Connect with us

    FILM

    ಬಾಲಿವುಡ್‌ಗೆ ಹಾರಿದ ಲಂಕೇಶ್ ಪುತ್ರ..! ಕರಣ್ ಜೋಹಾರ್‌ ಸಿನೆಮಾದಲ್ಲಿ ‘ಗೌರಿ’ ನಟ..?

    Published

    on

    ಬೆಂಗಳೂರು/ಮಂಗಳೂರು: ಗೌರಿ ಸಿನೆಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ಸಮರ್ಜಿತ್ ಲಂಕೇಶ್ ಇದೀಗ ಕನ್ನಡಿಗರ ಮನಗೆದ್ದಿದ್ದಾರೆ. ಸ್ಟಾರ್ ನಿರ್ದೇಶಕ, ಪತ್ರಕರ್ತ ಇಂದ್ರಜಿತ್ ಲಂಕೇಶ್ ರವರ ಪುತ್ರನಾಗಿರುವ ಸಮರ್ಜಿತ್ ಈಗಾಗಲೇ ತಮ್ಮ ನಟನೆ ಹಾಗೂ ಹಾಟ್‌ ಲುಕ್‌ ಮೂಲಕ ಪ್ರೇಕ್ಷಕರ ಗಮನ ಸೆಳೆದಿದ್ದಾರೆ. ತನ್ನ ಅದ್ಭುತ ನಟನೆಯ ಮೂಲಕ ಫ್ಯೂಚರ್‌ ಸ್ಟಾರ್‌ ಎನ್ನುವ ಭರವಸೆಯನ್ನು ಮೂಡಿಸಿರುವ ಸಮರ್ಜಿತ್ ತನ್ನ ನಟನೆಗೆ ‘ಲುಮಿಯರ್ ನ್ಯಾಷನಲ್ ಅವಾರ್ಡ್‌’ನ್ನು ಪಡೆದುಕೊಂಡಿದ್ದಾರೆ.
    ಬಾಲಿವುಡ್‌ನತ್ತ ಸಮರ್ಜಿತ್‌..!
    ಅವಾರ್ಡ್ ಪಡೆದ ಖುಷಿಯಲ್ಲಿರುವ ಹ್ಯಾಂಡ್ಸಮ್ ಹಂಕ್ ಸಮರ್ಜಿತ್ ಬಾಲಿವುಡ್‌ಗೆ ಹಾರಲು ಸಜ್ಜಾಗಿದ್ದಾರೆ. ಹಿಂದಿ ಸಿನಿಮಾರಂಗ ಮಾತ್ರವಲ್ಲ ಪಕ್ಕದ ತೆಲುಗು ಮತ್ತು ತಮಿಳಿನಿಂದನೂ ಆಫರ್‌ಗಳು ಬರುತ್ತಿದ್ದು ಪರಭಾಷೆಯ ಕಡೆ ಸಮರ್ಜಿತ್ ಗಮನ ಹರಿಸುತ್ತಿದ್ದಾರೆ. ಹೌದು, ಸಮರ್ಜಿತ್ ಹಿಂದಿ ಸಿನಿಮಾರಂಗಕ್ಕೆ ಕಾಲಿಡಲು ತಯಾರಾಗಿದ್ದಾರೆ. ಈಗಾಗಲೇ ಹಿಂದಿಯ ದೊಡ್ಡ ಪ್ರೊಡಕ್ಷನ್ ಹೌಸ್ ಸಮರ್ಜಿತ್‌ಗೆ ಸಿನಿಮಾ ಮಾಡಲು ಮುಂದಾಗಿದೆ ಎನ್ನುವ ಸುದ್ದಿ ಕೇಳಿಬಂದಿದೆ. ಬಾಲಿವುಡ್‌ನ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಗಳಲ್ಲಿ ಒಂದಾಗಿರುವ ಕರಣ್ ಜೋಹರ್ ಅವರ ಧರ್ಮ ಪ್ರೊಡಕ್ಷನ್ ಸಮರ್ಜಿತ್ ಜೊತೆ ಸಿನಿಮಾ ಮಾಡಲು ಮುಂದಾಗಿದೆ ಎನ್ನುವ ಮಾಹಿತಿ ಸಿಕ್ಕಿದೆ.

