Connect with us

    DAKSHINA KANNADA

    ಸಂಕಷ್ಟಗಳನ್ನು ಅವಕಾಶಗಳನ್ನಾಗಿ ಪರಿವರ್ತಿಸಿ ಬೆಳೆಯೋಣ : ಮಹಾಬಲೇಶ್ವರ ಎಂ. ಎಸ್‌

    Published

    on

    ಸಂಕಷ್ಟಗಳನ್ನು ಅವಕಾಶಗಳನ್ನಾಗಿ ಪರಿವರ್ತಿಸಿ ಬೆಳೆಯೋಣ : ಮಹಾಬಲೇಶ್ವರ ಎಂ. ಎಸ್‌

    ನಮ್ಮ ಕುಡ್ಲ ದಸರಾ ಸಂಭ್ರಮ : ದಶ ದಿನಗಳ ಸಂಭ್ರಮಕ್ಕೆ ವೈಭವದ ತೆರೆ..!

    ಮಂಗಳೂರು : ಸಂಕಷ್ಟಗಳು ಎಲ್ಲರಿಗೂ ಎಲ್ಲಾ ಸಂದರ್ಭಗಳಲ್ಲಿ ಬರುತ್ತದೆ. ಆದರೆ ಸಂಕಷ್ಟಗಳನ್ನು ಅವಕಾಶಗಳನ್ನಾಗಿ ನಾವು ಹೇಗೆ ಪರಿವರ್ತನೆ ಮಾಡುತ್ತೇವೆ ಎನ್ನುವುದನ್ನು ಅವಲಂಬಿಸಿ ನಾವು ಬೆಳೆಯುತ್ತೇವೆ ಎಂದು ಕರ್ಣಾಟಕ ಬ್ಯಾಂಕಿನ ಆಡಳಿತ ನಿರ್ದೇಶಕ ಹಾಗೂ ಸಿಇಒ ಮಹಾಬಲೇಶ್ವರ ಎಂ ಎಸ್‌ ನುಡಿದರು.

    ಅವರು ನಮ್ಮ ಕುಡ್ಲ ವಾಹಿನಿಯ ದಶದಿನಗಳ ಸಾಂಸ್ಕೃತಿಕ ಕಾರ್ಯಕ್ರಮ ದಸರಾ ವೈಭವ- 2020ಯ ಸಮಾರೋಪ ಸಮಾರಂಭದಲ್ಲಿ ದೀಪ ಬೆಳಗಿಸಿ ಮಾತನಾಡಿದರು.

    ಕೊರೊನಾದ ಬಗ್ಗೆ ನಮಗೆ ನೀಡಲಾಗಿರುವ ಆರೋಗ್ಯದ ಸೂತ್ರಗಳನ್ನು ನಾವು ಮುಂದಿನ ದಿನಗಳಲ್ಲೂ ಖಡ್ಡಾಯವಾಗಿ ಪಾಲಿಸೋಣ. ಈ ಮೂಲಕ ನಮ್ಮ ಜವಾಬ್ದಾರಿ, ಹೊಣೆಯನ್ನು ನಾವು ನಿಭಾಯಿಸಬೇಕಾಗಿದೆ. ಕೊರೊನಾದ ಸಂಕಷ್ಟದ ವೇಳೆ ಹಲವು ರಾಷ್ಟ್ರೀಯಮಟ್ಟದ ವಾಹಿನಿಗಳೇ ಕಾರ್ಯಕ್ರಮ ನೀಡಲಾಗದೇ ಸಂಕಷ್ಟಕ್ಕೆ ಸಿಲುಕಿರುವಾಗ ನಮ್ಮ ಕುಡ್ಲದ ಈ ಪ್ರಯತ್ನ ಶ್ಲಾಘನೀಯ. ಮಾಧ್ಯಮಗಳು ಸಾಮಾಜಿಕ ಹೊಣೆಗಾರಿಕೆಯನ್ನು ಅರಿತು ಜವಾಬ್ದಾರಿಯುತವಾಗಿ ಸುದ್ದಿಗಳನ್ನು ಪ್ರಸಾರ ಮಾಡಬೇಕು ಎಂದು ಸಲಹೆ ನೀಡಿದರು.

