Connect with us

DAKSHINA KANNADA

ಕೋಟ್ಯಾಂತರ ಭಕ್ತರ ಆರಾಧ್ಯಮೂರ್ತಿ ಕುಕ್ಕೆ ಸುಬ್ರಹ್ಮಣ್ಯನಿಗೆ ಮಳೆಯಲ್ಲಿ ನೆನೆಯಬೇಕಾದ ಸ್ಥಿತಿ..!

Published

on

ಕಡಬ : ವಾರ್ಷಿಕವಾಗಿ ಸರ್ಕಾರಕ್ಕೆ ಸುಮಾರು 90 ಕೋಟಿ ರೂಪಾಯಿ ಆದಾಯ ಹೊಂದಿರುವ ಕರ್ನಾಟಕದ ನಂಬರ್ ಒನ್ ಶ್ರೀಮಂತ ದೇಗುಲ, ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯನ ಸಾನಿಧ್ಯ ಸೋರುತ್ತಿದೆ.

ಮಳೆಗಾಲದಲ್ಲಿ ಸೋರಲಾರಂಭಿಸಿ ಹದಿಮೂರು ವರ್ಷಗಳೇ ಕಳೆದಿದೆ ಆದರೂ ಯಾರೋಬ್ಬರು ಸ್ಪಂದಿಸುತ್ತಿಲ್ಲ ಎಂದ ಆರೋಪ ಕೇಳಿ ಬಂದಿದೆ. ಕ್ಷೇತ್ರದ ದೇವರ ಗರ್ಭಗುಡಿಯ ಸುತ್ತುಪೌಳಿಯ ಮೇಲ್ಛಾವಣಿ ಸಂಪೂರ್ಣ ಶಿಥಿಲಗೊಂಡಿದೆ.

ಇದನ್ನು ಸಂಪೂರ್ಣ ದುರಸ್ತಿಗೊಳಿಸಬೇಕೆಂದು ಕ್ಷೇತ್ರದ ಹಿಂದಿನ ಹಾಗೂ ಇಂದಿನ ವ್ಯವಸ್ಥಾಪನಾ ಮಂಡಳಿ ಎರಡೆರಡು ಬಾರಿ ಕ್ರಿಯಾ ಯೋಜನೆಯನ್ನು ಕಳುಹಿಸಲಾಗಿತ್ತಾದರೂ ಮುಜರಾಯಿ ಇಲಾಖೆ ಮಾತ್ರ ಇತ್ತ ಗಮನವನ್ನೇ ಹರಿಸಿಲ್ಲ ಎಂಬ ಅರೋಪ ಕೇಳಿ ಬಂದಿದ್ದು ರಾಜ್ಯದ ಶ್ರೀಮಂತ ದೇವಸ್ಥಾನದ ಈ ದುರಾವಸ್ಥೆಗೆ ಕಾರಣವಾದ ವ್ಯವಸ್ಥೆಗಳ ವಿರುದ್ಧ ಭಕ್ತರು ಬೇಸರದೊಂದಿಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಶ್ವದಾದ್ಯಂತ ಕೋಟ್ಯಾಂತರ ಭಕ್ತರ ಆರಾಧ್ಯಮೂರ್ತಿ ಕುಕ್ಕೆ ಸುಬ್ರಹ್ಮಣ್ಯನಿಗೆ ಮಳೆಯಲ್ಲಿ ನೆನೆಯಬೇಕಾದ ಸ್ಥಿತಿ ನಿರ್ಮಾಣವಾಗಿದೆ. ತನ್ನನ್ನು ನಂಬಿ ಬಂದ ಭಕ್ತರಿಗೆ ಮಳೆ-ಗಾಳಿ, ಸಿಡಿಲು-ಗುಡುಗೆಂಬ ಸಂಕಷ್ಟಗಳಿಂದ ದೂರ ಮಾಡುತ್ತಿರುವ ಸುಬ್ರಹ್ಮಣ್ಯ ಮಳೆಯಲ್ಲೇ ತೋಯುತ್ತಿದ್ದಾನೆಎಂದು ಭಕ್ತರು ಬೇಸರ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಅತ್ಯಂತ ಹೆಚ್ಚಿನ ಆದಾಯದ ದೇವಸ್ಥಾನಗಳಲ್ಲಿ ಮೊದಲ ಸ್ಥಾನವನ್ನು ನಿರಂತರ ಕಾಯ್ದುಕೊಂಡಿರುವ ಸುಬ್ರಹ್ಮಣ್ಯ 2018-19 ರ ವರ್ಷದಲ್ಲಿ ಕ್ಷೇತ್ರದ ಆದಾಯ 92 ಕೋಟಿಯಾದರೆ 2019-20 ರಲ್ಲಿ 98 ಕೋಟಿ ಹಾಗೂ 2020-21 ರಲ್ಲಿ ಕೊರೊನಾ ಹಿನ್ನಲೆಯಲ್ಲಿ 68 ಕೋಟಿ ಆದಾಯ ಗಳಿಸಿದ್ದು ರಾಜ್ಯದಲ್ಲೇ ಅತೀ ಹೆಚ್ಚು ಆದಾಯ ತರುವ ಕ್ಷೇತ್ರವಾಗಿದೆ.

