DAKSHINA KANNADA
ಮಹಿಳೆಯರೇ ಎಚ್ಚರ-ಕಾರ್ ಚಲಾಯಿಸುವ ಒಂಟಿ ಹೆಂಗಸರೇ ಟಾರ್ಗೆಟ್…!
ಮಂಗಳೂರು: ರಾತ್ರಿ 10 ಗಂಟೆಯ ಬಳಿಕ ಒಬ್ಬರು ಅಥವಾ ಇಬ್ಬರು ಮಹಿಳೆಯರು ಕಾರಲ್ಲಿ ತೆರಳುತ್ತಿರುವುದು ಕಂಡರೆ ಅವರ ಬೆನ್ನು ಬಿದ್ದು ಗಮನ ಬೇರೆಡೆ ಸೆಳೆದು ವಂಚನೆಗೆ ಯತ್ನಿಸುತ್ತಿರುವ ಗ್ಯಾಂಗೊಂದು ಮಂಗಳೂರು ನಗರದಲ್ಲಿ ಸಕ್ರಿಯವಾಗಿ ಕಾರ್ಯಾಚರಿಸುತ್ತಿದೆ.
ಬುಧವಾರ ರಾತ್ರಿ 10 ಗಂಟೆಯ ಸುಮಾರಿಗೆ ಮಹಿಳೆಯೊಬ್ಬರು ನಗರದ ಲಯನ್ಸ್ ಕ್ಲಬ್ನಲ್ಲಿ ಕಾರ್ಯಕ್ರಮ ಮುಗಿಸಿ ಕಾರಿನಲ್ಲಿ ನಂತೂರು, ಪದುವಾ ಮೂಲಕ ಹೆದ್ದಾರಿ ಆಗಿ ಮನೆಗೆ ತೆರಳುತ್ತಿದ್ದರು. ಇದೇ ಸಂದರ್ಭ ಯುವಕನೊಬ್ಬ ಬೈಕ್ನಲ್ಲಿ ಹಿಂಬಾಲಿಸುತ್ತಾ ಬಂದಿದ್ದು ಪದೇ ಪದೇ ಹಾರ್ನ್ ಹಾಕುತ್ತಿದ್ದ.
ಮಹಿಳೆ ಪದುವಾ ಕಾಲೇಜು ಬಳಿ ಬೈಕ್ನವನತ್ತ ನೋಡಿದಾಗ ‘ನಿಮ್ಮ ಕಾರಿನ ಟಯರ್ ಬೋಲ್ಟ್ ಲೂಸ್ ಆಗಿದೆ. ತೊಂದರೆ ಆಗಬಹುದು. ಕಾರು ನಿಲ್ಲಿಸಿ’ ಎಂದು ಹೇಳಿದ್ದಾನೆ.
ಇದರಿಂದ ಮಹಿಳೆ ಗೊಂದಲದಿಂದ ಕಾರು ನಿಲ್ಲಿಸಿ ನೋಡಿದರೆ ಅಂತಹ ಸನ್ನಿವೇಶವೇನೂ ಇರಲಿಲ್ಲ. ಆದರೂ ಯುವಕ ಕಾರಿನ ಟಯರ್ ಶೇಕ್ ಆಗುತ್ತಿದೆ. ಅದರ ನೆಟ್ ಭದ್ರಪಡಿಸಿ ಕೊಡುತ್ತೇನೆ’ ಎಂದು ಲಿವರ್ ಕೇಳಿ ಪಡೆದಿದ್ದಾನೆ. ಮಹಿಳೆ ನೋಡುತ್ತಿದ್ದಂತೆ ನೆಟ್ ಭದ್ರಪಡಿಸುವ ಬದಲು ಸಡೀಲು ಮಾಡುತ್ತಿದ್ದ.
ಇದರಿಂದ ಕೋಪಗೊಂಡ ಮಹಿಳೆ ತರಾಟೆಗೆ ತೆಗೆದುಕೊಂಡರು. ಇದನ್ನು ನೋಡಿದ ಲಾರಿ ಚಾಲಕನೋರ್ವ ವಾಹನ ಕಾರು ಬಳಿ ನಿಲ್ಲಿಸಿದರು.
ಇದೇ ಸಮಯ ಅಪಾಯವನ್ನರಿತ ಯುವಕ ಅಲ್ಲಿಂದ ಪರಾರಿಯಾಗಿದ್ದಾನೆ. ಇದೇ ರೀತಿ ಕದ್ರಿ, ಬಂಟ್ಸ್ ಹಾಸ್ಟೆಲ್, ಕರಂಗಲ್ಪಾಡಿ ವ್ಯಾಪ್ತಿಯಲ್ಲಿ ವಂಚನೆಗೆ ಪ್ರಯತ್ನಿಸಿದ ಘಟನೆ ನಡೆದಿದೆ ಎಂದು ಮಹಿಳೆಯರು ತಿಳಿಸಿದ್ದಾರೆ.
DAKSHINA KANNADA
ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಚುನಾವಣಾ ಆಯೋಗಕ್ಕೆ ದೂರು
ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.
ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.
ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು
ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ. ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಪ್ರಕರಣ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.
DAKSHINA KANNADA
ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು
ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.
ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.
DAKSHINA KANNADA
ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ
ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.
ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.
ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.
- FILM4 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ
- FILM4 days ago
‘ಬಘೀರ’ ಸಿನೆಮಾ ಶೂಟಿಂಗ್ ವೇಳೆ ಅವಘಡ.. ರೋರಿಂಗ್ ಸ್ಟಾರ್ ಆಸ್ಪತ್ರೆ ದಾಖಲು
- FILM5 days ago
ವಿಚ್ಛೇದನದ ಸುದ್ದಿಗೆ ಉತ್ತರ ಕೊಟ್ಟ ಐಶ್ – ಅಭಿ ಆ್ಯನಿವರ್ಸರಿ ಫೋಟೋ!
- chikkamagaluru4 days ago
ಎಟಿಎಂ ಮೆಷಿನ್ಗೆ ಬೆಂಕಿ ಅವಘಡ..! ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿ..!!