Connect with us

    LATEST NEWS

    ನವಜಾತ ಶಿಶು ಕದ್ದು ರೂ.15 ಲಕ್ಷಕ್ಕೆ ಮಾರಾಟ ಮಾಡಿದ ವೈದ್ಯೆ ಬಂಧನ..!

    Published

    on

    ಬೆಂಗಳೂರು: ನವಜಾತ ಶಿಶುವನ್ನು ಕದ್ದು ಮಾರಾಟ ಮಾಡಿದ ಆರೋಪದಲ್ಲಿ ವೈದ್ಯೆಯೊಬ್ಬರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

    ಚಾಮಪರಾಜಪೇಟೆಯ ಬಿಬಿಎಂಪಿ ಆಸ್ಪತ್ರೆಯಲ್ಲಿ ನಡೆದಿದ್ದ ಈ ನವಜಾತ ಶಿಶು ಅಪಹರಣ ಪ್ರಕರಣ ಭಾರಿ ಕುತೂಹಲ ಕೆರಳಿಸಿತ್ತು. ಇದೀಗ  ದಕ್ಷಿಣ ವಿಭಾಗದ ಪೊಲೀಸರು ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಈ ಸಂಬಂಧ ವೈದ್ಯೆಯೊಬ್ಬರನ್ನು ಬಂಧಿಸಿದ್ದಾರೆ. ಬನ್ನೇರುಘಟ್ಟ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಯ ಮನೋವೈದ್ಯೆ ಡಾ.ರಶ್ಮಿ (34) ಬಂಧಿತ ವೈದ್ಯೆಯಾಗಿದ್ದಾರೆ.

    ವಿಚಾರಣೆ ವೇಳೆ ನವಜಾತ ಶಿಶು ಅಪಹರಿಸಿದ್ದ ವೈದ್ಯೆ, ಮಗುವನ್ನು ರೂ.15 ಲಕ್ಷಕ್ಕೆ ಕೊಪ್ಪಳದ ದಂಪತಿಗೆ ಮಾರಾಟ ಮಾಡಿರುವುದು ತಿಳಿದುಬಂದಿದೆ.

    ಇದೀಗ ಆರೋಪಿ ವೈದ್ಯೆಯನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದು, ಮಾರಾಟ ಮಾಡಲಾಗಿದ್ದ ಮಗುವನ್ನು ರಕ್ಷಣೆ ಮಾಡಲಾಗಿದೆ ಎಂದು ದಕ್ಷಿಣ ವಿಭಾಗದ ಡಿಸಿಪಿ ಹರೀಶ್ ಪಾಂಡೆ ಮಾಹಿತಿ ನೀಡಿದ್ದಾರೆ.

    ವೈದ್ಯೆಯ ಖತರ್ನಾಕ್ ಐಡಿಯಾ..!:

    ಮಗುವನ್ನು ಖರೀದಿಸಿದ್ದ ಕೊಪ್ಪಳ ಮೂಲದ ದಂಪತಿಗೆ ಬುದ್ದಮಾಂದ್ಯ ಮಗುವಿತ್ತು. ಅದರ ಚಿಕಿತ್ಸೆಗೆ ಅವರು 2014ರಲ್ಲಿ ಹುಬ್ಬಳ್ಳಿಯ ಸುತ್ತೂರಿನಲ್ಲಿರುವ ಆಸ್ಪತ್ರೆಗೆ ತೆರಳಿದ್ದಾಗ, ಅಲ್ಲಿ ಅವರಿಗೆ ಡಾ.ರಶ್ಮಿ ಪರಿಚಯವಾಗಿತ್ತು.

    ಹೀಗೆ ಒಡನಾಟ ಬೆಳೆಗ ಬಳಿಕ ರಶ್ಮಿ, ದಂಪತಿಗೆ ನೀವು ಭಯಪಡುವ ಅಗತ್ಯವಿಲ್ಲ. ಮತ್ತೊಂದು ಮಗು ನೀವು ಪಡೆಯಬಹುದು. ವೀರ್ಯಾಣು ಮತ್ತು ಅಂಡಾಣು ತೆಗೆದುಕೊಂಡು ಬಾಡಿಗೆ ತಾಯಿ ಹೊಟ್ಟೆಯಲ್ಲಿ ನಿಮ್ಮದೇ ಮಗು ಬೆಳಸಬಹುದು. ಅದಕ್ಕಾಗಿ ರೂ.15 ಲಕ್ಷ ಖರ್ಚಾಗುತ್ತದೆ. ಮಗು ಜನಿಸಿದ ಬಳಿಕ ನಿಮಗೆ ತಂದುಕೊಡುತ್ತೇನೆಂದು ತಿಳಿಸಿದ್ದರು.

    ಈಕೆಯ ಮಾತು ನಂಬಿದ್ದ ದಂಪತಿ,ಹಣ ಕೊಡಲು ಸಮ್ಮತಿಸಿದ್ದಾರೆ. ಬಳಿಕ ಬಾಡಿಗೆ ತಾಯಿ ಹೊಟ್ಟೆಯಲ್ಲಿ ಮಗು ಗರ್ಭದರಿಸಿದೆ ಎಂದು ಆ ಪೋಷಕರಿಗೆ ವೈದ್ಯೆ ಸುಳ್ಳು ಹೇಳಿದ್ದಳು. ಹೀಗಿರುವಾಗ ಹುಬ್ಬಳ್ಳಿಯ ಆಸ್ಪತ್ರೆ ಕೆಲಸಕ್ಕೆ ರಾಜೀನಾಮೆ ನೀಡಿದ್ದ ರಶ್ಮಿ, ಬೆಂಗಳೂರಿನ ಖಾಸಗಿ ಆಸ್ಪತ್ರೆ ಸೇರಿದ್ದರು.

    ಆಗ ಅದೇ ಸಮಯದಲ್ಲಿಯೇ ಚಾಮರಾಜಪೇಟೆ ಬಿಬಿಎಂಪಿ ಆಸ್ಪತ್ರೆಯಲ್ಲಿ ಹುಸ್ನಾ ಬಾನು ಎಂಬುವವರು ಗಂಡು ಮಗುವಿಗೆ ಜನ್ಮ ನೀಡಿದ್ದರು. ಆಸ್ಪತ್ರೆಗೆ ವೈದ್ಯೆಯಂತೆ ಬಂದಿದ್ದ ರಶ್ಮೀ ಮಗುವನ್ನು ಅಪಹರಿಸಿಕೊಂಡು ಹೋಗಿ ದಂಪತಿಗೆ ನೀಡಿದ್ದಾರೆ. ಇದಕ್ಕೆ ಪ್ರತಿಯಾಗಿ ರೂ.15 ಲಕ್ಷ ಪಡೆದಿದ್ದರು ಎನ್ನಲಾಗಿದೆ.

    ಇತ್ತ ಮಗು ಕಳವಾದ ಹಿನ್ನೆಲೆಯಲ್ಲಿ ಮಗುವಿಗಾಗಿ ಕುಟುಂಬಸ್ಥರು ಆಸ್ಪತ್ರೆಯಲ್ಲಿ ತೀವ್ರವಾಗಿ ಹುಡುಕಾಡಿದ್ದಾರೆ. ಬಳಿಕ ಹತಾಶರಾಗಿ ಚಾಮರಾಜಪೇಟೆ ಠಾಣೆಗೆ ದೂರು ನೀಡಿದ್ದಾರೆ.

    ವರ್ಷವಾದರೂ ಮಗು ಪತ್ತೆಯಾಗದ ಹಿನ್ನೆಲೆಯಲ್ಲಿ ಬೇಸರಗೊಂಡು ಪೋಷಕರು ಹೈಕೋರ್ಟ್ ಮೊರೆ ಹೋಗಿದ್ದಾರೆ. ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ ಶೀಘ್ರವೇ ಮಗು ಪತ್ತೆ ಹಚ್ಚುವಂತೆ ಪೊಲೀಸರಿಗೆ ಸೂಚಿಸಿತ್ತು.

    ನ್ಯಾಯಾಲಯದ ಸೂಚನೆ ಹಿನ್ನೆಲೆಯಲ್ಲಿ ತನಿಖೆ ಚುರುಕುಗೊಳಿಸಿದ್ದ ಪೊಲೀಸರು, ಘಟನಾ ಸ್ಥಳದ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ಸತತ ಪರಿಶೀಲನೆ ಹಾಗೂ ಒಂದು ಸಾವಿರಕ್ಕೂ ಹೆಚ್ಚು ದೂರುವಾಣಿ ಕರೆಗಳ ವಿವರ ಕಲೆಹಾಕಿ, ಅನುಮಾನ ಬಂದವರನ್ನು ವಿಚಾರಣೆಗೊಳಪಡಿಸಿದ್ದಾರೆ. ಈ ಕಾರ್ಯಾಚರಣೆ ಅಂತಿಮವಾಗಿ ಫಲ ನೀಡಿ, ಅವರನ್ನು ವೈದ್ಯೆಯ ಬಳಿ ಕರೆದೊಯ್ದಿದೆ.