ಆದರೂ ಕ್ಷೇತ್ರದ ಗರ್ಭಗುಡಿ ಸುತ್ತುಪೌಳಿ ಸಂಪೂರ್ಣ ಶಿಥಿಲಾವಸ್ಥೆಗೆ ತಲುಪಿದೆ. ಸುಬ್ರಹ್ಮಣ್ಯ ಸ್ವಾಮಿಯ ಗರ್ಭಗುಡಿಯ ಪಕ್ಕದಲ್ಲೇ ಇರುವ ಈ ಸುತ್ತುಪೌಳಿಯಲ್ಲಿ ವಿವಿಧ ಧಾರ್ಮಿಕ ವಿಧಿ ವಿಧಾನಗಳೂ ನಡೆಯುತ್ತದೆ. ಈ ಸುತ್ತುಪೌಳಿ ಮೇಲ್ಫಾವಣಿ ಕೂಡ ಸಂಪೂರ್ಣ ಶಿಥಿಲಾವಸ್ಥೆಗೆ ತಲುಪಿದ್ದು ಇದರಿಂದ ಕಳೆದ 13 ವರ್ಷಗಳಿಂದ ಗರ್ಭಗುಡಿಯ ಸುತ್ತಪೌಳಿಯು ಮಳೆಯಿಂದ ಸೋರುತ್ತಿದ್ದು ಪ್ಲಾಸ್ಟಿಕ್ ಹೊದಿಕೆಯಲ್ಲೇ ಮಳೆಗಾಲವನ್ನು ಕಳೆಯಲಾಗುತ್ತಿದೆ ಮತ್ತೆ ಈ ಬಾರಿಯು ಅದೇ ದುಸ್ಥಿತಿ ಮತ್ತೆ ಪ್ಲಾಸ್ಟಿಕ್ ಹೊದಿಕೆಯೇ ಬೇಕಿದೆ.

ದೇವಸ್ಥಾನದ ವ್ಯವಸ್ಥಾಪನಾ ಮಂಡಳಿಯಿಂದ ಎರಡೆರಡು ಬಾರಿ ಕ್ರಿಯಾ ಯೋಜನೆಯನ್ನು ತಯಾರಿಸಿ ಸಂಬಂಧಪಟ್ಟ ಮುಜರಾಯಿ ಇಲಾಖೆಗೆ ಕಳುಹಿಸಿದೆ.

ದೇವಸ್ಥಾನದ ಹಿಂದಿನ ವ್ಯವಸ್ಥಾಪನಾ ಸಮಿತಿಗಳು 7 ಕೋಟಿ, ಆ ಬಳಿಕದ ಸಮಿತಿ 16 ಕೋಟಿ ರೂಪಾಯಿಗಳ ಕ್ರಿಯಾ ಯೋಜನೆಯನ್ನು ಮುಜರಾಯಿ ಇಲಾಖೆಗೆ ಕಳುಹಿಸಿದೆ ಆದರೂ ಆ ಕಡೆಯಿಂದ ಯಾವುದೇ ಉತ್ತರ ಇನ್ನೂ ಬಂದಿಲ್ಲ.

ಇದನ್ನು ಶೀಘ್ರವಾಗಿ ದುರಸ್ತಿ ಮಾಡುವಂತೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಹಿತರಕ್ಷಣಾ ವೇದಿಕೆಯ ಪ್ರಧಾನ ಕಾರ್ಯದರ್ಶಿ ಶ್ರೀನಾಥ್.ಟಿ.ಎಸ್ ಮನವಿ ಮಾಡಿದ್ದಾರೆ.

ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಗಳಿಗೆ ಮತ್ತು ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಸದಸ್ಯರಿಗೆ ಮನವಿ ಸಲ್ಲಿಸಿದ ಶ್ರೀನಾಥ್ ದೇವಸ್ಥಾನದಲ್ಲಿ ದುರಸ್ತಿ ಕಾರ್ಯಗಳು ಎದುರಾದಲ್ಲಿ ಅದನ್ನು ಸರಿಪಡಿಸಲು ಆರ್ಥಿಕ ಸಂಕಷ್ಟ ಇಲ್ಲ.

ಆದರೂ ಈ ತರಹ ದೇವಸ್ಥಾನದ ಛಾವಣಿ ಸೋರುತ್ತಿರುವುದು ದೇಗುಲಕ್ಕೆ ಶೋಭೆ ತರುವ ವಿಚಾರವಲ್ಲ ಎಂದಿದ್ದಾರೆ.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಹಿತರಕ್ಷಣಾ ವೇದಿಕೆಯ ಪ್ರಧಾನ ಕಾರ್ಯದರ್ಶಿ ಶ್ರೀನಾಥ್.ಟಿ.ಎಸ್ ಗರ್ಭಗುಡಿ ಪ್ರವೇಶಿಸುವ ದ್ವಾರ ಹಾಗೂ ಶ್ರೀ ಉಮಾಮಹೇಶ್ವರಿ ಗುಡಿ ಛಾವಣಿಯಲ್ಲೂ ಸಮಸ್ಯೆಗಳು ಇದೆ .

ಈ ವಿಷಯಕ್ಕೆ ಸಂಬಂಧಿಸಿದಂತೆ ಅಗತ್ಯ ಕ್ರಮ ಕೈಗೊಳ್ಳುವ ಮೂಲಕ ಭಕ್ತರ ಹಿತಾಸಕ್ತಿ ಕಾಪಾಡುವಂತೆ ಸರ್ಕಾರವನ್ನು ಮನವಿ ಮಾಡಿದ್ದಾರೆ.

DAKSHINA KANNADA

ಎರಡು ಲಾರಿಗಳ ಮಧ್ಯೆ ಅಪಘಾತ; ಚಾಲಕ ಗಂಭೀ*ರ

Published

on

ಮಂಗಳೂರು: ಬೈಕಂಪಾಡಿ ಹೋಟೆಲ್ ಶ್ರೀ ದ್ವಾರದ ಬಳಿ ಲಾರಿಗಳೆರಡರ ನಡುವೆ ಅಪಘಾತ ಸಂಭವಿಸಿ ಲಾರಿ ಚಾಲಕ ಗಂಭಿರ ಗಾಯಗೊಂಡ ಘಟನೆ ನಡೆದಿದೆ. ಒಂದು ಲಾರಿಯೊಂದು ಗ್ರಾನೈಟ್ ಅಂಗಡಿಯೊಳಗೆ ನುಗ್ಗಿದ್ದು, ಅಪಾರ ಮೌಲ್ಯದ ಗ್ರಾನೈಟ್‌ ಹಾನಿಗೊಂಡಿದೆ.

ಮುಂದೆ ಓದಿ..; ಪುತ್ತೂರು : ಧರೆಗುರುಳಿದ ಬೃಹದಾಕಾರದ ಮರ; ಮಾವಿನಕಾಯಿಗಾಗಿ ಮುಗಿಬಿದ್ದ ಜನ!

accident

ಲಾರಿ ಸಾಗಾಟ ಮಾಡುತ್ತಿದ್ದ ಲಾರಿ ಅಪಘಾತದಿಂದ ನಜ್ಜುಗುಜ್ಜಾಗಿದೆ. ಇನ್ನು ಇದೇ ಭಾಗದಲ್ಲಿ ನಿತ್ಯವೂ ಮಹಿಳೆಯರು ಮೀನ ಮಾರಾಟ ಮಾಡುತ್ತಿದ್ದರು. ಅದೃಷ್ಟವಶಾತ್ ಇದೀಗ ಭಾರೀ ಅನಾಹುತ ತಪ್ಪಿದೆ.

