LATEST NEWS
2025ರ ಆಸ್ಕರ್ಗೆ ನಾಮ ನಿರ್ದೇಶನಗೊಂಡ ‘ಲಾಪತಾ ಲೇಡಿಸ್’ ಚಿತ್ರ
ಮುಂಬೈ: ಕಿರಣ್ ರಾವ್ ಅವರ ಚೊಚ್ಚಲ ನಿರ್ದೇಶನದ ಬಾಲಿವುಡ್ನ ‘ಲಾಪತಾ ಲೇಡಿಸ್’ ಸಿನಿಮಾವು 2025ರ ಆಸ್ಕರ್ಗೆ ನಾಮ ನಿರ್ದೇಶನಗೊಂಡಿದೆ.
ಆಮೀರ್ ಖಾನ್ ನಿರ್ಮಾಣದ ಮತ್ತು ಕಿರಣ್ ರಾವ್ ನಿರ್ದೇಶನದ ‘ಲಾಪತಾ ಲೇಡಿಸ್’ ಸಿನಿಮಾವು 97ನೇ ಆಸ್ಕರ್ಗೆ ಭಾರತವನ್ನು ಪ್ರತಿನಿಧಿಸಲಿದೆ. 2025ರ ಆಸ್ಕರ್ ರೇಸ್ನಲ್ಲಿ ‘ಲಾಪತಾ ಲೇಡಿಸ್’ ಸಿನಿಮಾದೊಂದಿಗೆ 29 ಸಿನಿಮಾಗಳಿವೆ.
‘ಲಾಪತಾ ಲೇಡಿಸ್’ ಸಿನಿಮಾವು 2025ರ ಆಸ್ಕರ್ಗೆ ಅಧಿಕೃತವಾಗಿ ಪ್ರವೇಶ ಪಡೆದಿದೆ ಎಂದು ಇಂದು ಚೆನ್ನೈನಲ್ಲಿ ಫಿಲಂ ಫೆಡರೇಶನ್ ಆಫ್ ಇಂಡಿಯಾ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದೆ. ಇದರೊಂದಿಗೆ 12 ಹಿಂದಿ ಚಿತ್ರಗಳು, 6 ತಮಿಳು ಮತ್ತು 4 ಮಲಯಾಳಂ ಸಿನಿಮಾಗಳನ್ನು ನೋಡಿ ಅವುಗಳ ಪೈಕಿ ‘ಲಾಪತಾ ಲೇಡಿಸ್’ ಸಿನಿಮಾವನ್ನು ಆಯ್ಕೆ ಮಾಡಲಾಗಿದೆ.
ಇನ್ನು ಕಳೆದ ವರ್ಷ ರಾಜಮೌಳಿ ನಿರ್ದೇಶನದ ‘ಆರ್ಆರ್ಆರ್’ ಸಿನಿಮಾದ ‘ನಾಟು ನಾಟು’ ಹಾಡಿಗೆ ಆಸ್ಕರ್ ಪ್ರಶಸ್ತಿ ಲಭಿಸಿತ್ತು.
BANTWAL
ವಗ್ಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಬಸ್; ಹಲವರಿಗೆ ಗಾಯ
ಬಂಟ್ವಾಳ ತಾಲೂಕಿನ ವಗ್ಗದ ಸಮೀಪ ಕೊಪ್ಪಳ ಎಂಬಲ್ಲಿ ಸರ್ಕಾರಿ ಬಸ್ ಉರುಳಿ ಬಿದ್ದಿದ್ದು, ಹಲವರು ಗಾಯಗೊಂಡಿದ್ದಾರೆ.
ಧರ್ಮಸ್ಥಳ ಮಂಗಳೂರು ನಡುವೆ ಸಂಚರಿಸುವ ಸರ್ಕಾರಿ ಬಸ್ ಇದಾಗಿದ್ದು, ಕೊಪ್ಪಳ ಎಂಬಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿದೆ. ಈ ವೇಳೆ ರಸ್ತೆಯ ಪಕ್ಕದ ಗುಂಡಿಗೆ ಬಸ್ ಉರುಳಿ ಬಿದ್ದಿದ್ದು ಬಸ್ನಲ್ಲಿದ್ದ ಹಲವರಿಗೆ ಗಾಯಗಳಾಗಿದೆ. ತಕ್ಷಣ ಸ್ಥಳೀಯ ಯುವಕರು ಸೇರಿ ಬಸ್ ಒಳಗಿದ್ದ ಪ್ರಯಾಣಿಕರನ್ನು ಬಸ್ ನಿಂದ ಹೊರ ತೆಗೆದಿದ್ದಾರೆ.
ಗಾಯಾಳುಗಳನ್ನು ಖಾಸಗಿ ವಾಹನಗಳ ಮೂಲಕ ಸಮೀಪದ ಆಸ್ಪತ್ರೆಗೆ ರವಾನಿಸುವ ಕೆಲಸ ಮಾಡಿದ್ದಾರೆ. ಬಸ್ ಬರುತ್ತಿರುವ ವೇಳೆ ಬೈಕ್ ಒಂದು ಅಡ್ಡ ಬಂದಿದ್ದು ಈ ವೇಳೆ ಬಸ್ ನಿಯಂತ್ರಿಸುವ ವೇಳೆ ರಸ್ತೆಯಿಂದ ಪಕ್ಕಕ್ಕೆ ಉರುಳಿದೆ ಎಂದು ಬಸ್ ಚಾಲಕ ಮಾಹಿತಿ ನೀಡಿದ್ದಾರೆ . ಆದರೆ ಸ್ಥಳಿಯರು ಇದನ್ನು ನಿರಾಕರಿಸಿದ್ದು ಬಸ್ ಚಾಲಕನ ನಿರ್ಲಕ್ಷ್ಯವೇ ಈ ಅಪಘಾತಕ್ಕೆ ಕಾರಣ ಎಂದು ಹೇಳಿದ್ದಾರೆ.
ಸ್ಥಳಕ್ಕೆ ಪುಂಜಾಲಕಟ್ಟೆ ಪೊಲೀಸರು ಭೇಟಿ ನೀಡಿದ್ದು, ಮಾಹಿತಿ ಪಡೆದುಕೊಂಡು ಘಟನೆಗೆ ಕಾರಣ ಏನು ಎಂಬ ಬಗ್ಗೆ ವಿಚಾರಣೆ ಮುಂದುವರೆಸಿದ್ದಾರೆ.
LATEST NEWS
ತಿರುಪತಿ ಲಡ್ಡು ಸೂಪರ್.. ಲಡ್ಡು ತಿಂದು ಖುಷಿ ಹಂಚಿಕೊಂಡ ಭಕ್ತರು..!
ಆಂಧ್ರಪ್ರದೇಶ/ಮಂಗಳೂರು: ತಿರುಪತಿಯಲ್ಲಿ ಶ್ರೀ ವೆಂಕಟರಮಣನ ಲಡ್ಡು ಪ್ರಸಾದದಲ್ಲಿ ಪ್ರಾಣಿ ಕೊಬ್ಬು ಕಲಬೆರಕೆ ವಿಚಾರದ ಬಳಿಕ ಕರ್ನಾಟಕದ ಕೆಎಮ್ಎಫ್ನಿಂದ ನಂದಿನಿ ತುಪ್ಪವನ್ನು ಆಮದು ಮಾಡಿಕೊಳ್ಳಲಾಗುತ್ತಿದೆ. ಇದೀಗ ನಂದಿನಿ ತುಪ್ಪ ಬಳಸಿ ತಯಾರಾಗುತ್ತಿರುವ ಲಡ್ಡು ತಿಂದು ಭಕ್ತಾದಿಗಳು ಖುಷಿಪಟ್ಟಿದ್ದಾರೆ.
ಪ್ರಸಾದಕ್ಕೆ ಕಲಬೆರಕೆ ಬೆನ್ನಲ್ಲೇ ದೇವಸ್ಥಾನವನ್ನು ಶುದ್ದೀಕರಿಸಲಾಗಿದೆ. ಜೊತೆಗೆ ನಂದಿನಿ ತುಪ್ಪವನ್ನು ಪ್ರಸಾದಕ್ಕೆ ಬಳಸುತ್ತಿರುವ ಬಳಿಕ ಭಕ್ತಾಧಿಗಳು ತಿರುಪತಿಗೆ ದೇವರ ದರ್ಶನಕ್ಕೆ ತೆರಳುತ್ತಿದ್ದಾರೆ. ಜೊತೆಗೆ ಅಪಾರ ಸಂಖ್ಯೆಯಲ್ಲಿ ಲಡ್ಡು ಪ್ರಸಾದವನ್ನು ಸ್ವೀಕಾರ ಮಾಡುತ್ತಿದ್ದಾರೆ.
ಈ ಬಗ್ಗೆ ಭಕ್ತರು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದು ನಾವು ಲಡ್ಡು ತೆಗೆದುಕೊಂಡು ತಿಂದೆವು. ಟೇಸ್ಟ್ ಸೂಪರ್ ಆಗಿದೆ. ನಮ್ಮ ಕೆಎಂಎಫ್.. ನಮ್ಮ ಬೆಂಗಳೂರು. ನಮಗೂ ಖುಷಿ ತಂದಿದೆ. ತುಂಬಾ ಚೆನ್ನಾಗಿದೆ ಎಂದು ಖುಷಿ ಹಂಚಿಕೊಂಡಿದ್ದಾರೆ. ನಮ್ಮ ನಾಡಿನ ನಂದಿನಿ ತುಪ್ಪ ಬಳಸಿ ಲಡ್ಡು ಮಾಡುತ್ತಿರುವುದು ತುಂಬಾ ಖುಷಿ ವಿಚಾರ. ಮಧ್ಯದಲ್ಲಿ ಈ ರೀತಿಯ ವಿವಾದ ಎದ್ದಿದ್ದಕ್ಕೆ ಬೇಜಾರಾಯ್ತು. ನಮ್ಮ ಕರ್ನಾಟಕ ನಮ್ಮ ಹೆಮ್ಮೆ. ನಂದಿನಿ ನಮ್ಮ ಹೆಮ್ಮೆ. ನಂದಿನಿ ಬಳಸಿ ಸ್ವಾಧಿಷ್ಟಕರವಾದ ಲಡ್ಡು ಸವಿಯಿರಿ ಎಂದು ಖುಷಿ ವ್ಯಕ್ತಪಡಿಸಿದ್ದಾರೆ.
LATEST NEWS
ಆಟದ ಮೈದಾನದ ಗೇಟ್ ಬಿದ್ದು ಬಾಲಕ ಸಾ*ವು; ಕುಟುಂಬಕ್ಕೆ ಪರಿಹಾರ ಘೋಷಣೆ
ಮಂಗಳೂರು/ಬೆಂಗಳೂರು : ಮಲ್ಲೇಶ್ವರಂನಲ್ಲಿ ಬಿಬಿಎಂಪಿ ವ್ಯಾಪ್ತಿಯ ಆಟದ ಮೈದಾನದ ಗೇಟ್ ಬಿದ್ದು ಬಾಲಕ ಸಾ*ವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ವಿಜಯಕುಮಾರ್ ಮತ್ತು ಪ್ರಿಯಾ ದಂಪತಿ ಪುತ್ರ ನಿರಂಜನ್(10) ಮೃ*ತ ಬಾಲಕ. ಆಟ ಆಡಲು ಮೈದಾನದ ಗೇಟ್ ಓಪನ್ ಮಾಡುತ್ತಿದ್ದಂತೆ ಮಗುವಿನ ಮೇಲೆಯೇ ಗೇಟ್ ಬಿದ್ದಿದೆ. ಈ ವೇಳೆ ತಲೆಗೆ ತೀವ್ರ ಪೆಟ್ಟು ಬಿದ್ದಿದ್ದು, ಕೂಡಲೇ ಸ್ಥಳೀಯರು ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ, ಚಿಕಿತ್ಸೆ ಫಲಿಸದೇ ಬಾಲಕ ಕೊನೆ*ಯುಸಿರೆಳೆದಿದ್ದಾನೆ.
ಮೃ*ತ ನಿರಂಜನ್ ಮಲ್ಲೆಶ್ವರಂನ ಬಿಬಿಎಂಪಿ ಶಾಲೆಯಲ್ಲಿ 5 ನೇ ತರಗತಿಯಲ್ಲಿ ಓದುತ್ತಿದ್ದ. ಜೊತೆಗೆ ತಂದೆ ವಿಜಯಕುಮಾರ್ ಆಟೋ ಚಾಲಕರಾಗಿದ್ದು, ಮಲ್ಲೇಶ್ವರನ ಪೈಪ್ಲೈನ್ನಲ್ಲಿ ಈ ಕುಟುಂಬ ವಾಸವಾಗಿತ್ತು. ಇನ್ನು ಘಟನಾಸ್ಥಳಕ್ಕೆ ಮಲ್ಲೇಶ್ವರಂ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : WATCH : ಎಸಿ ಕೋಚ್ನಲ್ಲಿ ಟಿಕೇಟ್ ಇಲ್ಲದೆ ಪ್ರಯಾಣಿಸಿದ ಹಾವು; ವೀಡಿಯೋ ವೈರಲ್
ಪರಿಹಾರ ಘೋಷಣೆ :
ನಿರಂಜನ್ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರವನ್ನು ನೀಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮೃತ ಬಾಲಕನ ಕುಟುಂಬಕ್ಕೆ ರಾಜ್ಯ ಸರ್ಕಾರ, ಬಿಬಿಎಂಪಿಯಿಂದ 5 ಲಕ್ಷ ರೂಪಾಯಿ ಮತ್ತು ಗಾಂಧಿನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ 5 ಲಕ್ಷ ರೂಪಾಯಿ ಸೇರಿ ಒಟ್ಟು 10 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದರು.
- FILM5 days ago
ಬಿಗ್ ಬಾಸ್ ಕನ್ನಡ ಸೀಸನ್ -11 ರ ಸ್ಪರ್ಧಿಗಳ ಹೆಸರು ರಿವೀಲ್..?
- NATIONAL4 days ago
ಶ್ವಾನ ನೆಗೆದು ಗರ್ಭಪಾತ; ಮಾಲಿಕನಿಗೆ 10 ಲಕ್ಷ ದಂಡ
- NATIONAL4 days ago
ವಿಶ್ವದ ಶ್ರೀಮಂತ ಭಿಕ್ಷುಕ ಇವರೇ ನೋಡಿ ! ಭರತ್ ಜೈನ್ ಒಟ್ಟು ಆಸ್ತಿ ಎಷ್ಟು ಗೊತ್ತಾ ???
- LATEST NEWS4 days ago
ಟಾರ್ಗೆಟ್ ತಲುಪೋ ಭರದಲ್ಲಿ ರಾತ್ರಿ ಹಗಲೆನ್ನದೇ ಕೆಲಸ ಮಾಡಿ ಯುವತಿ ಸಾ*ವು