ಮಂಗಳೂರು : ರಾಜ್ಯದ ಆನೇಕ ಜಿಲ್ಲೆಗಳಲ್ಲಿ ಆವರಿಸಿರುವ ಚರ್ಮಗಂಟು ರೋಗ ಜಿಲ್ಲೆಯಲ್ಲಿ ಹರಡುವ ಭೀತಿ ಎದುರಾದ ಕಾರಣ ಮುನ್ನೆರಚ್ಚರಿಕೆ ಕ್ರಮವಾಗಿ ಜಾನುವಾರು ಸಾಗಾಟಕ್ಕೆ ದಕ್ಷಿಣ ಕನ್ನಡ ಜಿಲ್ಲಾಡಳಿತ ನಿಷೇಧ ಹೇರಿದೆ.
ಈ ಬಗ್ಗೆ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.
ದ.ಕ.ಜಿಲ್ಲೆಯಲ್ಲಿ ಚರ್ಮ ಗಂಟುರೋಗ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮವಾಗಿ ಮತ್ತು ಈ ರೋಗದಿಂದ ಜಾನುವಾರು ಮಾಲಕರುಗಳಿಗೆ ಆರ್ಥಿಕ ನಷ್ಟವುಂಟಾಗುವುದನ್ನು ಗಮನದಲ್ಲಿರಿಸಿಕೊಂಡು ಅ.20ರಿಂದ ನವೆಂಬರ್ 30ರವರೆಗೆ ಜಿಲ್ಲೆಯೊಳಗೆ ಮತ್ತು ಹೊರ ಜಿಲ್ಲೆ ಅಥವಾ ನೆರೆ ರಾಜ್ಯದಿಂದ ಜಿಲ್ಲೆಗೆ ಜಾನುವಾರುಗಳ ಸಾಗಾಟವನ್ನು ತಾತ್ಕಾಲಿಕವಾಗಿ ನಿಷೇಧಿಸಿ ದ.ಕ.ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶಿಸಿದ್ದಾರೆ.
ಚರ್ಮಗಂಟು ರೋಗ ಹರಡುವ ಸಾಂಕ್ರಾಮಿಕ ರೋಗವಾಗಿದ್ದು ದನ ಮತ್ತು ಎಮ್ಮೆಗಳಲ್ಲಿ ಕಂಡು ಬರುವ ವೈರಸ್ ಖಾಯಿಲೆಯಾಗಿದ್ದು, ರೋಗಗ್ರಸ್ಥ ಜಾನುವಾರುವಿನಿಂದ ಆರೋಗ್ಯವಂತ ಜಾನುವಾರುಗಳಿಗೂ ಹರಡುವ ಭೀತಿ ಇದೆ.
ಈ ಕಾರಣದಿಂದ ಇದು ತಾತ್ಕಾಲಿಕ ನಿಷೇಧವಾಗಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದ್ದಾರೆ. .