LATEST NEWS
ಕೋಟತಟ್ಟು ಲಾಠಿಚಾರ್ಜ್ ಪ್ರಕರಣ: 7 ಜನರ ಮೇಲೆ FIR-ಪೊಲೀಸರ ವಿರುದ್ಧವೂ ಪ್ರತಿದೂರು ದಾಖಲು
ಉಡುಪಿ: ಇಲ್ಲಿನ ಕೋಟತಟ್ಟು ಗ್ರಾಮದಲ್ಲಿ ನಡೆದ ಮೆಹಂದಿ ಕಾರ್ಯಕ್ರಮದ ವೇಳೆ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಕರ್ತವ್ಯವಕ್ಕೆ ಅಡ್ಡಿಪಡಿಸಿದ್ದಾರೆಂದು 7 ಜನರ ಮೇಲೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ಪೊಲೀಸರ ವಿರುದ್ಧ ಪ್ರತಿದೂರು ಸಹ ದಾಖಲಾಗಿದೆ.
ರಾಜೇಶ್, ಸುದರ್ಶನ್, ಗಣೇಶ ಬಾರ್ಕೂರು, ಸಚಿನ್, ಗಿರೀಶ್, ನಾಗೇಂದ್ರ ಪುತ್ರನ್, ನಾಗರಾಜ ಪುತ್ರನ್ ಆರೋಪಿತರು.
ಘಟನೆ ಬಗ್ಗೆ ಕೋಟ ಪೊಲೀಸ್ ಠಾಣೆಯ ಕಾನ್ಸಟೇಬಲ್ ಒಬ್ಬರು ದೂರು ದಾಖಲಿಸಿದ್ದು, ಅದರ ವಿವರ ಇಲ್ಲಿದೆ.
ಕೋಟ ಪೊಲೀಸ್ ಠಾಣೆಯ ಕಾನ್ಸಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಜಯರಾಮ ನಾಯ್ಕ ಎಲ್ ಡಿ.27 ರಂದು ಠಾಣಾ ಮೀಸಲು ಕರ್ತವ್ಯಕ್ಕೆ ನೇಮಿಸಿದ್ದು ಅದರಂತೆ ಕರ್ತವ್ಯ ಮುಗಿಸಿ ವಸತಿ ಗೃಹದಲ್ಲಿ ವಿಶ್ರಾಂತಿಯಲ್ಲಿದ್ದರು.
ಈ ವೇಳೆ ಕೋಟಾ ಠಾಣಾ ಪೊಲೀಸ್ ಉಪನಿರೀಕ್ಷಕ ಸಂತೋಷ್ ಬಿ.ಪಿ ರವರು ರಾತ್ರಿ 10:45 ಗಂಟೆಗೆ ಜಯರಾಮ್ಗೆ ಕರೆ ಮಾಡಿದ್ದಾರೆ. ಕೋಟತಟ್ಟು ಗ್ರಾಮದ ಚಿಟ್ಟಿಬೆಟ್ಟುವಿನ ಓರ್ವನ ಮನೆಯಲ್ಲಿ ಮೆಹಂದಿ ಕಾರ್ಯಕ್ರಮದಲ್ಲಿ ಏರುಧ್ವನಿಯಲ್ಲಿ ಡಿಜೆ ಸೌಂಡ್ ನ್ನು ಹಾಕಿ ಮೆಹಂದಿ ಮನೆಯ ಎದುರಿನ ಸಾರ್ವಜನಿಕ ರಸ್ತೆಯಲ್ಲಿ ಸುಮಾರು 30-50 ಜನ ಮದ್ಯ ಸೇವನೆ ಮಾಡಿ ಕೇಕೆ ಹಾಕುತ್ತಾ ನೃತ್ಯ ಮಾಡುತ್ತಿದ್ದಾರೆ ಎಂಬ ಮಾಹಿತಿ ಬಂದಿತ್ತು.
ತಕ್ಷಣ ಜಯರಾಮ ನಾಯ್ಕ ಇಲಾಖಾ ಜೀಪಿನಲ್ಲಿ ಪಿ.ಎಸ್.ಐ ಸಂತೋಷ್ ರವರೊಂದಿಗೆ ರಾತ್ರಿ 11:10 ಗಂಟೆಗೆ ಸ್ಥಳಕ್ಕೆ ತಲುಪಿ ನೋಡಿದ್ದಾರೆ.
