Connect with us

BELTHANGADY

ಉಜಿರೆಯ ಅಣ್ಣತಮ್ಮಂದಿರಿಂದ ನಿರಂತರ ಅತ್ಯಾಚಾರ : ಲವ್ ಜಿಹಾದಿಯಿಂದ ನರಳುತ್ತಿದ್ದ ಯುವತಿ ಪೊಲೀಸ್ ಮೊರೆ..!   

Published

on

ಉಜಿರೆಯ ಅಣ್ಣತಮ್ಮಂದಿರಿಂದ ನಿರಂತರ ಅತ್ಯಾಚಾರ : ಲವ್ ಜಿಹಾದಿಯಿಂದ ನರಳುತ್ತಿದ್ದ ಯುವತಿ ಪೊಲೀಸ್ ಮೊರೆ..!   

ಬೆಳ್ತಂಗಡಿ : ಲವ್ ಜಿಹಾದ್ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಶಬ್ಬೀರ್​ನನ್ನು ಬಂಧಿಸಿದ್ದು ಪ್ರಮುಖ ಆರೋಪಿ ಮೊಹಮ್ಮದ್ ರಿಜ್ವಾನ್​ ಪರಾರಿಯಾಗಿದ್ದಾನೆ. 

2018ರಲ್ಲಿ ಹಿಂದೂ ಯುವತಿ ಪರಿಚಯಿಸಿಕೊಂಡಿದ್ದ ರಿಜ್ವಾನ್​ 2020ರ ನವೆಂಬರ್‌ನಲ್ಲಿ ಆಕೆಯನ್ನು ರಿಜಿಸ್ಟರ್ ಮದುವೆಯಾಗಿದ್ದ.

ಬಳಿಕ ಹಣೆಯಲ್ಲಿರೋ ಕುಂಕುಮ ತೆಗೆದು ಇಸ್ಲಾಂ ಧರ್ಮಕ್ಕೆ ಮತಾಂತರವಾಗುವಂತೆ ಕಿರುಕುಳ ನೀಡಿದ್ದ. ದುಬೈನಲ್ಲಿ ಕೆಲಸ ಕೊಡಿಸುತ್ತೇನೆ, ನಾವು ಸೆಟೆಲ್ ಆಗೋಣ ಎಂದು ಆಕೆಯನ್ನು ಪೀಡಿಸುತ್ತಿದ್ದ.

ಈ ರೀತಿ ಮೊಹಮ್ಮದ್ ರಿಜ್ವಾನ್​ ಯುವತಿಗೆ ಕಿರುಕುಳ ನೀಡುತ್ತಿದ್ದ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಮೂಲದವರಾದ ಮೊಹಮ್ಮದ್ ರಿಜ್ವಾನ್​ ಮತ್ತು ಬಂಧಿತ ಶಬ್ಬೀರ್ ಇಬ್ಬರೂ ಅಣ್ಣತಮ್ಮಂದಿರು.

ಬೆಂಗಳೂರಿನ ಸ್ಪಾ ಒಂದರಲ್ಲಿ ಯುವತಿ ಕೆಲಸ ಮಾಡುತ್ತಿದ್ದು 2018 ರಲ್ಲಿ ಅಲ್ಲಿಗೆ ಆಗಾಗ ಬರುತ್ತಿದ್ದ ಉಜಿರೆ ಮೂಲ ಶಬ್ಬೀರ್ ಅ ಪರಿಚಯವಾಗಿದ್ದ.

ಬ್ರಿಗೇಡ್ ರಸ್ತೆಯ ಹೋಟೆಲ್ ನಲ್ಲಿ ಕೆಲಸಕ್ಕೆ ಸೇರಿಸಿ ಆಕೆಯನ್ನು ಹೋಟೆಲ್ ರೂಮ್ ಗೆ ಕರೆಸಿಕೊಂಡು ಅತ್ಯಾಚಾರ ಎಸಗಿದ್ದಾನೆ.

ಯಾರಿಗಾದರೂ ವಿಷಯ ತಿಳಿಸಿದರೆ ಕೆಲಸದಿಂದ ತೆಗೆಯುವುದಾಗಿ, ಪೋಷಕರನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.

ಇದಲ್ಲದೆ, ಆಸಿಡ್ ಹಾಕುವುದಾಗಿಯೂ ಆರೋಪಿ ಬೆದರಿಸಿದ್ದು, 2019 ರ ವರೆಗೆ 4 ಸಲ ಬೆದರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.

ಇಬ್ಬರ ವಿರುದ್ಧ ಯುವತಿ ಮೇಲೆ ಅತ್ಯಾಚಾರಗೈದ ಆರೋಪವಿದೆ. ಕಂಗಾಲಾದ ಯುವತಿ ಆತನ ಪರಿಚಿತರ ಬಳಿ ವಿಚಾರಿಸಿದಾಗ 2020 ರ ಸೆಪ್ಟಂಬರ್ 14ರಂದು ಮಂಗಳೂರು ಮೂಲದ ಯುವತಿಯೊಂದಿಗೆ ಆತ ಮದುವೆಯಾಗಿರುವುದು ಗೊತ್ತಾಗಿದೆ.

ಅಲ್ಲದೇ ಆ ಫೋಟೋ ವಾಟ್ಸಾಫ್ ಗಳಲ್ಲಿ ಹರಿಡಾದುತ್ತಿದೆ. ಅಲ್ಲದೇ ನೊಂದ ಯುವತಿಯ ತಂದೆ ತಮ್ಮ ಅಸಹಾಯಕ ಸ್ಥಿತಿಯ ಬಗ್ಗೆ ಮಾಡನಾಡಿರುವ ಆಡಿಯೋ ಕೂಡ ವೈರಲ್ ಆಗಿದೆ.

ಈ ಪ್ರಕರಣ ಸಂಬಂಧ ಸಿ.ಕೆ. ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಈ ಪ್ರಕರಣದಲ್ಲಿ ಬೇರೆ ಯಾರಾದರೂ ಭಾಗಿಯಾಗಿದ್ದಾರಾ ಅಥವಾ ಇದರ ಹಿಂದೆ ಬೇರೆ ಯಾವುದಾದರೂ ಜಾಲ ಇದೆಯಾ ಎಂಬ ಬಗ್ಗೆ ವಿವಿಧ ಆಯಾಮದಲ್ಲಿ ತನಿಖೆ ಮುಂದುವರೆದಿದೆ.

Click to comment

Leave a Reply

Your email address will not be published. Required fields are marked *

BELTHANGADY

ರಸ್ತೆ ದಾಟುವ ವೇಳೆ ದ್ವಿಚಕ್ರ ವಾಹನ ಡಿ*ಕ್ಕಿ..!! ಪಾದಾಚಾರಿ ಮೃ*ತ್ಯು

Published

on

ಬೆಳ್ತಂಗಡಿ: ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿ ನಗರದ ಸಂತೆಕಟ್ಟೆ ಬಸ್ ನಿಲ್ದಾಣದ ಮುಂಭಾಗದಲ್ಲಿ ನಡೆದಿದೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರ ಮಾವ ಶೇಖರ್ ಬಂಗೇರ ಹೇರಾಜೆ(65 ವ) ಮೃ*ತಪಟ್ಟವರು.

ಗುರುವಾರ (ಮಾ.28) ರಾತ್ರಿ ಶೇಖರ್ ಬಂಗೇರ ರವರು ಹೋಟೆಲ್ ನಿಂದ ಪಾರ್ಸಲ್ ತೆಗೆದುಕೊಂಡು ರಸ್ತೆ ದಾಟುತ್ತಿದ್ದ ವೇಳೆ ದ್ವಿಚಕ್ರ ವಾಹನ ಡಿ*ಕ್ಕಿ ಹೊಡೆದಿದೆ. ಪರಿಣಾಮ ಗಂಭೀ*ರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ಸಾಗಿಸುವ ವೇಳೆ ಬಂಟ್ವಾಳದಲ್ಲಿ ಅವರು ಸಾವನ್ನಪ್ಪಿದ್ದಾರೆ.  ಸ್ಕೂಟರ್ ನಲ್ಲಿದ್ದ ಬೆಳ್ತಂಗಡಿಯ ಗೇರುಕಟ್ಟೆ ನಿವಾಸಿ ಅನುಷಾ(19ವ) ಗಾಯಗೊಂಡಿದ್ದು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಮೃತಪಟ್ಟ ಶೇಖರ್ ಬಂಗೇರ ಹೇರಾಜೆ ವಿಜಯ ಬ್ಯಾಂಕ್  ಮಾಜಿ ಉದ್ಯೋಗಿ, ಮುಗ್ಗ ಗುತ್ತು ಮನೆತನದ ಟ್ರಸ್ಟ್ ಕೋಶಾಧಿಕಾರಿ, ರಾಘವೇಂದ್ರ ಮಠದ ಕೋಶಾಧಿಕಾರಿ, ಗುರುನಾರಾಯಣ ಸಂಘದ ಮಾಜಿ ಉಪಾಧ್ಯಕ್ಷರಾಗಿದ್ದರು.

ಈ ಕುರಿತು ಬೆಳ್ತಂಗಡಿ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

 

Continue Reading

BELTHANGADY

ದ್ವಿಚಕ್ರ ವಾಹನಕ್ಕೆ ಪಿಕ್‌ಅಪ್ ಡಿ*ಕ್ಕಿ ಹೊಡೆದು ಪರಾರಿ..! ಸವಾರ ಸ್ಪಾಟ್ ಡೆ*ತ್..!

Published

on

ಬೆಳ್ತಂಗಡಿ: ದ್ವಿಚಕ್ರ ವಾಹನಕ್ಕೆ ಪಿಕಪ್ ಡಿ*ಕ್ಕಿ ಹೊಡೆದು ದ್ವಿಚಕ್ರ ಸವಾರ ಮೃತಪಟ್ಟ ಘಟನೆ  ಬೆಳ್ತಂಗಡಿಯ ವಾಣಿ ಕಾಲೇಜು ಬಳಿ ಮಾ.25ರಂದು ಮಧ್ಯಾಹ್ನ ನಡೆದಿದೆ.

ಗುರುವಾಯನಕೆರೆಯಿಂದ ಬೆಳ್ತಂಗಡಿಗೆ ದ್ವಿಚಕ್ರವಾಹದಲ್ಲಿ ಬರುತ್ತಿದ್ದ ವೇಳೆ ಬೆಳ್ತಂಗಡಿಯಿಂದ ಹೋಗುತ್ತಿದ್ದ ಪಿಡ್‌ಅಪ್ ಡಿಕ್ಕಿ ಹೊಡೆದಿದೆ.  ಘಟನೆಯಿಂದ ದ್ವಿಚಕ್ರ ವಾಹನ ಸವಾರ ಪುರುಷೋತ್ತಮ(19 ವ)ರವರು ಸ್ಥಳದಲ್ಲೇ ಮೃ*ತಪಟ್ಟಿದ್ದಾರೆ. ದ್ವಿಚಕ ವಾಹನದಲ್ಲಿದ್ದ ಇನ್ನೋರ್ವ ಸಹಸವಾರ ತೌಫಿಕ್(18 ವ) ಗಂಭೀರ ಗಾಯಗೊಂಡಿದ್ದು ಇವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಡಿಕ್ಕಿ ಹೊಡೆದ ಪಿಕ್‌ ಅಪ್ ನಿಲ್ಲಿಸದೆ ಸ್ಥಳದಿಂದ ಪರಾರಿಯಾಗಿದೆ. ಪಿಕ್‌ಅಪ್ ಡಿ*ಕ್ಕಿ ಹೊಡೆದ ರಭಸಕ್ಕೆ ಯುವಕರು ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ಈ ವೇಳೆ ಲಾಯಿಲ ರಾಘವೇಂದ್ರ ನಗರದ ನಿವಾಸಿ ದಿ.ಜಯರಾಮ ಎಂಬವರ ಪುತ್ರ ಪುರುಷೋತ್ತಮ ಸ್ಥಳದಲ್ಲೇ ಅಸುನೀಗಿದ್ದಾರೆ. ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 

 

Continue Reading

BELTHANGADY

ಬೆಳ್ತಂಗಡಿ: ಬೊಳ್ಮಿನಾರು ಅರಣ್ಯ ಪರಿಸರದಲ್ಲಿ ಅಸ್ಥಿಪಂಜರದ ಸ್ಥಿತಿಯಲ್ಲಿ ವ್ಯಕ್ತಿಯ ಶ*ವ ಪತ್ತೆ..!

Published

on

ಬೆಳ್ತಂಗಡಿ: ಇಲ್ಲಿನ ಪುದುವೆಟ್ಟು ಗ್ರಾಮದ ಬೊಳ್ಮಿನಾರು, ಅರಣ್ಯ ಪರಿಸರದಲ್ಲಿ ಬುಧವಾರ(ಮಾ.20) ಅಸ್ತಿಪಂಜರ ಸ್ಥಿತಿಯಲ್ಲಿ ಓರ್ವ ವ್ಯಕ್ತಿಯ ಶ*ವ ಪತ್ತೆಯಾಗಿದೆ. ಸ್ಥಳದಲ್ಲಿ ದೊರೆತ ಆಧಾರ್ ಕಾರ್ಡ್ ಹಾಗೂ ಇತರ ಸ್ವತ್ತುಗಳ ಪ್ರಕಾರ ಮೃತ ವ್ಯಕ್ತಿಯನ್ನು ಕಳೆಂಜಗ್ರಾಮದ ಕಾಯರ್ತಡ್ಕದ ರಾಜು ಜೋಸೆಫ್ ಎಂದು ಗುರುತಿಸಲಾಗಿದೆ.

ಬುಧವಾರ ಮಧ್ಯಾಹ್ನದ ವೇಳೆ ಅರಣ್ಯ ಪ್ರದೇಶದಿಂದ ಸೊಪ್ಪು ತರಲು ತೆರಳಿದ್ದ ಸ್ಥಳೀಯರು ರಸ್ತೆಯಿಂದ ಸುಮಾರು 100 ಮೀಟರ್ ದೂರ ಪ್ರದೇಶದಲ್ಲಿ ಮಲಗಿರುವ ಸ್ಥಿತಿಯಲ್ಲಿದ್ದ ಶವವನ್ನು ಗುರುತಿಸಿದ್ದು, ಈ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳದಲ್ಲಿ ಮದ್ಯದ ಬಾಟಲ್ ಪತ್ತೆಯಾಗಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳದಲ್ಲಿ ಸಿಕ್ಕಿದ ದಾಖಲೆಗಳ ಪ್ರಕಾರ ರಾಜು ಅವರ ಮನೆಯವರನ್ನು ಸ್ಥಳಕ್ಕೆ ಕರೆಯಿಸಿದ್ದು ಅಲ್ಲಿದ್ದ ಬ್ಯಾಗ್‌ ಹಾಗೂ ಆಧಾರ್ ಕಾರ್ಡ್ ಆಧಾರದಲ್ಲಿ ಮೃತಪಟ್ಟ ವ್ಯಕ್ತಿ ರಾಜು ಎಂದು ಮನೆಯವರು ಸ್ಪಷ್ಟಪಡಿಸಿದ್ದಾರೆ.

ರಾಜು ಅವರು ಕೆಲವು ವರ್ಷಗಳ ಹಿಂದೆಯೇ ಮನೆ ಬಿಟ್ಟಿದ್ದರು ಎಂದು ಮನೆಯವರು ತಿಳಿಸಿದ್ದಾರೆ. ಪೊಲೀಸರು ಹೆಚ್ಚಿನ ಪರಿಶೀಲನೆ ನಡೆಸುತ್ತಿದ್ದು ಪ್ರಕರಣದ ತನಿಖೆ ಮುಂದುವರಿಸಿದ್ದಾರೆ. ತಜ್ಞರ ತಂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಲಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Continue Reading

LATEST NEWS

Trending