Connect with us

    DAKSHINA KANNADA

    ಈ ಕನಸುಗಳು ಕೇವಲ ಅದೃಷ್ಟವಂತರಿಗೆ ಮಾತ್ರ ಬೀಳುತ್ತೆ.!

    Published

    on

    ಮಂಗಳೂರು: ಕನಸನ್ನು ಕಾಣುವುದು ಎಂದರೆ ಅದೊಂದು ಸಾಮಾನ್ಯ ವಿಷಯ. ಪ್ರತಿಯೊಬ್ಬ ವ್ಯಕ್ತಿಯು ಮಲಗುವ ಸಮಯದಲ್ಲಿ ಕನಸನ್ನು ಕಾಣುತ್ತಾನೆ. ಅದೆಷ್ಟೋ ಬಾರಿ ನಾವು ಎದ್ದಾಕ್ಷಣ ರಾತ್ರಿ ಕನಸಿನಲ್ಲಿ ಕಂಡ ವಿಷಯಗಳನ್ನು ಮರೆತುಬಿಡುತ್ತೇವೆ. ಇನ್ನು ಕೆಲವೊಮ್ಮೆ ಅದು ಅಚ್ಚಳಿಯದಂತೆ ನಮ್ಮ ಮನಸ್ಸಿನಲ್ಲಿ ಉಳಿದುಕೊಳ್ಳುತ್ತದೆ. ಕೆಲವು ಕನಸುಗಳು ನಮಗೆ ಸಾಕಷ್ಟು ಸಂತೋಷವನ್ನು, ನೆಮ್ಮದಿಯನ್ನು ನೀಡಿದರೆ, ಕೆಲವು ಕನಸುಗಳು ನಮ್ಮ ತಲೆಯನ್ನು ಕೆಡಿಸುತ್ತದೆ.

    ಕನಸುಗಳನ್ನು ನಾವು ಶುಭ ಕನಸುಗಳು ಮತ್ತು ಅಶುಭ ಕನಸುಗಳೆಂದು ವಿಭಜಿಸುತ್ತೇವೆ. ಆದರೆ, ಒಂದಿಷ್ಟು ಕನಸುಗಳಿವೆ ಅವುಗಳು ಕೇವಲ ಅದೃಷ್ಟವಂತರಿಗೆ ಮಾತ್ರ ಬೀಳುತ್ತದೆ. ನೀವು ಅದೃಷ್ಟವಂತರಾದರೆ ಈ ಕನಸುಗಳು ನಿಮಗೂ ಬಿದ್ದಿರುತ್ತೆ.

    1. ಬಿಳಿ ಆನೆಯ ಕನಸು:

    ನಾವು ಕನಸಿನಲ್ಲಿ ಬಿಳಿ ಬಣ್ಣದ ಆನೆಯನ್ನು ನೋಡಿದರೆ ಅದನ್ನು ಅತ್ಯಂತ ಮಂಗಳಕರವಾದ ಕನಸೆಂದು ಪರಿಗಣಿಸಲಾಗುತ್ತದೆ. ಬಿಳಿ ಬಣ್ಣದ ಆನೆ ಕಾಣಿಸಿಕೊಳ್ಳುವುದು ಎಂದರೆ ನೀವು ಇಂದ್ರ ದೇವನ ಆಶೀರ್ವಾದವನ್ನು ಪಡೆದುಕೊಂಡಿದ್ದೀರಿ ಎಂಬುದಾಗಿದೆ. ಯಾಕೆಂದರೆ ಬಿಳಿ ಬಣ್ಣದ ಆನೆಯು ದೇವರಾಜ ಇಂದ್ರ ದೇವನ ವಾಹನವಾಗಿದೆ. ಮತ್ತು ಯಾವ ವ್ಯಕ್ತಿ ತನ್ನ ಕನಸಿನಲ್ಲಿ ಬಿಳಿ ಬಣ್ಣದ ಆನೆಯನ್ನು ನೋಡುತ್ತಾನೋ ಅವನಿಗೆ ಸದ್ಯದಲ್ಲೇ ರಾಜಯೋಗವು ಪ್ರಾರಂಭವಾಗಲಿದೆ ಎಂಬುದಾಗಿದೆ.

    2. ಬಿಳಿ ಬಣ್ಣದ ನವಿಲು:

    ಯಾವುದೇ ಓರ್ವ ವ್ಯಕ್ತಿಯು ತನ್ನ ಕನಸಿನಲ್ಲಿ ಬಿಳಿ ಬಣ್ಣದ ನವಿಲನ್ನು ನೋಡಿದರೆ ಅದನ್ನು ಶುಭ ಸಂಕೇತವೆಂದು ಪರಿಗಣಿಸಲಾಗುತ್ತದೆ. ಇಂತಹ ಕನಸುಗಳು ಅದೃಷ್ಟದ ಸಂಕೇತವಾಗಿರುತ್ತದೆ. ಇಂತಹ ಕನಸುಗಳು ಬಿದ್ದರೆ ನಿಮ್ಮ ಜೀವನದಲ್ಲಿ ಉತ್ತಮವಾದ ದೊಡ್ಡ ಬದಲಾವಣೆಯೊಂದು ನಡೆಯಲಿದೆ. ಮತ್ತು ನೀವು ಏನಾದರೂ ದೊಡ್ಡ ಸಾಧನೆಯನ್ನು ಮಾಡುತ್ತೀರಿ ಎಂಬುದಾಗಿದೆ. ನಿಮ್ಮ ಕನಸಿನಲ್ಲಿ ಬಿಳಿ ನವಿಲು ಕಾಣುವುದು ಎಂದರೆ ನಿಮ್ಮ ಕಠಿಣ ಪರಿಶ್ರಮದ ಫಲವನ್ನು ನೀವು ಶೀಘ್ರದಲ್ಲೇ ಪಡೆಯುತ್ತೀರಿ.

    3. ಬಿಳಿ ಸಿಂಹದ ಕನಸು:

    ಈಗಾಗಲೇ ಹಳದಿ ಬಣ್ಣದ ಸಿಂಹವನ್ನು ನೋಡಿರಬಹುದು. ಆದರೆ, ಬಿಳಿ ಬಣ್ಣದ ಸಿಂಹವೂ ಇದೆ ಎಂದು ಹೆಚ್ಚಿನವರಿಗೆ ತಿಳಿದಿರಲಿಕ್ಕಿಲ್ಲ. ಇದನ್ನು ಎಲ್ಲರೂ ನೋಡಿರಲು ಸಾಧ್ಯವಿಲ್ಲ. ಕೆಲವೊಮ್ಮೆ ಇವುಗಳು ನಮ್ಮ ಕನಸಿನಲ್ಲಿ ಕಾಣಿಸಿಕೊಳ್ಳುವ ಮೂಲಕ ಅವುಗಳ ಅಸ್ತಿತ್ವವು ಇದೆ ಎಂಬುದನ್ನು ನಮಗೆ ನೆನಪಿಸುತ್ತದೆ. ಬಿಳಿ ಬಣ್ಣದ ಸಿಂಹವನ್ನು ನಾವು ನಮ್ಮ ಕನಸಿನಲ್ಲಿ ನೋಡುವುದು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಬಿಳಿ ಸಿಂಹದ ಕನಸು ಬಿದ್ದರೆ ನೀವು ನಿಮ್ಮ ಉದ್ಯೋಗ ಕ್ಷೇತ್ರದಲ್ಲಿ ಪ್ರಗತಿಯನ್ನು ಹೊಂದಲಿದ್ದೀರಿ ಎಂದರ್ಥ.

    4. ಬಿಳಿ ಹಾವಿನ ಕನಸು:

    ನೀವು ನಿಮ್ಮ ಕನಸಿನಲ್ಲಿ ಬಿಳಿ ಬಣ್ಣದ ಹಾವುಗಳನ್ನು ನೋಡಿದರೆ ಅದನ್ನು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಇಂತಹ ಕನಸುಗಳು ಬಿದ್ದರೆ ನಿಮ್ಮ ಅದೃಷ್ಟ ಶೀಘ್ರದಲ್ಲೇ ಬದಲಾಗಲಿದೆ ಎಂಬುದನ್ನು ಸಂಕೇತಿಸುತ್ತದೆ. ಶಿವನ ವಿಶೇಷ ಆಶೀರ್ವಾದವನ್ನು ಹೊಂದಿರುವವರು ಮಾತ್ರ ತಮ್ಮ ಕನಸಿನಲ್ಲಿ ಬಿಳಿ ಬಣ್ಣದ ಹಾವುಗಳನ್ನು ನೋಡುತ್ತಾರೆ

    ಹಾಗಾಗಿ, ನೀವು ನಿಮ್ಮ ಕನಸಿನಲ್ಲಿ ಈ ಮೇಲಿನ ನಾಲ್ಕು ಬಿಳಿ ಜೀವಿಗಳನ್ನು ನೀಡಿದರೆ ನೀವು ಅದೃಷ್ಟವಂತರು ಎಂದರ್ಥ. ಈ ಕನಸುಗಳು ಬಿದ್ದಾಗ ನೀವು ಚಿಂತಿತರಾಗುವ ಬದಲು ಸಂತೋಷವನ್ನು ಅನುಭವಿಸಿ.