    ಈಗಾಗಲೇ ಧರ್ಮ ಪ್ರೊಡಕ್ಷನ್ ಕಡೆಯಿಂದ ಕರೆ ಬಂದಿದ್ದು ಸಮರ್ಜಿತ್ ಮುಂಬೈಗೆ ಹಾರಿದ್ದಾರೆ. ಕರಣ್ ಜೊಹರ್ ಸಂಸ್ಥೆ ಜೊತೆ ಮಾತುಕತೆ ನಡೆಸಿರುವ ಸಮರ್ಜಿತ್ ಹಿಂದಿಯಲ್ಲಿ ಸಿನಿಮಾ ಮಾಡುವುದು ಬಹುತೇಕ ಖಚಿತವಾಗಿದೆ. ಅಂದಹಾಗೆ ಇತ್ತೀಚಿನ ದಿನಗಳಲ್ಲಿ ಹಿಂದಿ ನಿರ್ಮಾಣ ಸಂಸ್ಥೆಗಳು ಅದರಲ್ಲೂ ಕರಣ್ ಜೋಹರ್ ಸೌತ್ ಸಿನಿಮಾರಂಗದ ಕಡೆ ಹೆಚ್ಚು ಇಂಟ್ರೆಸ್ಟ್ ತೋರಿಸುತ್ತಿದ್ದಾರೆ. ಒಂದುವೇಳೆ ಸಮರ್ಜಿತ್ ಲಂಕೇಶ್ ಅವರಿಗೆ ಸಿನಿಮಾ ನಿರ್ಮಾಣ ಮಾಡಿದರೆ ಮೊದಲ ಬಾರಿಗೆ ಕರಣ್ ಸಂಸ್ಥೆ ಕನ್ನಡ ನಟನ ಜೊತೆ ಸಿನಿಮಾ ಮಾಡಿದಂತೆ ಆಗಲಿದೆ.

    Click to comment

    Leave a Reply

    Your email address will not be published. Required fields are marked *

    FILM

    ಆಸ್ಕರ್‌ಗೆ ಅಧಿಕೃತ ಪ್ರವೇಶ ಪಡೆದ “ಸ್ವಾತಂತ್ರ್ಯ ವೀರ್ ಸಾವರ್ಕರ್” ಸಿನೆಮಾ

    Published

    on

    ಮುಂಬೈ/ಮಂಗಳೂರು: ಬಾಲಿವುಡ್ ನಟ ರಣ್‌ದೀಪ್‌ ಹೂಡಾ ನಟಿಸಿ ನಿರ್ದೇಶಿಸಿರುವ ಸ್ವಾತಂತ್ರ್ಯ ವೀರ್‌ ಸಾವರ್ಕರ್‌ ಸಿನಿಮಾವೂ ಅಧಿಕೃತವಾಗಿ 2025ರ ಆಸ್ಕರ್‌ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದೆ. ಈ ಜೀವನಚರಿತ್ರೆಯಾಧಾರಿತ ಸಿನಿಮಾವೂ ಸ್ವಾತಂತ್ರ್ಯ ಹೋರಾಟಗಾರ ವಿನಾಯಕ ದಾಮೋದರ ಸಾವರ್ಕರ್ ಅವರ ಜೀವನಗಾಥೆಯನ್ನು ಹೊಂದಿದ್ದು, ಈ ಸಿನಿಮಾದಲ್ಲಿ ರಣ್‌ದೀಪ್ ಹೂಡಾ ಜೊತೆ ಬಾಲಿವುಡ್ ನಟಿ ಅಂಕಿತಾ ಲೋಖಂಡೆ ನಟಿಸಿದ್ದಾರೆ.

    savarkar

    ಸಂದೀಪ್ ಸಿಂಗ್ ಅವರು ಈ ಸಿನಿಮಾದ ನಿರ್ಮಾಣ ಮಾಡಿದ್ದು, ಈ ಸಿನಿಮಾವೀಗ ಆಸ್ಕರ್‌ಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಅವರು ಈ ಖುಷಿಯ ವಿಚಾರವನ್ನು ಇನ್ಸ್ಟಾಗ್ರಾಮ್‌ನಲ್ಲಿ ಪೋಸ್ಟ್  ಮಾಡಿ ಸಂತಸದ ಜೊತೆ ಹೆಮ್ಮೆ ಹಾಗೂ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ.

    2025ರ ಆಸ್ಕರ್‌ಗೆ ನಾಮ ನಿರ್ದೇಶನಗೊಂಡ ‘ಲಾಪತಾ ಲೇಡಿಸ್’ ಚಿತ್ರ

    ಕೆಲ ವಾರಗಳ ಹಿಂದಷ್ಟೇ ರಣ್‌ದೀಪ್ ಹೂಡಾ ಅವರಿಗೆ ಮುಂಬೈನಲ್ಲಿ ಪ್ರತಿಷ್ಠಿತ ಸ್ವಾತಂತ್ರ್ಯವೀರ ಸಾವರ್ಕರ್‌ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯ್ತು. ಸ್ವಾತಂತ್ರ್ಯ ಹೋರಾಟಗಾರ ಜೀವನಚರಿತ್ರೆಯನ್ನು ಅದ್ಭುತವಾಗಿ ತೆರೆಗೆ ತಂದಿದ್ದಕ್ಕಾಗಿ ಈ ಪ್ರಶಸ್ತಿ ನೀಡಲಾಗಿದೆ. ಸ್ವಾತಂತ್ರ್ಯ ಹೋರಾಟದ ವೇಳೆ ಭಾರತದ ಯುವ ಸಮೂಹದಲ್ಲಿ ಸಾಕಷ್ಟು ಪ್ರಭಾವ ಬೀರಿದ್ದ ವಿವಾದಿತ ಹಾಗೂ ಪ್ರಭಾವಶಾಲಿ ನಾಯಕ ವೀರ್ ಸಾವರ್ಕರ್ ಆಗಿದ್ದಾರೆ. ಮಾರ್ಚ್‌ 22 ರಂದು ಹಿಂದಿ ಹಾಗೂ ಮಾರಾಠಿ ಭಾಷೆಯಲ್ಲಿ ಈ ಸಿನಿಮಾ ಬಿಡುಗಡೆಯಾಗಿತ್ತು.

