DAKSHINA KANNADA
ಲಷ್ಕರ್, ತಾಲಿಬಾನ್ ಪರ ಗೋಡೆ ಬರಹ, ಬಿಜೆಪಿಯ ಆಡಳಿತ ವೈಫಲ್ಯಕ್ಕೆ ಹಿಡಿದ ಕನ್ನಡಿ : ಡಿವೈಎಫ್ಐ
ಲಷ್ಕರ್, ತಾಲಿಬಾನ್ ಪರ ಗೋಡೆ ಬರಹ, ಬಿಜೆಪಿಯ ಆಡಳಿತ ವೈಫಲ್ಯಕ್ಕೆ ಹಿಡಿದ ಕನ್ನಡಿ : ಡಿವೈಎಫ್ಐ
ಲಷ್ಕರ್, ತಾಲಿಬಾನ್ ಪರ ಗೋಡೆ ಬರಹದ ಆರೋಪಿಗಳನ್ನು ತಕ್ಷಣ ಬಂಧಿಸಲು ಮನವಿ:
ಮಂಗಳೂರು : ಮಂಗಳೂರು ನಗರದ ಕದ್ರಿ ಪೊಲೀಸ್ ಠಾಣೆಯ ಸಮೀಪದ ಗೋಡೆಯೊಂದರಲ್ಲಿ ಲಷ್ಕರ್ ತೋಯ್ಬಾ, ತಾಲಿಬಾನ್ ಪರ ಘೋಷಣೆಗಳು ಪ್ರತ್ಯಕ್ಷಗೊಂಡಿರುವುದು ಆತಂಕಕಾರಿ ವಿದ್ಯಮಾನ, ಇದು ನಗರದ ನಾಗರಿಕರಲ್ಲಿ ಆತಂಕ ಹಾಗೂ ಊಹಾಪೋಹಗಳಿಗೆ ಕಾರಣವಾಗಿದೆ.
ಸಮಾಜದ ನೆಮ್ಮದಿಗೆ ಕಂಟಕವಾಗಿರುವ ಈ ಕೃತ್ಯ ಬಿಜೆಪಿ ಆಡಳಿತದ ವೈಫಲ್ಯವನ್ನು ಎತ್ತಿತೋರಿಸುತ್ತದೆ.
ಇಂತಹ ಹೀನ ಕೃತ್ಯ ಎಸಗಿರುವ ಸಮಾಜಘಾತುಕ ಶಕ್ತಿಗಳನ್ನು ತಕ್ಷಣವೇ ಬಂಧಿಸಿ ಕೃತ್ಯದ ಹಿಂದಿನ ಹುನ್ನಾರಗಳನ್ನು ಬಯಲಿಗೆಳೆಯಬೇಕು ಎಂದು ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಒತ್ತಾಯಿಸಿದ್ದಾರೆ.
ನಗರದ ಹೃದಯ ಭಾಗದಲ್ಲಿ, ಪೊಲೀಸ್ ಠಾಣೆಯ ಕಣ್ಣಳತೆಯ ದೂರದಲ್ಲಿ ಇಂತಹ ಗೋಡೆ ಬರಹ ಪ್ರತ್ಯಕ್ಷಗೊಂಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ, ಪೊಲೀಸ್ ವೈಫಲ್ಯವನ್ನೂ ಎತ್ತಿ ತೋರಿಸುತ್ತದೆ. ಕೋಮು ಸೂಕ್ಷ್ಮ ಮಂಗಳೂರಿನಲ್ಲಿ ಇದು ಶಾಂತಿ ಕದಡುವ ಉದ್ದೇಶವನ್ನು ಹೊಂದಿದೆ.
ಉದ್ಯೋಗ, ಆರೋಗ್ಯ, ಶಿಕ್ಷಣ ಹೀಗೆ ತಮ್ಮ ದೈನಂದಿನ ಬದುಕಿನ ಹಲವು ಸಮಸ್ಯೆಗಳಿಂದ ಜನತೆ ಕಂಗೆಟ್ಟಿರುವ ಪ್ರಸಕ್ತ ಸಂದರ್ಭದಲ್ಲಿ ಈ ರೀತಿಯ ಪ್ರಚೋದನಾಕಾರಿ ಕೃತ್ಯ ಜನರ ಭಾವನೆಗಳನ್ನು ಕೆರಳಿಸುವ ಉದ್ದೇಶದಿಂದಲೂ ನಡೆದಿರಬಹುದು.
ಒಟ್ಟಾರೆಯಾಗಿ ಈ ಬರಹ ಭಿನ್ನ ಸಮುದಾಯಗಳಲ್ಲಿ ಪರಸ್ಪರ ಅಪನಂಬಿಕೆಯನ್ನು ಹೆಚ್ಚಿಸುವ ಸಾಧ್ಯತೆ ಇದೆ.
ಬಿಜೆಪಿ ಆಡಳಿತ ಚುಕ್ಕಾಣಿ ಹಿಡಿದ ನಂತರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಡಳಿತ ಹಳಿ ತಪ್ಪಿದ್ದು, ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಕ್ರಿಮಿನಲ್ ಕೃತ್ಯಗಳು ಎಗ್ಗಿಲ್ಲದೆ ನಡೆಯುತ್ತಿದೆ. ಲಷ್ಕರ್ ಪರ ಗೋಡೆಬರಹವೂ ಬಿಜೆಪಿ ಆಡಳಿತ ವೈಫಲ್ಯದ ನೇರ ಪರಿಣಾಮವಾಗಿದೆ.
ಪೊಲೀಸ್ ಇಲಾಖೆ ತಕ್ಷಣವೆ ತಾಲಿಬಾನ್, ಲಷ್ಕರ್ ಪರ ಗೋಡೆ ಬರಹದ ಆರೋಪಿಗಳನ್ನು ಬಂಧಿಸಬೇಕು.
ಕೃತ್ಯದ ಹಿಂದಿನ ಹುನ್ನಾರಗಳನ್ನು ಬಯಲಿಗೆ ತರಬೇಕು. ಇಲ್ಲದಿದ್ದಲ್ಲಿ ಸ್ಥಳೀಯ ಪೊಲೀಸ್ ಠಾಣೆಯ ಮುಂಭಾಗ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುವುದು ಎಂದು ಮುನೀರ್ ಕಾಟಿಪಳ್ಳ ಎಚ್ಚರಿಸಿದ್ದಾರೆ.
ಲಷ್ಕರ್, ತಾಲಿಬಾನ್ ಪರ ಗೋಡೆ ಬರಹದ ಆರೋಪಿಗಳನ್ನು ತಕ್ಷಣ ಬಂಧಿಸಲು ಮನವಿ:
ಮನವಿಯ ಸಾರಂಶ..
ಮಂಗಳೂರು ನಗರದ ಕದ್ರಿ ಪೊಲೀಸ್ ಠಾಣೆಯ ಸಮೀಪದ ಕಂಪೌಂಡ್ ಗೋಡೆಯೊಂದರಲ್ಲಿ ಲಷ್ಕರ್ ತೋಯ್ಬಾ, ತಾಲಿಬಾನ್ ಪರ ಘೋಷಣೆಗಳನ್ನು ಬರೆದಿರುವ ಘಟನೆ ಮಂಗಳೂರಿನ ನಾಗರಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ವಿವಿಧ ರೀತಿಯ ವದಂತಿಗಳು ಜನರ ನಡುವೆ ಹರಿದಾಡುತ್ತಿದೆ. ಇಂತಹ ಹೀನ ಕೃತ್ಯವನ್ನು ಎಸಗಿರುವ ತಪ್ಪಿಸತ್ಥರನ್ನು ತಕ್ಷಣವೇ ಪತ್ತೆ ಹಚ್ಚಿ ಬಂಧಿಸಬೇಕು ಎಂದು ತಮ್ಮಲ್ಲಿ ಒತ್ತಾಯಿಸುತ್ತಿದ್ದೇವೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಣ್ಣ ಪುಟ್ಟ ಘಟನೆಗಳು, ವದಂತಿಗಳು ದೊಡ್ಡ ರೀತಿಯ ಗಲಭೆ, ಹಿಂಸಾಚಾರಗಳಿಗೆ ಕಾರಣವಾಗಿರುವ ವಿದ್ಯಾಮಾನಗಳು ಈ ಹಿಂದೆ ಹಲವು ನಡೆದಿದೆ. ಕೋಮು ಸೂಕ್ಷ್ಮ ನಗರದಲ್ಲಿ ಇಂತಹ ಕೃತ್ಯಗಳು ಯಾವುದೇ ರೀತಿಯ ಅವಘಡಗಳಿಗೆ ಹೇತು ಆಗಬಹುದು. ಈ ಗೋಡೆ ಬರಹದ ಹಿಂದೆಯೂ ಸಮುದಾಯಗಳ ನಡುವಿನ ಅಪನಂಬಿಕೆಯನ್ನು ಹೆಚ್ಚಿಸುವ, ಪರಸ್ಪರರನ್ನು ಎತ್ತಿಕಟ್ಟುವ ಉದ್ದೇಶ ಇದ್ದಂತಿದೆ. ನಗರದ ಮಧ್ಯ ಭಾಗದಲ್ಲಿ, ಪೊಲೀಸ್ ಠಾಣೆಯ ಸಮೀಪ ಇಂತಹ ಘಟನೆ ನಡೆದಿರುವುದು ಆತಂಕವನ್ನು ಸಹಜವಾಗಿ ಹೆಚ್ಚಿಸಿದೆ. ನಗರದಲ್ಲಿ ಕೊಲೆ, ಸುಲಿಗೆಗಳು ಹೆಚ್ಚುತ್ತಿರುವ ಸಂದರ್ಭದಲ್ಲೇ ಲಷ್ಕರ್ ಪರ ಗೋಡೆಬರಹ ಪೊಲೀಸ್ ಠಾಣೆಯ ಸಮೀಪವೇ ಪ್ರತ್ಯಕ್ಷಗೊಂಡಿರುವುದು ಸಹಜವಾಗಿ ಕಾನೂನು ಆಡಳಿತದ ಕುರಿತು ಜನರಲ್ಲಿ ಅತೃಪ್ತಿ ಮೂಡಿಸಿದೆ. ಪೊಲೀಸ್ ಇಲಾಖೆ ತಕ್ಷಣವೇ ಈ ಕೃತ್ಯ ಎಸಗಿರುವ ತಪ್ಪಿತಸ್ಥರನ್ನು ಬಂಧಿಸಬೇಕು, ಘಟನೆಯ ಹಿಂದಿರುವ ಹುನ್ನಾರಗಳನ್ನು ಬಯಲಿಗೆಳೆಯಬೇಕು, ಜನರ ಆತಂಕವನ್ನು ದೂರ ಮಾಡಬೇಕು ಎಂದು ಡಿವೈಎಫ್ಐ ದ ಕ ಜಿಲ್ಲಾ ಸಮಿತಿ ತಮ್ಮಲ್ಲಿ ಮನವಿ ಮಾಡುತ್ತದೆ.
DAKSHINA KANNADA
ಅತ್ತಾವರ ಅಪಾರ್ಟ್ಮೆಂಟ್ನಲ್ಲಿ ಆಕಸ್ಮಿಕ ಬೆಂಕಿ – ವೃದ್ಧೆ ಸಾವು..!
ಮಂಗಳೂರು: ಮಂಗಳೂರಿನ ಅತ್ತಾವರದ ಅಪಾರ್ಟ್ ಮೆಂಟ್ವೊಂದರಲ್ಲಿ ಇಂದು ಬೆಳಗ್ಗೆ ನಡೆದ ಆಕಸ್ಮಿಕ ಬೆಂಕಿ ಅನಾಹುತದಲ್ಲಿ ಗಂಭೀರ ಗಾಯಗೊಂಡಿದ್ದ ವೃದ್ಧೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಶಾಹಿನಾ ನುಸ್ಬಾ(58) ಸಾವನ್ನಪ್ಪಿದ ವೃದ್ಧೆ ಎಂದು ಗುರುತಿಸಲಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮುಂಜಾನೆ 4 ಗಂಟೆಯ ಹೊತ್ತಿಗೆ ಬೆಂಕಿ ಕಾಣಿಸಿಕೊಂಡಿದ್ದು, ಐವರು ಮಕ್ಕಳ ಸಹಿತ ಎಂಟು ಮಂದಿ ಅಪಾಯದಿಂದ ಪಾರಾಗಿದ್ದಾರೆ.