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    DAKSHINA KANNADA

    ವಿದೇಶಿ ಹಡಗಿನಲ್ಲಿ ಬೆಂಕಿ ಅವಘಡ; ಕರ್ನಾಟಕ ಕರಾವಳಿಯಲ್ಲಿ ಲಂಗರು ಹಾಕಿದ ಕಾರ್ಗೋ ಹಡಗು

    Published

    on

    ಮಂಗಳೂರು: ಗುಜರಾತ್‌ನಿಂದ ಕೊಲಂಬೋಕ್ಕೆ ವಿವಿಧ ಸರಕುಗಳನ್ನು ಸಾಗಾಟ ಮಾಡುತ್ತಿದ್ದ ವಿದೇಶಿ ಮೂಲದ ಸರಕು ಸಾಗಾಟ ಹಡಗಿನಲ್ಲಿ ಅಗ್ನಿ ಆಕಸ್ಮಿಕ ನಡೆದ ಘಟನೆ ಬೆಳಕಿಗೆ ಬಂದಿದೆ.

     

     

    ಜುಲೈ 19 ರಂದು ಕರ್ನಾಟಕ ಕರಾವಳಿಯ ಸಮುದ್ರದಲ್ಲಿ ಈ ದುರ್ಘಟನೆ ನಡೆದಿದ್ದು, ಕೋಸ್ಟ್‌ ಗಾರ್ಡ್‌ ತಂಡ ಹೆಲಿಕಾಪ್ಟರ್‌ ಹಾಗೂ ರಕ್ಷಣಾ ಹಡಗಿನ ಮೂಲಕ ಸತತ ನಲುವತ್ತು ಘಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದೆ. ಹಡಗಿನಲ್ಲಿ ಒಟ್ಟು 21 ಸಿಬ್ಬಂದಿ ಇದ್ದು ಒಬ್ಬ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

    ಹಡಗಿನ ಬೆಂಕಿ ನಂದಿಸಿ ಸಿಬ್ಬಂದಿಗಳ ರಕ್ಷಣೆ ಮಾಡಿದ ಬಳಿಕ ಹಡಗನ್ನು ಕರ್ನಾಟಕ ಕರಾವಳಿ ಭಾಗಕ್ಕೆ ತೆಗೆದುಕೊಂಡು ಬರಲಾಗಿದೆ. ಸದ್ಯ ಸುರತ್ಕಲ್ ಕಡಲ ಕಿನಾರೆಯಿಂದ ಸುಮಾರು 33 ನಾಟಿಕಲ್ ಮೈಲ್‌ ದೂರದಲ್ಲಿ ಹಡಗು ಲಂಗರು ಹಾಕಲಾಗಿದೆ. ಗುಜಾರಾತ್‌ನ ಮುಂದ್ರಾ ಬಂದರಿನಿಂದ ಹೊರಟಿದ್ದ ಈ ಹಡಗು ಪನಾಮ ದೇಶಕ್ಕೆ ಸೇರಿದ್ದಾಗಿ ಮಾಹಿತಿ ಲಭ್ಯವಾಗಿದೆ.

    ಬೆಂಕಿ ಅವಘಡದಿಂದ ಸಂಪೂರ್ಣ ಹಾನಿಯಾಗಿರುವ ಹಡಗು ಅಪಾಯಕಾರಿ ಪರಿಸ್ಥಿತಿಯಲ್ಲಿದ್ದು, ಕೋಸ್ಟ್‌ ಗಾರ್ಡ್‌ ಸಿಬ್ಬಂದಿ ಹಡಗಿನ ಮೇಲೆ ನಿಗಾ ಇರಿಸಿದ್ದಾರೆ. ಹಡಗು ಮುಳುಗಡೆಯಾಗುವ ಸಾದ್ಯತೆಯ ಜೊತೆಗೆ ಹಡಗಿನಲ್ಲಿ ಮತ್ತೆ ಬೆಂಕಿ ಕಾಣಿಸಿಕೊಳ್ಳುವ ಸಂಭವ ಕೂಡಾ ಇದೆ. ಹೀಗಾಗಿ ಹಡಗು ಮುಳುಗಡೆಯಾದಲ್ಲಿ ಸಮುದ್ರಕ್ಕೆ ತೈಲ ಸೋರಿಕೆಯ ಆತಂಕ ಕೂಡಾ ಎದುರಾಗಿದೆ. ಹೀಗಾಗಿ ಹಡಗಿನ ಮೇಲೆ ನಿಗಾ ವಹಿಸಿರುವ ಕೋಸ್ಟ್‌ ಗಾರ್ಡ್‌ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.

    Continue Reading

    DAKSHINA KANNADA

    ದಕ್ಷಿಣ ಕನ್ನಡ ಜಿಲ್ಲೆಯ ಮಹಾಪ್ರವಾಹಕ್ಕೆ 50 ವರ್ಷ; ಮರುಕಳಿಸದಿರಲಿ ‘ಆ ಶುಕ್ರವಾರ’ ಎನ್ನುತ್ತಿದ್ದಾರೆ ಕರಾವಳಿಗರು!

    Published

    on

    ಮಂಗಳೂರು: 1974 ಜುಲೈ 26ರ ಶುಕ್ರವಾರ ರಾತ್ರಿ ಇಡೀ ಸುರಿದ ಭಾರೀ ಮಳೆ ಮುಂಜಾನೆಯ ವೇಳೆಗೆ ನೆರೆ ರೌದ್ರಾವತಾರ ತಾಳಿತ್ತು.

    ಹಿಂದೆ ಎಂದೂ ಕಾಣದ ರೀತಿ ನೇತ್ರಾವತಿ ನದಿ ಉಕ್ಕಿ ಹರಿದಿತ್ತು. ನಸುಕಿನ ಜಾವ ನೇತ್ರಾವತಿ ನದಿ ಮನೆಯೊಳಗೆಯೇ ಪ್ರವೇಶಿಸಿತ್ತು.

    ಬಂಟ್ವಾಳ ಪೇಟೆ, ಪಕ್ಕದೂರುಗಳಿಗೆ ಸಂಪರ್ಕಿಸುವ ರಸ್ತೆಗಳೆಲ್ಲವೂ ಕ್ಷಣಮಾತ್ರದಲ್ಲೆ ಜಲಮಯ. ಎಲ್ಲಿಗೆ ಹೋಗೋದು? ಏನು ಮಾಡೋದು ಅನ್ನೋದನ್ನು ಯೋಚಿಸುವಷ್ಟರಲ್ಲೇ ಊರಿಗೆ ಊರೇ ಮುಳುಗಿತ್ತು. ಬಂಟ್ವಾಳ ಮತ್ತು ಉಪ್ಪಿನಂಗಡಿ ಪೇಟೆಯಲ್ಲಿ ವಾಹನಗಳ ಬದಲು ದೋಣಿಗಳು ಸಂಚರಿಸಿದ್ದವು. ಆ ಕಾಲದಲ್ಲಿಯೇ ಐವತ್ತು ಲಕ್ಷ ರೂಪಾಯಿ ನಷ್ಟ ಉಂಟಾಗಿತ್ತು.

    ಆ ಸಮಯದಲ್ಲಿ ಜಿಲ್ಲೆಯ ಬಹುತೇಕ ಪ್ರದೇಶಗಳು ನೆರೆ ನೀರಿನಿಂದ ಆವರಿಸಿದ್ದವು, ಆವತ್ತಿನ ಕಾಲದಲ್ಲಿ ಮಣ್ಣಿನಿಂದ ನಿರ್ಮಿಸಿದ್ದ ನೂರಾರು ಮನೆ ಅಂಗಡಿ ನೆರೆ ನೀರಿಗೆ ಕೊಚ್ಚಿಕೊಂಡು ಹೋಗಿದ್ದವು. ಈಗಲೂ ಕೂಡಾ ಆ ಭೀಕರ ನೆರೆಯು ನಮ್ಮ ಹಿರಿಯರ ಬಾಯಲ್ಲಿ (ಎಲ್ಪತ್ತ ನಾಲೆತ್ತ ಬೊಲ್ಲ) ಎಂದು ಪ್ರಖ್ಯಾತಿ ಹೊಂದಿದೆ.

    ಕಾಕತಾಳೀಯ ಎಂಬಂತೇ ಪ್ರವಾಹದ ಆ ದಿನ, ವಾರ ಎಲ್ಲವೂ ಸೇಮ್ ಆಗಿದ್ದು, ಮತ್ತೆ ಅದೇ ರೀತಿಯ ಪ್ರವಾಹ ಪರಿಸ್ಥಿತಿಯೂ ನೇತ್ರಾವತಿ ತಟದಲ್ಲಿದೆ. ಈಗಾಗಲೇ ನೇತ್ರಾವತಿ ಅಪಾಯ ಮಟ್ಟ ಮೀರಿದ್ದು, ಈ ಆತಂಕಕ್ಕೆ ಕಾರಣವೂ ಆಗಿದೆ.

    Continue Reading

    LATEST NEWS

    Trending