 

Continue Reading

DAKSHINA KANNADA

ದೊಡ್ಡವರ ಜಗಳದಲ್ಲಿ ಇಹಲೋಕ ತಜ್ಯಿಸಿದ 3 ರ ಕಂದಮ್ಮ…

Published

on

ಮಂಗಳೂರು (ಬೆಳಗಾವಿ): ಅದು ಎರಡು ಕುಟುಂಬಗಳ ನಡುವೆ ನಡೆದಿರೋ ಜಗಳ . ಆದ್ರೆ ಆ ಜಗಳಕ್ಕೆ ಏನೂ ಅರಿಯದ ಮೂರು ವರ್ಷದ ಪುಟ್ಟ ಮಗು ಬಲಿಯಾಗಿದೆ. ಪಾಪಿಯೊಬ್ಬ ಮಗುವಿನ ಎದೆಗೆ ಕಾಲಿಟ್ಟು ಮಗುವಿನ ಉಸಿರು ನಿಲ್ಲಿಸಿದ್ದಾನೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿ ಎಂಬ ಗ್ರಾಮದಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ. ದೊಡ್ಡವರ ಜಗಳದಲ್ಲಿ ಶ್ರೀನಿಧಿ ಕಾಡಪ್ಪ ಕಾಳಾಪಾಟೀಲ್ ಎಂಬ ಮೂರು ವರ್ಷದ ಮಗು ಹತವಾಗಿದೆ. ಜೋತಿಭಾ ತುಕಾರಾಮ ಬಾಬಬರ ಎಂಬಾತ ಮಗುವಿನ ಜೀವಕ್ಕೆ ಕುತ್ತು ತಂದ ಆರೋಪಿಯಾಗಿದ್ದಾನೆ.
ಹಣಕಾಸಿನ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಜಗಳ ನಡೆದಿತ್ತು. ಈ ವೇಳೆ ಜಗಳ ತಾರಕ್ಕೇರಿದಾಗ ಸಿಟ್ಟಿನಲ್ಲಿ ಜೋತಿಬಾ ತುಕಾರಾಮ ಬಾಬಾಬರ ಮಗುವಿನ ಎದೆ ಮೇಲೆ ಕಾಲಿಟ್ಟು ನಿಂತಿದ್ದಾನೆ. ಈ ವೇಳೆ ಮಗುವನ್ನು ಆತನ ಕಾಲಿನ ಅಡಿಯಿಂದ ತೆಗೆಯಲು ಮಗುವಿನ ತಾಯಿ ಯತ್ನಿಸಿದ್ದಾಳೆ . ಆ ವೇಳಗೆ ಇನ್ನಷ್ಟು ಗಟ್ಟಿಯಾಗಿ ಕಾಲಿನಿಂದ ಮಗುವಿನ ಎದೆಗೆ ಕಾಲಿನಿಂದ ಒತ್ತಿದ ಕಾರಣ ಮಗು ಉಸಿರು ನಿಲ್ಲಿಸಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಗುವಿನ ದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಆರೋಪಿ ಸ್ಥಳದಿಂದ ಎಸ್ಕೇಪ್ ಆಗಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ.

Continue Reading

DAKSHINA KANNADA

ಅಮೇರಿಕಾದಲ್ಲಿ ಕಾರು ಅಪಘಾತ…! ಮೂವರು ಭಾರತೀಯ ಮಹಿಳೆಯರ ಸಾ*ವು…!

