Tuesday, March 28, 2023

ಆಸ್ತಿಗಾಗಿ ಮನೆಗೆ ಬೀಗ ಜಡಿದು ಬೆಂಕಿ ಇಟ್ಟು ಐವರನ್ನು ಜೀವಂತ ಸುಟ್ಟ ಪಾಪಿ ಮುದುಕ

ಕೇರಳ: 79 ವಯಸ್ಸಿನ ವೃದ್ಧನೊಬ್ಬ ತನ್ನ ಇಡೀ ಕುಟುಂಬವನ್ನು ಬೆಂಕಿ ಹಾಕಿ ಸುಟ್ಟ ಘಟನೆ ದೇವರ ನಾಡು ಕೇರಳದ ತೊಡುಪುಳದ ಚೀನಿಕುಜಿಯಲ್ಲಿ ಈ ಘಟನೆ ನಡೆದಿದೆ.

ಮೊಹಮ್ಮದ್ ಫೈಝಲ್ (49), ಅವರ ಪತ್ನಿ ಶೀಬಾ (39), ಪುತ್ರಿಯರಾದ ಮೆಹರು (16) ಮತ್ತು ಅಸ್ನಾ (13) ಮೃತಪಟ್ಟ ದುರ್ದೈವಿಗಳಾಗಿದ್ದಾರೆ.

ವೃದ್ಧನೊಬ್ಬ ತನ್ನ ಮನೆಗೆ ಹೊರಗಿನಿಂದ ಬೀಗ ಹಾಕಿ, ಮಗ ಹಾಗೂ ಆತನ ಇಡೀ ಕುಟುಂಬವನ್ನು ಸುಟ್ಟು ಹಾಕಿದ್ದಾನೆ. ಅವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ತೊಡುಪುಳ ಜಿಲ್ಲಾ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ.

ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ವೃಧ್ಧ ಮಗನ ವಿರುದ್ಧ ಕೋಪಗೊಂಡು ಆತನ ಇಡೀ ಕುಟುಂಬವನ್ನು ಸುಟ್ಟು ಹಾಕುವ ಉಪಾಯವನ್ನು ಹೂಡಿದ ಆತ ಮನೆಯಿಂದ ಯಾರೂ ಹೊರಗೆ ಬರಬಾರದು ಎಂಬ ಕಾರಣಕ್ಕೆ ಮನೆಯ ಹೊರಗೆ ಬಾಗಿಲಿಗೆ ಬೀಗ ಹಾಕಿದ್ದ. ಮನೆಯೊಳಗೆ ನಲ್ಲಿಯಲ್ಲಿ ನೀರು ಬಾರದಂತೆ ಪೈಪ್ ಸಂಪರ್ಕವನ್ನು ಕೂಡ ಕಟ್ ಮಾಡಿದ.

ನಂತರ ವೃದ್ಧ ಮನೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ.

ಬೆಂಕಿ ನಂದಿಸಲು ಮೊಹಮ್ಮದ್ ಫೈಝಲ್ ಮತ್ತು ಆತನ ಮನೆಯವರು ಬಾತ್​ರೂಂನಿಂದ ನೀರು ತರಲು ನೋಡಿದರೂ ನಲ್ಲಿಗಳಲ್ಲಿ ನೀರು ಬರುತ್ತಿರಲಿಲ್ಲ.

ಹೀಗಾಗಿ, ಅವರೆಲ್ಲರೂ ಬಚ್ಚಲುಮನೆಯಲ್ಲೇ ಉಸಿರುಗಟ್ಟಿ, ಅರೆಬರೆ ಸುಟ್ಟ ಸ್ಥಿತಿಯಲ್ಲಿ ಸಾವನ್ನಪ್ಪಿದ್ದಾರೆ.
ಕರಿಮನ್ನೂರು ಪೊಲೀಸ್ ಠಾಣೆಯ ಅಗ್ನಿಶಾಮಕ ಮತ್ತು ರಕ್ಷಣಾ ಸಿಬ್ಬಂದಿ ಮತ್ತು ಪೊಲೀಸರು ಬೆಂಕಿಯನ್ನು ನಂದಿಸಿದರು.

ಬಳಿಕ ನಾಲ್ವರ ಹೆಣಗಳನ್ನು ಹೊರಗೆ ತರಲಾಯಿತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಚೀನಿಕ್ಕುಜಿಯ ಅಲಿಯಕ್ಕುನ್ನೆಲ್‌ನ ಹಮೀದ್ ಎಂಬ 79 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಸೌದಿ ರಸ್ತೆ ಅಪಘಾತದಲ್ಲಿ ಉಸಿರು ಚೆಲ್ಲಿದ ಮಂಗಳೂರು ಮಲ್ಲೂರಿನ ಸುಲೇಮಾನ್..!

ಸೌದಿ ಅರೇಬಿಯಾದ ಜುಬೈಲ್ ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಂಗಳೂರು ತಾಲೂಕಿನ ಮಲ್ಲೂರು ನಿವಾಸಿ ಮೃತಪಟ್ಟಿದ್ದಾರೆ.ಮಂಗಳೂರು : ಸೌದಿ ಅರೇಬಿಯಾದ ಜುಬೈಲ್ ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಂಗಳೂರು ತಾಲೂಕಿನ ಮಲ್ಲೂರು...

ಕಾರ್ಕಳ : ಅನಾರೋಗ್ಯದಿಂದ ಸಾವನ್ನಪ್ಪಿದ ಮನೆ ಮಗನ ಆಘಾತದಿಂದ ತಾಯಿ ಜೀವಾಂತ್ಯ..!

ಮಗನನ್ನು ಕಳೆದುಕೊಂಡ ನೋವಿನಲ್ಲಿ ತಾಯಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕೆರ್ವಾಶೆ ಗ್ರಾಮದ ಬಂಗ್ಲೆಗುಡ್ಡೆಯಲ್ಲಿ ಸೋಮವಾರ ನಡೆದಿದೆ.ಕಾರ್ಕಳ : ಮಗನನ್ನು ಕಳೆದುಕೊಂಡ ನೋವಿನಲ್ಲಿ ತಾಯಿಯೊಬ್ಬರು...

ಪತ್ನಿ ಆತ್ಮಹತ್ಯೆ ಬಗ್ಗೆ ಸಂಶಯ- ತನಿಖೆ ನಡೆಸಿ ನ್ಯಾಯ ಕೊಡಿಸುವಂತೆ ಠಾಣೆ ಮೆಟ್ಟಲೇರಿದ ಪತಿ..!

ತನ್ನ ಪತ್ನಿ ಆತ್ಮಹತ್ಯೆ ಮಾಡಿದ ಬಗ್ಗೆ ಸಂಶಯವಿದ್ದು, ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸುವಂತೆ ಪತಿ ಜಿಲ್ಲಾ ಪೋಲೀಸ್ ವರಿಷ್ಢಾಧಿಕಾರಿಗೆ ಮನವಿ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ...