಕಿ ಅವಘಡದಿಂದ ಸಂಪೂರ್ಣ ಹಾನಿಯಾಗಿರುವ ಹಡಗು ಅಪಾಯಕಾರಿ ಪರಿಸ್ಥಿತಿಯಲ್ಲಿದ್ದು, ಕೋಸ್ಟ್‌ ಗಾರ್ಡ್‌ ಸಿಬ್ಬಂದಿ ಹಡಗಿನ ಮೇಲೆ ನಿಗಾ ಇರಿಸಿದ್ದಾರೆ. ಹಡಗು ಮುಳುಗಡೆಯಾಗುವ ಸಾದ್ಯತೆಯ ಜೊತೆಗೆ ಹಡಗಿನಲ್ಲಿ ಮತ್ತೆ ಬೆಂಕಿ ಕಾಣಿಸಿಕೊಳ್ಳುವ ಸಂಭವ ಕೂಡಾ ಇದೆ. ಹೀಗಾಗಿ ಹಡಗು ಮುಳುಗಡೆಯಾದಲ್ಲಿ ಸಮುದ್ರಕ್ಕೆ ತೈಲ ಸೋರಿಕೆಯ ಆತಂಕ ಕೂಡಾ ಎದುರಾಗಿದೆ. ಹೀಗಾಗಿ ಹಡಗಿನ ಮೇಲೆ ನಿಗಾ ವಹಿಸಿರುವ ಕೋಸ್ಟ್‌ ಗಾರ್ಡ್‌ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.

    Continue Reading

    DAKSHINA KANNADA

    ದಕ್ಷಿಣ ಕನ್ನಡ ಜಿಲ್ಲೆಯ ಮಹಾಪ್ರವಾಹಕ್ಕೆ 50 ವರ್ಷ; ಮರುಕಳಿಸದಿರಲಿ ‘ಆ ಶುಕ್ರವಾರ’ ಎನ್ನುತ್ತಿದ್ದಾರೆ ಕರಾವಳಿಗರು!

    Published

    on

    ಮಂಗಳೂರು: 1974 ಜುಲೈ 26ರ ಶುಕ್ರವಾರ ರಾತ್ರಿ ಇಡೀ ಸುರಿದ ಭಾರೀ ಮಳೆ ಮುಂಜಾನೆಯ ವೇಳೆಗೆ ನೆರೆ ರೌದ್ರಾವತಾರ ತಾಳಿತ್ತು.

    ಹಿಂದೆ ಎಂದೂ ಕಾಣದ ರೀತಿ ನೇತ್ರಾವತಿ ನದಿ ಉಕ್ಕಿ ಹರಿದಿತ್ತು. ನಸುಕಿನ ಜಾವ ನೇತ್ರಾವತಿ ನದಿ ಮನೆಯೊಳಗೆಯೇ ಪ್ರವೇಶಿಸಿತ್ತು.

    ಬಂಟ್ವಾಳ ಪೇಟೆ, ಪಕ್ಕದೂರುಗಳಿಗೆ ಸಂಪರ್ಕಿಸುವ ರಸ್ತೆಗಳೆಲ್ಲವೂ ಕ್ಷಣಮಾತ್ರದಲ್ಲೆ ಜಲಮಯ. ಎಲ್ಲಿಗೆ ಹೋಗೋದು? ಏನು ಮಾಡೋದು ಅನ್ನೋದನ್ನು ಯೋಚಿಸುವಷ್ಟರಲ್ಲೇ ಊರಿಗೆ ಊರೇ ಮುಳುಗಿತ್ತು. ಬಂಟ್ವಾಳ ಮತ್ತು ಉಪ್ಪಿನಂಗಡಿ ಪೇಟೆಯಲ್ಲಿ ವಾಹನಗಳ ಬದಲು ದೋಣಿಗಳು ಸಂಚರಿಸಿದ್ದವು. ಆ ಕಾಲದಲ್ಲಿಯೇ ಐವತ್ತು ಲಕ್ಷ ರೂಪಾಯಿ ನಷ್ಟ ಉಂಟಾಗಿತ್ತು.

    ಆ ಸಮಯದಲ್ಲಿ ಜಿಲ್ಲೆಯ ಬಹುತೇಕ ಪ್ರದೇಶಗಳು ನೆರೆ ನೀರಿನಿಂದ ಆವರಿಸಿದ್ದವು, ಆವತ್ತಿನ ಕಾಲದಲ್ಲಿ ಮಣ್ಣಿನಿಂದ ನಿರ್ಮಿಸಿದ್ದ ನೂರಾರು ಮನೆ ಅಂಗಡಿ ನೆರೆ ನೀರಿಗೆ ಕೊಚ್ಚಿಕೊಂಡು ಹೋಗಿದ್ದವು. ಈಗಲೂ ಕೂಡಾ ಆ ಭೀಕರ ನೆರೆಯು ನಮ್ಮ ಹಿರಿಯರ ಬಾಯಲ್ಲಿ (ಎಲ್ಪತ್ತ ನಾಲೆತ್ತ ಬೊಲ್ಲ) ಎಂದು ಪ್ರಖ್ಯಾತಿ ಹೊಂದಿದೆ.

    ಕಾಕತಾಳೀಯ ಎಂಬಂತೇ ಪ್ರವಾಹದ ಆ ದಿನ, ವಾರ ಎಲ್ಲವೂ ಸೇಮ್ ಆಗಿದ್ದು, ಮತ್ತೆ ಅದೇ ರೀತಿಯ ಪ್ರವಾಹ ಪರಿಸ್ಥಿತಿಯೂ ನೇತ್ರಾವತಿ ತಟದಲ್ಲಿದೆ. ಈಗಾಗಲೇ ನೇತ್ರಾವತಿ ಅಪಾಯ ಮಟ್ಟ ಮೀರಿದ್ದು, ಈ ಆತಂಕಕ್ಕೆ ಕಾರಣವೂ ಆಗಿದೆ.

    Continue Reading

    LATEST NEWS

    Trending