Published

on

ನ್ಯೂಯಾರ್ಕ್‌ : ಅಮೇರಿಕಾದಲ್ಲಿ ನಡೆದ ಕಾರು ಅಪಘಾತದಲ್ಲಿ ಭಾರತೀಯ ಮೂಲದ ಮೂವರು ಮಹಿಳೆಯರು ಇಹಲೋಕ ತ್ಯಜಿಸಿದ್ದಾರೆ. ಕೌಂಟಿಯ ಹೆದ್ದಾರಿಯ ಸೇತುವೆಯೊಂದರ ಮೇಲೆ ವೇಗವಾಗಿ ಕಾರು ಚಲಾಯಿಸಿದ ಕಾರಣ ಈ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿ ಉತ್ತರದ ಕಡೆಗೆ ಕಾರು ಪ್ರಯಾಣಿಸುತ್ತಿದ್ದು, ಎಲ್ಲಾ ಲೇನ್‌ಗಳನ್ನು ದಾಟಿ, ಹಂಪ್‌ ಮೇಲೆ ವೇಗವಾಗಿ ಏರಿತ್ತು. ಈ ಕಾರಣದಿಂದ ಕನಿಷ್ಟ 20 ಅಡಿಗಳಷ್ಟು ಮೇಲಕ್ಕೆ ಹಾರಿ ಸೇತುವೆಯ ಮುಂದೆ ಇದ್ದ ಮರಗಳಿಗೆ ಕಾರು ಅಪ್ಪಳಿಸಿದೆ. ಗುಜಾರಾತ್ ಮೂಲದ ಮೂವರು ಮಹಿಳೆಯರು ಈ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಗುಜರಾತ್‌ನ ಆನಂದ್ ಜಿಲ್ಲೆಯ ರೇಖಾಬೆನ್‌ ಪಟೇಲ್ , ಸಂಗೀತಾಬೆನ್ ಪಟೇಲ್ ಹಾಗೂ ಮನೀಶಾಬೆನ್ ಪಟೇಲ್‌ ಅವರು ಇಹಲೋಕ ತ್ಯಜಿಸಿದವರಾಗಿದ್ದಾರೆ.

 

ಕಾರು ನಿಗದಿಪಡಿಸಿದ ವೇಗದ ಮಿತಿಗಿಂತ ಹೆಚ್ಚು ವೇಗದಲ್ಲಿತ್ತು ಎಂದು ಅಲ್ಲಿನ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಅಪಘಾತದ ಪ್ರಮಾಣ ಎಷ್ಟಿತ್ತು ಮತ್ತು ಕಾರು ಎಷ್ಟು ಎತ್ತರಕ್ಕೆ ಹಾರಿತ್ತು ಅನ್ನೋದಿಕ್ಕೆ ಮರದ ಮೇಲಿರುವ ಕಾರಿನ ಅವಶೇಷಗಳು ಸಾಕ್ಷಿ ಎಂದು ಅವರು ಹೇಳಿದ್ದಾರೆ. ಮರದ ಮೇಲೆ ಬಿದ್ದ ಕಾರು ಛಿದ್ರಗೊಂಡು ಕಾರಿನ ಅವಶೇಷಗಳು ಚೆಲ್ಲಾಪಿಲ್ಲಿಯಾಗಿತ್ತು.


ದಕ್ಷಿಣ ಕೆರೊಲಿನಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ತಕ್ಷಣ ಸ್ಥಳಕ್ಕೆ ರಕ್ಷಣಾ ತಂಡಗಳು, ಪೊಲೀಸರು ಆಗಮಿಸಿದ್ದಾರೆ. ಅಪಘಾತದಲ್ಲಿ ಓರ್ವ ಬದುಕಿ ಉಳಿದಿದ್ದು, ಆತನ ಸ್ಥಿತಿ ಗಂಭೀರವಾಗಿದ್ದು ಈಗಲೇ ಏನೂ ಹೇಳಲು ಆಗದ ಪರಿಸ್ಥಿತಿಯಲ್ಲಿದ್ದಾನೆ. ವಾಹನ ಅಪಘಾತವಾದ ತಕ್ಷಣ ಅದರಲ್ಲಿದ್ದ ತಾಂತ್ರಿಕ ವ್ಯವಸ್ಥೆಯ ಕಾರಣ ತಕ್ಷಣ ಕುಟುಂಬ ಸದಸ್ಯರಿಗೆ ಅಲರ್ಟ್‌ ಮೆಸೆಜ್ ರವಾನೆಯಾಗಿತ್ತು. ಹೀಗಾಗಿ ತಕ್ಷಣ ಕುಟುಂಬಸ್ಥರು ಕೂಡಾ ತಕ್ಷಣ ಸ್ಥಳಕ್ಕೆ ಆಗಮಿಸಿದ್ದಾರೆ.

Continue Reading

LATEST NEWS

Trending