Connect with us

    ನರಕವಾಗಿದೆ ಕೂಲಿ ಕಾರ್ಮಿಕರ ಬದುಕು, ಹೊಟ್ಟೆ ಹೊರೆಯುವ ಚಿಂತೆ…!

    Published

    on

    ನರಕವಾಗಿದೆ ಕೂಲಿ ಕಾರ್ಮಿಕರ ಬದುಕು, ಹೊಟ್ಟೆ ಹೊರೆಯುವ ಚಿಂತೆ…!

    ಉಡುಪಿ : ಜಿಲ್ಲೆಯಲ್ಲಿ ಹೋಟೆಲ್ ಕೆಲಸ ಹಾಗೂ ಕಟ್ಟಡ ನಿರ್ಮಾಣ ಕೆಲಸಕ್ಕೆ ಹೊರ ರಾಜ್ಯ , ಜಿಲ್ಲೆಗಳಿಂದ ಅದೆಷ್ಟೋ ಕೂಲಿ ಕಾರ್ಮಿಕರು ಬಂದು ನೆಲೆಸಿದ್ದಾರೆ. ತಮ್ಮ ಚಿಕ್ಕ ಚಿಕ್ಕ ಮಕ್ಕಳ ಜೊತೆ ಗುಡಿಸಲುಗಳಲ್ಲಿ ಇವರು ವಾಸವಾಗಿದ್ದಾರೆ.

    ಆದರೆ ಕೊರೊನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಲಾಕ್ ಡೌನ್ ಘೋಷಣೆ ಮಾಡಿರುವುದರಿಂದ ಇತ್ತ ಕೆಲಸವೂ ಇಲ್ಲ, ಅತ್ತ ಹೊಟ್ಟೆಗೆ ಹಿಟ್ಟೂ ಇಲ್ಲ ಎಂಬಂತಹ ದುರಂತ ಸ್ಥಿತಿ ಇವರದ್ದು. ಯಾರಾದರೂ ದಾನಿಗಳು ನೀಡುವ ಆಹಾರಕ್ಕೆ ಕಾಯಬೇಕಾದ ಅನಿವಾರ್ಯತೆ ಬಂದೊದಗಿದೆ.

    ಇಂತಹ ಕೂಲಿ ಕಾರ್ಮಿಕರ ಸ್ಥಿತಿಯನ್ನು ಕಂಡ ಉಡುಪಿ ಕ್ಷೇತ್ರ ಶಾಸಕ ರಘುಪತಿ ಭಟ್, ಜಿಲ್ಲೆಯ ನಿಟ್ಟೂರಿನಲ್ಲಿ 150 ಕ್ಕಿಂತಲೂ ಹೆಚ್ಚು ಕುಟುಂಬಗಳಿಗೆ ನಿತ್ಯ ಅನ್ನವನ್ನು ನೀಡುವ ಮೂಲಕ ನೆರವಾಗಿದ್ದಾರೆ. ರಘುಪತಿ ಭಟ್ ಅವರ ನೇತೃತ್ವದಲ್ಲಿ ಮತ್ತು ಕಡಿಯಾಳಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ಸಹಕಾರದೊಂದಿಗೆ ಈ ಮಾನವೀಯ ಕಾರ್ಯವನ್ನು ಅವರು ಮಾಡಿದ್ದಾರೆ.

    ಆದರೆ ಸ್ವಾಭಿಮಾನದಿಂದ ಕೆಲಸ ಮಾಡಿ ತಮ್ಮ ಮಕ್ಕಳ ಹೊಟ್ಟೆಹೊರೆಯುತ್ತಿದ್ದ ಕಾರ್ಮಿಕರು ತಮಗೆ ಒದಗಿದ ದಯನೀಯ ಸ್ಥಿತಿಗೆ ನೋವನ್ನು ಅನುಭವಿಸುತ್ತಿದ್ದಾರೆ. ದೇವರು ನಮಗೆ ಇಂತಹ ಸ್ಥಿತಿಯನ್ನು ಕೊಟ್ಟಿದ್ದಾರೆ. ತುತ್ತು ಅನ್ನಕ್ಕಾಗಿ ನಾವು ಕಾಯುತ್ತಾ ಕುಳಿತ್ತಿದ್ದೇವೆ. ಎಲ್ಲಾ ಕಷ್ಟದಿಂದ ನಮ್ಮನ್ನು ಪಾರು ಮಾಡಪ್ಪಾ ದೇವರೇ…ನಾವು ನಮ್ಮ ಊರಿಗೆ ಹೊರಡುತ್ತೇವೆ ಎಂದು ಕಣ್ಣೀರಿಡುತ್ತಿದ್ದಾರೆ.

    Click to comment

    Leave a Reply

    Your email address will not be published. Required fields are marked *

    LATEST NEWS

    ಬೆಂಗಳೂರಿನಲ್ಲಿ ಮಹಿಳೆಯ ಬರ್ಬರ ಹ*ತ್ಯೆ – 20ಕ್ಕೂ ಹೆಚ್ಚು ತುಂಡು ಮಾಡಿ ಫ್ರಿಡ್ಜ್‌ನಲ್ಲಿಟ್ಟು ಆರೋಪಿ ಎಸ್ಕೇಪ್

    Published

    on

    ಬೆಂಗಳೂರು: ಮಹಿಳೆಯೊಬ್ಬರನ್ನು ಭೀಕರವಾಗಿ ಕೊ*ಲೆ ಮಾಡಿ 20ಕ್ಕೂ ಹೆಚ್ಚು ತುಂಡುಗಳನ್ನಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟು ಆರೋಪಿ ಎಸ್ಕೇಪ್ ಆಗಿರುವ ಘಟನೆ ಬೆಂಗಳೂರಿನ ವೈಯಾಲಿಕಾವಲ್‌ನ ವಿನಾಯಕ ನಗರದಲ್ಲಿ ನಡೆದಿದೆ.

    ಮಹಿಳೆಯನ್ನು ಕೊಂ*ದು ನಂತರ ಮೃ*ತದೇಹವನ್ನು ಪೀಸ್ ಪೀಸ್ ಆಗಿ ಕತ್ತರಿಸಿ ಬಳಿಕ ಫ್ರಿಡ್ಜ್‌ನಲ್ಲಿಟ್ಟು ಆರೋಪಿ ಪರಾರಿಯಾಗಿದ್ದಾನೆ. ಹ*ತ್ಯೆ ಬಳಿಕ ಮಾಂಸದ ಗುಡ್ಡೆ ಮಾಡಿ ಫ್ರಿಡ್ಜ್‌ನಲ್ಲಿ ಇರಿಸಿ ಮಗುವನ್ನು ಮನೆಯಲ್ಲೇ ಬಿಟ್ಟು ಆರೋಪಿ ಎಸ್ಕೇಪ್ ಆಗಿದ್ದಾನೆ. 15 ದಿನಗಳ ಹಿಂದೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

    2-3 ತಿಂಗಳಿನಿಂದ ಮನೆಯಲ್ಲಿ ಬಾಡಿಗೆಗಿದ್ದರು. ಇಂದು ಸಂಬಂಧಿಕರು ಬೀಗ ಒಡೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ವೈಯಾಲಿಕಾವಲ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ವೈಯಾಲಿಕಾವಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಯ ಪತ್ತೆಗಾಗಿ ತನಿಖೆ ಮುಂದುವರೆದಿದೆ.

    Continue Reading

    LATEST NEWS

    ಶಿರೂರು ಗುಡ್ಡ ಕುಸಿತ; ಕೊನೆಗೂ ನಾಪತ್ತೆಯಾಗಿದ್ದ ಟ್ರಕ್‌ ಪತ್ತೆ

    Published

    on

    ಕಾರವಾರ: ಶಿರೂರು ಭೂ ಕುಸಿತದ ಬಳಿಕ ಗಂಗಾವಳಿ ನದಿಯಾಳದಲ್ಲಿ ಬಿದ್ದ ಟ್ರಕ್‌ ಕೊನೆಗೂ ಪತ್ತೆಯಾಗಿದೆ.

    ಜುಲೈ 16 ರಂದು ಭೂ ಕುಸಿತ ಸಂಭವಿಸಿದ ಬಳಿಕ ಕೇರಳದ ಅರ್ಜುನ್‌ ಚಲಾಯಿಸುತ್ತಿದ್ದ ಟ್ರಕ್‌ ಗಂಗಾವಳಿ ನದಿಗೆ ಬಿದ್ದಿತ್ತು. ನದಿಯಲ್ಲಿ ನೀರಿನ ಪ್ರಮಾಣ ಜಾಸ್ತಿ ಇದ್ದ ಕಾರಣ ಟ್ರಕ್‌ ಪತ್ತೆ ಮಾಡಲು ಕಷ್ಟವಾಗಿತ್ತು. ಮುಳುಗು ತಜ್ಞ ಈಶ್ವರ ಮಲ್ಪೆ ಅವರು ಟ್ರಕ್‌ ಪತ್ತೆಗೆ ನಿರಂತರ ಪ್ರಯತ್ನ ನಡೆಸುತ್ತಿದ್ದರು.

    ಈಗ ಟ್ರಕ್‌ ಗುಡ್ಡ ಕುಸಿತಗೊಂಡ ಜಾಗದ ಬಳಿಯೇ ಸಿಕ್ಕಿ ಬಿದ್ದಿದೆ. ಟ್ರಕ್‌ ಮೇಲೆ ಸಾಕಷ್ಟು ಕಲ್ಲು ಮತ್ತು ಮಣ್ಣುಗಳಿವೆ. ಹೀಗಾಗಿ ಮಣ್ಣು ಮತ್ತು ಕಲ್ಲುಗಳನ್ನು ತೆಗೆದು ಟ್ರಕ್‌ ಮೇಲಕ್ಕೆ ಎತ್ತಲು ಸಿದ್ಧತೆ ನಡೆಯುತ್ತಿದೆ.

    ಜುಲೈ 16 ರಂದು ಭೂಕುಸಿತ ಸಂಭವಿಸಿದಾಗ ಅರ್ಜುನ್ ಮರ ತುಂಬಿಸಿಕೊಂಡು ಟ್ರಕ್‌ನಲ್ಲಿ ಕೋಝಿಕ್ಕೋಡ್‌ ಕಡೆಗೆ ಹೋಗುತ್ತಿದ್ದರು.

    Continue Reading

    FILM

    ಜಾನಿ ಮಾಸ್ಟರ್ ಪತ್ನಿಗೂ ಬಂತು ಕಂಟಕ..! ಅತ್ಯಾಚಾರ ಪ್ರಕರಣಕ್ಕೆ ಟ್ವಿಸ್ಟ್..!!

    Published

    on

    ಹೈದರಾಬಾದ್/ಮಂಗಳೂರು: ಜಾನಿ ಮಾಸ್ಟರ್ ಮೇಲಿರುವ ನೃತ್ಯ ನಿರ್ದೇಶಕಿಯ ಅತ್ಯಾಚಾರ ಆರೋಪಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಜಾನಿ ಮಾಸ್ಟರ್ ಪತ್ನಿ ಆಯಿಷಾ ಮೇಲೂ ಕ್ರಮಕೈಗೊಳ್ಳಲು ಪೊಲೀಸರು ಸಿದ್ಧತೆ ನಡೆಸುತ್ತಿದ್ದಾರೆ.

    ಈಗಾಗಲೇ ಜಾನಿ ಮಾಸ್ಟರ್‌ ನನ್ನು ಡ್ಯಾನ್ಸ್‌ ನಿರ್ದೇಶಕಿ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪದಡಿಯಲ್ಲಿ ಗೋವಾ ಪೊಲೀಸರು ಬಂಧಿಸಿ ಹೈದರಾಬಾದ್‌ನ ಚಂಚಲ್‌ ಗುಡಾ ಜೈಲಿಗೆ ಕಳುಹಿಸಿದ್ದಾರೆ. ನೃತ್ಯ ಸಂಯೋಜಕಿಯೊಬ್ಬಳು ನನ್ನ ಮೇಲೆ ಜಾನಿ ಮಾಸ್ಟರ್ ಅತ್ಯಾಚಾರವೆಸಗಿದ್ದಾರೆ ಹಾಗೂ ಅವರ ಪತ್ನಿ ಆಯಿಷಾ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ನರಸಿಂಗ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

    ಖ್ಯಾತ ಕೊರಿಯೋಗ್ರಾಫರ್ ಜಾನಿ ಮಾಸ್ಟರ್ ಅರೆಸ್ಟ್..!

    ಪ್ರಕರಣದಲ್ಲಿ ಆಯೇಷಾರನ್ನು ಆರೋಪಿಯನ್ನಾಗಿಸಲು ಪೊಲೀಸರು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಮತ್ತೊಂದೆಡೆ ಶನಿವಾರ(ಸೆ.21) ನರಸಿಂಗಿ ಪೊಲೀಸರು, ಜಾನಿ ಮಾಸ್ಟರ್ ನನ್ನು ಕಸ್ಟಡಿಗೆ ನೀಡುವಂತೆ ಉಪ್ಪಾರಪಲ್ಲಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಿದ್ದಾರೆ. ಹತ್ತು ದಿನಗಳ ಕಾಲ ಕಸ್ಟಡಿಗೆ ಕೋರುವ ಸಾಧ್ಯತೆ ಇದೆ. ಫೋಕ್ಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿರುವುದರಿಂದ ಆತನನ್ನು ಸಂಪೂರ್ಣವಾಗಿ ಪ್ರಶ್ನಿಸಲು ಪೊಲೀಸರು ನ್ಯಾಯಾಲಯದ ಮೊರೆ ಹೋಗಲಿದ್ದಾರೆ. ಅಲ್ಲದೆ, ಆತನ ಪತ್ನಿ ವಿರುದ್ಧವೂ ಆರೋಪ ಕೇಳಿ ಬಂದಿರುವುದರಿಂದ ಬಂಧನವಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.

    Continue Reading

    LATEST NEWS

    Trending