Connect with us

LATEST NEWS

ನಾಮಕರಣ ಹೆಸರಿನಲ್ಲಿ ಮತ್ತೆ ಮಂಗಳೂರಿನಲ್ಲಿ ಹಗ್ಗ-ಜಗ್ಗಾಟ

Published

on

ಮಂಗಳೂರು: ಮಂಗಳೂರಿನಲ್ಲಿ ಮತ್ತೆ ನಾಮಕರಣದ ವಿಚಾರದಲ್ಲಿ ಚರ್ಚೆ ಆರಂಭಗೊಂಡಿದೆ. ಈ ಬಾರಿಯ ನಾಮಕರಣದ ವಿಷಯ ಲೇಡಿಹಿಲ್ ನಲ್ಲಿ ನೂತನವಾಗಿ ನಿರ್ಮಾಣಗೊಂಡ ವೃತ್ತಕ್ಕೆ ಯಾರ ಹೆಸರು ಇಡುವುದು ಎನ್ನುವುದಾಗಿದೆ. ಲೇಡಿಹಿಲ್ ನಲ್ಲಿ ಕ್ರಿಶ್ಚಿಯನ್ ಮಿಷನರಿಗೆ ಸೇರಿದ ಚರ್ಚ್, ವಿದ್ಯಾಸಂಸ್ಥೆಗಳು ಇರುವ ಕಾರಣ ಈ ವೃತ್ತಕ್ಕೆ ಲೇಡಿಹಿಲ್ ವೃತ್ತ ಎಂದೇ ಹೆಸರಿಡಬೇಕು ಎಂದು ಕ್ರಿಶ್ಚಿಯನ್ ಸಮುದಾಯ ಇದೀಗ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದೆ.

ಮಂಗಳೂರು ಮಹಾನಗರ ಪಾಲಿಕೆ ತನ್ನ ಸಾಮಾನ್ಯ ಸಭೆಯಲ್ಲಿ ಲೇಡಿಹಿಲ್ ನಿಂದ ನ್ಯೂಚಿತ್ರಾ ಸಿನಿಮಾ ಥಿಯೇಟರ್ ವರೆಗಿನ ರಸ್ತೆಗೆ ಶ್ರೀ ಗೋಕರ್ಣನಾಥ ಕ್ಷೇತ್ರ ರಸ್ತೆ ಎಂದು ನಾಮಕರಣ ಮಾಡಲು ನಿರ್ಣಯ ತೆಗೆದುಕೊಂಡಿದೆ. ಆದರೆ ಮಹಾನಗರ ಪಾಲಿಕೆಯ ಈ ನಿರ್ಣಯಕ್ಕೆ ಇದೀಗ ಕ್ರಿಶ್ಚಿಯನ್ ಸಮುದಾಯ ವಿರೋಧ ವ್ಯಕ್ತಪಡಿಸಲು ಆರಂಭಿಸಿದೆ. ಲೇಡಿಹಿಲ್ ಜಂಕ್ಷನ್ ಗೆ ಚಾರಿತ್ರಿಕೆ ಮಹತ್ವವಿದ್ದು, ಅಪೋಸ್ತಲಿಕ್ ಕಾರ್ಮೆಲ್ ಸಿಸ್ಟರ್ಸ್ ಮದರ್ ನಜರಲ್ ಮಾರಿ ದೇಸ್ ಆಂಜ್ 1885 ರಲ್ಲಿ ಮಂಗಳೂರಿಗೆ ಬಂದಿದ್ದರು.

ಈ ಸಂದರ್ಭದಲ್ಲಿ ಸ್ಥಳೀಯರು ಹೆಣ್ಣು ಮಕ್ಕಳಿಗಾಗಿ ಒಂದು ಶಾಲೆ ತೆರೆಯುವಂತೆ ಅವರಲ್ಲಿ ವಿನಂತಿಸಿದ್ದರು. ಈ ಕಾರಣಕ್ಕಾಗಿ ಲೇಡಿಹಿಲ್ ನಲ್ಲಿ ಹೆಣ್ಣು ಮಕ್ಕಳಿಗಾಗಿ ಶಾಲೆಯನ್ನು ತೆರೆಯಲಾಗಿತ್ತು. ಅಲ್ಲದೆ ಇದೊಂದು ಗುಡ್ಡ ಪ್ರದೇಶವೂ ಆಗಿರುವುದರಿಂದ ಅಂದಿನ ಜನ ಹೆಣ್ಣು ಮಕ್ಕಳಿಗೆ ಗೌರವಕ್ಕಾಗಿ ಆ ಪ್ರದೇಶಕ್ಕೆ ಲೇಡಿಹಿಲ್ ಎಂದು ಹೆಸರಿಟ್ಟಿದ್ದರು. ಈ ಕಾರಣಕ್ಕಾಗಿ ಲೇಡಿಹಿಲ್ ನಲ್ಲಿ ನಿರ್ಮಾಣಗೊಳ್ಳಲಿರುವ ವೃತ್ತಕ್ಕೆ ಲೇಡಿಹಿಲ್ ವೃತ್ತ ಎಂದೇ ಹೆಸರಿಡಬೇಕು ಎಂದು ಕ್ರಿಶ್ಚಿಯನ್ ಸಮುದಾಯ ಇದೀಗ ಪಟ್ಟು ಹಿಡಿಯಲಾರಂಭಿಸಿದೆ.

ಈ ನಡುವೆ ಲೇಡಿಹಿಲ್ ಮೂಲಕವೇ ಗೋಕರ್ಣನಾಥ್ ಕ್ಷೇತ್ರಕ್ಕೆ ದಾರಿಯಿರುವ ಕಾರಣ ಈ ರಸ್ತೆಗೆ ಗೋಕರ್ಣನಾಥೇಶ್ವರ ರಸ್ತೆ ಎಂದು ಹೆಸರಿಡುವ ನಿರ್ಣಯಕ್ಕೆ ಬಿಲ್ಲವ ಸಮುದಾಯ ಬೆಂಬಲ ವ್ಯಕ್ತಪಡಿಸಿದೆ. ಮಂಗಳೂರು ದಸರಾ ಎಂದೇ ಖ್ಯಾತವೆತ್ತಿರುವ ಗೋಕರ್ಣನಾಥ ಕ್ಷೇತ್ರ ಅತ್ಯಂತ ಪ್ರಸಿದ್ಧ ಪ್ರವಾಸಿ ಕ್ಷೇತ್ರವೆಂದೂ ಗುರುತಿಸಿಕೊಂಡಿದೆ.

ಈ ಕಾರಣಕ್ಕಾಗಿ ನೂತನ ವೃತ್ತಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ವೃತ್ತ ಎಂದು ನಾಮಕರಣ ಮಾಡಬೇಕೆಂದು ಬಿಲ್ಲವ ಸಮುದಾಯವೂ ಇದೀಗ ಒತ್ತಾಯಿಸಲಾರಂಭಿಸಿದೆ. ಈ ಹಿನ್ನಲೆಯಲ್ಲಿ ಇದೀಗ ಎರಡೂ ಕಡೆಯಿಂದ ವೃತ್ತದ ನಾಮಕರಣಕ್ಕಾಗಿ ಹಗ್ಗಜಗ್ಗಾಟ ಆರಂಭಗೊಂಡಿದೆ.

Click to comment

Leave a Reply

Your email address will not be published. Required fields are marked *

FILM

ಕುಟುಂಬ ಸಹಿತರಾಗಿ ಬಂದು ಮತದಾನ ಮಾಡಿದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ

Published

on

ಉಡುಪಿ: ಇಂದು ಬೆಳಂಬೆಳಗ್ಗೆ ರಾಜಕೀಯ ನಾಯಕರು,  ಜನಸಾಮಾನ್ಯರು ಮತಗಟ್ಟೆಗೆ ಬಂದು ಮತ ಚಲಾಯಿಸಿದರೆ ಉಡುಪಿಯ ಮತಗಟ್ಟೆಯಲ್ಲಿ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಮತದಾನ ಮಾಡಿದ್ದಾರೆ.

ಕುಕ್ಕಿಕಟ್ಟೆ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತಗಟ್ಟೆ ಸಂಖ್ಯೆ 197 ಕ್ಕೆ ಆಗಮಿಸಿ ಮತ ಚಲಾಯಿಸಿದರು. ರಕ್ಷಿತ್ ಶೆಟ್ಟಿ ಮನೆಯ ಮುಂಭಾಗದಲ್ಲೇ ಇರುವ ಮತಗಟ್ಟೆಗೆ ಕುಟುಂಬ ಸಹಿತರಾಗಿ ಬಂದು ಮತದಾನ ಮಾಡಿದರು. ರಕ್ಷಿತ್ ಶೆಟ್ಟಿ ಈ ಸಂದರ್ಭದಲ್ಲಿ ಸೆಲೆಬ್ರೆಟಿಯನ್ನು ಕಂಡ ಇತರ ಮತದಾರರು ಹರ್ಷಚಿತ್ತರಾಗಿ ಸೆಲ್ಫೆ ಕ್ಲಿಕಿಸಲು ಮುಂದಾದ ಘಟನೆ ನಡೆಯಿತು.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

LATEST NEWS

ಅಯೋಧ್ಯೆಯ ಅಂಗಳದಲ್ಲಿ ಶೂಟಿಂಗ್ ಮಾಡಿದ ಮೊಟ್ಟ ಮೊದಲ ಕನ್ನಡ ಸೀರಿಯಲ್ ಇದು?

Published

on

ಮಹಿಳೆಯರಿಗೆ ಸೀರಿಯಲ್ ನೋಡುವುದಂದರೆ ಒಂತಾರ ಹುಚ್ಚು. ಮನೆಯಲ್ಲೇ ಇರುವ ಮಹಿಳೆಯರು ಕೆಲವೊಮ್ಮೆ ಬೆಳಗ್ಗೆಯಿಂದ ಸಂಜೆಯವರೆಗೆ ಟಿವಿಯಲ್ಲಿ ಸೀರಿಯಲ್ ನೋಡುತ್ತಾ ಇರುತ್ತಾರೆ. ಸೀರಿಯಲ್ ನೋಡೊದು ಮಾತ್ರ ಅಲ್ಲ ಅದರ ಬಗ್ಗೆ ಸಂವಾದ ಕೂಡ ಮನೆಯವರಲ್ಲಿ ಮಾಡುತ್ತಾ ಇರುತ್ತಾರೆ.

ಈ ನಡುವೆ ಅಯೋಧ್ಯೆ ರಾಮಮಂದಿರ ನಿರ್ಮಾಣದ ನಂತರ ದೇಶದ ಜನರು ತುಂಬಾ ಸಂತೋಷದಲ್ಲಿದ್ದಾರೆ. ಅದೆಷ್ಟೋ ಜನ ಹಿಂದೂಗಳ ಕನಸು ನನಸಾದ ಕ್ಷಣ ಎಂದು ಹೇಳಬಹುದು. ಒಮ್ಮೆಯಾದ್ರೂ ಅಯೋಧ್ಯೆಗೆ ಹೋಗಿಬರಬೇಕು ಅಂತಾ ಪ್ಲಾನ್ ಅಂತೂ ಮಾಡ್ತಾ ಇರೋದು ಕಂಡಿತ. ಕೆಲವರು ಹೋಗಿ ಬಂದಿದ್ದಾರೆ ಕೂಡ ಆದರೆ ಇನ್ನು ಕೆಲವರು ಇನ್ನು ಹೋಗಬೇಕು. ಇದುವರೆಗೆ ಅಯೋಧ್ಯೆ ರಾಮಮಂದಿರದಲ್ಲಿ ಯಾವೂದೇ ರೀತಿದ ಫಿಲ್ಮ್ ಶೂಟಿಂಗ್, ಸೀರಿಯಲ್, ಕಿರುಚಿತ್ರ ಯಾವೂದು ಶೂಟಿಂಗ್ ಆಗಲಿಲ್ಲ. ಆದರೇ ಇದೇ ಮೊದಲ ಬಾರಿಗೇ ಕನ್ನಡ ಸೀರಿಯಲ್ ಇಂಡಸ್ಟ್ರಿಯಲ್ಲಿ ಕನ್ಯಾದಾನ ಸೀರಿಯಲ್ ಹೊಸ ದಾಖಲೆ ಬರೆದಿದೆ.

ಉದಯ ಟಿವಿಯಲ್ಲಿ ಪ್ರಸಾರವಾಗೋ ಕನ್ಯಾದಾನ ಧಾರಾವಾಹಿ ಈಗ ಹೊಸ ದಾಖಲೆ ಬರೆದಿದ್ದಾರೆ. ಕನ್ನಡ ಟೆಲಿವಿಷನ್ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಅಯೋಧ್ಯೆಯಲ್ಲಿ ಚಿತ್ರೀಕರಣಗೊಂಡ ಮೊಟ್ಟ ಮೊದಲ ಸೀರಿಯಲ್ ಎಂಬ ಹೆಗ್ಗಳಿಕೆಗೆ ಕನ್ಯಾದಾನ ಧಾರಾವಾಹಿ ಪಾತ್ರವಾಗಿದೆ.

ಜನವರಿ 22ರಂದು ಅಂದ್ರೆ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆಯಾದ ನಂತರ ಇಲ್ಲಿಯವೆರೆಗೂ ಯಾವುದೇ ಸಿನಿಮಾವಾಗ್ಲಿ, ಅಥವಾ ಸೀರಿಯಲ್ ಆಗ್ಲಿ ಶೂಟ್ ಮಾಡಿರಲಿಲ್ಲ. ಆದ್ರೆ, ಕನ್ಯಾದಾನ ಧಾರವಾಹಿ ತಂಡ ಫಸ್ಟ್‌ಟೈಮ್‌ ಅಯೋಧ್ಯೆಗೆ ಹೋಗಿ ಚಿತ್ರೀಕರಣ ಮಾಡಿದೆ.

ಈ ಸೀರಿಯಲ್‌ನಲ್ಲಿ ಬಹುತೇಕ ಪಾತ್ರಗಳು ಒಂದಲ್ಲ ಒಂದು ಸಮಸ್ಯೆ ಎದುರಿಸ್ತಿವೆ. ಹಾಗಾಗಿ ರಾಮನ ದರ್ಶನ ಪಡೆದು ಆ ಕಷ್ಟಗಳಿಂದ ಹೊರಬರಬೇಕು ಎಂದು ನಿರ್ಧರಿಸಿ, ರಾಮಮಂದಿರಕ್ಕೆ ಹೋಗಿ ಬಾಲರಾಮನ ದರ್ಶನ ಪಡೆದಿದ್ದಾರೆ. ಅಯೋಧ್ಯೆಯಲ್ಲಿ ಶೂಟಿಂಗ್ ಮಾಡಿರೋ ಬಗ್ಗೆ ಸೀರಿಯಲ್​ ತಂಡ ಸಂತಸ ಹಂಚಿಕೊಂಡಿದೆ.

Continue Reading

LATEST NEWS

Trending