    Continue Reading

    FILM

    ಲೈಂಗಿಕ ದೌರ್ಜನ್ಯ ಆರೋಪ; ಮಲಯಾಳಂ ನಟ, ರಾಜಕಾರಣಿ ಮುಕೇಶ್ ಬಂಧನ

    Published

    on

    ಕೇರಳ/ಮಂಗಳೂರು: ಮಲಯಾಳಂ ಸಿನಿಮಾ ರಂಗದಲ್ಲಿ ಸಂಚಲನ ಮೂಡಿಸಿರೋ ಜಸ್ಟಿಸ್ ಹೇಮಾ ವರದಿ ಒಬ್ಬೊಬ್ಬರ ತಲೆದಂಡಕ್ಕೆ  ಕಾರಣವಾಗಿತ್ತು. ಇದೀಗ ಮತ್ತೊಂದು ಹಂತ ತಲುಪಿದ್ದು ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಖ್ಯಾತ ನಟ ಹಾಗೂ ರಾಜಕಾರಣಿ ಮುಕೇಶ್  ಅವರನ್ನು ಬಂಧಿಸಲಾಗಿದೆ.
    ಕೊಚ್ಚಿಯ ಕೋಸ್ಟಲ್ ಪೊಲೀಸ್ ಆಫೀಸಿನಲ್ಲಿ ಮುಕೇಶ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿತ್ತು. ಎಐಜಿ ಪೂಂಗಾಝಾಲಿ ನೇತೃತ್ವದಲ್ಲಿ ನಡೆದ ವಿಚಾರಣೆಯ ನಂತರ ಮುಕೇಶ್ ಬಂಧನವಾಗಿದೆ. ದೌರ್ಜನ್ಯ  ಪ್ರಕರಣದಲ್ಲಿ ಹೈಕೋರ್ಟ್ ನಿಂದ ನಿರೀಕ್ಷಣಾ ಜಾಮೀನು ಪಡೆದಿರೋ ಮುಕೇಶ್ ಅವರ ಬಂಧನ ಹಲವು ಚರ್ಚೆಗೆ ಕಾರಣವಾಗಿದೆ. ಬಂಧಿಸಿ ನಂತರ ಬಿಡುಗಡೆ ಮಾಡುವ ಮಾಹಿತಿಯೂ ಇದೆ. ಒಟ್ಟಿನಲ್ಲಿ ಮುಕೇಶ್ ಬಂಧನ ಇತರರಲ್ಲಿ ಆತಂಕ ಸೃಷ್ಟಿ ಮಾಡಿದೆ.
    ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಬಂದ ಕೂಡಲೇ ಚಲನಚಿತ್ರ ನೀತಿ ಸಮಿತಿ ರಾಜಿನಾಮೆ ಸಲ್ಲಿಸಿದ್ದಾರೆ. ಇನ್ನು ಮಲಯಾಳಂ ಚಿತ್ರರಂಗದ ನಟರುಗಳಾದ ಜಯಸೂರ್ಯ, ಮಣಿಯನ್ ಪಿಳ್ಳ ರಾಜು, ಇಡವೆಲ್ ಬಾಬು, ಚಂದ್ರಶೇಖರನ್ ಸೇರಿದಂತೆ ಹಲವರ ವಿರುದ್ದ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದಿದೆ.
    Continue Reading

    FILM

    ನಿವೇದಿತಾ ಗೌಡ ಹೊಸ ರೀಲ್ಸ್‌ ನೋಡಿ ಗರಂ ಆದ ಫಾಲೋವರ್ಸ್..!

    Published

    on

    ಬೆಂಗಳೂರು: ಕೆಲವು ದಿನಗಳ ಹಿಂದಷ್ಟೇ ಬಿಗ್‌ ಬಾಸ್‌ ಜೋಡಿ ಚಂದನ್‌ ಶೆಟ್ಟಿ ಹಾಗೂ ನಿವೇದಿತಾ ಗೌಡ ವಿಚ್ಚೇದನ ಪಡೆದಿದ್ದಾರೆ. ನಿವೇದಿತಾ ಈಗ ಅಮ್ಮನ ಮನೆಯಲ್ಲಿದ್ದಾರೆ. ಮದುವೆಗೂ ಮುನ್ನ ರೀಲ್ಸ್‌ನಿಂದಲೇ ಹೆಚ್ಚು ಫೇಮಸ್‌ ಆಗಿದ್ದು ನಿವೇದಿತಾ ಮದುವೆ ನಂತರ ಪತಿ ಜೊತೆ ವಿಡಿಯೋ ಮಾಡಿ ಅದನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದರು.

    ನಿವೇದಿತಾ ಗೌಡ ಮೊದಲಿಗಿಂತ ಸಖತ್‌ ಹಾಟ್‌ ಕಾಣುತ್ತಿದ್ದಾರೆ. ಅದು ಅವರ ರೀಲ್ಸ್‌ನಲ್ಲಿ ಗೊತ್ತಾಗುತ್ತಿದೆ. ಇತ್ತೀಚೆಗೆ ಇನ್ನಷ್ಟು ತುಂಡು ಬಟ್ಟೆ ಧರಿಸಿ ರೀಲ್ಸ್‌ ಮಾಡುತ್ತಿದ್ದಾರೆ. ಆದರೆ ಇದು ಫಾಲೋವರ್‌ಗಳ ಕೆಂಗಣ್ಣಿಗೆ ಗುರಿ ಆಗಿದೆ. ಡಿವೋರ್ಸ್‌ ನಂತರವಂತೂ ನಿವೇದಿತಾ ಪ್ರತಿದಿನ ಟ್ರೋಲ್‌ ಆಗುತ್ತಲೇ ಇದ್ದಾರೆ. ಸೋಮವಾರ ಅವರು ಹಂಚಿಕೊಂಡಿರುವ ಮತ್ತೊಂದು ವಿಡಿಯೋಗೆ ನೆಗೆಟಿವ್‌ ಕಾಮೆಂಟ್‌ಗಳ ಸುರಿಮಳೆಯೇ ಆಗಿದೆ.

    ನಿವೇದಿತಾ, ಸೀಕ್ವಿನ್‌ ಜೀನ್ಸ್‌ ಧರಿಸಿ ಪಿಂಕ್‌ ಬಣ್ಣದ ಸ್ಲೀವ್‌ಲೆಸ್‌ ಕ್ರಾಪ್‌ ಟಾಪ್‌ ಧರಿಸಿದ್ದಾರೆ. ಸೊಂಟಕ್ಕೆ ಬಿಳಿ ದಾರ ಕಟ್ಟಿದ್ದಾರೆ. ಫ್ರೀ ಹೇರ್‌ ಬಿಟ್ಟು ಕಿವಿಗೆ ಒಂದು ಹೂ ಇಟ್ಟು ಬಾತ್‌ ರೂಮ್‌ನಲ್ಲಿ ರೀಲ್ಸ್‌ ಮಾಡಿ ಅದನ್ನು ಹಂಚಿಕೊಂಡಿದ್ದಾರೆ.

    ಒಬ್ಬರೋ ಇಬ್ಬರೋ ನಿವೇದಿತಾ ಗೌಡ ರೀಲ್ಸ್‌ಗೆ ಮೆಚ್ಚುಗೆ ವ್ಯಕ್ತಪಡಿಸಿದ ಕಾಮೆಂಟ್‌ ಮಾಡಿದರೆ, ಕಾಮೆಂಟ್‌ ಬಾಕ್ಸ್‌ ತುಂಬಾ ನೆಗೆಟಿವ್‌ ಸಾಲುಗಳೇ ತುಂಬಿವೆ. ದಯವಿಟ್ಟು ರೀಲ್ಸ್‌ ಮಾಡುವಾಗ ಮೈ ತುಂಬಾ ಬಟ್ಟೆ ಧರಿಸಿ, ದಯವಿಟ್ಟು ಬಾತ್‌ ರೂಮ್‌ನಲ್ಲಿ ರೀಲ್ಸ್‌ ಮಾಡೋದನ್ನು ನಿಲ್ಲಿಸಿ, ಲೈಕ್‌, ಕಾಮೆಂಟ್‌ಗೋಸ್ಕರ ಈ ರೀತಿ ಲೀಲ್ಸ್‌ ಮಾಡೋದು ಅವಶ್ಯಕತೆ ಇದೆಯಾ? ಎತ್ತ ಹುಡುಕಿದರೂ ಒಂದೊಳ್ಳೆ ಕಾಮೆಂಟ್‌ ಸಿಗ್ತಿಲ್ಲ ಎಂದೆಲ್ಲಾ ಜನರು ಕಾಮೆಂಟ್‌ ಮಾಡುತ್ತಿದ್ದಾರೆ.

    ಇದಕ್ಕೂ ಮುನ್ನ ನಿವೇದಿತಾ ಈ ರೀತಿಯ ಕಾಮೆಂಟ್‌ಗಳನ್ನು ಎದುರಿಸಿದರೂ ಆಕೆ ಯಾವುದಕ್ಕೂ ತಲೆ ಕೆಡಿಸಿಕೊಳ್ಳದೆ ಹೊಸ ಹೊಸ ರೀಲ್ಸ್‌ ಮಾಡಿ ಹಂಚಿಕೊಳ್ಳುತ್ತಲೇ ಇದ್ದಾರೆ.

    Continue Reading

    LATEST NEWS

    Trending