LATEST NEWS
ಉಡುಪಿ: ವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿ-ಹೊತ್ತಿ ಉರಿದ ಹೋಟೆಲ್
ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶ್ರೀ ರಸ್ತು ಹೋಟೆಲ್ ಎದುರು ನಿನ್ನೆ ಸಂಜೆ ಲಾರಿಯೊಂದು ವಿದ್ಯುತ್ ಕಂಬಕ್ಕೆ ಗುದ್ದಿದ ಪರಿಣಾಮ ವಿದ್ಯುತ್ ತಂತಿಯು ಎಳೆಯಲ್ಪಟ್ಟು ಹೆದ್ದಾರಿಗೆ ಅಡ್ಡಲಾಗಿ ಬಿದ್ದ ಘಟನೆ ಉಡುಪಿಯ ಉಚ್ಚಿಲದಲ್ಲಿ ನಡೆದಿದೆ.
ಇದೇ ಸಂದರ್ಭ ವಿದ್ಯುತ್ ಹರಿಯುತ್ತಿದ್ದ ತಂತಿಯೊಂದು ಗರಿಕೆಯ ಗೂಡಂಗಡಿ ಹೋಟೆಲಿಗೆ ಬಿದ್ದ ಪರಿಣಾಮ ಹೋಟೆಲ್ ಹೊತ್ತಿ ಉರಿದಿದೆ.
ಹೆದ್ದಾರಿಗೆ ವಿದ್ಯುತ್ ತಂತಿ ಅಡ್ಡಲಾಗಿ ಬಿದ್ದ ಪರಿಣಾಮ ಹೆದ್ದಾರಿಯ ಇಕ್ಕಡೆಗಳಲ್ಲಿ ವಾಹನ ಸಂಚಾರ ಅರ್ಧ ತಾಸಿಗೂ ಅಧಿಕ ಸಮಯ ವ್ಯತ್ಯಯ ಉಂಟಾಗಿತ್ತು.
ಇನ್ನು ತಂತಿ ಬೀಳುತ್ತಿರುವ ಸಂದರ್ಭ ಕೆಎಸ್ ಆರ್ ಟಿ ಸಿ ಬಸೊಂದು ಕೂದಳೆಲೆಯ ಅಂತರದಲ್ಲಿ ಪಾರಾಗಿದೆ.
ಈ ವೇಳೆ ಲೈನ್ಮ್ಯಾನ್ ಸುರೇಶ್ ಆಗಮಿಸಿ ತಂತಿ ತಂಡರಿಸಿ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿದ್ದಾರೆ.
ಕಾಪು ಅಪರಾಧ ವಿಭಾಗದ ಎಸ್ ಐ ತಿಮ್ಮೇಶ್ ಘಟನಾ ಸ್ಥಳದಲ್ಲಿದ್ದು, ಸೂಕ್ತ ಬಂದೋಬಸ್ತು ಏರ್ಪಡಿಸಿದ್ದರು. ಇದರಿಂದಾಗಿ ಭಾರೀ ದೊಡ್ಡ ಅನಾಹುತ ತಪ್ಪಿದೆ.
DAKSHINA KANNADA
ಮಂಗಳೂರು : ಕರಾವಳಿ ಮಾಣಿಕ್ಯ ಸೇವಾ ಸಂಸ್ಥೆಯ ವತಿಯಿಂದ ಪುಸ್ತಕ ವಿತರಣಾ ಕಾರ್ಯಕ್ರಮ
ಮಂಗಳೂರು : ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತೆ ಯುವ ಪೀಳಿಗೆಯ ಯುವ ಮಕ್ಕಳ ಮುಂದಿನ ಉಜ್ವಲ ಭವಿಷ್ಯದ ನಿರ್ಮಾಣಕ್ಕಾಗಿ ಕರಾವಳಿ ಮಾಣಿಕ್ಯ ಸೇವಾ ಸಂಸ್ಥೆಯ ವತಿಯಿಂದ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ ಪಚ್ಚನಾಡಿಯಲ್ಲಿ ನಡೆಯಿತು.
ಈ ಸಂದರ್ಭ ಕರಾವಳಿ ಮಾಣಿಕ್ಯ ಸೇವಾ ಸಂಸ್ಥೆಯ ಅಧ್ಯಕ್ಷ ಸತೀಶ್ ಕುಮಾರ್ ಬಜಾಲ್ ಮಾತನಾಡಿ, ನಾವು ಸಣ್ಣವರಿದ್ದಾಗ ಕಲಿಕಾ ಸಾಮಗ್ರಿಗಳಿಲ್ಲದೇ ಕಷ್ಟಪಟ್ಟಿದ್ದೆವು. ಅಂತಹ ಕಷ್ಟ ಬಡ ವಿದ್ಯಾರ್ಥಿಗಳು ಪಡಬಾರದೆಂದು ಸಮಾಜದ ಎಲ್ಲರಿಗೂ ಪ್ರೇರಣೆಯಾಗುವಂತೆ ಮಂಗಳೂರಿನ ಎಲ್ಲಾ ಕಡೆ ಪ್ರತಿವರ್ಷದಂತೆ ಪುಸ್ತಕ ವಿತರಣೆ ಕಾರ್ಯಕ್ರಮ ಮಾಡುವುದಾಗಿ ಭರವಸೆ ನೀಡಿದರು. ಪುಸ್ತಕ ಪಡೆದ ವಿದ್ಯಾರ್ಥಿಗಳು ಜೀವನದಲ್ಲಿ ಕಲಿತು ಆರ್ಥಿಕವಾಗಿ ಬೆಳೆದರೆ, ನೀವು ಕೂಡ ಈ ರೀತಿ ಕಾರ್ಯಕ್ರಮ ಮಾಡುವುದರ ಮೂಲಕ ಬಡ ವಿದ್ಯಾರ್ಥಿಗಳಿಗೆ ಸಹಾಯಮಾಡಿ ಎಂದರು.
ಇದನ್ನೂ ಓದಿ : ಆಸ್ಪತ್ರೆ ಸೆಲ್ ನಲ್ಲಿ ಕುಣಿಕೆಗೆ ಕೊರೊಳೊಡ್ಡಿದ ಖೈದಿ..!
ಗೌರವಾಧ್ಯಕ್ಷ ವಸಂತ್ ಜೆ ಪೂಜಾರಿ, ಉಪಾಧ್ಯಕ್ಷ ಅಕ್ಷಯ್ ಬಂಜನ್, ಕಮಲಾಕ್ಷ ಬಜಾಲ್, ಪ್ರಧಾನ ಕಾರ್ಯದರ್ಶಿ ನಟರಾಜ್ ಪಚ್ಚನಾಡಿ, ಜೊತೆ ಕಾರ್ಯದರ್ಶಿ ಶರತ್ ಕುಂದರ್ ಪದವಿನಂಗಡಿ, ಪ್ರಸಾದ್ ಕುಂಪಲ, ಖಜಾಂಚಿ ಅರುಣ್ ಡಿಸೋಜ, ಸದಸ್ಯ ರಾಕೇಶ್ ಶೆಟ್ಟಿ, ಪಿ ಎಎಫ್ ಸಿ ತಂಡದ ಪ್ರಮುಖರಾದ ಐವನ್ ಆಲ್ವರಿಸ್, ಕೀರ್ತಿ ಪ್ರಸಾದ್, ರಘು, ರಾಕೇಶ್ ಶೆಟ್ಟಿ, ರೂಪೇಶ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.
LATEST NEWS
ಧಾರಾಕಾರವಾಗಿ ಸುರಿದ ಮೀನಿನ ಮಳೆ.. ಫಿಶ್ಗಳನ್ನ ಕ್ಯಾಚ್ ಹಿಡಿದ ಜನ!
ಇರಾನ್ನ ಯಸುಜ್ ನಗರದಲ್ಲಿ ಅಪರೂಪದ ವಿದ್ಯಮಾನವೊಂದು ನಡೆದಿದ್ದು ಮೀನುಗಳ ಮಳೆಯಾಗಿದೆ. ಸದ್ಯ ಎಲ್ಲೆಡೆ ಮಳೆ ಸುರಿಯುತ್ತಿರುವುದು ಸಾಮಾನ್ಯವಗಿದೆ. ಆದರೆ ಯಸುಜ್ ನಗರದಲ್ಲಿ ಮಾತ್ರ ಭರ್ಜರಿ ವರುಣರಾಯ ಬಿರುಗಾಳಿ ಸಮೇತ ಆರ್ಭಟಿಸಿದ್ದಾನೆ. ಈ ವೇಳೆ ಆಗಸದಿಂದ ಮೀನುಗಳು ನಗರದ ಎಲ್ಲೆಂದರಲ್ಲಿ ಬಿದ್ದಿವೆ.
ಅಲ್ಲಿನ ಜನರು ಇವುಗಳನ್ನು ನೋಡಿ ಆಶ್ಚರ್ಯವಾಗಿದ್ದು ಕೆಲವರಂತೂ ಮೇಲಿಂದ ಬೀಳುವ ಮೀನುಗಳನ್ನು ಕ್ಯಾಚ್ ಹಿಡಿದುಕೊಂಡಿದ್ದಾರೆ. ಕೆಲವೊಂದು ಮೇಲಿಂದ ಬಿದ್ದ ರಭಸಕ್ಕೆ ರಸ್ತೆಯಲ್ಲೇ ಉಸಿರು ಚೆಲ್ಲಿವೆ ಎಂದು ಹೇಳಲಾಗಿದೆ.
ಸದ್ಯ ಆಗಸದಿಂದ ಮೀನುಗಳು ಮನೆ, ಕಾರು, ಛಾವಣಿ, ಹೋಟೆಲ್ಗಳ ಮೇಲೆ ಬಿದ್ದಿರುವ ವಿಡಿಯೋಗಳು ಎಲ್ಲೆಡೆ ವೈರಲ್ ಆಗುತ್ತಿವೆ. ಯಾವುದೇ ಜೀವಿಯಾದರೂ ಆಗಸದಿಂದ ಬೀಳುವುದಿಲ್ಲ. ಸಮುದ್ರದಲ್ಲಿ ಸುಳಿಗಾಳಿಯಿಂದ ಮೀನುಗಳು ತೀವ್ರ ಮೇಲಕ್ಕೆ ಹೋಗಿ ಈ ರೀತಿ ಅಲ್ಲಾಲ್ಲಿ ಬೀಳುತ್ತಾವೆ. ಈ ರೀತಿ ಆಗಾಗ ಅಲ್ಲಾಲ್ಲಿ ಮಳೆಗಾಲದಲ್ಲಿ ನಡೆಯುತ್ತಿರುತ್ತಾವೆ ಎಂದು ಹೇಳಲಾಗುತ್ತಿರುತ್ತದೆ.
FILM
ಮಲಯಾಳಂ ನಟಿ ‘ಕನಕಲತಾ’ ಇನ್ನಿಲ್ಲ
ತಿರುವನಂತಪುರಂ/ಮಂಗಳೂರು: ಮಲಯಾಳಂ ನಟಿ ಕನಕಲತಾ(63 ವ) ತಿರುವನಂತಪುರಂ ಜಿಲ್ಲೆಯ ಮಲಯಿಂಕೀಝುನಲ್ಲಿರುವ ತಮ್ಮ ನಿವಾಸದಲ್ಲಿ ಎ.06ರಂದು ಅನಾರೋಗ್ಯದಿಂದಾಗಿ ನಿಧನರಾದರು. ಇವರು ಪಾರ್ಕಿನ್ಸನ್ ಮತ್ತು ಆಲ್ಝೈಮರ್ ಕಾಯಿಲೆಯಿಂದ ಬಳಲುತ್ತಿದ್ದರು.
300 ಚಲನಚಿತ್ರಗಳಲ್ಲಿ ನಟಿಸಿದ ಹೆಗ್ಗಳಿಕೆ:
ಕಳೆದ ವರ್ಷ ಅವರ ಸಹೋದರಿ ವಿಜಯಮ್ಮ ಅವರು ಕನಕಲತಾ ಅವರ ಅನಾರೋಗ್ಯವನ್ನು ಬಹಿರಂಗಪಡಿಸಿದ್ದರು. ಆಗಸ್ಟ್ 2022 ರಲ್ಲಿ, ವೈದ್ಯರು MRI ಸ್ಕ್ಯಾನ್ ಮೂಲಕ ಬುದ್ಧಿಮಾಂದ್ಯತೆಯನ್ನು ಪತ್ತೆಹಚ್ಚಿದ್ದರು. ರಂಗಭೂಮಿಯಲ್ಲಿ ಹಿನ್ನೆಲೆ ಹೊಂದಿರುವ ಕನಕಲತಾ ಸುಮಾರು 300 ಚಲನಚಿತ್ರಗಳು ಮತ್ತು ಹಲವಾರು ಟಿವಿ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. “ಒರು ಯಾತ್ರಾಮೊಳಿ,” “ಗುರು,” “ಕಿಲುಕಿಲ್ ಪಂಬರಂ,” “ಪಾರ್ವತಿ ಪರಿಣಯಂ,” “ತುಂಪೋಲಿ ಕಡಪ್ಪುರಂ,” “ಆದ್ಯತೆ ಕಣ್ಮಣಿ,” “ಎಫ್.ಐ.ಆರ್.,” “ಆಕಾಶಗಂಗಾ,” “ಅನಿಯತಿಪ್ರವು,” “ಅಂಚರಕಲ್ಯಾಣಂ,” “ದೋಸ್ತ್,” ಮಾಯಿಲ್ಪೀಲಿಕ್ಕಾವು,” ಮತ್ತು “ಮಂತ್ರಮೋತಿರಂ”, ಇವುಗಳು ಅವರ ಜನಪ್ರಿಯ ಚಲನಚಿತ್ರಗಳಾಗಿದೆ.
ಮುಂದೆ ಓದಿ..; ಹೆಣ್ಣು ಮಕ್ಕಳು ಕನಿಷ್ಠ 25 ದಾಟಿದ ಮೇಲೆ ಮದುವೆಯಾಗಿ; ಮಿಲನಾ ನಾಗರಾಜ್
“ಪೂಕ್ಕಳಂ” ಚಿತ್ರ ಅವರು ನಟಿಸಿರುವ ಕೊನೆಯ ಚಿತ್ರವಾಗಿದೆ. ಆದರೆ, ಆಕೆಯ ಆರೋಗ್ಯ ಹದಗೆಟ್ಟಿದ್ದರಿಂದ ಸಿನಿಮಾ ಮತ್ತು ಧಾರಾವಾಹಿಗಳೆರಡರಿಂದಲೂ ಹಿಂದೆ ಸರಿಯಬೇಕಾಯಿತು. “ಅಮ್ಮ” ಸಂಸ್ಥೆಯ ಆರ್ಥಿಕ ನೆರವು ಮತ್ತು ಚಲನಚಿತ್ರ ಅಕಾಡೆಮಿಯ ಬೆಂಬಲವು ಅವರ ವೈದ್ಯಕೀಯ ಚಿಕಿತ್ಸೆಗೆ ಸಹಕಾರ ನೀಡಿತ್ತು ಎನ್ನಲಾಗಿದೆ.
- DAKSHINA KANNADA4 days ago
ಸುಬ್ರಹ್ಮಣ್ಯ: ಕೆಎಸ್ಸಾರ್ಟಿಸಿ ಬಸ್ಗಳ ಹಗಲು ದರೋಡೆ..! ಏನಿದು ಘಟನೆ?
- FILM6 days ago
ಬಿಗ್ ಬಾಸ್ ಬಗ್ಗೆ ಅಚ್ಚರಿ ಹೇಳಿಕೆ ಕೊಟ್ಟ ನಮ್ರತಾ ಗೌಡ!
- dehali5 days ago
ನಾಯಿಗಳಿಗೂ ಬಂತು ಆಧಾರ್ ಕಾರ್ಡ್.!! ಇನ್ಮುಂದೆ ನಾಯಿಗೂ ಸ್ಕ್ಯಾನ್ ಕಾರ್ಡ್..! ಏನಿದು?
- BELTHANGADY5 days ago
ವೇಷ ಕಳಚುವ ಮುನ್ನ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು