BIG BOSS
ಕಲರ್ಸ್ ಶೋಗೆ ಮರಳಿದ ಲಾಯರ್ ಜಗದೀಶ್; ಫ್ಯಾನ್ಸ್ಗೆ ಗುಡ್ ನ್ಯೂಸ್
ಲಾಯರ್ ಜಗದೀಶ್ ಅವರು ಮಹಿಳೆಯರ ವಿರುದ್ಧ ನಿಂದನೀಯ ಶಬ್ದಗಳ ಬಳಕೆ ಮಾಡಿ ಸಾಕಷ್ಟು ಟೀಕೆಗೆ ಗುರಿಯಾಗಿದ್ದರು. ಈ ಕಾರಣದಿಂದಲೇ ಅವರನ್ನು ಬಿಗ್ ಬಾಸ್ನಿಂದ ಎಲಿಮಿನೇಟ್ ಕೂಡ ಮಾಡಲಾಯಿತು. ಅವರನ್ನು ಮರಳಿ ಕರೆಸಬೇಕು ಎನ್ನುವ ಆಗ್ರಹ ಬಿಗ್ ಬಾಸ್ನಲ್ಲಿ ಜೋರಾಗಿದೆ. ಹೀಗಿರುವಾಗಲೇ ಜಗದೀಶ್ ಅವರು ಕಲರ್ಸ್ ಕನ್ನಡದ ಶೋಗೆ ಅತಿಥಿಯಾಗಿ ಬಂದಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.
ಜಗದೀಶ್ ಬಿಗ್ ಬಾಸ್ನಲ್ಲಿ ಎಲ್ಲಾ ಸ್ಪರ್ಧಿಗಳಿಗೆ ನಡುಕ ಹುಟ್ಟಿಸಿದ್ದರು. ಈ ಕಾರಣದಿಂದಲೇ 1 Vs 15 ಎಂಬ ವಾತಾವರಣ ಬಿಗ್ ಬಾಸ್ ಮನೆಯಲ್ಲಿ ಸೃಷ್ಟಿ ಆಗಿತ್ತು. ಅವರನ್ನು ಹೊರಕ್ಕೆ ಹಾಕಬೇಕು ಎಂದು ಅನೇಕರು ಪ್ರಯತ್ನಪಟ್ಟರು. ಅವರು ನಿಂದನೀಯ ಶಬ್ದಗಳ ಬಳಕೆ ಮಾಡಿ ಎಲಿಮಿನೇಟ್ ಆಗಿದ್ದಾರೆ. ಇದು ಅವರ ಫ್ಯಾನ್ಸ್ಗೆ ಬೇಸರ ಮೂಡಿಸಿದೆ. ಈಗ ಅವರನ್ನು ಕರೆಸಬೇಕು ಎಂಬ ಕೂಗು ಜೋರಾಗಿದೆ. ಹೀಗಿರುವಾಗಲೇ ಅವರು ಕಲರ್ಸ್ನ ‘ಸಚಿರುಚಿ ಸೀಸನ್ 3’ ಶೋಗೆ ಶೆಫ್ ಆಗಿ ಬಂದಿದ್ದಾರೆ.
ಜಗದೀಶ್ ಅವರು ಅಡುಗೆ ಮಾಡುವುದನ್ನು ತೋರಿಸಲಾಗಿದೆ. ಆ್ಯಂಕರ್ ಜಾಹ್ನವಿ ಅವರು ಜಗದೀಶ್ಗೆ ಒಂದಷ್ಟು ಪ್ರಶ್ನೆಗಳನ್ನು ಕೇಳಿದ್ದಾರೆ. ಈ ಪ್ರಶ್ನೆಗಳಲ್ಲಿ ಹೈಲೈಟ್ ಆಗಿದ್ದು ‘ಹಂಸ ಮೇಲೆ ನಿಮಗೆ ಕ್ರಶ್’ ಆಗಿತ್ತಾ ಎಂಬುದು. ಇದಕ್ಕೆ ಜಗದೀಶ್ ಅವರು ನಕ್ಕಿದ್ದಾರೆ. ಜಗದೀಶ್ ಅವರು ನಗುವಿನಲ್ಲೇ ಜನರಿಗೆ ಉತ್ತರ ಸಿಕ್ಕಿದೆ.
ಬಿಗ್ ಬಾಸ್ ಮನೆಯಲ್ಲಿರುವ ಹಂಸ ಹಾಗೂ ಜಗದೀಶ್ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆದಿತ್ತು. ಪದೇ ಪದೇ ಹಂಸ ಅವರನ್ನು ಜಗದೀಶ್ ಕಾಡಿದ್ದರು. ಬಿಗ್ ಬಾಸ್ನಿಂದ ಹೊರ ಬಂದ ಬಳಿಕವೂ ಜಗದೀಶ್ಗೆ ಈ ಕುರಿತು ಪ್ರಶ್ನೆಗಳು ಎದುರಾಗುತ್ತಿವೆ. ‘ಬಿಗ್ ಬಾಸ್ ಪಾಲಿಗೆ ಜಗದೀಶ್ ಮುಗಿದ ಅಧ್ಯಾಯ. ಹಾಗೆ ಕರೆಸೋದಾದರೆ ಹುಚ್ಚ ವೆಂಕಟ್ ಅವರನ್ನೂ ಕರೆಸಬೇಕಾಗುತ್ತದೆ’ ಎಂದು ಸುದೀಪ್ ಹೇಳಿದ್ದರು. ಈ ಮೂಲಕ ಜಗದೀಶ್ ಅವರನ್ನು ಮರಳಿ ಶೋಗೆ ಕರೆಸೋದೇ ಇಲ್ಲ ಎಂದು ಪರೋಕ್ಷವಾಗಿ ಹೇಳಿದ್ದರು.
BIG BOSS
‘ಬಿಗ್ ಬಾಸ್’ ಮನೆಯಲ್ಲಿ ಓಪನ್ ಆಗಿ ಶುರುವಾಯ್ತು ರಾಜಕೀಯ
‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಸಾಕಷ್ಟು ಟಾಸ್ಕ್ಗಳನ್ನು ನೀಡಲಾಗುತ್ತಿದೆ. ಈ ಬಾರಿ ರಾಜಕೀಯ ಮಾಡೋಕೆ ಓಪನ್ ಆಗಿ ಅವಕಾಶ ನೀಡಲಾಗಿದೆ. ಆ ಬಗ್ಗೆ ಇಲ್ಲಿದೆ ವಿವರ.
ಬಿಗ್ ಬಾಸ್’ ಮನೆಯಲ್ಲಿ ರಾಜಕೀಯ ಒಳಗೊಳಗೆ ನಡೆಯೋದು ಕಾಮನ್. ಯಾವುದೂ ಎದುರಿಗೆ ಬರೋದಿಲ್ಲ. ಆದರೆ, ಈಗ ಹಾಗಿಲ್ಲ. ಓಪನ್ ಆಗಿ ರಾಜಕೀಯ ಆರಂಭ ಆಗಿದೆ. ಇದಕ್ಕೆ ಕಾರಣ ಆಗಿರೋದು ‘ಬಿಗ್ ಬಾಸ್’ ಮನೆಯಲ್ಲಿ ನೀಡಿರೋ ಟಾಸ್ಕ್. ಈ ವಾರ ಬಿಗ್ ಬಾಸ್ ಮನೆ ಬಿಗ್ ಬಾಸ್ ಸೌಧವಾಗಿ ಮಾರ್ಪಾಡಾಗಿದೆ. ಎಲ್ಲರೂ ರಾಜಕಾರಣಿಗಳ ಅವತಾರ ತಾಳಿದ್ದಾರೆ. ಆ ಪ್ರೋಮೋವನ್ನು ಕಲರ್ಸ್ ಕನ್ನಡ ಪೇಜ್ನಲ್ಲಿ ಹಾಕಿದ್ದಾರೆ.
BIG BOSS
Bigg Boss ಸ್ಪರ್ಧಿಗೆ ಹೃದಯಾಘಾ*ತ- ಆಸ್ಪತ್ರೆಗೆ ದಾಖಲು
ಕನ್ನಡದ ‘ಬಿಗ್ ಬಾಸ್ ಸೀಸನ್ 11’ರ ಕಾರ್ಯಕ್ರಮದಂತೆ ತೆಲುಗಿನ ಬಿಗ್ ಬಾಸ್ ಸೀಸನ್ 8ಕ್ಕೂ ಅದ್ಧೂರಿ ಚಾಲನೆ ಸಿಕ್ಕಿದೆ. ನಾಗಾರ್ಜುನ ನಿರೂಪಣೆಯ ತೆಲುಗಿನ ಬಿಗ್ ಬಾಸ್ ಕುರಿತು ಬ್ರೇಕಿಂಗ್ ನ್ಯೂಸ್ವೊಂದು ಹೊರಬಿದ್ದಿದೆ. ಬಿಗ್ ಬಾಸ್ನಲ್ಲಿರುವಾಗಲೇ ಖ್ಯಾತ ಯೂಟ್ಯೂಬರ್ ಗಂಗವ್ವಗೆ ಹೃದಯಾಘಾ*ತವಾಗಿದೆ ಎಂದು ವರದಿಯಾಗಿದೆ.
60 ವರ್ಷ ದಾಟಿದರೂ ಯಾವ ಸ್ಪರ್ಧಿಗಳಿಗೂ ಕಮ್ಮಿಯಿಲ್ಲ ಎಂಬಂತೆ ಟಫ್ ಫೈಟ್ ಕೊಡುತ್ತಿದ್ದ ವೈಲ್ಡ್ ಕಾರ್ಡ್ ಎಂಟ್ರಿ ಗಂಗಮ್ಮಗೆ ಸೋಮವಾರ ರಾತ್ರಿ (ಅ.21) ಹೃದಯಾಘಾತವಾಗಿದೆ ಎಂಬ ಸುದ್ದಿ ಹಬ್ಬಿದೆ. ಶೋನಲ್ಲಿರುವಾಗಲೇ ಈ ಘಟನೆ ನಡೆದಿದ್ದು, ಕೂಡಲೇ ಅವರಿಗೆ ವೈದ್ಯಕೀಯ ನೆರವು ಒದಗಿಸಲಾಗಿದೆ. ಸದ್ಯ ಅವರು ಪ್ರಾಣಪಾಯದಿಂದ ಪಾರಾಗಿದ್ದು, ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ವರದಿ ಆಗಿದೆ.
ಅಂದಹಾಗೆ, ‘ಮೈ ವಿಲೇಜ್ ಶೋ’ ಮೂಲಕ ಯೂಟ್ಯೂಬ್ನಲ್ಲಿ ಹಾಸ್ಯ ಭರಿತ ವಿಡಿಯೋಗಳಿಂದ ಖ್ಯಾತಿ ಗಳಿಸಿದ್ದ ಗಂಗವ್ವ ಈ ಹಿಂದೆ ‘ಬಿಗ್ ಬಾಸ್ ಸೀಸನ್ 4’ರಲ್ಲಿ ಕೂಡ ಸ್ಪರ್ಧಿಯಾಗಿದ್ದರು. ಅನಾರೋಗ್ಯ ಸಮಸ್ಯೆಯಿಂದ ಅರ್ಧಕ್ಕೆ ಶೋ ತೊರೆದಿದ್ದರು. ಇದೀಗ ಮತ್ತೆ ತೆಲುಗಿನ ಸೀಸನ್ 8ರಲ್ಲಿ ವೈಲ್ಡ್ ಕಾರ್ಡ್ ಸ್ಪರ್ಧಿಯಾಗಿ ರಂಜಿಸುತ್ತಿದ್ದಾರೆ.
BIG BOSS
‘ಮೆಟ್ಟು ತಗೊಂಡು ಹೊಡಿತೀನಿ’: ಮತ್ತೆ ನಾಲಿಗೆ ಹರಿಬಿಟ್ಟ ಚೈತ್ರಾ ಕುಂದಾಪುರ
ಜಾಸ್ತಿ ಮಾತನಾಡುತ್ತಾರೆ ಎಂಬ ಕಾರಣದಿಂದಲೇ ಚೈತ್ರಾ ಕುಂದಾಪುರ ಅವರು ಹೈಲೈಟ್ ಆಗುತ್ತಾರೆ. ಆದರೆ ಆ ಮಾತೇ ಅವರಿಗೆ ಮುಳುವಾಗುತ್ತಿದೆ. ಕಳೆದ ವಾರ ಅವರು ‘ಒಬ್ಬ ಅಪ್ಪನಿಗೆ ಹುಟ್ಟಿದ್ದರೆ..’ ಎಂದು ಜಗದೀಶ್ಗೆ ಹೇಳಿದ್ದರು. ಆ ಮಾತನ್ನು ಕಿಚ್ಚ ಸುದೀಪ್ ಅವರು ಕಟುವಾಗಿ ಖಂಡಿಸಿದ್ದರು. ಹಾಗಂತ ಚೈತ್ರಾ ಅವರು ತಮ್ಮ ಮಾತಿನ ವರಸೆಯನ್ನು ಬದಲಿಸಿಕೊಂಡಿದ್ದಾರಾ? ಖಂಡಿತಾ ಇಲ್ಲ. ಸೋಮವಾರದ (ಅಕ್ಟೋಬರ್ 21) ಸಂಚಿಕೆಯಲ್ಲಿ ಅವರು ಮತ್ತೆ ನಾಲಿಗೆ ಹರಿಬಿಟ್ಟಿದ್ದಾರೆ. ಚಪ್ಪಲಿಯಲ್ಲಿ ಹೊಡೆಯುವ ಬಗ್ಗೆ ಅವರು ಮಾತನಾಡಿದ್ದಾರೆ.
ಕಳೆದ ವಾರ ಜಗದೀಶ್ ಅವರಿಗೆ ಉಗ್ರಂ ಮಂಜು ಅವರು ಚಪ್ಪಲಿ ತೋರಿಸಿದ್ದರು. ಅದು ಸರಿಯಲ್ಲ ಎಂದು ಸುದೀಪ್ ಅವರು ಹೇಳಿದ್ದರು. ಇಂಥ ಹಲವು ಕಾರಣಗಳಿಂದಾಗಿ ಮನೆಯ ಸದಸ್ಯರಿಗೆ ಕಿಚ್ಚ ಕ್ಲಾಸ್ ತೆಗೆದುಕೊಂಡಿದ್ದರು. ಅಷ್ಟಾದರೂ ಕೂಡ ಚೈತ್ರಾ ಅವರು ಮಾತಿನ ವರಸೆ ಬದಲಾಯಿಸಿಕೊಂಡಿಲ್ಲ. ಸಂದರ್ಭ ಬಂದರೆ ತಾವು ಮೆಟ್ಟಿನಲ್ಲಿ ಹೊಡೆಯುವುದಾಗಿ ಚೈತ್ರಾ ಹೇಳಿದ್ದಾರೆ.
ಈ ಮೊದಲು ಹಂಸಾ ಅವರ ಬಗ್ಗೆ ಗೋಲ್ಡ್ ಸುರೇಶ್ ಏನೇನೋ ಕಮೆಂಟ್ ಮಾಡಿದ್ದರು. ಹಂಸಾ ಅವರದ್ದು ಲವ್ ಸ್ಟೋರಿ ನಡೆಯುತ್ತಿತ್ತು ಎಂದು ಅವರು ಹೇಳಿದ್ದರು. ಅದರಿಂದ ಹಂಸಾಗೆ ಬೇಸರ ಆಯಿತು. ಹಾಗಾಗಿ ಅವರು ಈ ವಿಚಾರವನ್ನು ಚೈತ್ರಾ ಕುಂದಾಪುರ ಜೊತೆ ಚರ್ಚೆ ಮಾಡುತ್ತಿದ್ದರು. ಆಗ ಚೈತ್ರಾ ಅವರ ಮಾತುಗಳು ಮೆಟ್ಟಿನ ತನಕ ಹೋಯಿತು.
‘ನನ್ನ ಕ್ಯಾರೆಕ್ಟರ್ ಬಗ್ಗೆ ಯಾರಾದರೂ ಮಾತಾಡಿದರೆ ಮೆಟ್ಟು ತಗೊಂಡು ಹೊಡಿತೀನಿ. ಅದರಿಂದ ನಾನು ಹೊರಗೆ ಹೋದ್ರೂ ಚಿಂತೆ ಇಲ್ಲ. ನಾನು ಮದುವೆ ಫಿಕ್ಸ್ ಮಾಡಿಕೊಂಡು ಬಂದಿದ್ದೇನೆ. ನನಗೆ ಯಾರ ಹತ್ತಿರವೂ ಸಂಬಂಧ ಕಟ್ಟಬೇಡಿ’ ಎಂದು ಚೈತ್ರಾ ಕುಂದಾಪುರ ಅವರ ಹೇಳಿದ್ದಾರೆ. ಇಂಥ ಮಾತುಗಳನ್ನು ಆಡಿದ್ದಕ್ಕೆ ಸುದೀಪ್ ಅವರು ವೀಕೆಂಡ್ ಸಂಚಿಕೆಯಲ್ಲಿ ಯಾವ ರೀತಿ ಪಂಚಾಯ್ತಿ ಮಾಡುತ್ತಾರೆ ಎಂಬುದನ್ನು ಕಾದು ನೋಡಬೇಕು.
- FILM3 days ago
ಇರಲು ಮನೆ ಇರಲಿಲ್ಲ; ಮೆಜೆಸ್ಟಿಕ್ನಲ್ಲೇ ಸುತ್ತಾಡಿದ್ದ ಸಿಹಿ ಕುಟುಂಬ; ಕಷ್ಟಗಳ ನೆನೆದು ಪುಟಾಣಿ ಕಣ್ಣೀರು
- BIG BOSS6 days ago
ನನ್ನ ಹೀರೋ ಸುದೀಪ್, ನನ್ನ ಕ್ಷಮೆಯನ್ನು ದಯವಿಟ್ಟು ಸ್ವೀಕರಿಸಿ: ಬಿಗ್ ಬಾಸ್ ನಿಂದ ಹೊರಬಂದ ಜಗದೀಶ್ ಫಸ್ಟ್ ರಿಯಾಕ್ಷನ್!
- LATEST NEWS3 days ago
ನಿಜವಾದ ಸಾಧನೆ: ಎಂ.ಬಿ.ಬಿ.ಎಸ್ ಸೀಟ್ ಪಡೆದು ಭವಿಷ್ಯದ ವೈದ್ಯರಾಗಲು ಹೊರಟ 4 ಸಹೋದರಿಯರು
- BIG BOSS7 days ago
ಕೊನೆಗೂ ಸುದೀಪ್ ಹೇಳಿದ ಬದಲಾವಣೆಯನ್ನು ಜಾರಿಗೆ ತಂದ ಬಿಗ್ ಬಾಸ್; ಏನದು ?
Pingback: ಸಲ್ಮಾನ್ ಖಾನ್ ಗೆ ಜೀ*ವ ಬೆ*ದರಿಕೆ; ತರಕಾರಿ ಮಾರುವ ಯುವಕನ ಬಂಧನ - NAMMAKUDLA NEWS - ನಮ್ಮಕುಡ್ಲ ನ್ಯೂಸ್