    ಮುಖ್ಯ ಅತಿಥಿಯಾಗಿದ್ದ ನಿಟ್ಟೆ ವಿಶ್ವವಿದ್ಯಾನಿಲಯದ ಕುಲಪತಿ ಡಾ. ಸತೀಶ್ ಕುಮಾರ್ ಭಂಡಾರಿ ಮಾತನಾಡಿ ಕೊರೊನಾದಿಂದಾಗಿ ಬ್ಯಾಂಕಿಂಗ್‌, ವೈದ್ಯಕೀಯ, ಶಿಕ್ಷಣ, ಸಾಂಸ್ಕೃತಿಕ ಕ್ಷೇತ್ರ ಸೇರಿದಂತೆ ಎಲ್ಲಾ ಕ್ಷೇತ್ರದಲ್ಲೂ  ತಲ್ಲಣ ಉಂಟಾಗಿದೆ.  ಆದರೆ ಇದರಿಂದ ಕೆಲವೊಂದು ಕ್ಷೇತ್ರದಲ್ಲಿ ಪ್ರಗತಿಯೂ ಉಂಟಾಗಿದೆ. ಮಾಹಿತಿ ತಂತ್ರಜ್ಞಾನ, ಆನ್ಲೈನ್‌ ಶಿಕ್ಷಣದ ಮೂಲಕ ಪ್ರಗತಿ ಸಾಧಿಸುವಂತಾಗಿದೆ. ಕಷ್ಟಕಾಲ ಬಂದಾಗ ಎದೆಗುಂದದೆ ಅದನ್ನು ನಿಭಾಯಿಸುವುದೇ ನಮ್ಮ ಜಾಣತನವಾಗಿದೆ ಎಂದರು.

    ನವಾರಾತ್ರಿಯ ಈ ಪರ್ವಕಾಲದಲ್ಲಿ ದುರ್ಗಾಮಾತೆಯ ಅನುಗ್ರಹದಿಂದ, ಮಾನವನ ಪ್ರಯತ್ನದಿಂದ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗತೊಡಗಿದೆ. ಹಾಗಾಗಿ ನಮಗೀಗ ಆಶಾಭಾವನೆ ಮೂಡಿದೆ. ಮುಂದಿನ ದಿನಗಳಲ್ಲಿ ನಮಗೆ ಒಳ್ಳೆಯ ದಿನಗಳು ಬರತೊಡಗಿವೆ. ಕೆಟ್ಟದ್ದನ್ನು ಒಳ್ಳೆತನ ಹೇಗೆ ನಿಭಾಯಿಸಿದೆ ಎನ್ನುವುದು ದಸರಾದ ಈ ಸಂದರ್ಭದಲ್ಲಿ ನಾವು ಕಾಣಬಹುದಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

    ನಮ್ಮ ಕುಡ್ಲ ವಾಹಿನಿ ನಿರ್ದೇಶಕ ಲೀಲಾಕ್ಷ ಕರ್ಕೇರ ಅತಿಥಿಗಳನ್ನು ಸ್ವಾಗತಿಸಿದರು. ದಸರಾ ಸಂಭ್ರಮ 2020ರ ಕಾರ್ಯಕ್ರಮದ ಸಮಗ್ರ ನೋಟವನ್ನು ಅವರು ನೀಡಿದರು. 120 ತಂಡಗಳ 1500ಕ್ಕೂ ಮಿಕ್ಕಿದ ಕಲಾವಿದರನ್ನು ಕರೆಸಿ ಕಾರ್ಯಕ್ರಮದ ಆಯೋಜನೆ ಸುಲಭದ ಮಾತಾಗಿರಲಿಲ್ಲ. ಕೊರೊನಾದ ಸಂಕಷ್ಟವನ್ನೂ ಮೆಟ್ಟಿ ಎಲ್ಲರನ್ನೂ ಸುಧಾರಿಸಿಕೊಂಡು ಎಲ್ಲಾ ರಂಗದ ಕಲಾವಿದರನ್ನು ಒಗ್ಗೂಡಿಸುವುದು ಸವಾಲಿನ ಕೆಲಸವಾಗಿತ್ತು. ಎಲ್ಲಾ ಸಿಬ್ಬಂದಿಗಳ ಸಹಕಾರದಿಂದ ಇದು ಸಾಧ್ಯವಾಯಿತು ಎಂದು ನುಡಿದರು.

    ಸಹನಾ ಮಳಲಿ ಪ್ರಾರ್ಥಿಸಿದರೆ, ನಿತಿನ್‌ ಸಾಲ್ಯಾನ್‌ ಕಾರ್ಯಕ್ರಮ ನಿರೂಪಿಸಿದರು.

    ನಮ್ಮ ಕುಡ್ಲ ದಸರಾ ಸಂಭ್ರಮ : ದಶ ದಿನಗಳ ಸಂಭ್ರಮಕ್ಕೆ ವೈಭವದ ತೆರೆ..!

    ಕರಾವಳಿ ಕರ್ನಾಟಕದ ಪ್ರಪ್ರಥಮ ತುಳು ವಾರ್ತಾವಾಹಿನಿ ಎಂಬ ಹೆಗ್ಗಳಿಕೆಯನ್ನು ಹೊಂದಿರುವ ನಮ್ಮಕುಡ್ಲ ವಾಹಿನಿ ಸುಮಾರು 20 ವರ್ಷಗಳಿಂದಲೂ ನೇರಪ್ರಸಾರ ಕಾರ್ಯಕ್ರಮದ ಮೂಲಕ ಜನಮನ್ನಣೆ ಗಳಿಸಿದೆ.

    ಬಳಿಕ 24*7 ವಾಹಿನಿಯು ಸೇರ್ಪಡೆಗೊಂಡು ಸಮಗ್ರ ಸುದ್ದಿಗಳನ್ನು ಬಿತ್ತರಿಸುವುದರ ಜೊತೆಗೆ ಮನೋರಂಜನಾ ಕಾರ್ಯಕ್ರಮಗಳನ್ನು ನೀಡುತ್ತಾ ಬಂದಿದ್ದು ವೀಕ್ಷಕರ ಮನೆಗೆದ್ದಿದೆ.ಕೊರೊನಾ ಕಾರಣಕ್ಕೆ 2020 ಅಕ್ಷರಶಃ ನೋವು- ಕಷ್ಟ ನಷ್ಟಗಳನ್ನು ಅನುಭವಿಸಿದ ವರ್ಷ ಅಂದ್ರೂ ತಪ್ಪಾಗ್ಲಿಕ್ಕಿಲ್ಲ.

    ಜನರ ಮನಸ್ಥಿತಿಯೂ ತೀರ ಹದಗೆಟ್ಟಿತ್ತು..ಹಬ್ಬ ಹರಿದಿನಗಳು ನೀರಸವಾಗಿತ್ತು..ಹೊರ ಜಗತ್ತಿಗೆ ಕಾಲಿಡದಂತೆ ಕೋವಿಡ್ ಆವರಿಸಿ ಬಿಟ್ಟಿತ್ತು.ಜೊತೆಗೆ ಅದೆಷ್ಟೋ ಕಲಾವಿದರ ಬದುಕು ಹೈರಾಣಾಗಿತ್ತು.

    ಈ ಸಂದರ್ಭದಲ್ಲಿ ಜನರನ್ನು ಒಂದಿಷ್ಟು ಸಂತೋಷ ಪಡಿಸಬೇಕು, ಹೊರಗಡೆ ಸಂಭ್ರಮವಿಲ್ಲದಿದ್ರೂ ಮನೆಯೊಳಗಡೆ ಕೂತು ಹಬ್ಬ ಹರಿದಿನಗಳನ್ನು ಆಚರಿಸಿ, ಮನೋರಂಜನೆಯನ್ನು ಕೂಡ ಅನುಭವಿಸಲೀ ಅನ್ನುವ ದೃಷ್ಟಿಯಿಂದ, ಜೊತೆಗೆ ಕಲಾವಿದರಿಗೂ ಒಂದೊಳ್ಳೆ ವೇದಿಕೆ ಒದಗಿಸಬೇಕು ಅನ್ನುವ ನಿಟ್ಟಿನಲ್ಲಿ ನಮ್ಮ ಕುಡ್ಲ ವಾಹಿನಿಯು ಗಣೇಶ ಚತುರ್ಥಿಯ ಸಂದರ್ಭದಲ್ಲಿ ಮೂರು ದಿನಗಳಲ್ಲೂ ಸಾಂಸ್ಕೃತಿಕ  ಹಾಗೂ ಸಭಾ ಕಾರ್ಯಕ್ರಮಗಳನ್ನು ಮಾಡುವುದರ ಜೊತೆಗೆ ವೀಕ್ಷಕರಿಗೆ ಹಾಗೂ ಕಲಾವಿದರಿಗೆ ಮನೋಲ್ಲಾಸವನ್ನು ನೀಡಿದೆ.

    ಇದರ ಯಶಸ್ಸೇ ನಮಗೆ ದಸರಾ ವೈಭವ ಕಾರ್ಯಕ್ರಮ ಮಾಡಲು ಸ್ಪೂರ್ತಿಯಾಯ್ತು..ದಶದಿನಗಳು ನಾರಾರು ಕಾರ್ಯಕ್ರಮಗಳು, ಸಾವಿರಾರು ಕಲಾವಿದರು, 50-60 ಸಭಾ ಅತಿಥಿಗಳನ್ನೊಳಗೊಂಡು ಕಾರ್ಯಕ್ರಮ ಯಶಸ್ವಿಯಾಯ್ತು.

    .ದಸರಾ ವೈಭವದ ಹತ್ತು ದಿನಗಳಲ್ಲೂ ಪ್ರತೀ ದಿನ ಬೆಳಗ್ಗೆ ನಾಡಿನ ಹೆಸರಾಂತ ನಾದಸ್ವರವಾದಕರಿಂದ ಸ್ಯಾಕ್ಷೋಫೋನ್ ಕಚೇರಿ ಹಾಗೂ ಪ್ರಸಿದ್ದ ಗಾಯಕರಾದ ಅಜಯ್ ವಾರಿಯರ್, ಜಗದೀಶ್ ಪುತ್ತೂರು, ರವೀಂದ್ರ ಪ್ರಭು, ವಿ.ಶೀಲಾ ದಿವಾಕರ್ , ದೇವದಾಸ್ ಕಾಪಿಕಾಡ್ , ಭೋಜರಾಜ ವಾಮಂಜೂರು ಹಾಗೂ ಉದಯೋನ್ಮುಖ ಗಾಯಕರಿಂದ ಭಕ್ತಿ ಹಾಡುಗಳ ಸುರಿಮಳೆ , ಮ್ಯೂಸಿಕ್ ಕಲಾವಿದರಿಂದ ಮನಮೋಹಕ ಆರ್ಕೆಸ್ಟ್ರಾ , ರಾಷ್ಟ್ರ-ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ದಿ ಪಡೆದಿರುವ ಭರತನಾಟ್ಯ ಹಾಗೂ ನೃತ್ಯ ಪಟುಗಳಿಂದ ಮನಮೋಹಕ  ಡಾನ್ಸ್, ತುಳುನಾಡಿನ ಕಾರಣಿಕವನ್ನು ಎತ್ತಿ ತೋರಿಸಿದ ತುಳು ಪೌರಾಣಿಕ ನಾಟಕ, ತೆಂಕು ಹಾಗೂ ಬಡಗು ಮೇಳದ ಪ್ರಸಿದ್ದ ಯಕ್ಷ ಲಾವಿದರ ಕೂಡುವಿಕೆಯಲ್ಲಿ ಪ್ರತಿ ದಿನವೂ ಯಕ್ಷಗಾನ, ತಾಳಮದ್ದಳೆ… ಹುಲಿವೇಷಧಾರಿಗಳ ಅಬ್ಬರ ,ಶ್ರೀ ದೇವಿಮಹಾತ್ಮೆ ಯ ಯಕ್ಷಕಾವ್ಯ ಕಥನ, ಮಾರ್ನೆಮಿಡ್ ಭೂತಾರಾಧನೆ,  ನಾರಿಯರಿಗಾಗಿ ನವರಂಗ್ ಸ್ಪರ್ಧೆಯೊಂದಿಗೆ ಪ್ರತಿ ದಿನವೂ ಸಭಾ ಕಾರ್ಯಕ್ರಮ ನಡೆದು ಕಾರ್ಯಕ್ರಮಕ್ಕೆ  ಇನ್ನಷ್ಟು ಮೆರುಗು ನೀಡಿತು…ಮೊದಲ ದಿನ ಒಡಿಯೂರು ಮಹಾಸಂಸ್ಥಾನದ ಶ್ರೀ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಗಳ ಆಶೀರ್ವಾದದೊಂದಿಗೆ, ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್, ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ,ಕರ್ನಾಟಕ ಬ್ಯಾಂಕ್ ನ ಮುಖ್ಯನಿರ್ವಹಣಾಧಿಕಾರಿ ವೈ.ವಿ.ಬಾಲಚಂದ್ರ, ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್ ಅಧ್ಯಕ್ಷ ವೆಂಕಟರಮಣ ಅಕ್ಕರಾಜು ಅತಿಥಿಗಳಾಗಿ ಭಾಗವಹಿಸಿ ಕಾರ್ಯಕ್ರಮ ಅಂದಗಾಣಿಸಿಕೊಟ್ಟು, ದಸರಾ ವೈಭವದ ಎರಡನೇ ದಿನ ಸರ್ವಧರ್ಮ ಸಭಾ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಸಮಾಜಕ್ಕೆ ಒಳ್ಳೆಯ ಸಂದೇಶ ನೀಡಿದರಲ್ಲದೆ, ಪಲಿಮಾರು ಮಠಾಧೀಶರಾದ ಶ್ರೀ ಶ್ರೀ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿ , ಮಂಗಳೂರು ಬಿಷಪ್ ಅ.ವಂ.ಡಾ.ಪೀಟರ್ ಪಾವ್ಲ್ ಸಲ್ಡಾನಾ, ಸಯ್ಯದ್ ಮದನಿ ದರ್ಗಾ ಉಳ್ಳಾಲದ ಅಧ್ಯಕ್ಷರಾದ ಹಾಜಿ ಅಬ್ದುಲ್ ರಶೀದ್ ಸಹಿತ ಪ್ರತೀ ದಿನವೂ ಗಣ್ಯಾತಿಗಣ್ಯರು ಸಭಾ ಕಾರ್ಯಕ್ರಮಕ್ಕಾಗಮಿಸಿ  ಶುಭಾಶಿರ್ವಚಿಸಿ, ಕಾರ್ಯಕ್ರಮದ ಕೊನೆಯದಾಗಿ ಇಂದು ಸಮಾರೋಪ ಸಮಾರಂಭ ನಡೆಯುತ್ತಿದೆ. ಇಂದಿನ ಅತಿಥಿಗಳು ಶ್ರೀಯುತ ಮಹಾಬಲೇಶ್ವರ ಎಂ ಎಸ್, ಸಿಇಒ ಮತ್ತು ಎಂ.ಡಿ.ಕರ್ಣಾಟಕ ಬ್ಯಾಂಕ್ , ಡಾ.ಎಂ.ಮೋಹನ್ ಆಳ್ವ, ಅಧ್ಯಕ್ಷರು, ಆಳ್ವಾಸ್ ಶಿಕ್ಷಣ ಸಮೂಹ ಸಂಸ್ಥೆಗಳು ಮೂಡಬಿದಿರೆ, ಡಾ.ಸತೀಶ್ ಭಂಡಾರಿ ಕುಲಪತಿ ನಿಟ್ಟೆ ವಿವಿ…. ಹತ್ತು ದಿನಗಳು ನಡೆದ ದಸರಾ ವೈಭವ ಕಾರ್ಯಕ್ರಮಗಳನ್ನು ಅಂದಗಾಣಿಸಿಕೊಟ್ಟ ಎಲ್ಲಾ ಅತಿಥಿ ಅಭ್ಯಾಗತರಿಗೆ, ಎಲ್ಲಾ ಕಲಾವಿದರಿಗೆ ಹಾಗೂ ನಮ್ಮ ಜಾಹೀರಾತುದಾರರಿಗೆ ಮತ್ತು ತಾಳ್ಮೆಯಿಂದ ಎಲ್ಲಾ ಕಾರ್ಯಕ್ರಮಗಳನ್ನು ವೀಕ್ಷಿಸಿ ಪ್ರೋತ್ಸಾಹಿಸಿದ ಸಮಸ್ತ ವೀಕ್ಷಕ ಬಾಂಧವರಿಗೂ ನಮ್ಮಕುಡ್ಲ ವಾಹಿನಿಯ ಪರವಾಗಿ ಅನಂತ ಅನಂತ ಧನ್ಯವಾದಗಳು…….

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    DAKSHINA KANNADA

    ವಿದೇಶಿ ಹಡಗಿನಲ್ಲಿ ಬೆಂಕಿ ಅವಘಡ; ಕರ್ನಾಟಕ ಕರಾವಳಿಯಲ್ಲಿ ಲಂಗರು ಹಾಕಿದ ಕಾರ್ಗೋ ಹಡಗು

    Published

    on

    ಮಂಗಳೂರು: ಗುಜರಾತ್‌ನಿಂದ ಕೊಲಂಬೋಕ್ಕೆ ವಿವಿಧ ಸರಕುಗಳನ್ನು ಸಾಗಾಟ ಮಾಡುತ್ತಿದ್ದ ವಿದೇಶಿ ಮೂಲದ ಸರಕು ಸಾಗಾಟ ಹಡಗಿನಲ್ಲಿ ಅಗ್ನಿ ಆಕಸ್ಮಿಕ ನಡೆದ ಘಟನೆ ಬೆಳಕಿಗೆ ಬಂದಿದೆ.

     

     

    ಜುಲೈ 19 ರಂದು ಕರ್ನಾಟಕ ಕರಾವಳಿಯ ಸಮುದ್ರದಲ್ಲಿ ಈ ದುರ್ಘಟನೆ ನಡೆದಿದ್ದು, ಕೋಸ್ಟ್‌ ಗಾರ್ಡ್‌ ತಂಡ ಹೆಲಿಕಾಪ್ಟರ್‌ ಹಾಗೂ ರಕ್ಷಣಾ ಹಡಗಿನ ಮೂಲಕ ಸತತ ನಲುವತ್ತು ಘಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದೆ. ಹಡಗಿನಲ್ಲಿ ಒಟ್ಟು 21 ಸಿಬ್ಬಂದಿ ಇದ್ದು ಒಬ್ಬ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

    ಹಡಗಿನ ಬೆಂಕಿ ನಂದಿಸಿ ಸಿಬ್ಬಂದಿಗಳ ರಕ್ಷಣೆ ಮಾಡಿದ ಬಳಿಕ ಹಡಗನ್ನು ಕರ್ನಾಟಕ ಕರಾವಳಿ ಭಾಗಕ್ಕೆ ತೆಗೆದುಕೊಂಡು ಬರಲಾಗಿದೆ. ಸದ್ಯ ಸುರತ್ಕಲ್ ಕಡಲ ಕಿನಾರೆಯಿಂದ ಸುಮಾರು 33 ನಾಟಿಕಲ್ ಮೈಲ್‌ ದೂರದಲ್ಲಿ ಹಡಗು ಲಂಗರು ಹಾಕಲಾಗಿದೆ. ಗುಜಾರಾತ್‌ನ ಮುಂದ್ರಾ ಬಂದರಿನಿಂದ ಹೊರಟಿದ್ದ ಈ ಹಡಗು ಪನಾಮ ದೇಶಕ್ಕೆ ಸೇರಿದ್ದಾಗಿ ಮಾಹಿತಿ ಲಭ್ಯವಾಗಿದೆ.

    ಬೆಂಕಿ ಅವಘಡದಿಂದ ಸಂಪೂರ್ಣ ಹಾನಿಯಾಗಿರುವ ಹಡಗು ಅಪಾಯಕಾರಿ ಪರಿಸ್ಥಿತಿಯಲ್ಲಿದ್ದು, ಕೋಸ್ಟ್‌ ಗಾರ್ಡ್‌ ಸಿಬ್ಬಂದಿ ಹಡಗಿನ ಮೇಲೆ ನಿಗಾ ಇರಿಸಿದ್ದಾರೆ. ಹಡಗು ಮುಳುಗಡೆಯಾಗುವ ಸಾದ್ಯತೆಯ ಜೊತೆಗೆ ಹಡಗಿನಲ್ಲಿ ಮತ್ತೆ ಬೆಂಕಿ ಕಾಣಿಸಿಕೊಳ್ಳುವ ಸಂಭವ ಕೂಡಾ ಇದೆ. ಹೀಗಾಗಿ ಹಡಗು ಮುಳುಗಡೆಯಾದಲ್ಲಿ ಸಮುದ್ರಕ್ಕೆ ತೈಲ ಸೋರಿಕೆಯ ಆತಂಕ ಕೂಡಾ ಎದುರಾಗಿದೆ. ಹೀಗಾಗಿ ಹಡಗಿನ ಮೇಲೆ ನಿಗಾ ವಹಿಸಿರುವ ಕೋಸ್ಟ್‌ ಗಾರ್ಡ್‌ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.

    Continue Reading

    DAKSHINA KANNADA

    ದಕ್ಷಿಣ ಕನ್ನಡ ಜಿಲ್ಲೆಯ ಮಹಾಪ್ರವಾಹಕ್ಕೆ 50 ವರ್ಷ; ಮರುಕಳಿಸದಿರಲಿ ‘ಆ ಶುಕ್ರವಾರ’ ಎನ್ನುತ್ತಿದ್ದಾರೆ ಕರಾವಳಿಗರು!

    Published

    on

    ಮಂಗಳೂರು: 1974 ಜುಲೈ 26ರ ಶುಕ್ರವಾರ ರಾತ್ರಿ ಇಡೀ ಸುರಿದ ಭಾರೀ ಮಳೆ ಮುಂಜಾನೆಯ ವೇಳೆಗೆ ನೆರೆ ರೌದ್ರಾವತಾರ ತಾಳಿತ್ತು.

    ಹಿಂದೆ ಎಂದೂ ಕಾಣದ ರೀತಿ ನೇತ್ರಾವತಿ ನದಿ ಉಕ್ಕಿ ಹರಿದಿತ್ತು. ನಸುಕಿನ ಜಾವ ನೇತ್ರಾವತಿ ನದಿ ಮನೆಯೊಳಗೆಯೇ ಪ್ರವೇಶಿಸಿತ್ತು.

    ಬಂಟ್ವಾಳ ಪೇಟೆ, ಪಕ್ಕದೂರುಗಳಿಗೆ ಸಂಪರ್ಕಿಸುವ ರಸ್ತೆಗಳೆಲ್ಲವೂ ಕ್ಷಣಮಾತ್ರದಲ್ಲೆ ಜಲಮಯ. ಎಲ್ಲಿಗೆ ಹೋಗೋದು? ಏನು ಮಾಡೋದು ಅನ್ನೋದನ್ನು ಯೋಚಿಸುವಷ್ಟರಲ್ಲೇ ಊರಿಗೆ ಊರೇ ಮುಳುಗಿತ್ತು. ಬಂಟ್ವಾಳ ಮತ್ತು ಉಪ್ಪಿನಂಗಡಿ ಪೇಟೆಯಲ್ಲಿ ವಾಹನಗಳ ಬದಲು ದೋಣಿಗಳು ಸಂಚರಿಸಿದ್ದವು. ಆ ಕಾಲದಲ್ಲಿಯೇ ಐವತ್ತು ಲಕ್ಷ ರೂಪಾಯಿ ನಷ್ಟ ಉಂಟಾಗಿತ್ತು.

    ಆ ಸಮಯದಲ್ಲಿ ಜಿಲ್ಲೆಯ ಬಹುತೇಕ ಪ್ರದೇಶಗಳು ನೆರೆ ನೀರಿನಿಂದ ಆವರಿಸಿದ್ದವು, ಆವತ್ತಿನ ಕಾಲದಲ್ಲಿ ಮಣ್ಣಿನಿಂದ ನಿರ್ಮಿಸಿದ್ದ ನೂರಾರು ಮನೆ ಅಂಗಡಿ ನೆರೆ ನೀರಿಗೆ ಕೊಚ್ಚಿಕೊಂಡು ಹೋಗಿದ್ದವು. ಈಗಲೂ ಕೂಡಾ ಆ ಭೀಕರ ನೆರೆಯು ನಮ್ಮ ಹಿರಿಯರ ಬಾಯಲ್ಲಿ (ಎಲ್ಪತ್ತ ನಾಲೆತ್ತ ಬೊಲ್ಲ) ಎಂದು ಪ್ರಖ್ಯಾತಿ ಹೊಂದಿದೆ.

    ಕಾಕತಾಳೀಯ ಎಂಬಂತೇ ಪ್ರವಾಹದ ಆ ದಿನ, ವಾರ ಎಲ್ಲವೂ ಸೇಮ್ ಆಗಿದ್ದು, ಮತ್ತೆ ಅದೇ ರೀತಿಯ ಪ್ರವಾಹ ಪರಿಸ್ಥಿತಿಯೂ ನೇತ್ರಾವತಿ ತಟದಲ್ಲಿದೆ. ಈಗಾಗಲೇ ನೇತ್ರಾವತಿ ಅಪಾಯ ಮಟ್ಟ ಮೀರಿದ್ದು, ಈ ಆತಂಕಕ್ಕೆ ಕಾರಣವೂ ಆಗಿದೆ.

    Continue Reading

    LATEST NEWS

    Trending