ಅನಾರೋಗ್ಯದಿಂದಾಗಿ ಬೆಡ್ ರೂಮ್ ನಲ್ಲೇ ಇದ್ದ ವೃದ್ಧ ಮಹಿಳೆ ದಟ್ಟ ಹೊಗೆಯಿಂದಾಗಿ ತಕ್ಷಣ ಹೊರಬರಲಾಗದೇ ಉಸಿರುಗಟ್ಟಿ ಚಿಂತಾಜನಕ ಸ್ಥಿತಿಯಲ್ಲಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
DAKSHINA KANNADA
ನ.30ರಂದು ಶ್ರೀ ಆದಿ ಕ್ಷೇತ್ರ ಜಾರದಲ್ಲಿ ನಿಧಿ ಕುಂಭ ಮತ್ತು ಶಿಲಾನ್ಯಾಸ ಕಾರ್ಯಕ್ರಮ
ಮಂಗಳೂರು: ಧಾರ್ಮಿಕ ಕ್ಷೇತ್ರ ಜಾರದಲ್ಲಿ ನ. 30ರಂದು ಬೆಳಿಗ್ಗೆ 8 ಗಂಟೆಯಿಂದ ಜಾರಂದಾಯ ಬಂಟ ಪರಿವಾರ ಸಾನಿಧ್ಯ ಮತ್ತು ಕ್ಷೇತ್ರ ಕಲ್ಲುರ್ಟಿ ಸಾನಿಧ್ಯಗಳ ನಿಧಿ ಕುಂಭ ಮತ್ತು ಶಿಲಾನ್ಯಾಸ ಕಾರ್ಯಕ್ರಮ ವಿಜೃಂಭಣೆಯಿಂದ ಜರಗಲಿದೆ ಎಂದು ದೈವಜ್ಞ ಪ್ರಕಾಶ ವಿ. ಹೊಳ್ಳ ಶಕ್ತಿನಗರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
“ಕಾರ್ಯಕ್ರಮದ ಯಶಸ್ಸಿಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು ಕ್ಷೇತ್ರದ ತಂತ್ರಿಗಳಾದ ಕೊಂರ್ಗಿಬೈಲು ನಾರಾಯಣ ಮಯ್ಯರ ಪೌರೋಹಿತ್ಯದಲ್ಲಿ ಧಾರ್ಮಿಕ ವಿಧಿ ವಿಧಾನಗಳು ನೆರವೇರಲಿದೆ. ಖ್ಯಾತ ವಾಸ್ತು ತಜ್ಞಮಹೇಶ್ ಮುನಿಯಂಗಳ ಇವರ ವಾಸ್ತು ವಿನ್ಯಾಸದೊಂದಿಗೆ ಸುಮಾರು 12 ರಿಂದ 15 ಕೋಟಿ ವೆಚ್ಚದಲ್ಲಿ ಹಂತ ಹಂತವಾಗಿ ಕ್ಷೇತ್ರ ಜೀರ್ಣೋದ್ಧಾರ ನಡೆಸಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಂಡಿದೆ. ಈಗಾಗಲೇ ನವೆಂಬರ್ 11ರಂದು ಜಾರಚಾವಡಿಯಲ್ಲಿ ಪ್ರಧಾನ ದೈವ ಜಾರಂದಾಯ ಬಂಟ ಮಾಯಾಂದಾಲ್ ದೈವಗಳ ನೇಮೋತ್ಸವ ಶ್ರದ್ಧಾ ಭಕ್ತಿಯಿಂದ ನೆರವೇರಿದೆ. ನವೆಂಬರ್ 30ರಂದು
ಬೆಳಿಗ್ಗೆ 9.00 ಗಂಟೆಗೆ ಸರಳ ಜುಮಾದಿ ಬಂಟ ಹಾಗೂ ಪರಿವಾರ ದೈವಗಳಿಗೆ ಹಾಗೂ 11.00 ಗಂಟೆಗೆ ಶ್ರೀ ಜಾರ ಆದಿ ಕ್ಷೇತ್ರದ ಗಿರಿಯಲ್ಲಿ ಗ್ರಾಮ ದೈವ ಶ್ರೀ ಬಂಟ ಸರಳ ಜುಮಾದಿ ಬಂಟ ಮತ್ತು ಪರಿವಾರ ದೈವಗಳಿಗೆ ನಿಧಿ ಕುಂಬ ಮತ್ತು ಶಿಲಾನ್ಯಾಸ ಕಾರ್ಯಕ್ರಮ ನೆರವೇರಲಿದೆ. ಈ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಿಗೆ ಭಕ್ತಾಧಿಗಳು ತನು ಮನ ಧನಗಳಿಂದ ಸಹಕರಿಸಬೇಕು” ಎಂದು ಮನವಿ ಮಾಡಿದರು.