ಈ ವೇಳೆ ರಾಜೇಶ್, ಸುದರ್ಶನ್, ಗಣೇಶ ಬಾರ್ಕೂರು, ಸಚಿನ್, ಗಿರೀಶ್, ನಾಗೇಂದ್ರ ಪುತ್ರನ್, ನಾಗರಾಜ ಪುತ್ರನ್ ಮತ್ತು ಇತರರು ಡಿಜೆ ಸೌಂಡ್ ನ್ನು ಜೋರಾಗಿ ಹಾಕಿಕೊಂಡು ನೃತ್ಯ ಮಾಡುತ್ತಿದ್ದರು.
ಇದೇ ವೇಳೆ ಸ್ಥಳದಲ್ಲಿ ಸ್ಥಳೀಯ ನಿವಾಸಿ ಸುಬ್ರಹ್ಮಣ್ಯ ಉರಾಳ ಅವರು ತನ್ನ ತಾಯಿಗೆ ಹೃದಯ ಸಂಬಂಧಿ ತೊಂದರೆ ಇದ್ದು ಡಿಜೆ ಸೌಂಡ್ ಅನ್ನು ಮೆಲ್ಲನೆ ಇಡುವಂತೆ 112 ಸಂಖ್ಯೆಗೆ ಮಾಹಿತಿ ನೀಡಿದ್ದು 112 ಸಿಬ್ಬಂದಿ ಸ್ಥಳಕ್ಕೆ ಬಂದಾಗ ಅವರಲ್ಲಿ ಆರೋಪಿತರು ಉಡಾಫೆಯಾಗಿ ಮಾತನಾಡಿರುವುದಾಗಿ ಪಿ.ಎಸ್.ಐ ಬಳಿ ತಿಳಿಸಿರುತ್ತಾರೆ.
ಆಗ ಪಿ.ಎಸ್.ಐ ಮತ್ತೆ ಮೆಹಂದಿ ಕಾರ್ಯಕ್ರಮದ ಬಳಿ ತೆರಳಿ ಡಿಜೆ ಸೌಂಡ್ ನ್ನು ಕಡಿಮೆ ಮಾಡುವಂತೆ ತಿಳಿಸಿದಾಗ ಆರೋಪಿತರು ಗುಂಪು ಕಟ್ಟಿಕೊಂಡು ಕೈಯಲ್ಲಿ ದೊಣ್ಣೆ ಹಿಡಿದುಕೊಂಡು
ಪಿ.ಎಸ್.ಐ ರವರ ಬಳಿ ನೀವು ಏನು ಮಾಡಿತ್ತೀರಾ ನಾವು ಬಂದ್ ಮಾಡುವುದಿಲ್ಲ ಎಂದು ಉಡಾಫೆಯಾಗಿ ಮಾತನಾಡಿ ಸಮವಸ್ತ್ರದಲ್ಲಿದ್ದ ಪಿ.ಎಸ್.ಐ ರವರನ್ನು ಕೈಯಿಂದ ದೂಡಿದ್ದಾರೆ. ಆಗ ಜಯರಾಮ ನಾಯ್ಕ ಡಿಜೆ ಬಂದ್ ಮಾಡಲು ಹೋಗಿದ್ದಾರೆ.
ಈ ವೇಳೆ 7 ಜನ ಆರೋಪಿತರು ಜಯರಾಮ ನಾಯ್ಕ ಸುತ್ತುವರಿದು ದೊಣ್ಣೆಯಿಂದ ಎಡಕೈನ ತೋರು ಬೆರಳು ಮತ್ತು ಮಧ್ಯದ ಬೆರಳಿನ ಬಳಿ ಹೊಡೆದು ಪೊಲೀಸ್ ಸಮವಸ್ತ್ರ ಹರಿದು ಹಾಕಿ ಅವಾಚ್ಯವಾಗಿ ಬೈದು ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ.
ಜಯರಾಮಗೆ ಘಟನೆಯಿಂದ ಗಾಯವಾದ ಕಾರಣ ಡಿ.28 ರಂದು ಬೆಳಿಗ್ಗೆ ಕೈ ನೋವು ಜಾಸ್ತಿಯಾಗಿ ಚಿಕಿತ್ಸೆ ಪಡೆದಿದ್ದರು. ಇದಾದ ಮರುದಿನ (ಡಿ.29) ನೋವು ಮತ್ತೂ ಜಾಸ್ತಿಯಾದ ಕಾರಣ ಕುಂದಾಪುರ ತಾಲೂಕು ಆಸ್ಪತ್ರೆಗೆ ಹೋಗಿ ಚಿಕಿತ್ಸೆಗೆ ದಾಖಲಾಗಿದ್ದಾರೆ.
ಈ ಬಗ್ಗೆ ಜಯರಾಮ ನೀಡಿದ ದೂರಿನಂತೆ ಕೋಟ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ
215 /2021 ಕಲಂ: 143, 147, 148, 323, 324, 353, 504, 506 ಜೊತೆಗೆ 149 ಐಪಿಸಿ ಮತ್ತು 3(1)(r),3(1)(s) 3 (2) (va) SC ST ACT 1989 ರಂತೆ ಪ್ರಕರಣ ದಾಖಲಾಗಿದೆ.
ಪ್ರತಿ ದೂರು ದಾಖಲು
ಇದೇ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಹಲ್ಲೆ ನಡೆಸಿದ್ದಾರೆಂದು ಪ್ರಕರಣ ದಾಖಲಾಗಿದೆ
ಡಿ.27 ರಂದು ಮದುವೆ ಪ್ರಯುಕ್ತ ಮೆಹಂದಿ ಶಾಸ್ತ್ರ ಇದ್ದು
ರಾತ್ರಿ 08:00 ಗಂಟೆಯಿಂದ ಪ್ರಾರಂಭವಾಗಿದ್ದು, ಕಾರ್ಯಕ್ರಮಕ್ಕೆ ಡಿ.ಜೆ ವ್ಯವಸ್ಥೆ ಮಾಡಲಾಗಿತ್ತು.
ರಾತ್ರಿ 10 ಗಂಟೆ ಸಮಯಕ್ಕೆ ಕಾರ್ಯಕ್ರಮ ಮುಗಿಸುತ್ತಿರುವಾಗ ಕೋಟ ಪೊಲೀಸ್ ಠಾಣೆಯ ಠಾಣಾಧಿಕಾರಿ ಸಂತೋಷ್ ಬಿ.ಪಿ,
ಹೆಚ್.ಸಿ ರಾಮಣ್ಣ, ಹೆಚ್.ಸಿ ಅಶೋಕ್ ಶೆಟ್ಟಿ, ಮಂಜುನಾಥ ಮತ್ತು ಇತರ ಸಿಬ್ಬಂದಿಯವರು ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ನುಗ್ಗಿದ್ದಾರೆ.
ನಂತರ ಅಲ್ಲಿರುವವರನ್ನು ಬೈದು, ಲಾಠಿಯಿಂದ ಗಣೇಶ ಬಾರ್ಕೂರು ಎಂಬವರಿಗೆ ಹೊಡೆದು ಕಾಲಿನಿಂದ ನೆಲಕ್ಕೆ ಕೆಡವಿದ್ದಾರೆ.
ನಂತರ ಕಾಲಿನಿಂದ ತುಳಿದು ಕಾಲರ್ ಪಟ್ಟಿ ಹಿಡಿದು ಜೀಪಿಗೆ ತುಂಬಲು ಯತ್ನಿಸಿದ್ದಾರೆ. ಈ ವೇಳೆ ಸಂಬಂಧಿಕ ಮಹಿಳೆಯರು ಒಟ್ಟಾಗಿ ಪೊಲೀಸರ ಕಾಲಿಗೆ ಬಿದ್ದು ಬಿಟ್ಟು ಬಿಡಿ ಎಂದು ಅಂಗಲಾಚುತ್ತಿದ್ದಾಗ ಪೊಲೀಸರು ಓರ್ವ ಮಹಿಳೆಗೆ ಲಾಠಿಯಿಂದ ತಲೆಗೆ ಹೊಡೆದು ಬೂಟು ಕಾಲಿನಿಂದ ತುಳಿದಿದ್ದಾರೆ.
ಜೊತೆಗೆ ಸುದರ್ಶನ, ಗಿರೀಶ ಮತ್ತು ಸಚಿನ್ ಎಂಬುವವರಿಗೆ ಪೊಲೀಸರು ಕೈಯಿಂದ ಹೊಡೆದು, ಕಾಲರ್ ಗೆ ಕೈ ಹಾಕಿ ಜೀಪಿಗೆ ತುಂಬಿ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.
ನಂತರ ಠಾಣೆಯಲ್ಲಿ ಎಲ್ಲರನ್ನೂ ವಿವಸ್ತ್ರಗೊಳಿಸಿ ಸೆಲ್ ಒಳಗೆ ಹಾಕಿ ಬೆದರಿಕೆ ಹಾಕಿರುವುದಾಗಿ
ಕೋಟ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 214 /2021 ಕಲಂ: 322, 324, 504, 506 ಜೊತೆಗೆ 34 ಐಪಿಸಿ ಮತ್ತು 3(2)(V-a) Sc ST ACT ರಂತೆ ಪ್ರಕರಣ ದಾಖಲಿಸಿದ್ದಾರೆ.
DAKSHINA KANNADA
ಮಂಗಳೂರು: ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರ ಗೂಂಡಾಗಿರಿ; ಪೊಲೀಸ್ ಅಧಿಕಾರಿಗಳ ಜೊತೆಯಲ್ಲೇ ಅನುಚಿತ ವರ್ತನೆ
ಮಂಗಳೂರು: ನಗರದ ಕಪಿತಾನಿಯೋ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತ ಚಲಾಯಿಸಿದ ಬಳಿಕ ಮಾಧ್ಯಮ ಪ್ರತಿನಿಧಿ ಜೊತೆ ಪ್ರತಿಕ್ರಿಯೆ ನೀಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತನೊಬ್ಬ ಪೊಲೀಸ್ ಹಾಗೂ ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸಿ ವಾಗ್ವಾದವುಂಟಾದ ಘಟನೆ ನಡೆಯಿತು.
ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್. ಆರ್ ಪೂಜಾರಿಯವರು ಮತದಾನ ಮಾಡಿ ಹೊರಬಂದಾಗ ಮಾಧ್ಯಮದವರು ಗೇಟಿನ ಹೊರಭಾಗದಲ್ಲಿ ಅವರ ಹೇಳಿಕೆ ತೆಗೆದುಕೊಳ್ಳುತ್ತಿದ್ದರು. ಆಗ “ಎಷ್ಟು ಹೊತ್ತು ಪ್ರತಿಕ್ರಿಯೆ ಪಡೆಯುವುದು”ಎಂದು ಸಂದೀಪ್ ಎಕ್ಕೂರು ಎಂಬಾತ ಕ್ಯಾತೆ ತೆಗೆದಿದ್ದಾನೆ. ಈ ವೇಳೆ ಅಲ್ಲಿಯೇ ಇದ್ದ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಸೇರಿದಂತೆ ಇತರ ಪೊಲೀಸರು ಆತನನ್ನು ತಳ್ಳಿಕೊಂಡು ಒಂದಷ್ಟು ದೂರ ಹೋಗಿದ್ದಾರೆ. ಈ ವೇಳೆ ಆತನೊಂದಿಗೆ ಇದ್ದವರು ಸಮಾಧಾನ ಮಾಡಲು ಯತ್ನಿಸಿದರೂ, ಆತ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ, ವಾಗ್ವಾದ ನಡೆಸಿದ್ದಾನೆ. ಆಗ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿ ಕಳಿಸಿದ್ದಾರೆ.
ಪೊಲೀಸರು ಅಲ್ಲಿಂದ ಹಿಂದಿರುಗಿದ ಬಳಿಕ ತಂಡದಲ್ಲಿದ್ದ ಮತ್ತೊಬ್ಬ ಘಟನೆಯ ದೃಶ್ಯ ಚಿತ್ರೀಕರಿಸುತ್ತಿದ್ದ ಮಾಧ್ಯಮ ವರದಿಗಾರರ ಮೇಲೆ ಹರಿಹಾಯ್ದಿದ್ದಾನೆ. ಈ ವೇಳೆ ಪತ್ರಕರ್ತರೊಂದಿಗೂ ತಂಡದಿಂದ ವಾಗ್ವಾದ ನಡೆದಿದೆ. ಈ ವೇಳೆ ಸ್ಥಳದಲ್ಲಿ ಸ್ವಲ್ಪ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಸಂಜೆ ವೇಳೆ ಆತನ ಮೇಲೆ ಪ್ರಕರಣ ದಾಖಲಿಸಿ ಅರೆಸ್ಟ್ ಮಾಡುತ್ತೇನೆ ಎಂದು ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿದ ಬಳಿಕ ಪರಿಸ್ಥಿತಿ ಶಾಂತವಾಯಿತು.
DAKSHINA KANNADA
ಪತ್ನಿ ಮಗಳೊಂದಿಗೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಪದ್ಮರಾಜ್ ಪೂಜಾರಿ
ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಮಂಗಳೂರಿನಲ್ಲಿ ತಮ್ಮ ಮತ ಚಲಾಯಿಸಿದ್ದಾರೆ. ಮಂಗಳೂರಿನ ಕಪಿತಾನಿಯೋ ಶಾಲೆಯ ಮತಗಟ್ಟೆಗೆ ತನ್ನ ಪತ್ನಿ ಹಾಗೂ ಮಗಳ ಜೊತೆ ಆಗಮಿಸಿ ಮತ ಚಲಾಯಿಸಿದ್ದಾರೆ.
ಮುಂಜಾನೆ ಏಳುಗಂಟೆಗೆ ಮತಗಟ್ಟೆಗೆ ಆಗಮಿಸಿದ ಪದ್ಮರಾಜ್ ಅವರು ಬರುವ ವೇಳೆಗೆ ಜನರು ಮತದಾನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದರು. ಹೀಗಾಗಿ ಪದ್ಮರಾಜ್ ಹಾಗೂ ಅವರ ಪತ್ನಿ ಮತ್ತು ಮಗಳು ಸರತಿ ಸಾಲಿನಲ್ಲಿ ನಿಂತೇ ಮತ ಚಲಾಯಿಸಿದ್ದಾರೆ. ಪದ್ಮರಾಜ್ ಆಗಮಿಸುವ ವೇಳೆ ಅವರ ಸಾಕಷ್ಟು ಅಭಿಮಾನಿಗಳು ಮತಗಟ್ಟೆಯ ಹೊರಗೆ ನಿಂತು ಅವರಿಗೆ ಶುಭ ಕೋರಿದ್ದಾರೆ.
ಮತದಾನ ಮಾಡಿದ ಪದ್ಮರಾಜ್ ಬಳಿಕ ಕ್ಷೇತ್ರದಲ್ಲಿ ಮತದಾನ ಪ್ರಕ್ರಿಯೆ ವೀಕ್ಷಣೆಗೆ ತೆರಳಿದ್ದಾರೆ.
DAKSHINA KANNADA
ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ
ಬೆಂಗಳೂರು: ರಾಜ್ಯದ 14 ಲೋಕಸಭಾ ಕ್ಷೇತ್ರಗಳ ಮೊದಲನೇ ಹಂತದ ಮತದಾನ ಇಂದು ಬೆಳಗ್ಗೆ 7 ಗಂಟೆಯಿಂದಲೇ ಆರಂಭಗೊಂಡಿದೆ.
ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇದಾಗಿದ್ದು, ಕರ್ನಾಟಕದಲ್ಲಿ ಇಂದು ಮೊದಲ ಹಂತದ ಮತದಾನವಾಗಿದೆ. ಮತದಾರರು ತಮ್ಮ ತಮ್ಮ ಮತ ಕ್ಷೇತ್ರಗಳಲ್ಲಿ ಬೆಳಿಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಶಾಂತಿಯುತವಾಗಿ ಮತದಾನ ಮಾಡುತ್ತಿದ್ದಾರೆ.
ಅದರಂತೆ ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಸೆಂಟ್ರಲ್, ಬೆಂಗಳೂರು ಗ್ರಾಮಾಂತರ, ಮೈಸೂರು-ಕೊಡಗು, ಚಾಮರಾಜನಗರ, ಮಂಡ್ಯ, ತುಮಕೂರು, ಕೋಲಾರ, ಹಾಸನ, ಉಡುಪಿ-ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಚಿತ್ರದುರ್ಗ ಕ್ಷೇತ್ರಗಳಲ್ಲಿ ಬೆಳಿಗ್ಗೆಯಿಂದಲೇ ಮತದಾನ ಆರಂಭವಾಗಿದ್ದು ಸಂಜೆ 6 ಗಂಟೆಯವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ.