Connect with us

    BIG BOSS

    ಮಹಿಳೆಯರ ಒಳ ಉಡುಪಿನ ಬಗ್ಗೆ ಲಾಯರ್ ಜಗದೀಶ್ ಮಾತು.. ಏನಿದು ವಿವಾದ?

    Published

    on

    ಲಾಯರ್ ಜಗದೀಶ್ ಅವರು ಬಿಗ್ ಬಾಸ್ ಮನೆಯಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ. ಸದ್ಯ ಮಹಿಳೆಯರ ಒಳಉಡುಪಿನ ಬಗ್ಗೆ ಮಾತನಾಡಿ ವಿವಾದ ಸೃಷ್ಟಿ ಮಾಡಿದ್ದಾರೆ. ಈ ವಿಚಾರದ ಬಗ್ಗೆ ಸಖತ್ ಚರ್ಚೆ ಆಗುತ್ತಿದೆ.

    ಬಿಗ್ ಬಾಸ್ ಮನೆಯಲ್ಲಿ ಕ್ಯಾಪ್ಟನ್ಸಿ ಟಾಸ್ಕೆ ಅವಕಾಶ ನೀಡಲಾಗಿತ್ತು. ಇದರಲ್ಲಿ ಸ್ವರ್ಗ ನಿವಾಸಿಗಳು ಮಾತ್ರ ಭಾಗಿ ಆಗಲು ಅವಕಾಶ ಇತ್ತು. 10 ಮಂದಿಯಲ್ಲಿ ಆರು ಜನರು ಮಾತ್ರ ಕ್ಯಾಪ್ಟನ್ಸಿ ಟಾಸ್ಕಲ್ಲಿ ಇರಬಹುದು ಎಂದು ಬಿಗ್ ಬಾಸ್ ಆದೇಶ ಕೊಟ್ಟರು. ಇಷ್ಟೇ ಅಲ್ಲ, ಆರು ಮಂದಿಯನ್ನು ಸ್ವರ್ಗ ನಿವಾಸಿಗಳ ಒಮ್ಮತದ ನಿರ್ಧಾರದಿಂದ ಆಯ್ಕೆ ಮಾಡಬೇಕು ಎಂದು ಬಿಗ್ ಬಾಸ್ ಆದೇಶ ನೀಡಿದರು.

    ವೋಟಿಂಗ್ ಆಧಾರದ ಮೇಲೆ ಸ್ಪರ್ಧಿಗಳನ್ನು ಆಯ್ಕೆ ಮಾಡೋಣ ಎನ್ನುವ ನಿರ್ಧಾರಕ್ಕೆ ಎಲ್ಲರೂ ಬಂದರು. ಇದು ಜಗದೀಶ್ ಅವರ ಕೋಪಕ್ಕೆ ಕಾರಣ ಆಯಿತು. ಅವರು ನೇರವಾಗಿ ಸ್ಪರ್ಧಿಗಳ ವಿರುದ್ಧ ಹರಿಹಾಯ್ದರು. ಅದರಲ್ಲೂ ಈ ಐಡಿಯಾ ನೀಡಿದ ಉಗ್ರಂ ಮಂಜು ವಿರುದ್ಧ ಸಿಡಿದೆದ್ದರು. ಮಾತು ಮಿತಿ ಮೀರುತ್ತಿತ್ತು. ‘ನೀನು ಸಿನಿಮಾದಲ್ಲಿ ಮಾತ್ರ ಉಗ್ರಂ ನಿಜ ಜೀವನದಲ್ಲಿ ನಾನು ನಿನಗೆ ಉಗ್ರಂ ತೋರಿಸುತ್ತೇನೆ’ ಎಂದು ಜಗದೀಶ್ ಹೇಳಲು ಆರಂಭಿಸಿದರು.

    ಇದಕ್ಕೆ ಮಂಜು ಹೆಚ್ಚಿನ ಉತ್ತರ ಕೊಡೋಕೆ ಹೋಗಿಲ್ಲ.’ಬೋ..’ `ಬೋ..’ ಎಂದಷ್ಟೇ ಹೇಳಿದರು.’ಬೋ ಪ್ಯಾಂಟೀಸ್ ಎಲ್ಲ ನೋಡಿದೀನಿ.ನನ್ನ ಹೆಂಡತಿ ಹಾಕೋದು ಇದನ್ನೇ’ ಎಂದು ಜಗದೀಶ್ ಹೇಳಿದ್ದಾರೆ. ಇದು ಮನೆಯವರ ಅಸಮಾಧಾನಕ್ಕೆ ಕಾರಣ ಆಗಿದೆ. ಈ ವೇಳೆ ನಿಜವಗಾಲೂ ಇನ್ಸ್‌ಕ್ಯೂರ್ ಫೀಲ್ ಆಗ್ತಿದೆ ಎಂದು ಭವ್ಯಾ ಗೌಡ ಹೇಳಿದ್ದಾರೆ.

    BIG BOSS

    BBK11: ಧನರಾಜ್​ ಆಚಾರ್ಯ ಡೈಲಾಗ್​ಗೆ ಬಿಗ್​ಬಾಸ್​ ಮನೆಮಂದಿ ಫುಲ್​ ಖುಷ್

    Published

    on

    ಕನ್ನಡದ ದೊಡ್ಡ ರಿಯಾಲಿಟಿ ಶೋ ಬಿಗ್​ಬಾಸ್​ ಸೀಸನ್ 11 ಗ್ರ್ಯಾಂಡ್​ ಆಗಿ ಓಪನಿಂಗ್ ಪಡೆದುಕೊಂಡು 5ನೇ ದಿನಕ್ಕೆ ಕಾಲಿಟ್ಟಿದೆ. ಆದರೆ ಬಿಗ್​ಬಾಸ್​ ಮನೆಯಲ್ಲಿ ಸ್ಪರ್ಧಿಗಳು ಹೊಂದಿಕೊಳ್ಳಲು ಕಷ್ಟ ಪಡುತ್ತಿದ್ದಾರೆ.

    ಬಿಗ್​ಬಾಸ್​ ಮನೆಗೆ ಬಂದ ಮೊದಲ ದಿನವೇ ಜಗಳ ಮಾಡಿಕೊಂಡಿದ್ದಾರೆ. ಕಳೆದ ಸೀಸನ್​ನಲ್ಲಿ ನಡೆದ ಗಲಾಟೆ ರೀತಿಯಲ್ಲೇ ಬಿಗ್​ಬಾಸ್​ ಸ್ಪರ್ಧಿಗಳು ಆಡುತ್ತಿದ್ದಾರೆ. ಸಣ್ಣ ಪುಟ್ಟ ವಿಚಾರಕ್ಕೆ ಜಗಳ ವಾದ ವಿವಾದ ಮಾಡಿಕೊಳ್ಳುತ್ತಿದ್ದಾರೆ.

    ಆದರೆ ಇದರ ಮಧ್ಯೆ ಗಿಚ್ಚಿ ಗಿಲಿಗಿಲಿ ಖ್ಯಾತಿಯ ಧನರಾಜ್​ ಆಚಾರ್ಯ ಗೋಲ್ಡನ್ ಸ್ಟಾರ್ ಗಣೇಶ್ ಅವರ ಡೈಲಾಂಗ್​ ಅನ್ನು ಹೇಳಿ ಎಲ್ಲಾ ಸ್ಪರ್ಧಿಗಳ ಮನಸ್ಸನ್ನು ಗೆದ್ದುಕೊಂಡಿದ್ದಾರೆ. ಹೌದು, ಬಿಗ್​ಬಾಸ್​ ಮನೆಗೆ ಎಂಟ್ರಿ ಕೊಟ್ಟ ಬಳಿಕ ಧನರಾಜ್​ ಆಚಾರ್ಯ ಕೊಂಚ ಡಲ್​ ಆಗಿದ್ದರು. ಬಳಿಕ ಬಿಗ್​ಬಾಸ್​ ಧೈರ್ಯ ತುಂಬಿದ ಬಳಿಕ ಧನರಾಜ್​ ಅವರು ಮತ್ತೆ ಟ್ರಾಕ್​​ಗೆ ಬಂದಿದ್ದಾರೆ.

    ಈ ಬಾರಿಯ ಬಿಗ್​ಬಾಸ್​ ಮನೆಯಲ್ಲಿ ನಗುವೆ ಇಲ್ಲದಂತೆ ಆಗಿಬಿಟ್ಟಿದೆ. ಏಕೆಂದರೆ ಒಂದೇ ವಾರಕ್ಕೆ ಬಿಗ್​ಬಾಸ್​ ಮನೆಯಲ್ಲಿ ಗಲಾಟೆ, ಮನಸ್ಥಾಪ ಹೀಗೆ ಸಾಕಷ್ಟು ವಿಚಾರಗಳಿಂದ ಸ್ಪರ್ಧಿಗಳು ಬೇಸರ ಆಗಿದ್ದರು. ಇದೀಗ ಧನರಾಜ್​ ಅವರ ಕಾಮಿಡಿಗೆ ಸ್ಪರ್ಧಿಗಳು ಬಿದ್ದು ಬಿದ್ದು ನಕ್ಕಿದ್ದಾರೆ. ಮುಂಗಾರು ಮಳೆ ಸಿನಿಮಾ ಗೋಲ್ಡನ್ ಸ್ಟಾರ್ ಗಣೇಶ್ ಅವರ ಫೇಮಸ್​ ಡೈಲಾಗ್​ ಅನ್ನು ಬಿಗ್​ಬಾಸ್​ ಮನೆಯಲ್ಲಿ ರೀಕ್ರಿಯೇಟ್ ಮಾಡಿದ್ದಾರೆ.

    Continue Reading

    BIG BOSS

    BBK11: ಬಿಗ್​ಬಾಸ್​ ಮನೆಯಲ್ಲಿರೋ ಮಹಿಳಾ ಸ್ಪರ್ಧಿಗಳ ಖಾಸಗಿತನಕ್ಕೆ ಧಕ್ಕೆ; ಶೋ ವಿರುದ್ಧ ದೂರು ದಾಖಲು

    Published

    on

    ಕನ್ನಡದ ಬಿಗ್​ ರಿಯಾಲಿಟಿ ಶೋ ಬಿಗ್​​ಬಾಸ್​ ಸೀಸನ್​ 11 ಭಾನುವಾರ ಗ್ರ್ಯಾಂಡ್​ ಆಗಿ ಓಪನಿಂಗ್​​ ಕಂಡಿದೆ. ಹೊಸ ಅಧ್ಯಾಯದೊಂದಿಗೆ ಶುರುವಾದ ಬಿಗ್​ಬಾಸ್​​ಗೆ ಕಂಟಕವೊಂದು ಎದುರಾಗಿದೆ.

    ಹೌದು, ಮೊನ್ನೆಯಷ್ಟೇ ಬಹಳ ಅದ್ಧೂರಿಯಾಗಿ ಬಿಗ್​​ಬಾಸ್​ ಸೀಸನ್ 11 ಓಪನಿಂಗ್​ ಪಡೆದುಕೊಂಡಿತ್ತು. ಒಟ್ಟು 17 ಸ್ಪರ್ಧಿಗಳು ಬಿಗ್​ಬಾಸ್​ ಮನೆಗೆ ಗ್ರ್ಯಾಂಡ್ ಆಗಿ ಎಂಟ್ರಿ ಕೊಟ್ಟಿದ್ದಾರೆ. ಅದರಲ್ಲೂ ಹೊಸ ಅಧ್ಯಾಯದೊಂದಿಗೆ ಶುರುವಾದ ಈ ಶೋನಲ್ಲಿ ಸ್ವರ್ಗ ಹಾಗೂ ನರಕ ಎಂಬ ಎರಡು ಕಾನ್ಸೆಪ್ಟ್ ಇಟ್ಟುಕೊಂಡಿದೆ. ಆದರೆ ಶುರುವಾಗಿ ಒಂದೇ ವಾರಕ್ಕೆ ಬಿಗ್​​ಬಾಸ್ ಶೋ‌ ವಿರುದ್ಧ ವಕೀಲೆಯೊಬ್ಬರು ದೂರು ದಾಖಲಿಸಿದ್ದಾರೆ. ರಾಜ್ಯ ಮಹಿಳಾ ಆಯೋಗಕ್ಕೆ ವಕೀಲೆ ದೂರು ಕೊಟ್ಟಿದ್ದಾರೆ.

    ದೂರಿನಲ್ಲಿ ಏನಿದೆ?

    ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರೋ ಹಾಗೂ ನಟ ಸುದೀಪ್ ಅವರು ನಿರೂಪಣೆ ಮಾಡುವ ಬಿಗ್​ಬಾಸ್ ಸೀಸನ್​ 11 ಕಾರ್ಯಕ್ರಮದಲ್ಲಿ ಮಹಿಳೆಯರು ಮತ್ತು ಪುರುಷ ಸ್ಪರ್ಧಿಗಳು ಭಾಗವಹಿಸುತ್ತಿದ್ದಾರೆ. ಬಿಗ್​ಬಾಸ್ 11ರ ಕಾರ್ಯಕ್ರಮದಲ್ಲಿ ಸ್ವರ್ಗ ಮತ್ತು ನರಕ ಎಂಬ ಎರಡು ವಿಚಾರದ ಮೇಲೆ ಸ್ಪರ್ಧಿಗಳನ್ನು ಪ್ರತ್ಯೇಕವಾಗಿ ಇರಿಸಲಾಗಿದೆ. ಭಾರತದ ನಾಗರಿಕರನ್ನು ಖಾಸಗಿ ವ್ಯಕ್ತಿಗಳು ಬಂಧನದಲ್ಲಿರಿಸುವ ಹಕ್ಕನ್ನು ಹೊಂದಿರುವುದಿಲ್ಲ. ಪ್ರಸ್ತುತ ಪ್ರಸಾರವಾಗುತ್ತಿರುವ ಈ ಕಾರ್ಯಕ್ರಮದಲ್ಲಿ ಪುರುಷ ಮತ್ತು ಮಹಿಳೆಯರನ್ನು ಒಂದು ಜೈಲಿನ ರೂಪದಲ್ಲಿರುವ ಬಂದಿಖಾನೆಯಂತಹ ಕೊಠಡಿಯಲ್ಲಿ ನೂರಾರು ಕ್ಯಾಮೆರಾಗಳಲ್ಲಿ ರೆಕಾರ್ಡ್ ಆಗುವಂತೆ ಅಕ್ರಮ ಬಂಧನದಲ್ಲಿ ಇರಿಸಲಾಗಿದೆ.

    ಆ ಸ್ಪರ್ಧಿಗಳಿಗೆ ಕೇವಲ ಗಂಜಿಯನ್ನು ಆಹಾರವಾಗಿ ನೀಡಲಾಗುತ್ತಿರುವುದು ಸಂವಿಧಾನ ಪ್ರಕಾರ ನಾಗರಿಕರಿಗೆ ಪೌಷ್ಟಿಕ ಆಹಾರವನ್ನು ಕೊಡದಿರುವುದು ಅಪರಾಧವಾಗುತ್ತದೆ. ಅದರಲ್ಲೂ ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಮಲಗುವ ವ್ಯವಸ್ಥೆ ನೀಡದೆ ಅವರನ್ನು ದೈಹಿಕ ಬಾದ ತೀರಿಸಿಕೊಳ್ಳಲು ಮತ್ತೊಬ್ಬರ ಅನುಮತಿ ಮೇರೆಗೆ ಶೌಚಾಲಯ ಉಪಯೋಗಿಸಲು ಬಲವಂತಕ್ಕೆ ಒಳಪಡಿಸುವುದು ಮಹಿಳೆಯರ ಖಾಸಗಿತನಕ್ಕೆ ಧಕ್ಕೆಯಾಗುತ್ತದೆ. ಬಿಗ್​ಬಾಸ್ 11ರ ಕಾರ್ಯಕ್ರಮದಲ್ಲಿ ಸ್ಪರ್ಧಿಗಳೊಂದಿಗೆ ಕಾನೂನು ಬದ್ಧವಾಗಿ ಒಪ್ಪಂದ ಮಾಡಿಕೊಂಡಿದ್ದು ಇಂತಹ ನಿರ್ಬಂಧಗಳನ್ನು ಹೇರುವುದು ಸಂವಿಧಾನ ಬಾಹಿರವಾಗಿದೆ.

    Continue Reading

    BIG BOSS

    ಕನ್ನಡ ಬಿಗ್‌ಬಾಸ್‌ನಿಂದ ಲಾಯರ್ ಜಗದೀಶ್ ಎಲಿಮಿನೇಷನ್..!

    Published

    on

    ಬಿಗ್ ಬಾಸ್ ಕನ್ನಡ ಸೀಸನ್ 11 ಕ್ಕೆ 17 ಸ್ಪರ್ಧಿಗಳು ಬಂದಿದ್ದಾರೆ. ಆ ಪೈಕಿ ಲಾಯರ್ ಜಗದೀಶ್ ಅವರು ಮಿತಿಮೀರಿ ವರ್ತಿಸುತ್ತಿದ್ದಾರೆ. ಇದನ್ನು ಸುದೀಪ್ ಅವರು ಖಂಡಿಸಿ, ಹಿಂದಿ ಬಿಗ್ ಬಾಸ್ ರೀತಿಯೇ ಇಲ್ಲಿಯೂ ಮಾಡಲಿ ಎಂದು ಕೋರಿಕೊಳ್ಳಲಾಗುತ್ತಿದೆ.

    ಹಿಂದಿ ಬಿಗ್ ಬಾಸ್ ನ 10ನೇ ಸೀಸನ್ ನಲ್ಲಿ ಪ್ರಿಯಾಂಕಾ ಜಗ್ಗಾ ಎಂಬುವವರು ದರ್ಪ ತೋರಿದ್ದರು. ‘ಬಿಗ್ ಬಾಸ್ ಶೋ ನನ್ನ ಲೆವೆಲ್ಲ ಅಲ್ಲವೇ ಅಲ್ಲ’ ಎಂದಿದ್ದರು.ವೀಕೆಂಡ್ ನಲ್ಲಿ ಸಲ್ಮಾನ್ ಖಾನ್ ಅವರು ನೇರವಾಗಿ ಹೊರಹೋಗುವಂತೆ ಹೇಳಿದ್ದರು. ಜೊತೆಗೆ ಕಲರ್ಸ್ ವಾಹಿನಿಯ ಜೊತೆ ಅವರು ಕೆಲಸ ಮಾಡಿದರೆ ನಾನು ಕಲರ್ಸ್ ಜೊತೆಗಿನ ಸಂಬಂಧ ಕಡಿದುಕೊಳ್ಳುತ್ತೇನೆ ಎಂದು ಹೇಳಿದ್ದರು ಸಲು. ತಕ್ಷಣವೇ ಪ್ರಿಯಾಂಕಾನ ಹೊರಹಾಕಲಾಯಿತು.

    ಕನ್ನಡದಲ್ಲೂ ಬಿಗ್ ಬಾಸ್ ಗೆ ಅವಮಾನ ಮಾಡುವ ರೀತಿಯ ಘಟನೆ ನಡೆದಿದೆ. ಜಗದೀಶ್ ಅವರು ‘ಬಿಗ್ ಬಾಸ್ ಕಿತ್ತೋಗಿರೋ ಪ್ರೋಗ್ರಾಂ’, ‘ಬಿಗ್ ಬಾಸ್ನೇ ಖರೀದಿ ಮಾಡುತ್ತೇನೆ’, ‘ನನ್ನ ಎದುರಾಕ್ಕೊಂಡು ಬಿಗ್ ಬಾಸ್ ನಡೆಸ್ತೀರಾ’ ಎಂದೆಲ್ಲ ಪ್ರಶ್ನೆ ಮಾಡಿದ್ದರು. ಮನೆಯಲ್ಲಿದ್ದುಕೊಂಡೇ ಸ್ಪರ್ಧಿ ಹೇಳುವ ಮಾತು ಇದಲ್ಲ. ಹೀಗಾಗಿ, ಜಗದೀಶ್ ಅವರನ್ನು ಸುದೀಪ್ ನೇರವಾಗಿ ಹೊರಕ್ಕೆ ಹಾಕಲಿ ಎಂದು ಅನೇಕರು ಬಯಸಿದ್ದಾರೆ.

    Continue Reading

    LATEST NEWS

    Trending