Connect with us

BELTHANGADY

ನ್ಯಾಯಾಂಗದಲ್ಲಿ ಕಲ್ಲರಳಿ ಹೂವಾದ ಧರ್ಮಸ್ಥಳದ ಕುಮಾರಿ ಚೇತನಾ..!

Published

on

ನ್ಯಾಯಾಂಗದಲ್ಲಿ ಕಲ್ಲರಳಿ ಹೂವಾದ ಧರ್ಮಸ್ಥಳದ ಕುಮಾರಿ ಚೇತನಾ..!

ಬೆಳ್ತಂಗಡಿ : ಕರ್ನಾಟಕ ಉಚ್ಚ ನ್ಯಾಯಾಲಯದ 2020 ನೇ ಸಾಲಿನಲ್ಲಿ ಕರೆಯಲಾದ ಸಿವಿಲ್ ಜಡ್ಜ್ ನ್ಯಾಯಾಧೀಶರ ಪರೀಕ್ಷೆಯಲ್ಲಿ ಧರ್ಮಸ್ಥಳದ ಕುಮಾರಿ ಚೇತನಾ ಅವರು ಉತ್ತೀರ್ಣರಾಗಿ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿರುತ್ತಾರೆ.

ಕಡು ಬಡತನದಲ್ಲಿ ಪುಟ್ಟ ಹಳ್ಳಿಯಲ್ಲಿ ಹುಟ್ಟಿ ಬೆಳೆದ ಕುಮಾರಿ ಚೇತನಾ ಮಾಡಿರುವ ಈ ಸಾಧನೆ ನಿಜಕ್ಕೂ ಶ್ಲಾಘನೀಯವಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನಾರ್ಯ ಎಂಬ ಪುಟ್ಟ ಹಳ್ಳಿಯಲ್ಲಿ ರಾಮಣ್ಣ ಪೂಜಾರಿ ಮತ್ತು ಸೀತಾ ದಂಪತಿಗೆ ನಾಲ್ಕು ಜನ ಮಕ್ಕಳಲ್ಲಿ ಎರಡನೆಯರಾಗಿ ಹುಟ್ಟಿದ ಚೇತನಾ ಅವರು ಸವೆದ ಹಾದಿ ಮಾತ್ರ ಕಠಿಣವಾದುದು.

ತಮ್ಮ 1-6 ತರಗತಿ ವಿದ್ಯಾಭ್ಯಾಸವನ್ನು ಉಪ್ಪಿನಂಗಡಿ ಸಮೀಪದ ಸರ್ಕಾರಿ ಪೆರ್ನೆ ಕನ್ನಡ ಮಾಧ್ಯಮ ಶಾಲೆಯಲ್ಲಿ ಮುಗಿಸಿ, ಏಳನೇ ತರಗತಿ ಶಿಕ್ಷಣವನ್ನು ತಮ್ಮ ಊರಿನ ಕನ್ಯಾಡಿ ಸರ್ಕಾರಿ ಶಾಲೆಯಲ್ಲಿ ಮುಗಿಸಿ, ಪ್ರೌಡ ಶಿಕ್ಷಣವನ್ನು ಶ್ರೀ. ಧರ್ಮಸ್ಥಳ ಮಂಜುನಾಥೇಶ್ವರ ಸೆಕೆಂಡರಿ ಶಾಲೆ ಧರ್ಮಸ್ಥಳದಲ್ಲಿ ಪಡೆದರು.

ಮುಂದಿನ ಪದವಿ ಪೂರ್ವ ಶಿಕ್ಷಣವನ್ನು ಬೆಳ್ತಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮುಗಿಸಿ, ಮಂಗಳೂರಿನ ಎಸ್‌ ಡಿಎಂ ಕಾನೂನು ಕಾಲೇಜಿನಲ್ಲಿ 2016ನೇ ಇಸವಿಯಲ್ಲಿ ಮುಗಿಸಿದರು.

