ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಬಿಜೆಪಿ ಮತ್ತೊಮ್ಮೆ ಗೆದ್ದು ಅಧಿಕಾರ ಉಳಿಸಿಕೊಂಡಿದ್ದು ರಾಜ್ಯದಲ್ಲಿ ಒಟ್ಟಾರೆಯಾಗಿ ಫಲಿತಾಂಶ ಬಿಜೆಪಿಗೆ ತೃಪ್ತಿ ತಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಟೀಲ್ ಈ ಬಾರಿ ಸ್ಥಳಿಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಗಮನಿಸಿದರೆ ಕಳೆದ ಬಾರಿಗಿಂತ ಹೆಚ್ಚಿನ ಸ್ಥಾನಗಳನ್ನು ಬಿಜೆಪಿ ಪಡೆದಿದ್ದು ಒಟ್ಟಾರೆ ರಾಜ್ಯದ ಫಲಿತಾಂಶದಲ್ಲಿ ಕಳೆದ ಬಾರಿಗಿಂತ ಉತ್ತಮ ಫಲಿತಾಂಶ ಸಿಕ್ಕಿದೆ. ಈ ಚುನಾವಣೆ ಸ್ಥಳೀಯವಾದ ಕಾರಣ ಅಭ್ಯರ್ಥಿಗಳು,
ವಿಷಯಗಳು ಸ್ಥಳೀಯವಾಗಿರುತ್ತೆ ಆದ್ದರಿಂದ ಇದು ಸ್ಥಳೀಯವಾಗಿ ಸಂಬಂಧಿಸಿದ ಚುನಾವಣೆಯಾಗಿದೆ. ಒಬ್ಬ ಪಕ್ಷೇತರ ನಿಂತರೂ ಓಟುಗಳು ವ್ಯತ್ಯಾಸವಾಗುತ್ತೆ
ಮತ್ತು ಫಲಿತಾಂಶ ವಿರುದ್ದ ಬರುತ್ತೆ ಆದರೂ ಆದರೂ ಉತ್ತಮವಾದ ಫಲಿತಾಂಶ ಬಿಜೆಪಿಗೆ ಸಿಕ್ಕಿದೆ ಎಂದರು. ಚಿಕ್ಕಮಗಳೂರು, ಉತ್ತರ ಕರ್ನಾಟಕ ಭಾಗದ ಕೆಲವೆಡೆ ಈ ಬಾರಿ ಗೆದ್ದಿದ್ದೇವೆ.
ಈ ಫಲಿತಾಂಶ ಖಂಡಿತವಾಗಿಯೂ ವಿಧಾನಸಭೆ ಚುನಾವಣೆಯ ದಿಕ್ಸೂಚಿ ಅಲ್ಲ, ಇದರಲ್ಲಿ ಲೋಕಲ್ ಸಮಸ್ಯೆ, ಲೋಕಲ್ ವಿಷಯ, ಲೋಕಲ್ ಅಭ್ಯರ್ಥಿಗಳಿರ್ತಾರೆ.
ಇದು ಅಲ್ಲಲ್ಲೇ ನಡೆಯುವ ಚುನಾವಣೆ, ಯಾವುದೇ ಚುನಾವಣೆ ದಿಕ್ಸೂಚಿ ಅಲ್ಲ ಆದರೂ ಬಿಜೆಪಿ ಒಳ್ಳೆಯ ಫಲಿತಾಂಶ ಕೊಟ್ಟಿದೆ ಅಂತ ಅನಿಸ್ತಿದೆ ಎಂದು ಹೇಳಿದರು.