ಇಂದು ಮಧ್ಯರಾತ್ರಿಯಿಂದಲೇ ಲಾಕ್ ಡೌನ್ ಸಡಿಲಿಕೆ: ಅಗತ್ಯ ಸೇವೆಗಳಿಗೆ ಮಾತ್ರ ವಿನಾಯಿತಿ
ಇಂದು ಮಧ್ಯರಾತ್ರಿಯಿಂದಲೇ ಲಾಕ್ ಡೌನ್ ಸಡಿಲಿಕೆ: ಅಗತ್ಯ ಸೇವೆಗಳಿಗೆ ಮಾತ್ರ ವಿನಾಯಿತಿ
ಬೆಂಗಳೂರು: ವ್ಯಾಪಕವಾಗಿ ಹರಡುತ್ತಿರುವ ಮಾರಕ ಕೊರೋನಾ ವೈರಸ್ ನಿಯಂತ್ರಿಸುವ ಸಲುವಾಗಿ ಕೇಂದ್ರ ಸರ್ಕಾರ ದೇಶಾದ್ಯಂತ ಮೇ 3ರ ವರೆಗೂ ಲಾಕ್ ಡೌನ್ ವಿಸ್ತರಿಸಿ ಆದೇಶಿಸಿದೆ.
ಇದರ ನಡುವೆ ರಾಜ್ಯ ಸರ್ಕಾರ ಕೊರೊನಾ ತೀವ್ರತೆ ಕಡಿಮೆಯಾಗುತ್ತಿರುವ ಕಾರಣ ರಾಜ್ಯದ ಕೆಲವು ಭಾಗಗಳಲ್ಲಿ ಇಂದು (ಎಪ್ರಿಲ್ 22) ಮಧ್ಯರಾತ್ರಿಯಿಂದಲೇ ಲಾಕ್ ಡೌನ್ ನಿಯಮದಲ್ಲಿ ಸಡಿಲಿಕೆ ಮಾಡಿ ಆದೇಶಿಸಿದೆ.
ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಮಹತ್ವದ ಕೆಲ ನಿರ್ಣಯಗಳನ್ನು ಕೈಗೊಂಡಿತು.
ರಾಜ್ಯದಲ್ಲಿ ಅತೀ ಹೆಚ್ಚು ಕೋವಿಡ್-19 ಪಾಸಿಟಿವ್ ಪ್ರಕರಣಗಳು ಕಾಣಿಸಿಕೊಂಡಿರು ಕಂಟೈನ್ಮೆಂಟ್ ಝೋನ್ ಹೊರತುಪಡಿಸಿ ಉಳಿದ ಭಾಗಗಳಲ್ಲಿ ಲಾಕ್ ಡೌನ್ ನಿರ್ಬಂಧ ಸಡಿಲಗೊಳಿಸಲಾಗಿದೆ.
ಡಾಬಾ, ಕಟ್ಟಡ ನಿರ್ಮಾಣ ಕಾಮಗಾರಿ, ಕೊರಿಯರ್ ಸೇವೆ, ಲಾರಿ ರಿಪೇರಿ ಮಾಡುವ ಗ್ಯಾರೇಜ್ ಸೇರಿದಂತೆ ಕೆಲವೊಂದು ಅಗತ್ಯ ಸೇವೆಗಳಿಗೆ ಲಾಕ್ ಡೌನ್ ವಿನಾಯಿತಿ ನೀಡಲಾಗಿದೆ.
ಮಾಲ್, ಚಿತ್ರಮಂದಿರ, ಆಟೋ, ವಿಮಾನ, ರೈಲು ಸಂಚಾರ, ಕ್ಯಾಬ್ ಮೊದಲಾದ ಸೇವೆಗಳಿಗೆ ಇರುವ ನಿರ್ಬಂಧ ಎಂದಿನಂತೆಯೇ ಮುಂದುವರೆಯಲಿದೆ.
ಯಾವ ಕ್ಷೇತ್ರಗಳಿಗೆ ವಿನಾಯಿತಿ ಇದೆ/ಇಲ್ಲ :
- ಪೇಪರ್, ರಸಗೊಬ್ಬರ, ಎಪಿಎಂಸಿ ಮಾರ್ಕೆಟ್ ಸಂಪೂರ್ಣ ಓಪನ್
- ಅಂತರರಾಜ್ಯ ವಾಹನ ಓಡಾಡಕ್ಕೆ ಅವಕಾಶ
- ಕೃಷಿ ಮತ್ತು ಮೀನುಗಾರಿಕೆ ವಲಯಕ್ಕೆ ಸಂಪೂರ್ಣ ಅನುಮತಿ
- ಕಂಟೋನ್ಮೆಂಟ್ ಜೋನ್ಗೆ ಯಾವುದೇ ಅನುಮತಿ ಇಲ್ಲ
- ಕೃಷಿ ನೀರಾವರಿಗೆ ಯಾವುದೇ ನಿರ್ಬಂಧ ಇಲ್ಲ
- ಕಟ್ಟಡ ನಿರ್ಮಾಣಕ್ಕೆ ಅನುಮತಿ
- ಕಟ್ಟಡ ಕಾಮಾಗರಿಗಳಿಗೆ ಅನುಮತಿ
- ಟೀ ಕಾಫಿ ಪ್ಲಾಂಟೇಷನ್ಗೆ ಅನುಮತಿ
- ಪಾಸ್ ಇದ್ದವರಿಗಷ್ಟೇ ಸಂಚಾರಕ್ಕೆ ಅನುಮತಿ
- ಗ್ರಾಮೀಣ ಪ್ರದೇಶದಲ್ಲಿ ರಸ್ತೆಗೆ ಕಾಮಗಾರಿಗೆ ಅವಕಾಶ
- ಪಶುಸಂಗೋಪನೆಗೆ ಅವಕಾಶ
- ಬ್ಯಾಂಕುಗಳ ನಿರ್ವಹಣೆಗೆ ಮುಂದುವರಿಕೆ
- ಹೋಟೆಲ್ಗಳಲ್ಲಿ ಪಾರ್ಸೆಲ್ ಸೇವೆಗಳಿಗೆ ಅವಕಾಶ
- ಮೆಟ್ರೋ ರೈಲು ಸಂಚಾರಕ್ಕೆ ಅವಕಾಶ ಇಲ್ಲ
- ಶಾಪಿಂಗ್ ಮಾಲ್, ಸಿನಿಮಾ ಥಿಯೇಟರ್ ತೆರೆಯುವುದಿಲ್ಲ
- ಸದ್ಯಕ್ಕೆ ಶಾಲಾ ಕಾಲೇಜು ತೆರೆಯುವಂತಿಲ್ಲ
- ಟ್ಯಾಕ್ಸಿ ಆಟೋ ಬಸ್ ಸಂಚಾರ ಬಂದ್
- ಕೋರಿಯಾರ್ ಸೇವೆಗೆ ಅನುಮತಿ
- ವಾಣಿಜ್ಯ ಮತ್ತು ಕೈಗಾರಿಕೆಗೆ ಇಲ್ಲ ಅವಕಾಶ
DAKSHINA KANNADA
ಹಳ್ಳ ಹಿಡಿದ ಸ್ಮಾರ್ಟ್ ಸಿಟಿಯ ಕಾಮಗಾರಿ; ಕುಂಟುತ್ತಾ ಸಾಗಿದ ಮಹಾಕಾಳಿ ಪಡ್ಪು ಅಂಡರ್ ಪಾಸ್
ಮಂಗಳೂರು: ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಕೈಗೆತ್ತಿಕೊಂಡಿರುವ ಮಹಾಕಾಳಿ ಪಡ್ಪುವಿನ ರೈಲ್ವೇ ಅಂಡರ್ ಪಾಸ್ ಕಾಮಗಾರಿ ಸದ್ಯಕ್ಕಂತು ಮುಗಿಯುವ ಲಕ್ಷಣ ಕಾಣಿಸುತ್ತಿಲ್ಲ. ಈ ಕಾಮಗಾರಿ ಕೈಗೆತ್ತಿಕೊಂಡು ವರ್ಷಗಳೇ ಕಳೆದರೂ ಕಾಮಗಾರಿ ಮುಗಿಸಬೇಕು ಅನ್ನೋ ಇಚ್ಚೆ ಸ್ಮಾರ್ಟ್ ಸಿಟಿ ಯೋಜನೆಯವರಿಗೂ ಇದ್ದಂತಿಲ್ಲ.
ಕೆಲ ತಿಂಗಳ ಹಿಂದೆ ಕಳಪೆ ಕಾಮಗಾರಿಯಿಂದಾಗಿ ಇಲ್ಲಿ ಕಾಮಗಾರಿ ಕುಸಿತ ಕೂಡಾ ಉಂಟಾಗಿತ್ತು. ಇದೀಗ ಕೆಲ ದಿನಗಳಿಂದ ಯಾವುದೇ ಕಾಮಗಾರಿ ನಡೆಸದೆ ಕಾರ್ಮಿಕರು ಕೂಡಾ ಕೆಲಸ ಇಲ್ಲದೆ ಸುಮ್ಮನೆ ಕುಳಿತಿರುವ ದೃಶ್ಯ ಇಲ್ಲಿ ಮಾಮೂಲಾಗಿದೆ. ಮಾರ್ಗನ್ ಗೇಟ್ ಮೂಲಕವಾಗಿ ಜೆಪ್ಪಿನ ಮೊಗೆರು ಹೈವೆ ಸಂಪರ್ಕಿಸುವ ಈ ರಸ್ತೆಯಲ್ಲಿ ನಿತ್ಯ ಸಾವಿರಾರು ವಾಹನಗಳು ಓಡಾಡುತ್ತಿದೆ. ಸದ್ಯ ಈ ಕಾಮಗಾರಿ ಆರಂಭವಾದ ಬಳಿಕ ಇಲ್ಲಿ ದ್ವಿಚಕ್ರ ವಾಹನಕ್ಕಷ್ಟೇ ಓಡಾಡಲು ವ್ಯವಸ್ಥೆ ಮಾಡಲಾಗಿದೆ.
ಉಪ್ಪಳದಲ್ಲಿ 3.5 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ವಶ; ಓರ್ವ ಬಂಧನ
ಹೀಗಾಗಿ ಈ ರಸ್ತೆಯ ಮೂಲಕ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಕಾಮಗಾರಿ ಯಾವಾಗ ಮುಗಿಸ್ತೀರಿ ಅಂತ ಪ್ರಶ್ನೆ ಮಾಡುತ್ತಿದ್ದಾರೆ. ಆದರೆ ಇಲ್ಲಿ ನಡಿಯುತ್ತಿರುವ ಕಾಮಗಾರಿಯ ವೇಗ ನೋಡಿದರೆ ಇದು 2024 ರಲ್ಲಿ ಪೂರ್ಣಗೊಳ್ಳುವ ಯಾವುದೇ ಲಕ್ಷಣ ಇಲ್ಲ ಅನ್ನೋದು ಸ್ಪಷ್ಟವಾಗುತ್ತಿದೆ. ಹೀಗಾಗಿ ತಕ್ಷಣ ಅಂಡರ್ ಪಾಸ್ ಕೆಲಸ ಮಗಿಸಿ ಅಂತ ಜನ ಒತ್ತಾಯಿಸಿದ್ದಾರೆ.
LATEST NEWS
11 ವರ್ಷದ ಬಾಲಕ ಹೃದಯಘಾ*ತಕ್ಕೆ ಬ*ಲಿ
ಹಾಸನ : ಹೃದಯಾಘಾ*ತ ಎಂಬುದು ಇತ್ತೀಚೆಗೆ ಸಾಮಾನ್ಯವಾಗಿದೆ. ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಸಾದವರೂ ಹೃದಯಾ*ಘಾತಕ್ಕೆ ಒಳಗಾಗುತ್ತಿದ್ದಾರೆ. ರಾಜ್ಯದಲ್ಲಿ ಮತ್ತೊಂದು ಕಳವಳಕಾರಿ ಘಟನೆ ನಡೆದಿದ್ದು, 11 ವರ್ಷದ ಬಾಲಕ ಹೃದಯಾ*ಘಾತಕ್ಕೆ ಬ*ಲಿಯಾಗಿದ್ದಾನೆ. ಈ ಘಟನೆ ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಚನ್ನಾಪುರ ಗ್ರಾಮದಲ್ಲಿ ನಡೆದಿದೆ. ಸಚಿನ್ ಮೃ*ತ ಬಾಲಕ.
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿದ್ದ ಸಚಿನ್, ಮನೆಯಲ್ಲಿ ಟಿವಿ ನೋಡುತ್ತಿದ್ದ ವೇಳೆ ಹೃದಯಾ*ಘಾತವಾಗಿದೆ.
ಇದನ್ನೂ ಓದಿ : ಮನೆಯಲ್ಲಿ ಹಲ್ಲಿ ಕಾಟವೇ? ಈ ಸಿಂಪಲ್ ಮನೆಮದ್ದು ಟ್ರೈ ಮಾಡಿ
ಟಿವಿ ನೋಡುತ್ತಲೇ ಕುಸಿ*ದು ಬಿದ್ದ ಮಗನನ್ನು ಮಾತನಾಡಿಸಲು ಮನೆಯವರು ಪ್ರಯತ್ನಿಸಿದ್ದು, ಏನು ಮಾತನಾಡದೆ ಇರೋದನ್ನು ಗಮನಿಸಿ ಪೋಷಕರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಆಲೂಕು ಸರ್ಕಾರಿ ಆಸ್ಪತ್ರೆಗೆ ಕರೆತರುವ ಮುನ್ನವೇ ಬಾಲಕ ಸಾ*ವನ್ನಪ್ಪಿದ್ದ ಎಂದು ವೈದ್ಯರು ಘೋಷಿಸಿದ್ದಾರೆ ಎಂದು ತಿಳಿದು ಬಂದಿದೆ.
FILM
ಕನ್ನಡದ ಸೀರಿಯಲ್ನಲ್ಲಿ ಮಿಂಚುತ್ತಿರುವ ಉಡುಪಿಯ ಬೆಡಗಿ
ಬೆಂಗಳೂರು/ಮಂಗಳೂರು: ಸಿನೆಮಾದಲ್ಲಿ ನಟಿಸಬೇಕು ಅನ್ನೋದು ಎಲ್ಲರ ಕನಸು. ಆದರೆ ಇಲ್ಲೊಬ್ಬಾಕೆ ನಟಿಗೆ ಸೀರಿಯಲ್ನಲ್ಲಿ ನಟಿಸಬೇಕು ಎಂಬ ಆಸೆ. ಆದರೆ ಆಕೆಗೆ ಮಾತ್ರ ಮೊದಲು ಒಲಿದು ಬಂದಿದ್ದು ಸಿನೆಮಾದಲ್ಲಿ ನಟಿಸುವ ಅವಕಾಶ. ಇದೀಗ ಆ ನಟಿ ಸುರ್ವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಅವನು ಮತ್ತು ಶ್ರಾವಣಿ’ ಧಾರವಾಹಿಯಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹೌದು, ಈ ಧಾರಾವಾಹಿಯಲ್ಲಿ ಶ್ರಾವಣಿಯಾಗಿ ಕಾಣಿಸಿಕೊಂಡಿರುವ ಇಶಿಕಾ ಶೆಟ್ಟಿಗಾರ್ ಮೂಲತಃ ಉಡುಪಿಯವರಾಗಿದ್ದಾರೆ.
ಶ್ರಾವಣಿ ಪಾತ್ರದ ಇಶಿಕಾ ಶೆಟ್ಟಿಗಾರ್ ಮೂಲತಃ ಉಡುಪಿಯವರಾಗಿದ್ದು ಸದ್ಯ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ಈಕೆ 9 ನೇ ತರಗತಿಯಲ್ಲಿದ್ದಅಗಲೇ ಸಿನೆಮಾ ನಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಊರ್ವಿ, ಗರುಡ, ಮನದ ಮರೆಯಲಿ ಸೇರಿದಂತೆ ನಾಳ್ಕೈದು ಸಿನೆಮಾಗಳಲ್ಲಿ ನಟಿಸಿದ್ದಾರೆ. ಬಳಿಕ ಕಾನೂನು ಪದವಿ ಮುಗಿಸಿರುವ ಇವರು ಸೀರಿಯಲ್ ನಲ್ಲಿ ಆಭಿನಯಿಸುವತ್ತ ಒಲವು ಮಾಡಿದ್ದಾರೆ. ಹೀಗಾಗಿ ಲುಕ್ ಟೆಸ್ಟ್ ಕೂಡಾ ಕೊಟ್ಟಿದ್ದಾರೆ.
ಜಾನಿ ಮಾಸ್ಟರ್ ಪತ್ನಿಗೂ ಬಂತು ಕಂಟಕ..! ಅತ್ಯಾಚಾರ ಪ್ರಕರಣಕ್ಕೆ ಟ್ವಿಸ್ಟ್..!!
ಇದೇ ವೇಳೆ ‘ಅವನು ಮತ್ತು ಶ್ರಾವಣಿ’ ಧಾರಾವಾಹಿಗೆ ರಿಪ್ಲೇಸ್ಮೆಂಟ್ ಪಾತ್ರಕ್ಕೆ ಕರೆ ಬರುತ್ತದೆ. ರಿಪ್ಲೇಸ್ಮೆಂಟ್ ಪಾತ್ರ ಆಗಿದ್ದರಿಂದ ಜನರಿಗೆ ಇಷ್ಟ ಆಗ್ಬೋದಾ ಅನ್ನುವ ಮೈಂಡ್ ಸೆಟ್ ನಲ್ಲಿ ಇವರು ಕೊನೆಗೂ ಪಾತ್ರಕ್ಕೆ ಸೈ ಎಂದು ಹೇಳಿದ್ದಾರೆ. ಇದೀಗ ಧಾರಾವಾಹಿ ಮೂಲಕ ಕನ್ನಡಿಗರ ಮನಗೆದ್ದಿದ್ದಾರೆ. ಈ ಧಾರಾವಾಹಿಯಲ್ಲಿ ನಟನೆ ಆರಂಭಿಸಿದ ಮೇಲೆ ಆಫರ್ಗಳು ಬರುತ್ತಿದೆ ಎಂದು ಇಶಿಕಾ ಶೆಟ್ಟಿಗಾರ್ ಹೇಳಿದ್ದಾರೆ.