DAKSHINA KANNADA
ಮತ್ತೊಂದು ಗತಕಾಲದ ಪಂಪ್ವೆಲ್ ಸೇತುವೆಯಾಗಲಿದೆಯೇ ಕೂಳೂರು ಬ್ರಿಡ್ಜ್…!?
ಮಂಗಳೂರು: ಮಂಗಳೂರು ನಗರ ಹಾಗೂ ಉಡುಪಿ ಜಿಲ್ಲೆಯನ್ನು ಸಂಪರ್ಕಿಸುವ ಕೂಳೂರು ಸೇತುವೆಗೆ ಚಾಲನೆ ನೀಡಿ ಮೂರು ವರ್ಷ ಕಳೆದರೂ ಯಾವುದೇ ಪ್ರಗತಿ ಕಾಣದೆ ನೆನೆಗುದಿಗೆ ಬಿದ್ದಿದೆ. ಈ ಮಧ್ಯೆ ಹೆದ್ದಾರಿ ಪ್ರಾಧಿಕಾರ 4 ವರ್ಷಗಳ ಹಿಂದೆಯೇ ಹಳೇ ಸೇತುವೆ ಅಸಮರ್ಥ ಎಂದು ವರದಿ ನೀಡಿದರೂ ಇನ್ನೂ ಅದೇ ಸೇತುವೆಯಲ್ಲಿ ಸಂಚಾರಕ್ಕೆ ಅನುವು ಮಾಡಿಕೊಟ್ಟು ಸವಾರರನ್ನು ಅಪಾಯಕ್ಕೆ ತಳ್ಳಿದ್ದಾರೆ.
ಕೂಳೂರು ಸೇತುವೆ
4 ವರ್ಷಗಳ ಹಿಂದೆಯೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ರಸ್ತೆ ಸರ್ವೇ ಕಾರ್ಯ ಮಾಡುವ ವೇಳೆ ಕೂಳೂರು ಸೇತುವೆ ಸಂಚಾರಕ್ಕೆ ಯೋಗ್ಯವಲ್ಲ ಎಂದು ವರದಿ ನೀಡಿತ್ತು. ಇದೇ ವರದಿಯನ್ನು ಅಂದಿನ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕಳುಹಿಸಿ ಕೊಟ್ಟಿತ್ತು. ಆಗ ಒಂದೇ ಸೇತುವೆ ಮೂಲಕ ಸಂಚರಿಸುವಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದರು. ಇದಕ್ಕೆ ತೀವ್ರ ವಿರೋಧ ವ್ಯಕ್ತವಾದ ಕಾರಣ ಆ ಆದೇಶವನ್ನು ಹಿಂಪಡೆಯಲಾಯಿತು.
ಇದಾದ ಕೆಲವೇ ತಿಂಗಳಲ್ಲಿ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ನೂತನ ಸೇತುವೆಗೆ ಶಿಲನ್ಯಾಸ ನೀಡಿದ್ದರು. ಆದರೆ ಮೊದಲು ಭರದಿಂದ ಸಾಗಿದ ಕಾಮಗಾರಿ ಕ್ರಮೇಣ ನಿಂತು ಹೋಗಿ ಇಂದು ಮೂರು ವರ್ಷಗಳಾದರೂ ಪ್ರಗತಿ ಕಾಣದೇ ನೆನೆಗುದಿಗೆ ಬಿದ್ದಿದೆ.
ಇನ್ನೇನು ಮಳೆಗಾಲ ಸಮೀಪಿಸುತ್ತಿದ್ದು ನದಿ ಸೇತುವೆ ಕಾಮಗಾರಿಗೆ ಹಾಕಿರುವ ಭಾರೀ ಮಣ್ಣಿನ ಪ್ರಮಾಣದಿಂದ ಕೂಳೂರು ನದಿ ಪಾತ್ರದ ಪ್ರದೇಶಕ್ಕೆ ಮಳೆ ನೀರು ನಗ್ಗುವ ಅಪಾಯ ಒಂದೆಡೆಯಾದರೆ, ಹಳೆ ಸೇತುವೆ ಕುಸಿಯುವ ಭೀತಿ ಇನ್ನೊಂದೆಡೆ.
ಆದುದರಿಂದ ಕಾಮಗಾರಿಯನ್ನು ಶೀಘ್ರವಾಗಿ ನಡೆಸಬೇಕು ಎಂದು ಒತ್ತಾಯಿಸಿ ಇಲ್ಲಿ ಸಿಪಿಐಎಂ ಪಂಜಿಮೊಗರು ವಲಯ ಸಮಿತಿ ಕೂಳೂರು ಸೇತುವೆ ಬಳಿ ಪ್ರತಿಭಟನೆಯನ್ನು ಕೂಡಾ ನಡೆಸಿದೆ.
ಕೂಳೂರು ಸೇತುವೆ ಕಾಮಗಾರಿ ಬಗ್ಗೆ ಸ್ಥಳೀಯ ಶಾಸಕ ಭರತ್ ಶೆಟ್ಟಿಗಾಗಲಿ, ಸಂಸದರಿಗಾಗಲೀ ಆಸಕ್ತಿ ಇಲ್ಲದಾಗಿದೆ. ಕಾಮಗಾರಿಯ ಕಮಿಷನ್ ವಿಚಾರವಾಗಿ ಕಾಮಗಾರಿ ನಿಂತಿರಬಹುದೇ ಎಂದು ಸಾರ್ವಜನಿಕ ವಲಯದಲ್ಲಿ ಸುದ್ದಿ ಇದೆ.
ಕೋಟಿ ಕೋಟಿ ಕಾಮಗಾರಿ ಬಗ್ಗೆ ಬ್ಯಾನರ್ ಹಾಕುವ ಶಾಸಕರ ಕಾಮಗಾರಿ ಎಲ್ಲಿ ನಡೆಯುತ್ತಿದೆ ಎಂದು ತಿಳಿಯುತ್ತಿಲ್ಲ. ಅಪಾಯದ ಅಂಚಿನಲ್ಲಿರುವ ಕೂಳೂರು ಸೇತುವೆ ನಿರ್ಮಾಣಕ್ಕೆ ಇವರಿಗೆ ಆಸಕ್ತಿ ಇಲ್ಲದಿರುವುದು ವಿಪರ್ಯಾಸ ಎಂದು ಸಾಮಾಜಿಕ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಂದು ಮಂಗಳೂರಿಗೆ ಪ್ರಧಾನಿ ಭೇಟಿ ವೇಳೆ ಇದೇ ರಸ್ತೆಗೆ ಡಾಂಬಾರು ಹಾಕಿದ್ದರು. ಇದೀಗ ಅದೇ ರಸ್ತೆಯಲ್ಲಿ ಮತ್ತೆ ಹೊಂಡ ಬಿದ್ದಿದೆ ಎನ್ನುತ್ತಾರೆ ಸಾಮಾಜಿಕ ಕಾರ್ಯಕರ್ತರು, ಶ್ರೀಧರ ಹೊಳ್ಳ
ಶ್ರೀಧರ್ ಹೊಳ್ಳ
ಒಟ್ಟಿನಲ್ಲಿ ಗುತ್ತಿಗೆದಾರರ ಜತೆಗಿನ ವಿವಾದದ ಕಾರಣದಿಂದಾಗಿ ಕಾಮಗಾರಿ ಸ್ಥಗಿತವಾಗಿದೆ. ಎರಡು ಸೇತುವೆಗಳ ಮಧ್ಯೆ 6 ಪಥದ ಸೇತುವೆ ನಿರ್ಮಾಣ ಎಂದು ಪೂರ್ಣವಾಗುವುದೋ ಗೊತ್ತಿಲ್ಲ.
57 ಕೋಟಿ ರೂಪಾಯಿ ವೆಚ್ಚದ ಯೋಜನೆ ಈಗ 70 ಕೋಟಿಗೆ ತಲುಪಿದೆ. 18 ತಿಂಗಳಲ್ಲಿ ಪೂರ್ಣ ಗೊಳಿಸುವ ಗುರಿ ಹೊಂದಲಾಗಿತ್ತು. ಹೆದ್ದಾರಿ ಸಚಿವ ನಿತಿನ್ ಗಡ್ಕರಿ 2020ರಲ್ಲಿ ಇದಕ್ಕೆ ಶಿಲಾನ್ಯಾಸವನ್ನೂ ಮಾಡಿ, 2021 ರಲ್ಲಿ ಕೆಲಸ ಆರಂಭವಾಗಿತ್ತು.