ಕಾನೂನು ವಿದ್ಯಾಭ್ಯಾಸದ ನಂತರ ಬೆಳ್ತಂಗಡಿಯ ವಕೀಲರಾದ ಕೇಶವ ಪಿ. ಬೆಳಾಲ್ ರ ಕಚೇರಿಯಲ್ಲಿ ವಕೀಲ ವೃತ್ತಿ ಆರಂಭಿಸಿ ನಂತರ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶ ಬಿ. ಎ. ಪಾಟೀಲ್ ರವರ ಲಾ ಕ್ಲಾರ್ಕ್ ರೀಸರ್ಚ್ ಅಸಿಸ್ಟಂಟ್ ಆಗಿ ಸುಮಾರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದರು.

ಕೆಳೆದ ಒಂದು ವರ್ಷಗಳಿಂದ ನ್ಯಾಯವಾದಿ ಶ್ರೀಯುತ ಶಿವಪ್ರಸಾದ್ ಶಾಂತನಗೌಡರ್ ರವರ ಕಚೇರಿಯಲ್ಲಿ ಕಿರಿಯ ವಕೀಲರಾಗಿ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ವೃತ್ತಿ ಜೀವನ ನಡೆಸುತ್ತಿದ್ದರು.

ಇದೀಗ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿರುವ ಕುಮಾರಿ ಚೇತನಾ ಅವರಿಗೆ ಆಲ್ ದಿ ಬೆಸ್ಟ್ ಹೇಳೋನಾ…

Click to comment

Leave a Reply

Your email address will not be published. Required fields are marked *

BELTHANGADY

ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ..!! ಭಯ ಭೀತರಾದ ಜನತೆ

Published

on

ಬೆಳ್ತಂಗಡಿ: ಇತ್ತೀಚೆಗೆ ಕಾಡಿನಲ್ಲಿರುವ ಪ್ರಾಣಿಗಳು ನಾಡಿಗೆ ಬರೋದು ಕಾಮನ್‌ ಆಗಿ ಬಿಟ್ಟಿದೆ. ಹೆಚ್ಚಾಗಿ ಕಾಡಾನೆಗಳು ಊರಿಗೆ ಬಂದು ಕೃಷಿಗಳನ್ನು ನಾಶ ಮಾಡ್ತಾಇತ್ತು. ಆದರೆ ಈಗೀಗ ಹುಲಿ ಚಿರತೆಗಳು ಕೂಡ ನಾಡಿನತ್ತ ಮುಖ ಮಾಡ್ತಾ ಇದೆ.

chitha

ಮುಂದೆ ಓದಿ..; ಕಾಗೆ ನಿಜಕ್ಕೂ ನಮ್ಮ ಪಿತೃನಾ..?

ಬೆಳ್ತಂಗಡಿಯ ವೇಣೂರು ಪಚ್ಚೇರಿ ಪರಿಸರದಲ್ಲಿ ಚಿರತೆಯೊಂದು ರಾತ್ರಿ ಹೊತ್ತು ಓಡಾಡುವುದು ಕಂಡು ಬಂದಿದೆ. ಈ ಘಟನೆಯಿಂದ ಊರಿನ ಜನ ಭಯಭೀತರಾಗಿದ್ದಾರೆ. ಹಚ್ಚೇರಿ ಗೋಳಿದಡ್ಕ ನಿವಾಸಿ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಚಿರತೆ ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃಷ್ಣಾನಂದ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

Continue Reading

BANTWAL

ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ

Published

on

ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.

drinks ban for 3 days

ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ

ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ‌ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.

Continue Reading

BELTHANGADY

ಬೆಳ್ತಂಗಡಿ: ಕೆರೆಗೆ ಬಿದ್ದು ಕಾಡುಕೋಣ ಸಾ*ವು.. ಸಾರ್ವಜನಿಕರಿಂದ ಅಂತ್ಯಸಂಸ್ಕಾರ

Published

on

ಬೆಳ್ತಂಗಡಿ: ಇಲ್ಲಿನ ಬೆಳಾಲು ಗ್ರಾಮಕ್ಕೆ ಸಂಬಂಧಪಟ್ಟಂತೆ ಕೊಯ್ಯೂರು ರಸ್ತೆಯ ಬದ್ಯಾರು ಎಂಬಲ್ಲಿ ಹೆಚ್ ಪದ್ಮ‌ಗೌಡ ಎಂಬವರ ತೋಟದ ಕೆರೆಯಲ್ಲಿ ಬೃಹತ್ ಗಾತ್ರದ ಕಾಡುಕೋಣದ ಮೃತ*ದೇಹ ಪತ್ತೆಯಾಗಿದೆ.

bison

ಮುಂದೆ ನೋಡಿ..; ಆರು ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸದಂತೆ ಕೆಎಸ್ ಈಶ್ವರಪ್ಪ ಬಿಜೆಪಿ ಪಕ್ಷದಿಂದ ಉಚ್ಛಾಟನೆ..!

ಈ ಕೆರೆಗೆ ಸುತ್ತ ಕಾಂಕ್ರೀಟ್ ರಿಂಗ್ ಅಳವಡಿಸಿದ್ದು ನೀರು ಕುಡಿಯಲು ಬಂದ ಕಾಡುಕೋಣ ಮೂರ್ನಾಲ್ಕು ದಿನಗಳ ಹಿಂದೆಯೇ ಬಿದ್ದು ಸಾವನ್ನಪ್ಪಿರುವ ಸಾಧ್ಯತೆ ಇದೆ. ಹೆಚ್ಚೂ ಕಮ್ಮಿ 10 ಕ್ವಿಂಟಾಲ್ ತೂಕ ಹೊಂದಿರಬಹುದೆಂದು ಅಂದಾಜಿಸಲಾಗಿದ್ದು, ಕೊಳೆತು ವಾಸನೆ ಬೀರುತ್ತಿತ್ತು. ಶೌರ್ಯ ವಿಪತ್ತು ತಂಡಕ್ಕೆ ಬಂದ ಮಾಹಿತಿಯಂತೆ ಉಜಿರೆ- ಬೆಳಾಲು ಘಟಕದ ಸಂಯೋಜಕ ಸುಲೈಮಾನ್ ಬೆಳಾಲು, ಮುಳುಗು ಪರಿಣತ ಹರೀಶ ಕೂಡುಗೆ, ಮುಹಮ್ಮದ್ ಶರೀಫ್ ಬೆಳಾಲು, ಅವಿನಾಶ್ ಭಿಡೆ ಅರಸಿಮನಕ್ಕಿ, ರವೀಂದ್ರ ಉಜಿರೆ, ಸುರೇಂದ್ರ ಉಜಿರೆ, ಅನಿಲ್ ಚಾರ್ಮಾಡಿ, ಶೌರ್ಯ ಘಟಕದ ಮಾಸ್ಟರ್ ಪ್ರಕಾಶ್ ಧರ್ಮಸ್ಥಳ, ನಳಿನ್ ಕುಮಾರ್ ಧರ್ಮಸ್ಥಳ ಮೊದಲಾದವರು ಸಾರ್ವಜನಿಕರ ನೆರವಿನೊಂದಿಗೆ ಕಾರ್ಯಾಚರಣೆ ನಡೆಸಿ ಕಾಡುಕೋಣದ ಕಳೇಬರವನ್ನು ಮೇಲೆತ್ತಿದ್ದಾರೆ. ಬಳಿಕ ಪಶುವೈದ್ಯಾಧಿಕಾರಿ ಮರಣೋತ್ತರ ಪರೀಕ್ಷೆ ಪ್ರಕ್ರೀಯೆ ನಡೆಸಿದ್ದು, ತೋಟದಲ್ಲೇ ಹೊಂಡ ತೋಡಿ ಅಂತ್ಯಸಂಸ್ಕಾರ ನಡೆಸಲಾಗಿದೆ.

Continue Reading

LATEST NEWS

Trending