ಬಳಿಕ ಮಾತಾಡಿದ ಕ್ಷೇತ್ರದ ತಂತ್ರಿಗಳಾದ ಕೊಂರ್ಗಿಬೈಲು ನಾರಾಯಣ ಮಯ್ಯ ಅವರು, “ಶ್ರೀ ಆದಿ ಕ್ಷೇತ್ರ ಜಾರ ಇದು ತುಳುನಾಡಿನ ಕಾರ್ಣಿಕ ಕ್ಷೇತ್ರಗಳಲ್ಲಿ ಒಂದಾಗಿದೆ. ಸಾನಿಧ್ಯ ಪ್ರಧಾನ ದೈವಗಳಾಗಿ ಶ್ರೀ ಉಳ್ಳಾಯ, ಶ್ರೀ ಜಾರಂದಾಯ ಬಂಟ, ಸರಳ ಧೂಮಾವತಿ ಬಂಟ, ಕಾಂತೇರಿ ಧೂಮಾವತಿ ಬಂಟ, ಮಾಯಾಂದಾಲ್ ದೈವ, ಪಿಲಿ ಚಾಮುಂಡಿ, ಬಬ್ಬರ್ಯ ದೈವಗಳು ಕ್ಷೇತ್ರ ಹಾಗೂ ಗ್ರಾಮದ ಮಾಗಣೆಯ ದೈವಗಳಾಗಿವೆ. ಕ್ಷೇತ್ರದ ಆದಿ ದೈವಗಳಾಗಿ ಕಲ್ಲುರ್ಟಿ, ಪಟ್ಟದ ಅಣ್ಣಪ್ಪ ಸ್ವಾಮಿ, ಸ್ಥಳದ ಪಂಜುರ್ಲಿ, ನಾಗಬ್ರಹ್ಮ ಪ್ರಧಾನ ಸಾನಿಧ್ಯಗಳಾಗಿವೆ” ಎಂದರು. ಸುದ್ದಿಗೋಷ್ಠಿಯಲ್ಲಿ ದೈವಜ್ಞ ಶ್ರೀ ಪ್ರಕಾಶ ವಿ. ಹೊಳ್ಳ ಶಕ್ತಿನಗರ, ಕ್ಷೇತ್ರದ ತಂತ್ರಿಗಳಾದ ಕೊಂರ್ಗಿಬೈಲು ನಾರಾಯಣ ಮಯ್ಯರ , ಕ್ಷೇತ್ರದ ಗಡಿ ಪ್ರಧಾನರಾದ ಜತ್ತಿ ಪೂಜಾರಿ ಜಾರ, ಅಧ್ಯಕ್ಷರಾದ ಉದಯಶಂಕರ ಜಾರಮನೆ, ಕಾರ್ಯದರ್ಶಿ ಎಂ. ವಿಠಲ್ ಪೂಜಾರಿ ಕುಕ್ಕುದಡಿ, ಕೋಶಾಧಿಕಾರಿ ಜೀವನ್ ದಾಸ್ ಜಾರ ಮತ್ತಿತರರು ಉಪಸ್ಥಿತರಿದ್ದರು.
DAKSHINA KANNADA
Mangaluru: ಬೆಳ್ಮ ಬೋಲ್ದನ್ ಕುಟುಂಬಿಕರು ತರವಾಡು ಮನೆಯಲ್ಲಿ ಕೋಲೋತ್ಸವ
ಮಂಗಳೂರು: ಕೊಣಾಜೆ ಬೆಳ್ಮದಲ್ಲಿರುವ ಬೋಲ್ದನ್ ಕುಟುಂಬಿಕರ ತರವಾಡು ಮನೆಯಲ್ಲಿ ಕಲ್ಲುರ್ಟಿ, ಪಂಜುರ್ಲಿ, ಗುಳಿಗ ಮೂರನೇ ವರ್ಷದ ಕೋಲೋತ್ಸವ ಭಾನುವಾರ ರಾತ್ರಿ ಸಂಭ್ರಮದಿಂದ ಜರುಗಿತು.
ಭಾನುವಾರ ಬೆಳಿಗ್ಗೆ ಪ್ರಶಾಂತ್ ಉಡುಪ ಪೌರೋಹಿತ್ಯದಲ್ಲಿ ನಾಗತಂಬಿಲ, ಗಣಹೋಮ ನಡೆದ ಬಳಿಕ ಶ್ರೀ ವೆಂಕಟ್ರಮಣ ದೇವರ ಮುಡಿಪು ಕಟ್ಟುವಿಕೆಯಲ್ಲಿ ಸರ್ವ ಕುಟುಂಬಿಕರು ಪಾಲ್ಗೊಂಡು ದೇವತಾ ಕಾರ್ಯದಲ್ಲಿ ಭಾಗವಹಿಸಿದರು. ಮಧ್ಯಾಹ್ನ ಅನ್ನಸಂಪರ್ತಣೆ ನಡೆಯಿತು.
ಅದೇ ದಿನ ರಾತ್ರಿ 7.30ಕ್ಕೆ ದೈವದ ಭಂಡಾರ ಏರಿ ಬಳಿಕ ಕಲ್ಲುರ್ಟಿ , ಪಂಜುರ್ಲಿ, ಗುಳಿಗ ಕೋಲ ಉತ್ಸವ ಜರುಗಿತು. ಮರುದಿನ ಅಗೇಲು ಸೇವೆ ನಡೆಯಿತು.
ತರವಾಡು ಮನೆಯ ಮೋಹಿಣಿ ಬೆಳ್ಮ, ಐತಪ್ಪ ಬೆಳ್ತಂಗಡಿ, ಧರ್ಣಪ್ಪ ಧರ್ಮಸ್ಥಳ, ವಿಶ್ವನಾಥ ಕಡಬ, ದಯಾನಂದ್ ಹುಬ್ಬಳ್ಳಿ, ದೇವದಾಸ ಬೆಳ್ಮ, ಆನಂದ ಕಡಬ, ಚಂದ್ರಶೇಖರ ಎಕ್ಕೂರು, ಹರೀಶ ವರ್ಕಾಡಿ ಮೊದಲಾದವರು ಭಾಗವಹಿಸಿದ್ದರು.
ರಾತ್ರಿ ತರವಾಡಿನ ಆಡಳಿತ ಸಮಿತಿ ಪದಾಧಿಕಾರಿಗಳ ಸಭೆ ನಡೆದು ಲೆಕ್ಕ ಪತ್ರವನ್ನು ಕಾರ್ಯದರ್ಶಿ ಆನಂದ ಕಡಬ ಮಂಡಿಸಿದರು.
ಕ್ಷೇತ್ರದ ಅಂಗಣಕ್ಕೆ ಇಂಟರ್ಲಾಕ್ ಅಳವಡಿಸಿದ ದಯಾನಂದ ಹುಬ್ಬಳ್ಳಿ, ತರವಾಡು ಮನೆಗೆ ಗ್ರೈಂಡರ್ ನೀಡಿದ ಶೋಭಾ ವಾಮಂಜೂರು, ತರವಾಡು ಮನೆಗೆ ಕೊಡುಗೆಯಾಗಿ ನೀಡಿದ ಕುರ್ಚಿಗಳಿಗೆ ಆರ್ಥಿಕ ಸಹಕಾರ ನೀಡಿದ ಸರ್ವರಿಗೂ ಕೃತಜ್ಞತೆ ಸಲ್ಲಿಸಲಾಯಿತು.
ದಿನಕರ ಕಯ್ಯಾರ, ವಿಕ್ರಾಂತ್ ಜಪ್ಪಿನಮೊಗರು , ಧನ್ರಾಜ್ ತಲಪಾಡಿ ಸೇರಿದಂತೆ ಸಮಿತಿ ಪದಾಧಿಕಾರಿಗಳು, ಸರ್ವ ಸದಸ್ಯರೂ ಉಪಸ್ಥಿತರಿದ್ದರು.
- FILM7 days ago
ಸಪ್ತ ಸಾಗರದಾಚೆ ಎಲ್ಲೋ ಸೈಡ್ ಬಿ ನೋಡಿ ‘ಕತ್ತೆ’ ಎಂದ ಕಿಚ್ಚ ಸುದೀಪ
- bengaluru6 days ago
ಇನ್ಸ್ಟಾಗ್ರಾಂನಲ್ಲಿ 11 ಸಾವಿರ ಫಾಲೋವರ್ಸ್ ಕಳೆದುಕೊಂಡ ಬಿಗ್ ಬಾಸ್ ಸ್ಪರ್ಧಿ ಸಂಗೀತಾ
- LATEST NEWS7 days ago
36 ಮಂದಿ ಶಬರಿಮಲೆ ಯಾತ್ರಿಕರನ್ನು ಒಯ್ಯುತ್ತಿದ್ದ ಬಸ್ ಪಲ್ಟಿ-7ಮಂದಿಗೆ ಗಾಯ..!
- DAKSHINA KANNADA6 days ago
Breaking news :ಮಂಗಳೂರಿನ ಹೊಟೇಲ್ ರೂಂನಲ್ಲಿ ಬೆಂಕಿ-ಒಳಗಿದ್ದ ವ್ಯಕ್ತಿ ಸಾವು