Connect with us

    ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ

    Published

    on

    ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ

    ಬಂಟ್ವಾಳ : ಲಾಕ್ ಡೌನ್ ಹೆಸರಿನಲ್ಲಿ ಪೆರುವಾಯಿ ವ್ಯವಸಾಯ ಸಹಕಾರಿ ಸಂಘದ ಕಟ್ಟಡದಲ್ಲಿ ಗ್ರಾಮ ಪಂಚಾಯಿತಿ ಅನುಮತಿ ಪಡೆಯದೇ ದಿನಸಿ ಅಂಗಡಿ ನಡೆಸುತ್ತಿದ್ದ ಬಗ್ಗೆ ಸಾರ್ವಜನಿಕರ ದೂರಿನ ಮೇರೆಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ದಾಳಿ ನಡೆಸಿ ಅಂಗಡಿ ಮುಚ್ಚಿಸಿದ್ದಾರೆ.

    ಪೆರುವಾಯಿ ಗ್ರಾಮದ ವ್ಯವಸಾಯ ಸಹಕಾರಿ ಸಂಘದ ಕಟ್ಟಡದಲ್ಲಿ ಒಂದು ಕಡೆ ನ್ಯಾಯ ಬೆಲೆ ಅಂಗಡಿ ಇದೆ. ಅದರ ಪಕ್ಕದ ಇನ್ನೊಂದು ಕಟ್ಟಡದಲ್ಲಿ ಪೈಪ್ ಅಂಗಡಿ ಇದೆ.

    ಅದೇ ಅಂಗಡಿಯಲ್ಲಿ ಸಾರ್ವಜನಿಕರಿಗೆ ಬೇಕಾದ ದಿನಸಿ ಅಂಗಡಿ ನಡೆಸಲಾಗುತ್ತಿತ್ತು. ನೂರಾರು ಗ್ರಾಮಸ್ಥರು ಇಲ್ಲಿಗೆ ಬಂದು ಖರೀದಿಸುತ್ತಿರುವುದು ಬೆಳಕಿಗೆ ಬಂದಿದೆ.

    ಈ ದಿನಸಿ ಅಂಗಡಿಯವರು ಗ್ರಾಮ ಪಂಚಾಯಿತಿನಿಂದ ಯಾವುದೇ ಅನುಮತಿ ಪಡೆದಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ. ಈ ಬಗ್ಗೆ ಸಂಘದ ವ್ಯವಸ್ಥಾಪಕರಲ್ಲಿ ಕೇಳಿದಾಗ ಅನುಮತಿ ಇದೆ ಎಂದು ಹೇಳಿದ್ದು, ಆದರೆ ಯಾವುದೇ ದಾಖಲೆ ತೋರಿಸಿಲ್ಲ.

    ಅದರ ಬದಲು ಕೃಷಿ ಮಾರುಕಟ್ಟೆಯಿಂದ ಪಡೆದ ಚೆಲ್ಲಾರೆ ವ್ಯಾಪಾರಕ್ಕೆ ಪಡೆದ ಪತ್ರ ತೋರಿಸಿದ್ದಾರೆ. ಈ ಬಗ್ಗೆ ಪೆರುವಾಯಿ ಅಭಿವೃದ್ಧಿ ಅಧಿಕಾರಿ ಸ್ಥಳಕ್ಕೆ ಬಂದು ಗ್ರಾಮ ಪಂಚಾಯಿತಿನಿಂದ ಅನುಮತಿ ಪಡೆದು ವ್ಯಾಪಾರ ನಡೆಸಿ ಎಂದು ಹೇಳಿ, ಅಂಗಡಿ ಮುಚ್ಚುವಂತೆ ತಿಳಿಸಿದ್ದಾರೆ.

    ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿ ಮಾತನಾಡಿ ಗ್ರಾಮ ಪಂಚಾಯಿತಿನಿಂದ ಯಾವುದೇ ಅನುಮತಿ ಪಡೆದಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.

    Click to comment

    Leave a Reply

    Your email address will not be published. Required fields are marked *

    LATEST NEWS

    ಶಿರೂರು ಗುಡ್ಡ ಕುಸಿತ; ಕೊನೆಗೂ ನಾಪತ್ತೆಯಾಗಿದ್ದ ಟ್ರಕ್‌ ಪತ್ತೆ

    Published

    on

    ಕಾರವಾರ: ಶಿರೂರು ಭೂ ಕುಸಿತದ ಬಳಿಕ ಗಂಗಾವಳಿ ನದಿಯಾಳದಲ್ಲಿ ಬಿದ್ದ ಟ್ರಕ್‌ ಕೊನೆಗೂ ಪತ್ತೆಯಾಗಿದೆ.

    ಜುಲೈ 16 ರಂದು ಭೂ ಕುಸಿತ ಸಂಭವಿಸಿದ ಬಳಿಕ ಕೇರಳದ ಅರ್ಜುನ್‌ ಚಲಾಯಿಸುತ್ತಿದ್ದ ಟ್ರಕ್‌ ಗಂಗಾವಳಿ ನದಿಗೆ ಬಿದ್ದಿತ್ತು. ನದಿಯಲ್ಲಿ ನೀರಿನ ಪ್ರಮಾಣ ಜಾಸ್ತಿ ಇದ್ದ ಕಾರಣ ಟ್ರಕ್‌ ಪತ್ತೆ ಮಾಡಲು ಕಷ್ಟವಾಗಿತ್ತು. ಮುಳುಗು ತಜ್ಞ ಈಶ್ವರ ಮಲ್ಪೆ ಅವರು ಟ್ರಕ್‌ ಪತ್ತೆಗೆ ನಿರಂತರ ಪ್ರಯತ್ನ ನಡೆಸುತ್ತಿದ್ದರು.

    ಈಗ ಟ್ರಕ್‌ ಗುಡ್ಡ ಕುಸಿತಗೊಂಡ ಜಾಗದ ಬಳಿಯೇ ಸಿಕ್ಕಿ ಬಿದ್ದಿದೆ. ಟ್ರಕ್‌ ಮೇಲೆ ಸಾಕಷ್ಟು ಕಲ್ಲು ಮತ್ತು ಮಣ್ಣುಗಳಿವೆ. ಹೀಗಾಗಿ ಮಣ್ಣು ಮತ್ತು ಕಲ್ಲುಗಳನ್ನು ತೆಗೆದು ಟ್ರಕ್‌ ಮೇಲಕ್ಕೆ ಎತ್ತಲು ಸಿದ್ಧತೆ ನಡೆಯುತ್ತಿದೆ.

    ಜುಲೈ 16 ರಂದು ಭೂಕುಸಿತ ಸಂಭವಿಸಿದಾಗ ಅರ್ಜುನ್ ಮರ ತುಂಬಿಸಿಕೊಂಡು ಟ್ರಕ್‌ನಲ್ಲಿ ಕೋಝಿಕ್ಕೋಡ್‌ ಕಡೆಗೆ ಹೋಗುತ್ತಿದ್ದರು.

    Continue Reading

    FILM

    ಜಾನಿ ಮಾಸ್ಟರ್ ಪತ್ನಿಗೂ ಬಂತು ಕಂಟಕ..! ಅತ್ಯಾಚಾರ ಪ್ರಕರಣಕ್ಕೆ ಟ್ವಿಸ್ಟ್..!!

    Published

    on

    ಹೈದರಾಬಾದ್/ಮಂಗಳೂರು: ಜಾನಿ ಮಾಸ್ಟರ್ ಮೇಲಿರುವ ನೃತ್ಯ ನಿರ್ದೇಶಕಿಯ ಅತ್ಯಾಚಾರ ಆರೋಪಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಜಾನಿ ಮಾಸ್ಟರ್ ಪತ್ನಿ ಆಯಿಷಾ ಮೇಲೂ ಕ್ರಮಕೈಗೊಳ್ಳಲು ಪೊಲೀಸರು ಸಿದ್ಧತೆ ನಡೆಸುತ್ತಿದ್ದಾರೆ.

    ಈಗಾಗಲೇ ಜಾನಿ ಮಾಸ್ಟರ್‌ ನನ್ನು ಡ್ಯಾನ್ಸ್‌ ನಿರ್ದೇಶಕಿ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪದಡಿಯಲ್ಲಿ ಗೋವಾ ಪೊಲೀಸರು ಬಂಧಿಸಿ ಹೈದರಾಬಾದ್‌ನ ಚಂಚಲ್‌ ಗುಡಾ ಜೈಲಿಗೆ ಕಳುಹಿಸಿದ್ದಾರೆ. ನೃತ್ಯ ಸಂಯೋಜಕಿಯೊಬ್ಬಳು ನನ್ನ ಮೇಲೆ ಜಾನಿ ಮಾಸ್ಟರ್ ಅತ್ಯಾಚಾರವೆಸಗಿದ್ದಾರೆ ಹಾಗೂ ಅವರ ಪತ್ನಿ ಆಯಿಷಾ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ನರಸಿಂಗ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

    ಖ್ಯಾತ ಕೊರಿಯೋಗ್ರಾಫರ್ ಜಾನಿ ಮಾಸ್ಟರ್ ಅರೆಸ್ಟ್..!

    ಪ್ರಕರಣದಲ್ಲಿ ಆಯೇಷಾರನ್ನು ಆರೋಪಿಯನ್ನಾಗಿಸಲು ಪೊಲೀಸರು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಮತ್ತೊಂದೆಡೆ ಶನಿವಾರ(ಸೆ.21) ನರಸಿಂಗಿ ಪೊಲೀಸರು, ಜಾನಿ ಮಾಸ್ಟರ್ ನನ್ನು ಕಸ್ಟಡಿಗೆ ನೀಡುವಂತೆ ಉಪ್ಪಾರಪಲ್ಲಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಿದ್ದಾರೆ. ಹತ್ತು ದಿನಗಳ ಕಾಲ ಕಸ್ಟಡಿಗೆ ಕೋರುವ ಸಾಧ್ಯತೆ ಇದೆ. ಫೋಕ್ಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿರುವುದರಿಂದ ಆತನನ್ನು ಸಂಪೂರ್ಣವಾಗಿ ಪ್ರಶ್ನಿಸಲು ಪೊಲೀಸರು ನ್ಯಾಯಾಲಯದ ಮೊರೆ ಹೋಗಲಿದ್ದಾರೆ. ಅಲ್ಲದೆ, ಆತನ ಪತ್ನಿ ವಿರುದ್ಧವೂ ಆರೋಪ ಕೇಳಿ ಬಂದಿರುವುದರಿಂದ ಬಂಧನವಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.

    Continue Reading

    LATEST NEWS

    ಕಾರು ಅಪಘಾ*ತದಲ್ಲಿ ಬಾಲಿವುಡ್ ನಟ ಪರ್ವೀನ್ ದಬಾಸ್ ಗಂಭೀ*ರ..!

    Published

    on

    ಮುಂಬೈ/ಮಂಗಳೂರು: ಬಾಲಿವುಡ್ ನಟ ಪರ್ವೀನ್ ದಬಾಸ್ ಶನಿವಾರ(ಸೆ.21) ಬೆಳಿಗ್ಗೆ ಮುಂಬೈನಲ್ಲಿ ನಡೆದ ಕಾರು ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದಾರೆ.

    ಗಾಯಗೊಂಡಿರುವ ನಟನನ್ನು ಬಾಂದ್ರಾದ ಹೋಲಿ ಲೈಫ್‌ ಲೈನ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಲಾಗಿದೆ. ಇನ್ನು ಕಾರು ಅಪಘಾತದಲ್ಲಿ ಪರ್ವೀನ್ ತೀವ್ರವಾಗಿ ಗಾಯಗೊಂಡಿದ್ದು ಅವರಿಗೆ ಚಿಕಿತ್ಸೆ ಮುಂದುವರಿದಿದೆ ಎಂದು ಪತ್ನಿ ಪ್ರೀತಿ ಜಂಗೈನಿ ತಿಳಿಸಿದ್ದಾರೆ. ನಟ ಬರ್ವಿನ್ ದಿಲ್ಲಗಿ, ಖೊಸ್ಲಾಕಾ ಗೋಸ್ಲಾ, ಮೈ ನೇಮ್ ಈಸ್ ಖಾನ್, ರಾಗಿಣಿ ಎಮ್‌ಎಮ್‌ಎಸ್ 2 ಸೇರಿದಂತೆ ಅನೇಕ ಹಿಂದಿ ಚಿತ್ರಗಳಲ್ಲಿ ನಟಿಸಿದ್ದಾರೆ.

    Continue Reading

    LATEST NEWS

    Trending