2020 ರಲ್ಲಿ ಸೇತುವೆಯನ್ನು ಮುಚ್ಚಿ ದುರಸ್ತಿ ಮಾಡಲಾಗಿತ್ತು. ಆದರೂ ಹೊಸ ಸೇತುವೆ ಕಾಮಗಾರಿ ಆಗಿಲ್ಲ. ಸ್ಥಳೀಯ ಜನತೆ ದೊಡ್ಡ ಮಟ್ಟದ ಹೋರಾಟಕ್ಕೆ ವೇದಿಕೆಯನ್ನು ಸಜ್ಜುಗೊಳಿಸುತ್ತಿದ್ದಾರೆ. ಅದಕ್ಕೂ ಮುನ್ನ ಶಾಸಕ ಭರತ್ ಶೆಟ್ಟಿ, ಸಂಸದ ನಳಿನ್ ಕುಮಾರ್ ಕಟೀಲು ಎಚ್ಚೆತ್ತುಕೊಳ್ಳುವುದು ಒಳಿತು.
DAKSHINA KANNADA
ಕಾಮಿಡಿ ಕಿಲಾಡಿಗಳು ಸೀಸಲ್-7ರಲ್ಲಿ ಮಿಂಚಲಿದ್ದಾರೆ ಪುತ್ತೂರಿನ ಪ್ರತಿಭೆಗಳು .!!
ಮಂಗಳೂರು: ಜೀ ಕನ್ನಡ ವಾಹಿನಿಯ ಕಾಮಿಡಿ ಕಿಲಾಡಿಗಳು ಪ್ರೀಮಿಯರ್ ಲೀಗ್ ಮೆಗಾ ಆಕ್ಷನ್ ಆರಂಭಗೊಂಡಿದ್ದು ಈ ಬಾರಿ ವಿಭಿನ್ನ ರೀತಿಯಲ್ಲಿ ಮೂಡಿ ಬರುತ್ತಿದೆ. ಈ ಶೋನಲ್ಲಿ ನಟ ಜಗ್ಗೇಶ್ ಮಹಾ ತೀರ್ಪುಗಾರರಾಗಿದ್ದರೆ, ಐದು ಸ್ಟಾರ್ ನಿರೂಪಕರುಗಳಾದ ಅನುಶ್ರೀ, ಮಾಸ್ಟರ್ ಆನಂದ್, ಅಕುಲ್ ಬಾಲಾಜಿ, ಶ್ವೇತಾ ಚಂಗಪ್ಪ ಹಾಗೂ ಕುರಿ ಪ್ರತಾಪ್ ರವರು ಜಡ್ಜಸ್ಗಳಾಗಿದ್ದಾರೆ. ರಾಜ್ಯದ 20 ಪ್ರತಿಭೆಗಳಿಂದ ಪ್ರೇಕ್ಷಕರಿಗೆ ಕಾಮಿಡಿಯ ರಸದೌಣ ನೀಡಲು ತಯಾರುಗುತ್ತಿದೆ. ಇನ್ನು ಕಿಲಾಡಿ ಪ್ಲೇಯರ್ಗಳಲ್ಲಿ ಪುತ್ತೂರಿನ ಪ್ರತಿಭೆ ಪವಿತ್ರಾ ಹೆಗ್ಡೆ ಹಾಗೂ ಗಣರಾಜ್ ಭಂಡಾರಿ ಆಯ್ಕೆಯಾಗಿದ್ದಾರೆ.
ಮಂಗಳೂರಿನ 150 ಸ್ಪರ್ಧಿಗಳ ಪೈಕಿ ಪವಿತ್ರಾ ಹೆಗ್ಡೆ ಹಾಗೂ ಗಣರಾಜ್ ಭಂಡಾರಿಯವರು ಆಯ್ಕೆಯಾಗಿದ್ದಾರೆ. ಕರ್ನಾಟಕದ 2,500ಕ್ಕು ಮಿಕ್ಕಿ ಸ್ಪರ್ಧಿಗಳ ಮೂರು ಹಂತದ ಆಯ್ಕೆ ಪ್ರಕ್ರಿಯೆಯಲ್ಲಿ ಆಯ್ಕೆಯಾದ 10 ನಟರಲ್ಲಿ ಇವರಿಬ್ಬರು ಆಯ್ಕೆಯಾಗಿದ್ದಾರೆ.
ಮುಂದೆ ಓದಿ..; ಹೊಸ ಅವತಾರದಲ್ಲಿ ZEE ಕನ್ನಡ ‘ಕಾಮಿಡಿ ಕಿಲಾಡಿಗಳು’… ಸ್ಟಾರ್ ನಿರೂಪಕರು ಈಗ ಜಡ್ಜಸ್? ಏನಿದು ಟ್ವಿಸ್ಟ್?
ಪುತ್ತೂರಿನ ಪವಿತ್ರ ಹೆಗ್ಡೆ ಆಯ್ಕೆ:
ಪವಿತ್ರ ಹೆಗ್ಡೆ ಕಳೆದ 10 ವರ್ಷಗಳಿಂದ ಮಂಗಳೂರಿನಲ್ಲಿ ಕಿಶೋರ್ ಡಿ ಶೆಟ್ಟಿ ನಿರ್ದೇಶನದ ಲಕುಮಿ ತಂಡದ ಕುಸಾಲ್ದ ಕಲಾವಿದರು ಮಂಗಳೂರು ತಂಡದಲ್ಲಿ ಹಾಸ್ಯ ಕಲಾವಿದೆಯಾಗಿ ಅಭಿನಯಿಸುತ್ತಿದ್ದಾರೆ. ಹಲವಾರು ನಾಟಕ, ಸಿನಿಮಾ ಮತ್ತು ಧಾರಾವಾಹಿಗಳಲ್ಲಿ ನಟನೆ ಮಾಡಿದ್ದಾರೆ. ಬಾಲ್ಯದಲ್ಲೇ ಕಲಾ ಕ್ಷೇತ್ರಕ್ಕೆ ಧುಮುಕಿದ ಇವರು 6ನೇ ತರಗತಿಯಿಂದ ನಾಟಕ ಅಭಿನಯ, 2012ರಿಂದ ಮಂಗಳೂರಿನ ತಂಡವಾದ ಮಾನಸ ಕಲಾವಿದರು ತಂಡದಲ್ಲಿ 3 ವರ್ಷ ಅಭಿನಯ, ಹೀಗೆ ಹಲವಾರು ತಂಡಳದಲ್ಲಿ ತಮ್ಮ ಅಭಿನಯ ಪಾತ್ರ ಮಾಡಿದ್ದಾರೆ. ತುಳು ಸಿನೆಮಾ ಮತ್ತು ತುಳು ಮತ್ತು ಕನ್ನಡ ಧಾರಾವಾಹಿಯಲ್ಲಿಯೂ ಅಭಿನಯಿಸಿದ್ದಾರೆ. ನಮ್ಮ ಟಿವಿಯಲ್ಲಿ ಪ್ರಸಾರವಾಗುತ್ತಿರುವ ‘ಬಲೆತಲಿಪಾಲೆ’ ಸೀಸನ್ 7ರಲ್ಲಿ ರನ್ನರ್ ಅಪ್ ಆಗಿದ್ದಾರೆ. ವಿ4 ನ್ಯೂಸ್ನಲ್ಲಿ ಪ್ರಸಾರವಾಗುತ್ತಿದ್ದ ಕಾಮಿಡಿ ಪ್ರೀಮಿಯರ್ ಲೀಗ್ ಸೀಸನ್ 2ನಲ್ಲಿ ಮತ್ತು ಸೀಸನ್ 3ಯಲ್ಲಿ ಅಭಿನಯಿಸಿ ಬೆಸ್ಟ್ ಫರ್ಫಾಮೆನ್ಸ್ ಅವಾರ್ಡ್ ಪಡೆದಿದ್ದಾರೆ. ವಿದೇಶದಲ್ಲೂ ನಾಟಕ ಪ್ರದರ್ಶನ ನೀಡಿದ್ದಾರೆ. ಕನ್ನಡ ಕಸ್ತೂರಿ ಚಾನಲ್ನಲ್ಲಿ ಪ್ರಸಾರವಾಗುತ್ತಿದ್ದ ಕಂಜೂಸ್ ಕಮಂಗಿರಾಯ, ಪುತ್ತೂರು ಚಾನೆಲ್ ದ ಚಾನಲ್ 9ನಲ್ಲಿ ಪುಸಾರವಾಗುತ್ತಿದ್ದ ಕುಡ ತೆಲಿಪುಗ, ಡಾಯಿಜಿ ವರ್ಲ್ಡ್ನಲ್ಲಿ ಪ್ರಸಾರವಾಗುತ್ತಿದ್ದ ಬಾಬಣ್ಣ ಬೂಬಣ್ಣ, ಕಿರುಚಿತ್ರವಾದ ಕಲ್ಕುಡ ಕಲ್ಲುರ್ಟಿ, ವಾತ್ಸಲ್ಯ, ನೋ ಬಾಲ್, ಕೊಕೊನಾಟ್ ಸಹಿತ ಹಲವು ಚಲನಚಿತ್ರದಲ್ಲಿ ಪಾತ್ರ ನಿರ್ವಹಿಸಿದ್ದರು. ಇವರಿಗೆ ಹಲವಾರು ಸನ್ಮಾನ ಪತ್ರಗಳು ಲಭಿಸಿದೆ. ಇವರು ಪುತ್ತೂರು ಚಂದ್ರಶೇಖರ್ ಹೆಗ್ಡೆ ಮತ್ತು ಮಯಾದೇವಿ ಅವರ ಪುತ್ರಿಯಾಗಿದ್ದು ಪುಜ್ವಲ್ ಹೆಗ್ಡೆಯವರ ಪತ್ನಿಯಾಗಿದ್ದಾರೆ.
ವೈರಲ್ ಸ್ಟಾರ್ ಗಣರಾಜ್ ಭಂಡಾರಿ:
ಪುತ್ತೂರಿನ ಸಂಸಾರ ಕಲಾವಿದೆರ್ ತಂಡದ ವೈರಲ್ ಸ್ಮಾರ್ ಖ್ಯಾತಿಯ ಗಣರಾಜ್ ಭಂಡಾರಿ ಕಾಮಿಡಿ ಕಿಲಾಡಿಗಳು ಶೋಗೆ ಆಯ್ಕೆಯಾಗಿದ್ದಾರೆ. ನಾಗೇಶ್ ಬಲ್ನಾಡು ನಿರ್ದೇಶನದ ಸೂಪರ್ ಹಿಟ್ ನಾಟಕ “ಮಲ್ಲಕ್ಕನ ಇಲ್ಲೊಕ್ಕೆಲ್” ಮೂಲಕ ರಂಗಪ್ರವೇಶ ಮಾಡಿದ ಇವರು ಬದ್ರೆ ಕಲ್ಪಿ, ಊರುಗೊರಿ ವಿಶ್ವನಾಥ, ಮಗೆ ಮಲ್ಲಯೆ, ಒವುಲಾ ಒರಿಯುಜಿ, ಸತ್ಯನಾ ಭಕ್ತಿ, ತಪ್ಪು ಎನ್ನೊಡ್ಡಿ, ಭಾಗ್ಯ ಬೋಡು ಅಲ್ಲದೆ ಈ ವರ್ಷದ ಸೂಪರ್ ಹಿಟ್ ಯಶಸ್ವಿ ನಾಟಕ ನಂಬಿಕೆದಾಯೆ ನಾಟಕಗಳಲ್ಲಿ ಪ್ರಮುಖ ಹಾಸ್ಯ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಪುತ್ತೂರಿನ ಕೋರ್ಟ್ ರಸ್ತೆಯ ಶ್ರೀನಿಧಿ ಸೆಲೂನ್’ನಲ್ಲಿ ಕ್ಷೌರಿಕ ವೃತ್ತಿ ನಡೆಸುತ್ತಿದ್ದಾರೆ. ಇವರು ತನ್ನ ಸ್ವಂತ ರೀಲ್ಸ್ ಪೇಜ್’ನಲ್ಲಿ 25 ಸಾವಿರ ಕ್ಕು ಅಧಿಕ ಫಾಲೋವರ್ಸ್ ಹೊಂದಿದ್ದಾರೆ.
DAKSHINA KANNADA
ದೇವರಿಗೆ ತುಪ್ಪದಲ್ಲಿ ದೀಪ ಹಚ್ಚುವುದು ಶುಭವೇ..?
ಮಂಗಳೂರು: ಮನೆಯ ದೇವರ ಕೊಣೆಯಲ್ಲಿ ಅಥವಾ ದೇವಸ್ಥಾನದಲ್ಲಿ ತುಪ್ಪ, ಎಣ್ಣೆ, ಸಾಸಿವೆ, ಎಳ್ಳು ಅಥವಾ ಮಲ್ಲಿಗೆಯ ಎಣ್ಣೆಯ ದೀಪವನ್ನು ಹಚ್ಚುವ ಪದ್ಧತಿ ಇದೆ. ಈ ರೀತಿಯಾಗಿ ಪ್ರತಿಯೊಂದು ಎಣ್ಣೆಯ ದೀಪವನ್ನು ಸುಡುವುದು ವಿಭಿನ್ನ ಮಹತ್ವವನ್ನು ಹೊಂದಿದೆ. ತುಪ್ಪದ ದೀಪವನ್ನು ಹಚ್ಚುವುದು ದುಬಾರಿಯಾದ ಕಾರಣ ಜನರು ಎಣ್ಣೆಯ ದೀಪಗಳನ್ನು ಹೆಚ್ಚು ಹಚ್ಚುತ್ತಾರೆ. ಎಣ್ಣೆ ಅಥವಾ ತುಪ್ಪದ ದೀಪಕ್ಕಿಂತ ಯಾವುದರ ದೀಪ ಹಚ್ಚುವುದು ಹೆಚ್ಚು ಮಂಗಳಕರ ಎಂಬುದನ್ನು ತಿಳಿದುಕೊಳ್ಳೋಣ.
ಯಾವ ದೀಪವನ್ನು ಬೆಳಗಬೇಕು?
ತುಪ್ಪದ ದೀಪವನ್ನು ಯಾವಾಗಲೂ ಹೂವಿನಾಕಾರದ ದೀಪದಲ್ಲಿ ಬಿಳಿ ಎಂಬ ಬೆಳಕಿನಿಂದ ಬೆಳಗಿಸಲಾಗುತ್ತದೆ ಮತ್ತು ಎಣ್ಣೆ ದೀಪವನ್ನು ಉದ್ದವಾದ ದೀಪದಿಂದ ಬೆಳಗಿಸಲಾಗುತ್ತದೆ. ಆದರೆ, ಎಳ್ಳಿನ ಎಣ್ಣೆಯ ದೀಪವನ್ನು ಹಚ್ಚಿದರೆ ಅದರಲ್ಲಿ ಕೆಂಪು ಅಥವಾ ಹಳದಿ ದೀಪವನ್ನು ಬಳಸಬೇಕು.
ಯಾವ ದೀಪ ಸೂಕ್ತ?
ತುಪ್ಪದ ದೀಪವನ್ನು ದೇವರಿಗೆ ಸಮರ್ಪಿಸಲಾಗುತ್ತದೆ. ಆದರೆ ಇಷ್ಟಾರ್ಥಗಳ ಈಡೇರಿಕೆಗಾಗಿ ಎಣ್ಣೆಯ ದೀಪವನ್ನು ಬೆಳಗಿಸಲಾಗುತ್ತದೆ. ಆರ್ಥಿಕ ಮುಗ್ಗಟ್ಟಿನಿಂದ ಮುಕ್ತಿ ಹೊಂದಲು ತುಪ್ಪದ ದೀಪವನ್ನು ಹಚ್ಚುವುದು ಹೆಚ್ಚು ಪ್ರಯೋಜನಕಾರಿ. ಇದರಿಂದ ದೇವರುಗಳು ಮತ್ತು ದೇವತೆಗಳು ಸಂತೋಷಪಡುತ್ತಾರೆ.
ತುಪ್ಪದ ದೀಪವನ್ನು ಹಚ್ಚುವುದು ಅತ್ಯಂತ ಮಂಗಳಕರ
ಮನೆ ಅಥವಾ ದೇವಸ್ಥಾನದಲ್ಲಿ ತುಪ್ಪದ ದೀಪವನ್ನು ಬೆಳಗಿಸುವುದು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗಿದೆ. ಇದು ಎಲ್ಲಾ ರೀತಿಯ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ ಜೊತೆಗೆ ಮನೆಯ ವಾಸ್ತು ದೋಷಗಳು ಸಹ ನಿವಾರಣೆಯಾಗುತ್ತದೆ. ಇದು ಎಲ್ಲಾ ರೀತಿಯ ನೋವನ್ನು ನಾಶಪಡಿಸುತ್ತದೆ. ಶಿವ ಪುರಾಣದ ಪ್ರಕಾರ ಪ್ರತಿದಿನ ತುಪ್ಪದ ದೀಪವನ್ನು ಹಚ್ಚುವುದರಿಂದ ಮನೆಯಲ್ಲಿ ಸುಖ, ಸಮೃದ್ಧಿ ಮತ್ತು ಶಾಂತಿ ನೆಲೆಸುತ್ತದೆ ಎಂದು ಹೇಳಲಾಗಿದೆ.
ತುಪ್ಪದ ದೀಪವನ್ನು ಹಚ್ಚಿದರೆ ಗಾಳಿಯು ಶುದ್ಧವಾಗುತ್ತದೆ ಮತ್ತು ಗಾಳಿಯಲ್ಲಿರುವ ರೋಗಾಣುಗಳು ನಾಶವಾಗುತ್ತದೆ. ಇದರ ಸುವಾಸನೆಯು ಮನಸ್ಸಿಗೆ ಶಾಂತಿಯನ್ನು ನೀಡುತ್ತದೆ ಮತ್ತು ಖಿನ್ನತೆಯನ್ನು ಹೋಗಲಾಡಿಸುತ್ತದೆ. ತುಪ್ಪವು ಚರ್ಮದ ರಕ್ತ ಕಣಗಳನ್ನು ಸಕ್ರಿಯಗೊಳಿಸುವ ವಿದ್ಯುತ್ಕಾಂತೀಯ ಶಕ್ತಿಯನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ ಎಂದು ಹೇಳಲಾಗುತ್ತದೆ, ಇದರಿಂದಾಗಿ ಯಾವುದೇ ಚರ್ಮ ರೋಗಗಳು ಬರುವುದಿಲ್ಲ.
DAKSHINA KANNADA
ಆಂಬುಲೆನ್ಸ್ – ಕಾರು ನಡುವೆ ಭೀಕರ ಅ*ಪಘಾತ..! ಮೂವರ ದುರ್ಮ*ರಣ.!
ಕಾಸರಗೋಡು: ಆ್ಯಂಬುಲೆನ್ಸ್ ಮತ್ತು ಕಾರೊಂದರ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಮಂಜೇಶ್ವರದಲ್ಲಿ ಇಂದು ನಡೆದಿದೆ.
ಕಾರಿನಲ್ಲಿದ್ದ ತ್ರಿಶೂರು ಗುರುವಾಯೂರು ನಿವಾಸಿಗಳಾದ ಶ್ರೀನಾಥ್, ಶರತ್ ಮೆನೋನ್ ಎಂಬವರು ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. ಆ್ಯಂಬುಲೆನ್ಸ್ ನಲ್ಲಿದ್ದ ರೋಗಿಯೂ ಗಾಯಗೊಂಡಿದ್ದಾರೆ. ಕಾಸರಗೋಡಿನಿಂದ ಮಂಗಳೂರು ಕಡೆಗೆ ರೋಗಿಯೊಬ್ಬರನ್ನು ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಮತ್ತು ಮಂಗಳೂರು ಕಡೆಯಿಂದ ಮಂಜೇಶ್ವರದತ್ತ ಬರುತ್ತಿದ್ದ ಕಾರು ನಡುವೆ ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಇನ್ನೋರ್ವ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಆ್ಯಂಬುಲೆನ್ಸ್ ರಸ್ತೆಯಲ್ಲಿ ಮಗುಚಿ ಬಿದ್ದಿದೆ.
ಮುಂದೆ ಓದಿ..; ಆಸ್ಪತ್ರೆ ಸೆಲ್ ನಲ್ಲಿ ಕುಣಿಕೆಗೆ ಕೊರೊಳೊಡ್ಡಿದ ಖೈದಿ..!
- DAKSHINA KANNADA4 days ago
ಸುಬ್ರಹ್ಮಣ್ಯ: ಕೆಎಸ್ಸಾರ್ಟಿಸಿ ಬಸ್ಗಳ ಹಗಲು ದರೋಡೆ..! ಏನಿದು ಘಟನೆ?
- FILM6 days ago
ಬಿಗ್ ಬಾಸ್ ಬಗ್ಗೆ ಅಚ್ಚರಿ ಹೇಳಿಕೆ ಕೊಟ್ಟ ನಮ್ರತಾ ಗೌಡ!
- dehali5 days ago
ನಾಯಿಗಳಿಗೂ ಬಂತು ಆಧಾರ್ ಕಾರ್ಡ್.!! ಇನ್ಮುಂದೆ ನಾಯಿಗೂ ಸ್ಕ್ಯಾನ್ ಕಾರ್ಡ್..! ಏನಿದು?
- BELTHANGADY5 days ago
ವೇಷ ಕಳಚುವ ಮುನ್ನ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು