ಬಂಟ್ವಾಳ: ಕಲ್ಲಿದ್ದಲು ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಮಧ್ಯೆ ಪಲ್ಟಿಯಾದ ಘಟನೆ ರಾ.ಹೆ ತುಂಬೆ ಎಂಬಲ್ಲಿ ನಿನ್ನೆ ಮಧ್ಯರಾತ್ರಿ ನಡೆದಿದೆ.
ಮಂಗಳೂರು ಬಂದರಿನಿಂದ ಕಲ್ಲಿದ್ದಲು ತುಂಬಿದ್ದ ಲಾರಿ ಬಳ್ಳಾರಿ ಕಡೆಗೆ ಸಾಗುತ್ತಿದ್ದ ಸಂದರ್ಭದಲ್ಲಿ ತುಂಬೆ ತಿರುವಿನಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಲಾರಿ ಪಲ್ಟಿಯಾಗಿದೆ.
ಘಟನೆಯಿಂದ ಲಾರಿ ಚಾಲಕನಿಗೆ ಅಲ್ಪಸ್ವಲ್ಪ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ನಡೆದ ಬಳಿಕ ಕೆಲ ಗಂಟೆಗಳ ಕಾಲ ರಸ್ತೆಯಲ್ಲಿ ಸಂಚಾರಕ್ಕೆ ಆಡ್ಡಿಯಾಗಿತ್ತು.
ಮೆಲ್ಕಾರ್ ಟ್ರಾಫಿಕ್ ಎಸ್.ಐ ರಾಜೇಶ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಸಂಚಾರಕ್ಕೆ ಅನುವು ಮಾಡಿದರು.
ಲಾರಿ ಪಲ್ಟಿಯಾದ ಘಟನೆಯಿಂದ ಲಾರಿಯ ಡಿಸೇಲ್ ಟ್ಯಾಂಕ್ಗೆ ಹಾನಿಯಾಗಿದ್ದು ರಸ್ತೆಯ ತುಂಬಾ ಹರಿದಿತ್ತು. ತಕ್ಷಣ ಎಸ್.ಐ.ರಾಜೇಶ್ ಅಗ್ನಿಶಾಮಕ ದಳವನ್ನು ಕರೆಸಿ ನೀರು ಹಾಯಿಸಿ ರಸ್ತೆಯಲ್ಲಿ ಹರಿದ್ದಿದ್ದ ಡಿಸೇಲ್ ತೆರವು ಮಾಡಿದರು.