    ವಿಚಾರಣೆ ವೇಳೆ ವೈದ್ಯೆ ತಪ್ಪೊಪ್ಪಿಕೊಂಡಿದ್ದು, ಸಾಲ ಮರುಪಾವತಿ ಮಾಡುವ ಸಲುವಾಗಿ ಅಪರಾಧ ಎಸಗಿರುವುದಾಗಿ ವೈದ್ಯೆ ಡಾ.ರಶ್ಮಿ ಹೇಳಿದ್ದಾರೆಂದು ತಿಳಿದುಬಂದಿದೆ.

    DAKSHINA KANNADA

    ಬಂಟ್ವಾಳ :ನವದಂಪತಿ ಪ್ರಯಾಣಿಸುತ್ತಿದ್ದ ಕಾರು ಅಪಘಾ*ತ; ಪತ್ನಿ ಸಾ*ವು; ಪತಿ ಗಂಭೀ*ರ

    Published

    on

    ಬಂಟ್ವಾಳ : ನವದಂಪತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ ಸಂಭವಿಸಿ ಪತ್ನಿ ಸಾ*ವನ್ನಪ್ಪಿದ್ದು, ಪತಿ ಗಂ*ಭೀರವಾಗಿ ಗಾ*ಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಮಂಗಳೂರು-ಬೆಂಗಳೂರು ರಸ್ತೆಯ ಬಂಟ್ವಾಳದ ತಲಪಾಡಿ ಎಂಬಲ್ಲಿ ನಡೆದಿದೆ. ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್ ಕೃಷ್ಣ ಎಂಬವರ ಪತ್ನಿ ಮಾನಸ ಸಾ*ವನ್ನಪ್ಪಿದ ನವವಿವಾಹಿತೆ. ಘಟನೆಯಿಂದ ಅನಿಶ್ ಕೃಷ್ಣ ಗಂಭೀ*ರವಾಗಿ ಗಾ*ಯಗೊಂಡಿದ್ದಾರೆ.

    ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಸಿರೋಡಿನ ಕಡೆಯಿಂದ ‌ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ನವದಂಪತಿಯ ಆಲ್ಟೋ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆಯಿಂದ ಡಿವೈಡರ್ ಮೇಲಿನಿಂದ ಇನ್ನೊಂದು ಬದಿಗೆ ಹಾರಿದೆ. ಬಳಿಕ ಮಂಗಳೂರು ಕಡೆಯಿಂದ ಬಿಸಿರೋಡಿನ ಕಡೆಗೆ ಬರುತ್ತಿದ್ದ ಕೆ.ಎಸ್.ಆರ್‌ಟಿ.ಸಿ ಬಸ್ ಗೆ ಡಿ*ಕ್ಕಿ ಹೊಡೆದಿದೆ.

    ಡಿ*ಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಘಟನೆಯಿಂದ ಹೆದ್ದಾರಿಯಲ್ಲಿ ಕೆಲಹೊತ್ತು ಸಂಚಾರಕ್ಕೆ ಅಡಚಣೆ ಉಂಟಾಯಿತು.

    ಎರಡು ದಿನದ ಹಿಂದಷ್ಟೇ ಮದುವೆ : 

    ಸೆ.5 ರಂದು ದೇಂತಡ್ಕ ದೇವಸ್ಥಾನದಲ್ಲಿ ಮಾನಸ ಹಾಗೂ ಅನಿಶ್ ಕೃಷ್ಣ  ಮದುವೆ ನಡೆದಿತ್ತು. ಮದುವೆ ಕಾರ್ಯಕ್ರಮದ ವಿಚಾರವಾಗಿ ಇಂದು ಅಲ್ಲಿನ ಕೆಲವೊಂದು ಲೆಕ್ಕಾಚಾರ ಮಾಡಲು ದೇಂತಡ್ಕ ದೇವಸ್ಥಾನಕ್ಕೆ ಬಂದು ವಾಪಸ್ ಮಾವನ ಮನೆಗೆ ಹೋಗುವ ವೇಳೆ ಈ ‌ಘ‌ಟನೆ ನಡೆದಿದೆ ಎನ್ನಲಾಗಿದೆ. ಇಬ್ಬರು ಮಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎಂದು ಹೇಳಲಾಗಿದೆ. ಸ್ಥಳಕ್ಕೆ ಮೆಲ್ಕಾರ್ ‌ಟ್ರಾಫಿಕ್ ಪೊಲೀಸರು ಭೇಟಿ ನೀಡಿದ್ದು,  ಪ್ರಕರಣ ದಾಖಲಿಸಿಕೊಂಡಿದ್ದಾರೆ

    Continue Reading

    LATEST NEWS

    ಲಿಫ್ಟ್ ಕೊಡುವ ಮುನ್ನ ಎಚ್ಚರ: ಡ್ರಾಪ್ ಕೇಳಿ ಚಾಕು ಇರಿದ ದು*ಷ್ಕರ್ಮಿ

    Published

    on

    ಮಂಗಳೂರು/ಬೆಂಗಳೂರು : ಇತ್ತೀಚಿಗೆ ಕ್ರೈಂ ಪ್ರಕರಣಗಳು ಹೆಚ್ಚುತ್ತಿವೆ. ಅದರಲ್ಲೂ ಕೊ*ಲೆ ಮಾಡೋದಕ್ಕಂತೂ ಕಾರಣವೇ ಬೇಡ. ಕ್ಷುಲ್ಲಕ ಕಾರಣಕ್ಕಾಗಿ ಒಬ್ಬ ವ್ಯಕ್ತಿಯನ್ನು ಹ*ತ್ಯೆ ಮಾಡಲು ಹೇಸುವುದಿಲ್ಲ. ಅಂತಹುದೇ ಕೃ*ತ್ಯ ಬೆಂಗಳೂರಿನಲ್ಲಿ ನಡೆದಿದೆ. ಬೈಕ್ ನಲ್ಲಿ ಲಿಫ್ಟ್ ಕೊಟ್ಟಾತನಿಗೆ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದಿದ್ದಾನೆ.

    ಖಾಸಗಿ ಬ್ಯಾಂಕ್ ಉದ್ಯೋಗಿ ಪಿ.ಈಶ್ವರಗೌಡ(38) ಚೂ*ರಿ ಇರಿತಕ್ಕೊಳಗಾದವರು. ರೋಹಿತ್ ಗೌಡ (24) ಚೂ*ರಿ ಇರಿದಾತ. ಈಶ್ವರಗೌಡ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿ ರೋಹಿತ್ ಗೌಡನನ್ನು ಬಂಧಿಸಲಾಗಿದೆ.

    ಅವಮಾನಕ್ಕೆ ಪ್ರತೀಕಾರ :

    ಸಾಲ ವಸೂಲಾತಿ ಏಜೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಪಿ.ಈಶ್ವರಗೌಡ ಕ್ರಿಕೆಟ್ ಟೂರ್ನಮೆಂಟ್ ವೇಳೆ ರೋಹಿತ್ ಗೌಡನನ್ನು ಸಾರ್ವಜನಿಕವಾಗಿ ಅವಮಾನಿಸಿದ್ದ ಎನ್ನಲಾಗಿದೆ. ಇದಕ್ಕೆ ಪ್ರತೀಕಾರವಾಗಿ ಆರೋಪಿ ಆತನನ್ನು ಕೊ*ಲ್ಲಲು ಸಂಚು ರೂಪಿಸಿದ್ದ ಎಂಬುದು ತನಿಖೆಯಿಂದ ತಿಳಿದುಬಂದಿದೆ.

    ಈಶ್ವರಗೌಡ ತನ್ನ ಸ್ನೇಹಿತನೊಂದಿಗೆ ಢಾಬಾವೊಂದಕ್ಕೆ ಊಟಕ್ಕೆ ಹೋಗಿದ್ದರು. ಅವರು ಢಾಬಾದಿಂದ ಹೊರಬಂದ ನಂತರ, ಗೇಟ್‌ನಲ್ಲಿದ್ದ ಆರೋಪಿ ಡ್ರಾಪ್ ನೀಡುವಂತೆ ವಿನಂತಿಸಿದ್ದ. ಈಶ್ವರ್ ಕೂಡ ಅದೇ ದಾರಿಯಲ್ಲಿ ಹೋಗುತ್ತಿದ್ದರಿಂದ ಅವನು ಡ್ರಾಪ್ ನೀಡಲು ಒಪ್ಪಿದರು. ಸ್ವಲ್ಪ ಹೊತ್ತು ಬೈಕ್ ಹಿಂದೆ ಕುಳಿತು ಸವಾರಿ ಮಾಡಿದ ರೋಹಿತ್, ಸ್ಮಶಾನದ ಬಳಿ ನಿರ್ಜನ ಪ್ರದೇಶದಲ್ಲಿ ತಾನು ತಂದಿದ್ದ ಚಾಕುವಿನಿಂದ ಈಶ್ವರ್ ಗೆ ಇ*ರಿದಿದ್ದಾನೆ.

    ಈ ವೇಳೆ ಬೈಕ್ ಚಲಾಯಿಸುತ್ತಿದ್ದ ಈಶ್ವರ್ ರ ನಿಯಂತ್ರಣ ತಪ್ಪಿದ್ದು,  ಇಬ್ಬರೂ ಕೆಳಗೆ ಬಿದ್ದಿದ್ದಾರೆ. ಚಾಕು ಇ*ರಿತದಿಂದ ಈಶ್ವರ್ ಗೆ ಗಾ*ಯವಾಗಿದೆ. ಆದರೂ ರೋಹಿತ್‌ನಿಂದ ಹರಸಾಹಸ ಮಾಡಿ ತಪ್ಪಿಸಿಕೊಂಡು ಪರಾರಿಯಾಗಲು ಯತ್ನಿಸಿದ್ದಾರೆ. ಆದರೂ ಬಿಡದ ರೋಹಿತ್ ಬೆನ್ನತ್ತಿ ಇ*ರಿದಿದ್ದಾನೆ.

    ಇದನ್ನೂ ಓದಿ : ಗಣೇಶ ವಿಗ್ರಹ ತರಲು ತೆರಳುತ್ತಿದ್ದ ಟಾಟಾ ಏಸ್ ಪಲ್ಟಿ, ಇಬ್ಬರು ಸಾ*ವು

    ಈ ವೇಳೆ ಈಶ್ವರ್ ತಪ್ಪಿಸಿಕೊಂಡು ಮುಖ್ಯರಸ್ತೆಗೆ ಬಂದು ಸಹಾಯಕ್ಕಾಗಿ ತನ್ನ ಸಹೋದರನನ್ನು ಕರೆದಿದ್ದು, ಆತನ ಸಹೋದರ ಆತನನ್ನು ಆಟೋರಿಕ್ಷಾದಲ್ಲಿ ಆಸ್ಪತ್ರೆಗೆ ಸೇರಿಸಿದರು. ಅಷ್ಟು ಹೊತ್ತಿಗಾಗಲೇ ಆರೋಪಿ ರೋಹಿತ್ ಬೈಕ್ ನಲ್ಲಿ ಪರಾರಿಯಾಗಿದ್ದ. ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ.

    Continue Reading

    LATEST NEWS

    ಉಡುಪಿ : ಲಲಿತಾ ಕಲ್ಕೂರ ವಿಧಿವಶ

    Published

    on

    ಉಡುಪಿ : ದಿವಂಗತ ಪ್ರೊ. ಮಂಜುನಾಥ ಕಲ್ಕೂರ ಅವರ ಪತ್ನಿ ಲಲಿತಾ ಕಲ್ಕೂರ (83) ವಿ*ಧಿವಶರಾಗಿದ್ದಾರೆ.  ಅಲ್ಪ ಕಾಲದ ಅಸೌಖ್ಯದಿಂದ ಶನಿವಾರ(ಸೆ.7) ಉಡುಪಿಯ ಸ್ವಗೃಹದಲ್ಲಿ ನಿಧ*ನ ಹೊಂದಿದರು.

    ಮೃತರು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್.ಪ್ರದೀಪ ಕುಮಾರ ಕಲ್ಕೂರ ಸಹಿತ 3ಮಂದಿ ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.

    Continue Reading

    LATEST NEWS

    Trending